Homeಮುಖಪುಟತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

ತಾಲಿಬಾನೀಕರಣ ಸಹಿಸುವುದಿಲ್ಲ: ಉದಯ್‌ಪುರ್‌ ಘಟನೆಗೆ ರಾಜಕಾರಣಿಗಳು, ಧಾರ್ಮಿಕ ಮುಖಂಡರ ತೀವ್ರ ವಿರೋಧ

- Advertisement -
- Advertisement -

ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸಿ ವಿವಾದ ಸೃಷ್ಟಿಸಿದ್ದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ಟೈಲರ್‌ನ ಕ್ರೂರ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇಶದ ರಾಜಕಾರಣಿಗಳು, ಧಾರ್ಮಿಕ ಮುಖಂಡರು ಘಟನೆಯನ್ನು ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

ಅಜ್ಮೀರ್ ದರ್ಗಾದ ದಿವಾನ್ ಝೈನುಲ್ ಅಬೆದಿನ್ ಅಲಿ ಖಾನ್ ಅವರು ಘಟನೆಯನ್ನು ವಿರೋಧಿಸಿದ್ದು, “ತಾಲಿಬಾನೀಕರಣ ಮನಸ್ಥಿತಿಗೆ ಭಾರತದ ಮುಸ್ಲಿಮರು ಎಂದಿಗೂ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

“ಯಾವುದೇ ಧರ್ಮವು ಮಾನವೀಯತೆಯ ವಿರುದ್ಧ ಹಿಂಸೆಯನ್ನು ಉತ್ತೇಜಿಸುವುದಿಲ್ಲ. ವಿಶೇಷವಾಗಿ, ಇಸ್ಲಾಂ ಧರ್ಮದಲ್ಲಿ, ಎಲ್ಲಾ ಬೋಧನೆಗಳು ಶಾಂತಿಗಾಗಿ ಮೀಸಲಾಗಿವೆ” ಎಂದು ಅಲಿ ಖಾನ್‌ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹತ್ಯೆಯನ್ನು ಬಲವಾಗಿ ಖಂಡಿಸಿದ ಅವರು, “ಹಿಂಸಾಚಾರದ ಮಾರ್ಗದಲ್ಲಿ ಮಾತ್ರ ಪರಿಹಾರವನ್ನು ಕಂಡುಕೊಳ್ಳುವ ಕೆಲವು ಮೂಲಭೂತ ಗುಂಪುಗಳಲ್ಲಿ ಈ ಆರೋಪಿಗಳಿದ್ದಾರೆ” ಎಂದಿದ್ದಾರೆ.

“ವೈರಲ್‌ ಆಗಿರುವ ವಿಡಿಯೊ ಭೀಕರವಾಗಿದೆ. ಕೆಲವು ನೈತಿಕವಲ್ಲದ ಮನಸ್ಸುಗಳು ಬಡವನ ಮೇಲೆ ಕ್ರೂರವಾಗಿ ದಾಳಿ ಎಸಗಿವೆ. ಇದನ್ನು ಇಸ್ಲಾಮಿಕ್ ಜಗತ್ತಿನಲ್ಲಿ ಶಿಕ್ಷಾರ್ಹ ಪಾಪವೆಂದು ಸ್ವೀಕರಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಜಮೀಯತ್ ಉಲೇಮಾ-ಎ-ಹಿಂದ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಹಕೀಮುದ್ದೀನ್ ಖಾಸ್ಮಿ ಕೂಡ ಹತ್ಯೆಯನ್ನು ಖಂಡಿಸಿದ್ದಾರೆ.

“ಈ ಘಟನೆ ನಡೆಸಿದವರನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ. ಇದು ದೇಶದ ಕಾನೂನು ಮತ್ತು ನಮ್ಮ ಧರ್ಮಕ್ಕೆ ವಿರುದ್ಧವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಮ್ಮ ದೇಶದಲ್ಲಿ ಕಾನೂನಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ” ಎಂದು ತಿಳಿಸಿದ್ದಾರೆ.

ಇಂತಹ ಹೇಯ ಕೃತ್ಯಗಳು ಸಾಮರಸ್ಯದ ಬದುಕನ್ನು ಕೆಡಿಸುತ್ತದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಈ ಕುರಿತು ಮಾತನಾಡಿದ್ದು, “ನಾನು (ಉದಯಪುರ) ಘಟನೆಯನ್ನು ಖಂಡಿಸುತ್ತೇನೆ. ಯಾರನ್ನಾದರೂ ಕೊಲ್ಲಲು ಕಾನೂನಿನಲ್ಲಿ ಅವಕಾಶವಿಲ್ಲ. ಯಾರೂ ಇತರರನ್ನು ಕೊಲ್ಲಲು ಸಾಧ್ಯವಿಲ್ಲ. ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳುವುದಿಲ್ಲ. ಇದೊಂದು ಅಪರಾಧ. ಆದರೆ ನೂಪುರ್ ಶರ್ಮಾ ಅವರನ್ನೂ ಬಂಧಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

“ಭೀಕರ ಹತ್ಯೆಯಿಂದ ತೀವ್ರ ಆಘಾತವಾಗಿದೆ” ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

“ಉದಯಪುರದಲ್ಲಿ ನಡೆದ ಘೋರ ಹತ್ಯೆಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಕ್ರೌರ್ಯದ ಮೂಲಕ ಭಯೋತ್ಪಾದನೆಯನ್ನು ಹರಡುವವರನ್ನು ತಕ್ಷಣವೇ ಶಿಕ್ಷಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ದಯವಿಟ್ಟು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಿಕೊಳ್ಳಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ಉದಯಪುರದಲ್ಲಿ ನಡೆದ ಹಿಂಸಾತ್ಮಕ ಘಟನೆಯನ್ನು ಖಂಡಿಸಬೇಕು” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ.

“ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಧರ್ಮದ ಹೆಸರಿನಲ್ಲಿ ದ್ವೇಷ ಮತ್ತು ಹಿಂಸೆಯನ್ನು ಹರಡುವುದು ನಮ್ಮ ದೇಶ ಮತ್ತು ಸಮಾಜಕ್ಕೆ ಮಾರಕ. ನಾವು ಒಟ್ಟಾಗಿ ಶಾಂತಿ ಮತ್ತು ಅಹಿಂಸೆಯ ಮಾರ್ಗಗಳನ್ನು ಬಲಪಡಿಸಬೇಕಾಗಿದೆ” ಎಂದು ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, “ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಅಲ್ಲಿನ ರಾಜ್ಯ ಸರ್ಕಾರ ಕಾನೂನು ಕ್ರಮದ ಮೂಲಕ ಕೊಲೆಗಡುಕನಿಗೆ ಅತ್ಯುಗ್ರ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಘಟನೆಯ ವಿರುದ್ಧ ಕಾಂಗ್ರೆಸ್ ನಾಯಕರಾದ ಪವನ್ ಖೇರಾ ಮತ್ತು ಶಶಿ ತರೂರ್ ಕೂಡ ಟ್ವೀಟ್ ಮಾಡಿದ್ದಾರೆ. “ಸಮಾಜದಲ್ಲಿ ಇಂತಹ ವಿವಾದಗಳನ್ನು ಹುಟ್ಟುಹಾಕುತ್ತಿರುವವರು ಯಾರು? ಅದರಿಂದ ರಾಜಕೀಯವಾಗಿ ಲಾಭ ಮಾಡಿಕೊಳ್ಳುವವರು ಯಾರು?” ಎಂದು ಖೇರಾ ಪ್ರಶ್ನಿಸಿದರು.

“ಕನ್ಹಯ್ಯಾ ಕುಮಾರ್, ಅಖ್ಲಾಕ್, ಪೆಹ್ಲು ಖಾನ್– ಎಲ್ಲರೂ ದ್ವೇಷಕ್ಕೆ ಬಲಿಯಾದರು. ದೇಶದಲ್ಲಿ ಮತಾಂಧತೆಯ ವಾತಾವರಣ ಸೃಷ್ಟಿಸುತ್ತಿರುವವರು ಯಾರು? ಸಮಾಜದಲ್ಲಿ ವಿವಾದ ಸೃಷ್ಟಿಸುತ್ತಿರುವವರು ಯಾರು? ದ್ವೇಷ ಹರಡುವ ಮೂಲಕ ರಾಜಕೀಯ ಮೈಲೇಜ್ ಪಡೆಯುತ್ತಿರುವವರು ಯಾರು? ಆತ ಯಾರೆಂದು ಎಲ್ಲರಿಗೂ ಗೊತ್ತು. ಎಲ್ಲರೂ ನೋಡುತ್ತಿದ್ದಾರೆ, ಆದರೆ ಅವರು ಮೌನವಾಗಿದ್ದಾರೆ” ಎಂದಿದ್ದಾರೆ ಖೇರಾ.

ಹಿಂದಿಯಲ್ಲಿ ಟ್ವೀಟ್ ಮಾಡಿರುವ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್, “ಉದಯ್‌ಪುರದಲ್ಲಿ ನಡೆದ ಹತ್ಯೆಯನ್ನು ಕಟು ಪದಗಳಲ್ಲಿ ಖಂಡಿಸಬೇಕು. ದೇಶದ ಭಾತೃತ್ವವನ್ನು ಉಳಿಸಲು ಸಮಾಜದ ಪ್ರತಿಯೊಬ್ಬರು ಮುಂದಾಗಬೇಕು. ಅಂತಹ ಕ್ರಿಮಿನಲ್ ಅಂಶಗಳಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಬೆಂಗಳೂರು: ಪತ್ರಕರ್ತ ಜುಬೇರ್‌ ಬಂಧನ ಖಂಡಿಸಿ ವಿವಿಧೆಡೆ ಮೋಂಬತ್ತಿ ಹಿಡಿದು ಪ್ರತಿಭಟನೆ

ಬಿಎಸ್‌ಪಿ ವರಿಷ್ಠೆ ಮಾಯಾವತಿ ಕೂಡ ಹಲ್ಲೆಕೋರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. “ಇಂದು ರಾಜಸ್ಥಾನದ ಉದಯಪುರದಲ್ಲಿ ಟೈಲರ್‌ನ ಬರ್ಬರ ಹತ್ಯೆ ಅತ್ಯಂತ ದುಃಖಕರವಾಗಿದೆ. ಇದನ್ನು ಖಂಡಿಸಬೇಕು. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು, ಸಂಯಮವನ್ನು ಕಾಪಾಡಿಕೊಳ್ಳಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಅಪರಾಧಿಗಳಿಗೆ ಕಠಿಣ ಕಾನೂನು ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ರಾಜಸ್ಥಾನ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಹಜ ವಾತಾವರಣ ಮರಳಬೇಕು” ಎಂದು ಮನವಿ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈ ಹತ್ಯೆಯನ್ನು ಭಯಾನಕ ಎಂದು ಕರೆದಿದ್ದಾರೆ. “ಉದಯಪುರ ಘಟನೆಯು ಅತ್ಯಂತ ಭಯಾನಕವಾದದ್ದು. ಇಂತಹ ಹೀನ ಕೃತ್ಯಗಳಿಗೆ ಸುಸಂಸ್ಕೃತ ಸಮಾಜದಲ್ಲಿ ಸ್ಥಾನವಿಲ್ಲ. ನಾವು ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಈ ಅಪರಾಧ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದೇ ರೀತಿ ಗೋರಕ್ಷಕರೆಂಬ ವ್ಯಾಘ್ರರು ನಡೆಸಿದ ಮುಸ್ಲಿಂ ಧರ್ಮದ ಬಡಪಾಯಿಗಳನ್ನು ನಿರ್ದಯವಾಗಿ ಕೊಂದ ಕ್ರಿಮಿಗಳ ವಿರುದ್ಧ ವಿರೋಧ ವ್ಯಕ್ತಪಡಿಸುವ ಧೈರ್ಯ ನಿಮಗಿದೆಯೇ?

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...