Homeಮುಖಪುಟಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

- Advertisement -
- Advertisement -

ಅಫ್ಘಾನಿಸ್ಥಾನದ ಈಗ ತಾಲಿಬಾನಿಗಳ ವಶವಾಗಿದೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ಅಫ್ಘಾನ್‌ನ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಆಫ್ಘಾನ್‌ನಲ್ಲಿ ತಾಲಿಬಾನ್‌ ಆಡಳಿತ ಆರಂಭವಾಗಿದ್ದು, ಅಲ್ಲಿನ ಮಹಿಳೆಯರು ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ದಾಳಿಯು ಮಹಿಳೆಯರನ್ನು ನಿಯಂತ್ರಿಸುವ ಕ್ರಮವನ್ನು ಒಳಗೊಂಡಿದೆ. ದೇಶದ ದೊಡ್ಡ ಭಾಗಗಳ ಮೇಲೆ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ. ಆದರೆ, ಕನಿಷ್ಟ ಪ್ರತಿರೋಧ ಮತ್ತು ಅಂತರಾಷ್ಟ್ರೀಯ ಒತ್ತಡದ ಕೊರತೆಯಿಂದಾಗಿ ಅವರ ಹಿಂಸಾಚಾರ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಫ್ಘಾನ್‌ ಮಹಿಳೆಯರಿಗೆ ಅಪಾಯವನ್ನು ತದ್ದೊಡ್ಡುತ್ತಿದೆ.

ಈ ಹಿಂದೆ ಜುಲೈನಲ್ಲಿ, ತಾಲಿಬಾನಿಗಳೊಂದಿಗೆ ‘ಮದುವೆ’ ಮಾಡಲು 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 45 ವರ್ಷದೊಳಗಿನ ವಿಧವೆಯರ ಪಟ್ಟಿಯನ್ನು ನೀಡುವಂತೆ ಅಫ್ಘಾನ್‌ನ ಸ್ಥಳೀಯ ಧಾರ್ಮಿಕ ಮುಖಂಡರಿಗೆ ತಾಲಿಬಾನ್ ಕೇಳಿತ್ತು.

ಈ ಬಲವಂತದ ಮದುವೆಗಳು ನಡೆದರೆ, ಮಹಿಳೆಯರು ಮತ್ತು ಹುಡುಗಿಯರನ್ನು ಪಾಕಿಸ್ತಾನದ ವಜೀರಿಸ್ತಾನಕ್ಕೆ ಕರೆದೊಯ್ದು ಪುನಃ ಶಿಕ್ಷಣ ನೀಡಲಾಗುವುದು ಮತ್ತು ‘ಅಧಿಕೃತ ಇಸ್ಲಾಂ’ಗೆ ಪರಿವರ್ತಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ಈ ತಾಲಿಬಾನ್ ಆಕ್ರಮಣದಿಂದ ಮುಂದೆ ಏನಾಗಲಿದೆ ಎಂಬುದಕ್ಕೆ ಎಚ್ಚರಿಕೆಯಾಗಿ, 1996-2001ರ ನಡುವಿನ ತಾಲಿಬಾನ್‌ಗಳ ಕ್ರೂರ ಆಡಳಿತವು ನಮ್ಮ ಮುಂದಿದೆ. ಆ ಸಮಯದಲ್ಲಿ ಮಹಿಳೆಯರು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾಗಿದ್ದರು. ಅವರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ನಿರಾಕರಿಸಲಾಗಿತ್ತು ಬುರ್ಖಾ ಧರಿಸಲು ಒತ್ತಾಯಿಸಲಾಯಿತು ಮತ್ತು ಮನೆಯಿಂದ ಹೊರಹೋಗುವುದನ್ನು ನಿಷೇಧಿಸಲಾಗಿತ್ತು.

ಮಹಿಳೆಯರು ಮತ್ತು ಅವರ ಹಕ್ಕುಗಳ ಬಗ್ಗೆ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎಂದು ತಾಲಿಬಾನ್‌ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೂ, ಅವರ ಕ್ರಮಗಳು ಸಾವಿರಾರು ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ಒಪ್ಪಿಸುವ ಪ್ರಯತ್ನಗಳು ಇತ್ತೇಚೆಗೆ ನಡೆದಿವೆ.

ಇದಲ್ಲದೆ, ತಾಲಿಬಾನ್ 12 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸುವ ಉದ್ದೇಶವನ್ನು ಸೂಚಿಸಿದೆ. ಅಲ್ಲದೆ, ಮಹಿಳೆಯರಿಗೆ ಉದ್ಯೋಗ ನಿರಾಕರಣೆಯ ನಿಯಮವನ್ನು ಪುನರ್‌ಸ್ಥಾಪಿಸುವ ಉದ್ದೇಶವಿದೆ.

ಕಳೆದ 20 ವರ್ಷಗಳಲ್ಲಿ ಅಫಘಾನ್ ಮಹಿಳೆಯರು ಗಳಿಸಿದ ಹಕ್ಕುಗಳು, ವಿಶೇಷವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಮತ್ತೆ ಕಳೆದುಕೊಳ್ಳುವ ಅಪಾಯ ಈಗ ಎದುರಾಗಿದೆ.

ತಾಲಿಬಾನ್‌ಗಳಿಗೆ ಮಹಿಳೆಯರನ್ನು ವಿವಾಹ ಮಾಡಿಸುವ ಕೃತ್ಯ, ಅವರನ್ನು ತಾಲಿಬಾನ್‌ಗೆ ಸೇರಿಸುವ ತಂತ್ರವಾಗಿದೆ. ಇದು ವಿವಾಹವಲ್ಲ, ಲೈಂಗಿಕ ಗುಲಾಮಗಿರಿಯಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಜಿನೇವಾ ಸಮಾವೇಶದ ಪರಿಚ್ಛೇದ 27 ಹೇಳುತ್ತದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

“ಮಹಿಳೆಯರನ್ನು ವಿಶೇಷವಾಗಿ ಅವರ ಗೌರವದ ಮೇಲಾಗು ದಮನ, ಅತ್ಯಾಚಾರ, ಬಲವಂತದ ವೇಶ್ಯಾವಾಟಿಕೆ ಅಥವಾ ಯಾವುದೇ ರೀತಿಯ ಅಸಭ್ಯ ಆಕ್ರಮಣದಿಂದ ರಕ್ಷಿಸಬೇಕು” ಎಂದು 27ನೇ ಪರಚ್ಛೇದ ಹೇಳಿದೆ.

2008 ರಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 1820ರ ನಿರ್ಣಯವನ್ನು ಅಂಗೀಕರಿಸಿತು. “ಅತ್ಯಾಚಾರ ಮತ್ತು ಇತರ ಲೈಂಗಿಕ ದೌರ್ಜನ್ಯಗಳು ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಅದು ಘೋಷಿಸಿತು.

ಈಗ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಏನಾಗುತ್ತದೆ ಎಂಬುದು ಅಲ್ಲಿನ ದೌರ್ಜನ್ಯಗಳನ್ನು ತಡೆಯಲು ವಿಶ್ವಸಂಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ತಜ್ಞರಿಂದ ಬಂದಿರುವ ಸಲಹೆಗಳಲ್ಲಿ ಸುಸ್ಥಿರ ಶಾಂತಿ ಮತ್ತು ತಕ್ಷಣದ ಕದನ ವಿರಾಮವನ್ನು ತರುವ ಕ್ರಮಗಳು ಸೇರಿವೆ. ಅಲ್ಲದೆ, ಮಹಿಳಾ ಹಕ್ಕುಗಳನ್ನು ಖಾತರಿಪಡಿಸುವುದು, ಅಫ್ಘಾನಿಸ್ತಾನದ ಸಂವಿಧಾನ ಮತ್ತು ರಾಷ್ಟ್ರೀಯ ಶಾಸನ ಮತ್ತು ಅಂತರಾಷ್ಟ್ರೀಯ ಕಾನೂನಿನಲ್ಲಿ ಪ್ರತಿಪಾದಿಸಲಾಗಿದೆ.

ಪ್ರಸ್ತುತ, ಅಫ್ಘಾನ್ ಸರ್ಕಾರದ ತಂಡದಲ್ಲಿ ಕೇವಲ ನಾಲ್ಕು ಮಹಿಳಾ ಶಾಂತಿ ಸಂಧಾನಕಾರರಿದ್ದಾರೆ ಮತ್ತು ತಾಲಿಬಾನ್‌ಗಳಲ್ಲಿ ಯಾರೂ ಇಲ್ಲ. ತಾಲಿಬಾನ್ ವಿರುದ್ಧವಿರುವ ನಿರ್ಬಂಧಗಳನ್ನು ತೆಗೆದುಹಾಕುವ ಕ್ರಮಗಳ ಸಂದರ್ಭದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಬದ್ಧತೆಯನ್ನೂ ಕೂಡ ಅನುಸರಿಸಬೇಕಾಗಿದೆ.

ಪ್ರಸ್ತುತ ಅಫ್ಘಾನಿಸ್ತಾನಕ್ಕೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಾ ಅತಿದೊಡ್ಡ ದಾನಿಗಳಾಗಿದ್ದು, ಮಹಿಳಾ ಹಕ್ಕುಗಳು ಮತ್ತು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡಬೇಕು.

ಮಹಿಳೆಯರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ಮತ್ತು ನ್ಯಾಯಕ್ಕೆ ಸಮಾನ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಯುಎನ್ ಮತ್ತು ಅಂತರಾಷ್ಟ್ರೀಯ ಸಮುದಾಯದ ಪ್ರಯತ್ನಗಳನ್ನು ಅಫ್ಘಾನಿಸ್ತಾನ ಮತ್ತು ಇತರ ಪ್ರದೇಶದಾದ್ಯಂತ ಮಹಿಳೆಯರು ಸ್ವಾಗತಿಸುತ್ತಾರೆ.

ಮೂಲ: ಔಟ್‌ಲುಕ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...