Homeಮುಖಪುಟತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

- Advertisement -
- Advertisement -

ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿ ವಿವಾದ ಸೃಷ್ಟಿಸಿದ್ದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ಟೈಲರ್‌ನ ಕ್ರೂರ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇಶದ ರಾಜಕಾರಣಿಗಳು, ಧಾರ್ಮಿಕ ಮುಖಂಡರು ಘಟನೆಯನ್ನು ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

ಅಜ್ಮೀರ್ ದರ್ಗಾದ ದಿವಾನ್ ಝೈನುಲ್ ಅಬೆದಿನ್ ಅಲಿ ಖಾನ್ ಅವರು ಘಟನೆಯನ್ನು ವಿರೋಧಿಸಿದ್ದು, “ತಾಲಿಬಾನೀಕರಣ ಮನಸ್ಥಿತಿಗೆ ಭಾರತದ ಮುಸ್ಲಿಮರು ಎಂದಿಗೂ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

“ಯಾವುದೇ ಧರ್ಮವು ಮಾನವೀಯತೆಯ ವಿರುದ್ಧ ಹಿಂಸೆಯನ್ನು ಉತ್ತೇಜಿಸುವುದಿಲ್ಲ. ವಿಶೇಷವಾಗಿ, ಇಸ್ಲಾಂ ಧರ್ಮದಲ್ಲಿ, ಎಲ್ಲಾ ಬೋಧನೆಗಳು ಶಾಂತಿಗಾಗಿ ಮೀಸಲಾಗಿವೆ” ಎಂದು ಅಲಿ ಖಾನ್‌ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹತ್ಯೆಯನ್ನು ಬಲವಾಗಿ ಖಂಡಿಸಿದ ಅವರು, “ಹಿಂಸಾಚಾರದ ಮಾರ್ಗದಲ್ಲಿ ಮಾತ್ರ ಪರಿಹಾರವನ್ನು ಕಂಡುಕೊಳ್ಳುವ ಕೆಲವು ಮೂಲಭೂತ ಗುಂಪುಗಳಲ್ಲಿ ಈ ಆರೋಪಿಗಳಿದ್ದಾರೆ” ಎಂದಿದ್ದಾರೆ.

“ವೈರಲ್‌ ಆಗಿರುವ ವಿಡಿಯೊ ಭೀಕರವಾಗಿದೆ. ಕೆಲವು ನೈತಿಕವಲ್ಲದ ಮನಸ್ಸುಗಳು ಬಡವನ ಮೇಲೆ ಕ್ರೂರವಾಗಿ ದಾಳಿ ಎಸಗಿವೆ. ಇದನ್ನು ಇಸ್ಲಾಮಿಕ್ ಜಗತ್ತಿನಲ್ಲಿ ಶಿಕ್ಷಾರ್ಹ ಪಾಪವೆಂದು ಸ್ವೀಕರಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಜಮೀಯತ್ ಉಲೇಮಾ-ಎ-ಹಿಂದ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಹಕೀಮುದ್ದೀನ್ ಖಾಸ್ಮಿ ಕೂಡ ಹತ್ಯೆಯನ್ನು ಖಂಡಿಸಿದ್ದಾರೆ.

“ಈ ಘಟನೆ ನಡೆಸಿದವರನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ. ಇದು ದೇಶದ ಕಾನೂನು ಮತ್ತು ನಮ್ಮ ಧರ್ಮಕ್ಕೆ ವಿರುದ್ಧವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಮ್ಮ ದೇಶದಲ್ಲಿ ಕಾನೂನಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ” ಎಂದು ತಿಳಿಸಿದ್ದಾರೆ.

ಇಂತಹ ಹೇಯ ಕೃತ್ಯಗಳು ಸಾಮರಸ್ಯದ ಬದುಕನ್ನು ಕೆಡಿಸುತ್ತದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಈ ಕುರಿತು ಮಾತನಾಡಿದ್ದು, “ನಾನು (ಉದಯಪುರ) ಘಟನೆಯನ್ನು ಖಂಡಿಸುತ್ತೇನೆ. ಯಾರನ್ನಾದರೂ ಕೊಲ್ಲಲು ಕಾನೂನಿನಲ್ಲಿ ಅವಕಾಶವಿಲ್ಲ. ಯಾರೂ ಇತರರನ್ನು ಕೊಲ್ಲಲು ಸಾಧ್ಯವಿಲ್ಲ. ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳುವುದಿಲ್ಲ. ಇದೊಂದು ಅಪರಾಧ. ಆದರೆ ನೂಪುರ್ ಶರ್ಮಾ ಅವರನ್ನೂ ಬಂಧಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

“ಭೀಕರ ಹತ್ಯೆಯಿಂದ ತೀವ್ರ ಆಘಾತವಾಗಿದೆ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

“ಉದಯಪುರದಲ್ಲಿ ನಡೆದ ಘೋರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಕ್ರೌರ್ಯದ ಮೂಲಕ ಭಯೋತ್ಪಾದನೆಯನ್ನು ಹರಡುವವರನ್ನು ತಕ್ಷಣವೇ ಶಿಕ್ಷಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ಉದಯಪುರದಲ್ಲಿ ನಡೆದ ಹಿಂಸಾತ್ಮಕ ಘಟನೆಯನ್ನು ಖಂಡಿಸಬೇಕು” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.

“ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಧರ್ಮದ ಹೆಸರಿನಲ್ಲಿ ದ್ವೇಷ ಮತ್ತು ಹಿಂಸೆಯನ್ನು ಹರಡುವುದು ನಮ್ಮ ದೇಶ ಮತ್ತು ಸಮಾಜಕ್ಕೆ ಮಾರಕ. ನಾವು ಒಟ್ಟಾಗಿ ಶಾಂತಿ ಮತ್ತು ಅಹಿಂಸೆಯ ಮಾರ್ಗಗಳನ್ನು ಬಲಪಡಿಸಬೇಕಾಗಿದೆ” ಎಂದು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, “ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಘಟನೆಯ ವಿರುದ್ಧ ಕಾಂಗ್ರೆಸ್ ನಾಯಕರಾದ ಪವನ್ ಖೇರಾ ಮತ್ತು ಶಶಿ ತರೂರ್ ಕೂಡ ಟ್ವೀಟ್ ಮಾಡಿದ್ದಾರೆ. “ಸಮಾಜದಲ್ಲಿ ಇಂತಹ ವಿವಾದಗಳನ್ನು ಹುಟ್ಟುಹಾಕುತ್ತಿರುವವರು ಯಾರು? ಅದರಿಂದ ರಾಜಕೀಯವಾಗಿ ಲಾಭ ಮಾಡಿಕೊಳ್ಳುವವರು ಯಾರು?” ಎಂದು ಖೇರಾ ಪ್ರಶ್ನಿಸಿದರು.

“ಕನ್ಹಯ್ಯಾ ಕುಮಾರ್, ಅಖ್ಲಾಕ್, ಪೆಹ್ಲು ಖಾನ್– ಎಲ್ಲರೂ ದ್ವೇಷಕ್ಕೆ ಬಲಿಯಾದರು. ದೇಶದಲ್ಲಿ ಮತಾಂಧತೆಯ ವಾತಾವರಣ ಸೃಷ್ಟಿಸುತ್ತಿರುವವರು ಯಾರು? ಸಮಾಜದಲ್ಲಿ ವಿವಾದ ಸೃಷ್ಟಿಸುತ್ತಿರುವವರು ಯಾರು? ದ್ವೇಷ ಹರಡುವ ಮೂಲಕ ರಾಜಕೀಯ ಮೈಲೇಜ್ ಪಡೆಯುತ್ತಿರುವವರು ಯಾರು? ಆತ ಯಾರೆಂದು ಎಲ್ಲರಿಗೂ ಗೊತ್ತು. ಎಲ್ಲರೂ ನೋಡುತ್ತಿದ್ದಾರೆ, ಆದರೆ ಅವರು ಮೌನವಾಗಿದ್ದಾರೆ” ಎಂದಿದ್ದಾರೆ ಖೇರಾ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, “ಉದಯ್‌ಪುರದಲ್ಲಿ ನಡೆದ ಹತ್ಯೆಯನ್ನು ಕಟು ಪದಗಳಲ್ಲಿ ಖಂಡಿಸಬೇಕು. ದೇಶದ ಭಾತೃತ್ವವನ್ನು ಉಳಿಸಲು ಸಮಾಜದ ಪ್ರತಿಯೊಬ್ಬರು ಮುಂದಾಗಬೇಕು. ಅಂತಹ ಕ್ರಿಮಿನಲ್ ಅಂಶಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

ಬಿಎಸ್‌ಪಿ ವರಿಷ್ಠೆ ಮಾಯಾವತಿ ಕೂಡ ಹಲ್ಲೆಕೋರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. “ಇಂದು ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ನ ಬರ್ಬರ ಹತ್ಯೆ ಅತ್ಯಂತ ದುಃಖಕರವಾಗಿದೆ. ಇದನ್ನು ಖಂಡಿಸಬೇಕು. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು, ಸಂಯಮವನ್ನು ಕಾಪಾಡಿಕೊಳ್ಳಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಅಪರಾಧಿಗಳಿಗೆ ಕಠಿಣ ಕಾನೂನು ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ರಾಜಸ್ಥಾನ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಹಜ ವಾತಾವರಣ ಮರಳಬೇಕು” ಎಂದು ಮನವಿ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹತ್ಯೆಯನ್ನು ಭಯಾನಕ ಎಂದು ಕರೆದಿದ್ದಾರೆ. “ಉದಯಪುರ ಘಟನೆಯು ಅತ್ಯಂತ ಭಯಾನಕವಾದದ್ದು. ಇಂತಹ ಹೀನ ಕೃತ್ಯಗಳಿಗೆ ಸುಸಂಸ್ಕೃತ ಸಮಾಜದಲ್ಲಿ ಸ್ಥಾನವಿಲ್ಲ. ನಾವು ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ಅಪರಾಧ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದೇ ರೀತಿ ಗೋರಕ್ಷಕರೆಂಬ ವ್ಯಾಘ್ರರು ನಡೆಸಿದ ಮುಸ್ಲಿಂ ಧರ್ಮದ ಬಡಪಾಯಿಗಳನ್ನು ನಿರ್ದಯವಾಗಿ ಕೊಂದ ಕ್ರಿಮಿಗಳ ವಿರುದ್ಧ ವಿರೋಧ ವ್ಯಕ್ತಪಡಿಸುವ ಧೈರ್ಯ ನಿಮಗಿದೆಯೇ?

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...