Homeನಾನು ಗೌರಿಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

- Advertisement -
- Advertisement -

| ಡಾ. ವಾಸು ಎಚ್.ವಿ |

ದೇಶದ ಸಮಸ್ಯೆಗಳ ಸುತ್ತ ಚುನಾವಣೆ ಎದುರಿಸಲು ಹಿಂಜರಿಯುತ್ತಿರುವ ಬಿಜೆಪಿ

2019ರ ಚುನಾವಣೆಯ ಒಂದು ಅತೀ ಮುಖ್ಯ ಲಕ್ಷಣವೆಂದರೆ, ಅಧಿಕಾರಾರೂಢ ಪಕ್ಷವು ದೇಶದ ಜನರ ಅಸಲೀ ಸಮಸ್ಯೆಗಳು ಚುನಾವಣೆಯಲ್ಲಿ ಚರ್ಚೆಯಾಗಬಾರದೆಂದು ಬಯಸುತ್ತಿದೆ. ಅದಕ್ಕಾಗಿ ಇನ್ನಿಲ್ಲದ ಸರ್ಕಸ್ ಮಾಡುತ್ತಿದೆ. ಇದಕ್ಕೆ ಕಾರಣಗಳಿವೆ.

ಇನ್ನು 10 ವರ್ಷಗಳ ಕಾಲ ನಾನೇ ಪ್ರಧಾನಿ ಎಂದು ಖಚಿತವಾಗಿ ಭಾವಿಸಿಕೊಂಡಿದ್ದ ಬಿಜೆಪಿಯ ನಂಬಿಕೆ ಮೂರೂವರೆ ವರ್ಷಗಳಲ್ಲೇ ಅಲ್ಲಾಡಿತು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೂ ಸಂಭ್ರಮಿಸಲಾಗದಷ್ಟು ತೆಳ್ಳಗಿನ ಮಾರ್ಜಿನ್‍ನಲ್ಲಿ ಗೆದ್ದಿದ್ದರು. ಆ ನಂತರ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಎಲ್ಲಾ ಕಡೆ ಸೋತರಷ್ಟೇ ಅಲ್ಲದೇ, ಈ ಹಿಂದೆ ಅಧಿಕಾರದಲ್ಲಿದ್ದ ಮೂರು ದೊಡ್ಡ ರಾಜ್ಯಗಳನ್ನು ಕಳೆದುಕೊಂಡಿದ್ದರು. ಇಲ್ಲಿಂದ ಬಿಜೆಪಿಯ ಗ್ರಾಫ್ ಇಳಿಯುತ್ತಾ ಹೋಯಿತು. ಆದರೆ, ಪ್ರಧಾನಿ ಅಭ್ಯರ್ಥಿಯಾಗಿ ಮೋದಿಯವರ ಜನಪ್ರಿಯತೆ ರಾಹುಲ್ ಗಾಂಧಿಗಿಂತ ಎಷ್ಟೋ ಮೇಲೆ ಇತ್ತು, ಇಂದಿಗೂ ಇದೆ.

ಅದು ಕುಸಿಯಲು ಆರಂಭಿಸಿದ್ದು ರಾಫೇಲ್ ಭ್ರಷ್ಟಾಚಾರದ ಸದ್ದು ಹೆಚ್ಚಾಗುತ್ತಾ ಹೋದಂತೆ. ಜನವರಿಯ ನಂತರ ನಡೆದ ಸಮೀಕ್ಷೆಗಳಲ್ಲೆಲ್ಲಾ ಬಿಜೆಪಿಯ ಕುಸಿತವು ಕಾಣುತ್ತಾ ಬಂದಿತು. ಮೊದಮೊದಲು ಬಿಜೆಪಿಗೆ ಬಹುಮತ ಬರಲ್ಲ ಅಂತ ಇದ್ದದ್ದು, ಎನ್‍ಡಿಎಗೂ ಬಹುಮತ ಬರಲ್ಲ ಅಂತ ಖಚಿತವಾಯಿತು. ಚುನಾವಣೆ ಹೊತ್ತಿಗೆ ಈ ಗ್ರಾಫ್ ಮತ್ತಷ್ಟು ಇಳಿದರೆ ಏನು ಮಾಡೋದು ಎನ್ನುವ ಚಿಂತೆಯಲ್ಲಿದ್ದ ಅವರಿಗೆ ಪುಲ್ವಾಮಾ ನೆರವಿಗೆ ಬಂದಿತು.

ಸಿಆರ್‍ಪಿಎಫ್ ಯೋಧರು ಸತ್ತಿದ್ದಕ್ಕೆ ಇಡೀ ದೇಶವೇ ಮರುಗಿತು. ಆದರೆ ಬಿಜೆಪಿಗೆ ಒಂಥರಾ ಸಂಭ್ರಮವಿತ್ತು. ಪಾಕಿಸ್ತಾನದ ಮೇಲೆ ಒಂದು ದಾಳಿ ನಡೆಸಿ (ಈ ದಾಳಿಯ ‘ಸಾಧನೆ’ಯ ಕುರಿತ ವಿವಾದಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ) ಮಸ್ಕುಲಾರ್ ನ್ಯಾಷನಲಿಸಂ ಮೂಲಕ ಚೇತರಿಕೆ ಪಡೆದುಕೊಳ್ಳಲು ನೋಡಿದರು. ಮಸ್ಕುಲಾರ್ ನ್ಯಾಷನಲಿಸಂ ಎಂದರೆ, ದೇಶದ ಅಸಲೀ ಸಮಸ್ಯೆಗಳನ್ನು ಬಗೆಹರಿಸಿ, ಜನರನ್ನು ಸಬಲಗೊಳಿಸಿ ದೇಶ ಕಟ್ಟುವ ಬದಲಿಗೆ ಹೊರಗಿನ ಶತ್ರುವಿನ ವಿರುದ್ಧ ತೋಳೇರಿಸುತ್ತಾ ತನ್ನ ಬಲ ಹೆಚ್ಚಿಸಿಕೊಳ್ಳುವುದು. ಒಂದು ವೇಳೆ ಶತ್ರು ಇಲ್ಲದಿದ್ದರೆ ಅಂತಹ ಶತ್ರುವನ್ನು ಸೃಷ್ಟಿಸುವುದು ಇದಕ್ಕೆ ಅಗತ್ಯವಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗೆ ನೆರವು ನೀಡುತ್ತಿರುವ ನೆರೆಯ ಪಾಕಿಸ್ತಾನ ಇರುವುದು ಬಿಜೆಪಿಗೆ ಬಹಳ ಅನುಕೂಲ. ಬಿಜೆಪಿ ಆಡಳಿತಾವಧಿಯಲ್ಲಿ ಹಿಂದಿಗಿಂತ ಹೆಚ್ಚು ಭಯೋತ್ಪಾದಕ ಚಟುವಟಿಕೆ ನಡೆದಿದ್ದರೂ, ಹೆಚ್ಚು ಸೈನಿಕರು ಸತ್ತಿದ್ದರೂ ಲೋಪ ಎಲ್ಲಾಯಿತು ಎಂದು ನೋಡಿಕೊಳ್ಳುವ ಬದಲು, ಸೈನಿಕರ ಶವವಿಟ್ಟುಕೊಂಡು ಅದರ ದುರ್ಬಳಕೆಗೆ ಮುಂದಾಯಿತು.

ನಿಧಾನಕ್ಕೆ ಈ ಏರ್‍ಸ್ಟ್ರೈಕ್‍ಗಳು ಜನರ ತಲೆಯಿಂದ ಮರೆಯಾಗುತ್ತಾ, ಅಸಲೀ ವಿಚಾರಗಳು ಮುಂದಕ್ಕೆ ಬಂದವು. ಜನರು ಮತ್ತೆ ನಿರುದ್ಯೋಗ, ರೈತರಿಗೆ ಬೆಲೆ ಇತ್ಯಾದಿಗಳನ್ನು ಮಾತಾಡುತ್ತಾ ಬಂದರು. ಜೊತೆಗೆ ರಾಹುಲ್‍ಗಾಂಧಿ ಬಡವರ ಖಾತೆಗೆ ಸರಾಸರಿ 72,000 ರೂ ಹಾಕುವ ನ್ಯಾಯ್ ಯೋಜನೆ ಪ್ರಕಟಿಸಿದರು. ಚರ್ಚೆ ಬಡವರ ಸುತ್ತಲೂ ಶುರುವಾಯಿತು.

ಇದೀಗ ಮತ್ತೆ ಮೋದಿಯವರು ರಂಗಕ್ಕಿಳಿದರು. ಇಸ್ರೋ ಮುಖ್ಯಸ್ಥರು ಮಾಡಬೇಕಾದ ಪ್ರಕಟಣೆಯನ್ನು ತಾವೇ ಮಾಡಲು ನಿಂತರು. ಸಿನೀಮಿಯಗೊಳಿಸಲು ಬೆಳಿಗ್ಗೆ 11ಕ್ಕೆ ಒಂದು ಟ್ವೀಟ್ ಮಾಡಿ, ತಾನು 11.45ಕ್ಕೆ ರಾಷ್ಟ್ರವನ್ನುದ್ದೇಶಿಸಿ ಮಾತಾಡಲಿದ್ದೇನೆಂದು ಘೋಷಿಸಿದರು. ಆ ನಂತರ 20 ನಿಮಿಷಕ್ಕೂ ಹೆಚ್ಚು ಕಾಯಿಸಿ ಭಾಷಣ ಮಾಡಿದರು. ನಿಸ್ಸಂದೇಹವಾಗಿ ದೇಶವು ಹೆಮ್ಮೆ ಪಟ್ಟುಕೊಳ್ಳಬೇಕಾದ ಒಂದು ಸಾಧನೆಯನ್ನು, ಈ ದೇಶದ ವಿಜ್ಞಾನಿಗಳ ಸಾಧನೆಯನ್ನು ಮುಂದಿಟ್ಟರು. ಆದರೆ, ಅವರ ಉದ್ದೇಶ ಅದಾಗಿರಲಿಲ್ಲ. ಮತ್ತೆ ಗೋದಿ ಮೀಡಿಯಾ ಒಂದು ವಾರ ಕಾಲ ಚರ್ಚೆಯನ್ನು ದೇಶದೊಳಗಿನ ಸಮಸ್ಯೆಗಳ ಕುರಿತು ಯಾರೂ ಮಾತಾಡದಂತೆ ನೋಡಿಕೊಳ್ಳುತ್ತದೆ ಎಂಬುದು ಅವರಿಗೆ ಗೊತ್ತು.

ಬಿಜೆಪಿಗೆ ಏಕೆ ಇಷ್ಟೊಂದು ಹೆದರಿಕೆ? ಈಗ ದೇಶದಲ್ಲಿ ಶೇ.25ರಷ್ಟು ಕಡುಬಡವರಿದ್ದು, ಅವರ ಅಕೌಂಟಿಗೆ ಹಣ ಹಾಕುತ್ತೇವೆಂದು ರಾಹುಲ್‍ಗಾಂಧಿ ಪ್ರಕಟಿಸಿದಾಗ ಅವರನ್ನು ಕೌಂಟರ್ ಮಾಡುವುದು ಕಷ್ಟವೇ? ಅಲ್ಲಾ ಕಣಪ್ಪಾ, ಈ ದೇಶದಲ್ಲಿ 40 ವರ್ಷ ನಿಮ್ಮ ಕುಟುಂಬದವರೇ ಆಳಿದ್ದೀರಿ, ಈಗಲೂ ಇಷ್ಟು ಕಡುಬಡವರು ಏಕಿದ್ದಾರೆ ಎಂದು ಕೇಳಬಹುದಲ್ಲವೇ? ನಿರುದ್ಯೋಗ, ರೈತರಿಗೆ ಒಳ್ಳೆಯ ಬೆಲೆ ಇತ್ಯಾದಿಗಳ ವಿಚಾರದಲ್ಲಿ ಕಾಂಗ್ರೆಸ್ ಈ ದೇಶಕ್ಕೆ ಅದ್ಭುತವಾದದ್ದೇನೂ ಮಾಡಿಲ್ಲ. ಆದರೆ ಅದನ್ನು ಪ್ರಶ್ನೆ ಮಾಡಲು ಹೊರಟರೆ, ಹೌದು ಕಾಂಗ್ರೆಸ್ ಅದ್ಭುತವಾದದ್ದನ್ನು ಮಾಡಿರಲಿಲ್ಲ, ಬಿಜೆಪಿ ಪರಿಸ್ಥಿತಿಯನ್ನು ಮತ್ತಷ್ಟು ಅಧ್ವಾನಗೊಳಿಸಿತು ಎಂಬುದು ಬಯಲಾಗುತ್ತದೆ. ಇದೇ ನಿಮ್ಮ ಸಮಸ್ಯೆಯೇ?

ಗಡಿಯಿಂದ ಒಳಕ್ಕೆ ಬನ್ನಿ ಬಾಹ್ಯಾಕಾಶದಿಂದ ಕೆಳಗಿಳಿದು ಬನ್ನಿ. ದೇಶದ ಅಸಲೀ ಸಮಸ್ಯೆಗಳ ಕುರಿತು ಚರ್ಚಿಸಿ. ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...