Homeನಾನು ಗೌರಿಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

- Advertisement -
- Advertisement -

| ಡಾ. ವಾಸು ಎಚ್.ವಿ |

ದೇಶದ ಸಮಸ್ಯೆಗಳ ಸುತ್ತ ಚುನಾವಣೆ ಎದುರಿಸಲು ಹಿಂಜರಿಯುತ್ತಿರುವ ಬಿಜೆಪಿ

2019ರ ಚುನಾವಣೆಯ ಒಂದು ಅತೀ ಮುಖ್ಯ ಲಕ್ಷಣವೆಂದರೆ, ಅಧಿಕಾರಾರೂಢ ಪಕ್ಷವು ದೇಶದ ಜನರ ಅಸಲೀ ಸಮಸ್ಯೆಗಳು ಚುನಾವಣೆಯಲ್ಲಿ ಚರ್ಚೆಯಾಗಬಾರದೆಂದು ಬಯಸುತ್ತಿದೆ. ಅದಕ್ಕಾಗಿ ಇನ್ನಿಲ್ಲದ ಸರ್ಕಸ್ ಮಾಡುತ್ತಿದೆ. ಇದಕ್ಕೆ ಕಾರಣಗಳಿವೆ.

ಇನ್ನು 10 ವರ್ಷಗಳ ಕಾಲ ನಾನೇ ಪ್ರಧಾನಿ ಎಂದು ಖಚಿತವಾಗಿ ಭಾವಿಸಿಕೊಂಡಿದ್ದ ಬಿಜೆಪಿಯ ನಂಬಿಕೆ ಮೂರೂವರೆ ವರ್ಷಗಳಲ್ಲೇ ಅಲ್ಲಾಡಿತು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೂ ಸಂಭ್ರಮಿಸಲಾಗದಷ್ಟು ತೆಳ್ಳಗಿನ ಮಾರ್ಜಿನ್‍ನಲ್ಲಿ ಗೆದ್ದಿದ್ದರು. ಆ ನಂತರ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಎಲ್ಲಾ ಕಡೆ ಸೋತರಷ್ಟೇ ಅಲ್ಲದೇ, ಈ ಹಿಂದೆ ಅಧಿಕಾರದಲ್ಲಿದ್ದ ಮೂರು ದೊಡ್ಡ ರಾಜ್ಯಗಳನ್ನು ಕಳೆದುಕೊಂಡಿದ್ದರು. ಇಲ್ಲಿಂದ ಬಿಜೆಪಿಯ ಗ್ರಾಫ್ ಇಳಿಯುತ್ತಾ ಹೋಯಿತು. ಆದರೆ, ಪ್ರಧಾನಿ ಅಭ್ಯರ್ಥಿಯಾಗಿ ಮೋದಿಯವರ ಜನಪ್ರಿಯತೆ ರಾಹುಲ್ ಗಾಂಧಿಗಿಂತ ಎಷ್ಟೋ ಮೇಲೆ ಇತ್ತು, ಇಂದಿಗೂ ಇದೆ.

ಅದು ಕುಸಿಯಲು ಆರಂಭಿಸಿದ್ದು ರಾಫೇಲ್ ಭ್ರಷ್ಟಾಚಾರದ ಸದ್ದು ಹೆಚ್ಚಾಗುತ್ತಾ ಹೋದಂತೆ. ಜನವರಿಯ ನಂತರ ನಡೆದ ಸಮೀಕ್ಷೆಗಳಲ್ಲೆಲ್ಲಾ ಬಿಜೆಪಿಯ ಕುಸಿತವು ಕಾಣುತ್ತಾ ಬಂದಿತು. ಮೊದಮೊದಲು ಬಿಜೆಪಿಗೆ ಬಹುಮತ ಬರಲ್ಲ ಅಂತ ಇದ್ದದ್ದು, ಎನ್‍ಡಿಎಗೂ ಬಹುಮತ ಬರಲ್ಲ ಅಂತ ಖಚಿತವಾಯಿತು. ಚುನಾವಣೆ ಹೊತ್ತಿಗೆ ಈ ಗ್ರಾಫ್ ಮತ್ತಷ್ಟು ಇಳಿದರೆ ಏನು ಮಾಡೋದು ಎನ್ನುವ ಚಿಂತೆಯಲ್ಲಿದ್ದ ಅವರಿಗೆ ಪುಲ್ವಾಮಾ ನೆರವಿಗೆ ಬಂದಿತು.

ಸಿಆರ್‍ಪಿಎಫ್ ಯೋಧರು ಸತ್ತಿದ್ದಕ್ಕೆ ಇಡೀ ದೇಶವೇ ಮರುಗಿತು. ಆದರೆ ಬಿಜೆಪಿಗೆ ಒಂಥರಾ ಸಂಭ್ರಮವಿತ್ತು. ಪಾಕಿಸ್ತಾನದ ಮೇಲೆ ಒಂದು ದಾಳಿ ನಡೆಸಿ (ಈ ದಾಳಿಯ ‘ಸಾಧನೆ’ಯ ಕುರಿತ ವಿವಾದಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ) ಮಸ್ಕುಲಾರ್ ನ್ಯಾಷನಲಿಸಂ ಮೂಲಕ ಚೇತರಿಕೆ ಪಡೆದುಕೊಳ್ಳಲು ನೋಡಿದರು. ಮಸ್ಕುಲಾರ್ ನ್ಯಾಷನಲಿಸಂ ಎಂದರೆ, ದೇಶದ ಅಸಲೀ ಸಮಸ್ಯೆಗಳನ್ನು ಬಗೆಹರಿಸಿ, ಜನರನ್ನು ಸಬಲಗೊಳಿಸಿ ದೇಶ ಕಟ್ಟುವ ಬದಲಿಗೆ ಹೊರಗಿನ ಶತ್ರುವಿನ ವಿರುದ್ಧ ತೋಳೇರಿಸುತ್ತಾ ತನ್ನ ಬಲ ಹೆಚ್ಚಿಸಿಕೊಳ್ಳುವುದು. ಒಂದು ವೇಳೆ ಶತ್ರು ಇಲ್ಲದಿದ್ದರೆ ಅಂತಹ ಶತ್ರುವನ್ನು ಸೃಷ್ಟಿಸುವುದು ಇದಕ್ಕೆ ಅಗತ್ಯವಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗೆ ನೆರವು ನೀಡುತ್ತಿರುವ ನೆರೆಯ ಪಾಕಿಸ್ತಾನ ಇರುವುದು ಬಿಜೆಪಿಗೆ ಬಹಳ ಅನುಕೂಲ. ಬಿಜೆಪಿ ಆಡಳಿತಾವಧಿಯಲ್ಲಿ ಹಿಂದಿಗಿಂತ ಹೆಚ್ಚು ಭಯೋತ್ಪಾದಕ ಚಟುವಟಿಕೆ ನಡೆದಿದ್ದರೂ, ಹೆಚ್ಚು ಸೈನಿಕರು ಸತ್ತಿದ್ದರೂ ಲೋಪ ಎಲ್ಲಾಯಿತು ಎಂದು ನೋಡಿಕೊಳ್ಳುವ ಬದಲು, ಸೈನಿಕರ ಶವವಿಟ್ಟುಕೊಂಡು ಅದರ ದುರ್ಬಳಕೆಗೆ ಮುಂದಾಯಿತು.

ನಿಧಾನಕ್ಕೆ ಈ ಏರ್‍ಸ್ಟ್ರೈಕ್‍ಗಳು ಜನರ ತಲೆಯಿಂದ ಮರೆಯಾಗುತ್ತಾ, ಅಸಲೀ ವಿಚಾರಗಳು ಮುಂದಕ್ಕೆ ಬಂದವು. ಜನರು ಮತ್ತೆ ನಿರುದ್ಯೋಗ, ರೈತರಿಗೆ ಬೆಲೆ ಇತ್ಯಾದಿಗಳನ್ನು ಮಾತಾಡುತ್ತಾ ಬಂದರು. ಜೊತೆಗೆ ರಾಹುಲ್‍ಗಾಂಧಿ ಬಡವರ ಖಾತೆಗೆ ಸರಾಸರಿ 72,000 ರೂ ಹಾಕುವ ನ್ಯಾಯ್ ಯೋಜನೆ ಪ್ರಕಟಿಸಿದರು. ಚರ್ಚೆ ಬಡವರ ಸುತ್ತಲೂ ಶುರುವಾಯಿತು.

ಇದೀಗ ಮತ್ತೆ ಮೋದಿಯವರು ರಂಗಕ್ಕಿಳಿದರು. ಇಸ್ರೋ ಮುಖ್ಯಸ್ಥರು ಮಾಡಬೇಕಾದ ಪ್ರಕಟಣೆಯನ್ನು ತಾವೇ ಮಾಡಲು ನಿಂತರು. ಸಿನೀಮಿಯಗೊಳಿಸಲು ಬೆಳಿಗ್ಗೆ 11ಕ್ಕೆ ಒಂದು ಟ್ವೀಟ್ ಮಾಡಿ, ತಾನು 11.45ಕ್ಕೆ ರಾಷ್ಟ್ರವನ್ನುದ್ದೇಶಿಸಿ ಮಾತಾಡಲಿದ್ದೇನೆಂದು ಘೋಷಿಸಿದರು. ಆ ನಂತರ 20 ನಿಮಿಷಕ್ಕೂ ಹೆಚ್ಚು ಕಾಯಿಸಿ ಭಾಷಣ ಮಾಡಿದರು. ನಿಸ್ಸಂದೇಹವಾಗಿ ದೇಶವು ಹೆಮ್ಮೆ ಪಟ್ಟುಕೊಳ್ಳಬೇಕಾದ ಒಂದು ಸಾಧನೆಯನ್ನು, ಈ ದೇಶದ ವಿಜ್ಞಾನಿಗಳ ಸಾಧನೆಯನ್ನು ಮುಂದಿಟ್ಟರು. ಆದರೆ, ಅವರ ಉದ್ದೇಶ ಅದಾಗಿರಲಿಲ್ಲ. ಮತ್ತೆ ಗೋದಿ ಮೀಡಿಯಾ ಒಂದು ವಾರ ಕಾಲ ಚರ್ಚೆಯನ್ನು ದೇಶದೊಳಗಿನ ಸಮಸ್ಯೆಗಳ ಕುರಿತು ಯಾರೂ ಮಾತಾಡದಂತೆ ನೋಡಿಕೊಳ್ಳುತ್ತದೆ ಎಂಬುದು ಅವರಿಗೆ ಗೊತ್ತು.

ಬಿಜೆಪಿಗೆ ಏಕೆ ಇಷ್ಟೊಂದು ಹೆದರಿಕೆ? ಈಗ ದೇಶದಲ್ಲಿ ಶೇ.25ರಷ್ಟು ಕಡುಬಡವರಿದ್ದು, ಅವರ ಅಕೌಂಟಿಗೆ ಹಣ ಹಾಕುತ್ತೇವೆಂದು ರಾಹುಲ್‍ಗಾಂಧಿ ಪ್ರಕಟಿಸಿದಾಗ ಅವರನ್ನು ಕೌಂಟರ್ ಮಾಡುವುದು ಕಷ್ಟವೇ? ಅಲ್ಲಾ ಕಣಪ್ಪಾ, ಈ ದೇಶದಲ್ಲಿ 40 ವರ್ಷ ನಿಮ್ಮ ಕುಟುಂಬದವರೇ ಆಳಿದ್ದೀರಿ, ಈಗಲೂ ಇಷ್ಟು ಕಡುಬಡವರು ಏಕಿದ್ದಾರೆ ಎಂದು ಕೇಳಬಹುದಲ್ಲವೇ? ನಿರುದ್ಯೋಗ, ರೈತರಿಗೆ ಒಳ್ಳೆಯ ಬೆಲೆ ಇತ್ಯಾದಿಗಳ ವಿಚಾರದಲ್ಲಿ ಕಾಂಗ್ರೆಸ್ ಈ ದೇಶಕ್ಕೆ ಅದ್ಭುತವಾದದ್ದೇನೂ ಮಾಡಿಲ್ಲ. ಆದರೆ ಅದನ್ನು ಪ್ರಶ್ನೆ ಮಾಡಲು ಹೊರಟರೆ, ಹೌದು ಕಾಂಗ್ರೆಸ್ ಅದ್ಭುತವಾದದ್ದನ್ನು ಮಾಡಿರಲಿಲ್ಲ, ಬಿಜೆಪಿ ಪರಿಸ್ಥಿತಿಯನ್ನು ಮತ್ತಷ್ಟು ಅಧ್ವಾನಗೊಳಿಸಿತು ಎಂಬುದು ಬಯಲಾಗುತ್ತದೆ. ಇದೇ ನಿಮ್ಮ ಸಮಸ್ಯೆಯೇ?

ಗಡಿಯಿಂದ ಒಳಕ್ಕೆ ಬನ್ನಿ ಬಾಹ್ಯಾಕಾಶದಿಂದ ಕೆಳಗಿಳಿದು ಬನ್ನಿ. ದೇಶದ ಅಸಲೀ ಸಮಸ್ಯೆಗಳ ಕುರಿತು ಚರ್ಚಿಸಿ. ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ : ಪ್ರಬಲ ಜಾತಿಯವರಿಂದ ತೀವ್ರ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಪ್ರಬಲ ಜಾತಿಯವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸ ನಿಯಮಗಳ 'ಜಾತಿ ಆಧಾರಿತ ತಾರತಮ್ಯ' ಎಂಬುವುದರ...