Homeಮುಖಪುಟತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತು ಪತ್ತೆಯಾದ ನಂತರ, ಕೊಂದಿದ್ದಾರೆ: ವರದಿ

- Advertisement -
- Advertisement -

ಪುಲಿಟ್ಜರ್ ಪ್ರಶಸ್ತಿ ವಿಜೇತ ಫೋಟೊ ಜರ್ನಲಿಸ್ಟ್ ದಾನಿಶ್ ಸಿದ್ದೀಕಿ ಅಫ್ಘಾನಿಸ್ತಾನದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿಲ್ಲ. ಅವರ ಗುರುತನ್ನು ಪತ್ತೆ ಹಚ್ಚಿದ ಬಳಿಕ ತಾಲಿಬಾನಿಗಳು ಅವರನ್ನು “ಕ್ರೂರವಾಗಿ ಕೊಂದಿದ್ದಾರೆ” ಎಂದು ಅಮೆರಿಕದ ನಿಯತಕಾಲಿಕವೊಂದರಲ್ಲಿ ಗುರುವಾರ ಪ್ರಕಟವಾದ ವರದಿಯಲ್ಲಿ ಹೇಳಲಾಗಿದೆ.

38 ವರ್ಷದ ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ಅಫ್ಘಾನ್ ಪಡೆಗಳು ಮತ್ತು ತಾಲಿಬಾನ್ ನಡುವೆ ನಡೆದ ಘರ್ಷಣೆಯಲ್ಲಿ ಸಾವನ್ನಪ್ಪಿದ್ದರು. ಅವರು ಅಫ್ಘಾನ್‌‌‌‌ ವಿಶೇಷ ಪಡೆಯೊಂದಿಗೆ ವರದಿಗಾಗಿ ಅಲ್ಲಿ ನಿಯೋಜನೆಗೊಂಡಿದ್ದರು ಎನ್ನಲಾಗಿದೆ.

ದಾನಿಶ್ ಸಿದ್ದೀಕಿ ಕಸ್ಟಮ್ಸ್ ಪೋಸ್ಟ್‌ ಬಳಿಯಿದ್ದಾಗ ತಾಲಿಬಾನಿಗಳ ದಾಳಿಯಿಂದ ಅವರ ತಂಡ ಬೇರ್ಪಟ್ಟಿತ್ತು. ಅಫ್ಘಾನ್‌‌‌‌ ವಿಶೇಷ ಪಡೆಯ ಕಮಾಂಡರ್ ಮತ್ತು ಇತರ ಸೈನಿಕರು ಸಿದ್ದೀಕಿ ಅವರಿಂದ ಬೇರ್ಪಟ್ಟು, ಅವರು ಇತರ ಮೂರು ಅಫ್ಘಾನ್ ಪಡೆಗಳೊಂದಿಗೆ ಉಳಿದಿದ್ದರು ಎಂದು ವಾಷಿಂಗ್ಟನ್ ಎಕ್ಸಾಮಿನರ್ ವರದಿ ಮಾಡಿದೆ.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ಈ ದಾಳಿಯ ಸಮಯದಲ್ಲಿ, ಸಿದ್ದೀಕಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅವರ ತಂಡವು ಸ್ಥಳೀಯ ಮಸೀದಿಯಲ್ಲಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಆದರೆ, ಒಬ್ಬ ಪತ್ರಕರ್ತ ಮಸೀದಿಯಲ್ಲಿದ್ದನೆಂಬ ಸುದ್ದಿ ಹರಡುತ್ತಿದ್ದಂತೆ, ತಾಲಿಬಾನಿಗಳು ಮಸೀದಿ ಮೇಲೆ ದಾಳಿ ಮಾಡಿದ್ದರು.

ತಾಲಿಬಾನ್‌ಗಳು ಮಸೀದಿಯ ಮೇಲೆ ದಾಳಿ ನಡೆಸಿರುವುದು ಸಿದ್ದಿಕಿಯವರು ಅಲ್ಲಿ ಇದ್ದದ್ದರಿಂದ ಮಾತ್ರವೇ ಎಂದು ಸ್ಥಳೀಯ ತನಿಖೆಯು ವರದಿ ಬಹಿರಂಗ ಪಡಿಸಿದೆ.

“ತಾಲಿಬಾನಿಗಳು ಅವರನ್ನು ಸೆರೆಹಿಡಿದಾಗ ಸಿದ್ದಿಕಿ ಜೀವಂತವಾಗಿದ್ದರು. ತಾಲಿಬಾನಿಗಳು ದಾನಿಶ್ ಸಿದ್ದೀಕಿ ಗುರುತನ್ನು ಪರಿಶೀಲಿಸಿದ ನಂತರ ಅವರನ್ನು ಮತ್ತು ಅವರ ಜೊತೆಗಿದ್ದವರನ್ನು ಕೊಲ್ಲಲಾಗಿದೆ. ಕಮಾಂಡರ್ ಮತ್ತು ಅವರ ತಂಡದ ಉಳಿದವರು ಸಿದ್ದಿಕಿ ಅವರನ್ನು ರಕ್ಷಿಸಲು ಪ್ರಯತ್ನಿಸಿದಾಗ ಸಾವನ್ನಪ್ಪಿದ್ದರು” ಎಂದು ಸ್ಥಳೀಯ ತನಿಖೆಯು ವರದಿ ಹೇಳಿದೆ.

“ವ್ಯಾಪಕವಾಗಿ ವೈರಲ್ ಆದ ಛಾಯಾಚಿತ್ರದಲ್ಲಿ ಸಿದ್ದಿಕಿ ಅವರ ಮುಖವನ್ನು ಗುರುತಿಸಬಹುದು. ಇದರ ಜೊತೆಗೆ ನಾನು ಉಳಿದ ಚಿತ್ರಗಳನ್ನು ಪರಿಶೀಲಿಸಿದ್ದೇನೆ ಮತ್ತು ಸಿದ್ದಿಕಿ ಅವರ ಮೃತದೇಹದ ವಿಡಿಯೊ ಕೂಡ ಪರಿಶೀಲಿಸಿದ್ದು, ತಾಲಿಬಾನಿಗಳು ಸಿದ್ದಿಕಿಯವರ ತಲೆಯ ಸುತ್ತ ಹೊಡೆದು ನಂತರ ಅವರ ದೇಹಕ್ಕೆ ಗುಂಡುಗಳಿಂದ ಹೊಡೆದಿದ್ದಾರೆ” ಎಂದು ಅಮೆರಿಕನ್ ಎಂಟರ್‌ಪ್ರೈಸ್ ಇನ್‌ಸ್ಟಿಟ್ಯೂಟ್‌ನ ಹಿರಿಯ ಬರಹಗಾರ ಮೈಕೆಲ್ ರೂಬಿನ್ ಬರೆದಿದ್ದಾರೆ.

ಸಿದ್ದಿಕಿ ಅವರನ್ನುಈ ರೀತಿಯಲ್ಲಿ ಕೊಲ್ಲುವ ತಾಲಿಬಾನ್ ನಿರ್ಧಾರ ಮತ್ತು ನಂತರ ಅವರ ಮೃತ ದೇಹವನ್ನು ವಿರೂಪಗೊಳಿಸಿರುವುದು, ಯುದ್ಧದ ನಿಯಮಗಳನ್ನು ಗೌರವಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....