Homeಮುಖಪುಟಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

- Advertisement -
- Advertisement -

ಅಫ್ಘಾನಿಸ್ಥಾನದ ಈಗ ತಾಲಿಬಾನಿಗಳ ವಶವಾಗಿದೆ. ತಾಲಿಬಾನ್ ಕಮಾಂಡರ್ ಮುಲ್ಲಾ ಅಬ್ದುಲ್ಲಾ ಅಫ್ಘಾನ್‌ನ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ. ಆಫ್ಘಾನ್‌ನಲ್ಲಿ ತಾಲಿಬಾನ್‌ ಆಡಳಿತ ಆರಂಭವಾಗಿದ್ದು, ಅಲ್ಲಿನ ಮಹಿಳೆಯರು ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಫ್ಘಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್ ದಾಳಿಯು ಮಹಿಳೆಯರನ್ನು ನಿಯಂತ್ರಿಸುವ ಕ್ರಮವನ್ನು ಒಳಗೊಂಡಿದೆ. ದೇಶದ ದೊಡ್ಡ ಭಾಗಗಳ ಮೇಲೆ ತಾಲಿಬಾನ್‌ ನಿಯಂತ್ರಣ ಸಾಧಿಸಿದೆ. ಆದರೆ, ಕನಿಷ್ಟ ಪ್ರತಿರೋಧ ಮತ್ತು ಅಂತರಾಷ್ಟ್ರೀಯ ಒತ್ತಡದ ಕೊರತೆಯಿಂದಾಗಿ ಅವರ ಹಿಂಸಾಚಾರ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಫ್ಘಾನ್‌ ಮಹಿಳೆಯರಿಗೆ ಅಪಾಯವನ್ನು ತದ್ದೊಡ್ಡುತ್ತಿದೆ.

ಈ ಹಿಂದೆ ಜುಲೈನಲ್ಲಿ, ತಾಲಿಬಾನಿಗಳೊಂದಿಗೆ ‘ಮದುವೆ’ ಮಾಡಲು 15 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರು ಮತ್ತು 45 ವರ್ಷದೊಳಗಿನ ವಿಧವೆಯರ ಪಟ್ಟಿಯನ್ನು ನೀಡುವಂತೆ ಅಫ್ಘಾನ್‌ನ ಸ್ಥಳೀಯ ಧಾರ್ಮಿಕ ಮುಖಂಡರಿಗೆ ತಾಲಿಬಾನ್ ಕೇಳಿತ್ತು.

ಈ ಬಲವಂತದ ಮದುವೆಗಳು ನಡೆದರೆ, ಮಹಿಳೆಯರು ಮತ್ತು ಹುಡುಗಿಯರನ್ನು ಪಾಕಿಸ್ತಾನದ ವಜೀರಿಸ್ತಾನಕ್ಕೆ ಕರೆದೊಯ್ದು ಪುನಃ ಶಿಕ್ಷಣ ನೀಡಲಾಗುವುದು ಮತ್ತು ‘ಅಧಿಕೃತ ಇಸ್ಲಾಂ’ಗೆ ಪರಿವರ್ತಿಸಲಾಗುವುದು ಎನ್ನಲಾಗಿದೆ.

ಇದನ್ನೂ ಓದಿ: ಅಫ್ಘಾನ್‌‌ ಪತನ: ನೆರೆ ದೇಶಗಳಿಗೆ ಸಂಬಂಧಿಸಿದ ವಿದೇಶಾಂಗ ನೀತಿಯನ್ನು ಪರಿಶೀಲಿಸಬೇಕು – ಶರದ್ ಪವಾರ್

ಈ ತಾಲಿಬಾನ್ ಆಕ್ರಮಣದಿಂದ ಮುಂದೆ ಏನಾಗಲಿದೆ ಎಂಬುದಕ್ಕೆ ಎಚ್ಚರಿಕೆಯಾಗಿ, 1996-2001ರ ನಡುವಿನ ತಾಲಿಬಾನ್‌ಗಳ ಕ್ರೂರ ಆಡಳಿತವು ನಮ್ಮ ಮುಂದಿದೆ. ಆ ಸಮಯದಲ್ಲಿ ಮಹಿಳೆಯರು ನಿರಂತರ ಮಾನವ ಹಕ್ಕುಗಳ ಉಲ್ಲಂಘನೆಗೆ ಒಳಗಾಗಿದ್ದರು. ಅವರಿಗೆ ಉದ್ಯೋಗ ಮತ್ತು ಶಿಕ್ಷಣವನ್ನು ನಿರಾಕರಿಸಲಾಗಿತ್ತು ಬುರ್ಖಾ ಧರಿಸಲು ಒತ್ತಾಯಿಸಲಾಯಿತು ಮತ್ತು ಮನೆಯಿಂದ ಹೊರಹೋಗುವುದನ್ನು ನಿಷೇಧಿಸಲಾಗಿತ್ತು.

ಮಹಿಳೆಯರು ಮತ್ತು ಅವರ ಹಕ್ಕುಗಳ ಬಗ್ಗೆ ತಮ್ಮ ನಿಲುವನ್ನು ಬದಲಿಸಿಕೊಂಡಿದ್ದಾರೆ ಎಂದು ತಾಲಿಬಾನ್‌ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೂ, ಅವರ ಕ್ರಮಗಳು ಸಾವಿರಾರು ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ಒಪ್ಪಿಸುವ ಪ್ರಯತ್ನಗಳು ಇತ್ತೇಚೆಗೆ ನಡೆದಿವೆ.

ಇದಲ್ಲದೆ, ತಾಲಿಬಾನ್ 12 ವರ್ಷಕ್ಕಿಂತ ಮೇಲ್ಪಟ್ಟ ಹೆಣ್ಣುಮಕ್ಕಳ ಶಿಕ್ಷಣವನ್ನು ನಿರಾಕರಿಸುವ ಉದ್ದೇಶವನ್ನು ಸೂಚಿಸಿದೆ. ಅಲ್ಲದೆ, ಮಹಿಳೆಯರಿಗೆ ಉದ್ಯೋಗ ನಿರಾಕರಣೆಯ ನಿಯಮವನ್ನು ಪುನರ್‌ಸ್ಥಾಪಿಸುವ ಉದ್ದೇಶವಿದೆ.

ಕಳೆದ 20 ವರ್ಷಗಳಲ್ಲಿ ಅಫಘಾನ್ ಮಹಿಳೆಯರು ಗಳಿಸಿದ ಹಕ್ಕುಗಳು, ವಿಶೇಷವಾಗಿ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಮತ್ತೆ ಕಳೆದುಕೊಳ್ಳುವ ಅಪಾಯ ಈಗ ಎದುರಾಗಿದೆ.

ತಾಲಿಬಾನ್‌ಗಳಿಗೆ ಮಹಿಳೆಯರನ್ನು ವಿವಾಹ ಮಾಡಿಸುವ ಕೃತ್ಯ, ಅವರನ್ನು ತಾಲಿಬಾನ್‌ಗೆ ಸೇರಿಸುವ ತಂತ್ರವಾಗಿದೆ. ಇದು ವಿವಾಹವಲ್ಲ, ಲೈಂಗಿಕ ಗುಲಾಮಗಿರಿಯಾಗಿದೆ. ಮದುವೆಯ ನೆಪದಲ್ಲಿ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಗೆ ತಳ್ಳುವುದು ಯುದ್ಧ ಅಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಜಿನೇವಾ ಸಮಾವೇಶದ ಪರಿಚ್ಛೇದ 27 ಹೇಳುತ್ತದೆ.

ಇದನ್ನೂ ಓದಿ: ಅಫ್ಘಾನ್ ಪತನ: ಕಾಬೂಲ್‌ನಿಂ‌ದ ಭಾರತೀಯ ರಾಯಭಾರ ಕಚೇರಿ ಸ್ಥಳಾಂತರ

“ಮಹಿಳೆಯರನ್ನು ವಿಶೇಷವಾಗಿ ಅವರ ಗೌರವದ ಮೇಲಾಗು ದಮನ, ಅತ್ಯಾಚಾರ, ಬಲವಂತದ ವೇಶ್ಯಾವಾಟಿಕೆ ಅಥವಾ ಯಾವುದೇ ರೀತಿಯ ಅಸಭ್ಯ ಆಕ್ರಮಣದಿಂದ ರಕ್ಷಿಸಬೇಕು” ಎಂದು 27ನೇ ಪರಚ್ಛೇದ ಹೇಳಿದೆ.

2008 ರಲ್ಲಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು 1820ರ ನಿರ್ಣಯವನ್ನು ಅಂಗೀಕರಿಸಿತು. “ಅತ್ಯಾಚಾರ ಮತ್ತು ಇತರ ಲೈಂಗಿಕ ದೌರ್ಜನ್ಯಗಳು ಯುದ್ಧ ಅಪರಾಧಗಳು, ಮಾನವೀಯತೆಯ ವಿರುದ್ಧದ ಅಪರಾಧಗಳು” ಎಂದು ಅದು ಘೋಷಿಸಿತು.

ಈಗ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಏನಾಗುತ್ತದೆ ಎಂಬುದು ಅಲ್ಲಿನ ದೌರ್ಜನ್ಯಗಳನ್ನು ತಡೆಯಲು ವಿಶ್ವಸಂಸ್ಥೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

ತಜ್ಞರಿಂದ ಬಂದಿರುವ ಸಲಹೆಗಳಲ್ಲಿ ಸುಸ್ಥಿರ ಶಾಂತಿ ಮತ್ತು ತಕ್ಷಣದ ಕದನ ವಿರಾಮವನ್ನು ತರುವ ಕ್ರಮಗಳು ಸೇರಿವೆ. ಅಲ್ಲದೆ, ಮಹಿಳಾ ಹಕ್ಕುಗಳನ್ನು ಖಾತರಿಪಡಿಸುವುದು, ಅಫ್ಘಾನಿಸ್ತಾನದ ಸಂವಿಧಾನ ಮತ್ತು ರಾಷ್ಟ್ರೀಯ ಶಾಸನ ಮತ್ತು ಅಂತರಾಷ್ಟ್ರೀಯ ಕಾನೂನಿನಲ್ಲಿ ಪ್ರತಿಪಾದಿಸಲಾಗಿದೆ.

ಪ್ರಸ್ತುತ, ಅಫ್ಘಾನ್ ಸರ್ಕಾರದ ತಂಡದಲ್ಲಿ ಕೇವಲ ನಾಲ್ಕು ಮಹಿಳಾ ಶಾಂತಿ ಸಂಧಾನಕಾರರಿದ್ದಾರೆ ಮತ್ತು ತಾಲಿಬಾನ್‌ಗಳಲ್ಲಿ ಯಾರೂ ಇಲ್ಲ. ತಾಲಿಬಾನ್ ವಿರುದ್ಧವಿರುವ ನಿರ್ಬಂಧಗಳನ್ನು ತೆಗೆದುಹಾಕುವ ಕ್ರಮಗಳ ಸಂದರ್ಭದಲ್ಲಿ ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಬದ್ಧತೆಯನ್ನೂ ಕೂಡ ಅನುಸರಿಸಬೇಕಾಗಿದೆ.

ಪ್ರಸ್ತುತ ಅಫ್ಘಾನಿಸ್ತಾನಕ್ಕೆ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕಾ ಅತಿದೊಡ್ಡ ದಾನಿಗಳಾಗಿದ್ದು, ಮಹಿಳಾ ಹಕ್ಕುಗಳು ಮತ್ತು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಒತ್ತು ನೀಡಬೇಕು.

ಮಹಿಳೆಯರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆ ಮತ್ತು ನ್ಯಾಯಕ್ಕೆ ಸಮಾನ ಪ್ರವೇಶವಿದೆ ಎಂದು ಖಚಿತಪಡಿಸಿಕೊಳ್ಳಲು ಯುಎನ್ ಮತ್ತು ಅಂತರಾಷ್ಟ್ರೀಯ ಸಮುದಾಯದ ಪ್ರಯತ್ನಗಳನ್ನು ಅಫ್ಘಾನಿಸ್ತಾನ ಮತ್ತು ಇತರ ಪ್ರದೇಶದಾದ್ಯಂತ ಮಹಿಳೆಯರು ಸ್ವಾಗತಿಸುತ್ತಾರೆ.

ಮೂಲ: ಔಟ್‌ಲುಕ್

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...