Homeನಾನು ಗೌರಿಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ

- Advertisement -
- Advertisement -

| ಡಾ. ವಾಸು ಎಚ್.ವಿ |

ದೇಶದ ಸಮಸ್ಯೆಗಳ ಸುತ್ತ ಚುನಾವಣೆ ಎದುರಿಸಲು ಹಿಂಜರಿಯುತ್ತಿರುವ ಬಿಜೆಪಿ

2019ರ ಚುನಾವಣೆಯ ಒಂದು ಅತೀ ಮುಖ್ಯ ಲಕ್ಷಣವೆಂದರೆ, ಅಧಿಕಾರಾರೂಢ ಪಕ್ಷವು ದೇಶದ ಜನರ ಅಸಲೀ ಸಮಸ್ಯೆಗಳು ಚುನಾವಣೆಯಲ್ಲಿ ಚರ್ಚೆಯಾಗಬಾರದೆಂದು ಬಯಸುತ್ತಿದೆ. ಅದಕ್ಕಾಗಿ ಇನ್ನಿಲ್ಲದ ಸರ್ಕಸ್ ಮಾಡುತ್ತಿದೆ. ಇದಕ್ಕೆ ಕಾರಣಗಳಿವೆ.

ಇನ್ನು 10 ವರ್ಷಗಳ ಕಾಲ ನಾನೇ ಪ್ರಧಾನಿ ಎಂದು ಖಚಿತವಾಗಿ ಭಾವಿಸಿಕೊಂಡಿದ್ದ ಬಿಜೆಪಿಯ ನಂಬಿಕೆ ಮೂರೂವರೆ ವರ್ಷಗಳಲ್ಲೇ ಅಲ್ಲಾಡಿತು. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬಂದರೂ ಸಂಭ್ರಮಿಸಲಾಗದಷ್ಟು ತೆಳ್ಳಗಿನ ಮಾರ್ಜಿನ್‍ನಲ್ಲಿ ಗೆದ್ದಿದ್ದರು. ಆ ನಂತರ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಎಲ್ಲಾ ಕಡೆ ಸೋತರಷ್ಟೇ ಅಲ್ಲದೇ, ಈ ಹಿಂದೆ ಅಧಿಕಾರದಲ್ಲಿದ್ದ ಮೂರು ದೊಡ್ಡ ರಾಜ್ಯಗಳನ್ನು ಕಳೆದುಕೊಂಡಿದ್ದರು. ಇಲ್ಲಿಂದ ಬಿಜೆಪಿಯ ಗ್ರಾಫ್ ಇಳಿಯುತ್ತಾ ಹೋಯಿತು. ಆದರೆ, ಪ್ರಧಾನಿ ಅಭ್ಯರ್ಥಿಯಾಗಿ ಮೋದಿಯವರ ಜನಪ್ರಿಯತೆ ರಾಹುಲ್ ಗಾಂಧಿಗಿಂತ ಎಷ್ಟೋ ಮೇಲೆ ಇತ್ತು, ಇಂದಿಗೂ ಇದೆ.

ಅದು ಕುಸಿಯಲು ಆರಂಭಿಸಿದ್ದು ರಾಫೇಲ್ ಭ್ರಷ್ಟಾಚಾರದ ಸದ್ದು ಹೆಚ್ಚಾಗುತ್ತಾ ಹೋದಂತೆ. ಜನವರಿಯ ನಂತರ ನಡೆದ ಸಮೀಕ್ಷೆಗಳಲ್ಲೆಲ್ಲಾ ಬಿಜೆಪಿಯ ಕುಸಿತವು ಕಾಣುತ್ತಾ ಬಂದಿತು. ಮೊದಮೊದಲು ಬಿಜೆಪಿಗೆ ಬಹುಮತ ಬರಲ್ಲ ಅಂತ ಇದ್ದದ್ದು, ಎನ್‍ಡಿಎಗೂ ಬಹುಮತ ಬರಲ್ಲ ಅಂತ ಖಚಿತವಾಯಿತು. ಚುನಾವಣೆ ಹೊತ್ತಿಗೆ ಈ ಗ್ರಾಫ್ ಮತ್ತಷ್ಟು ಇಳಿದರೆ ಏನು ಮಾಡೋದು ಎನ್ನುವ ಚಿಂತೆಯಲ್ಲಿದ್ದ ಅವರಿಗೆ ಪುಲ್ವಾಮಾ ನೆರವಿಗೆ ಬಂದಿತು.

ಸಿಆರ್‍ಪಿಎಫ್ ಯೋಧರು ಸತ್ತಿದ್ದಕ್ಕೆ ಇಡೀ ದೇಶವೇ ಮರುಗಿತು. ಆದರೆ ಬಿಜೆಪಿಗೆ ಒಂಥರಾ ಸಂಭ್ರಮವಿತ್ತು. ಪಾಕಿಸ್ತಾನದ ಮೇಲೆ ಒಂದು ದಾಳಿ ನಡೆಸಿ (ಈ ದಾಳಿಯ ‘ಸಾಧನೆ’ಯ ಕುರಿತ ವಿವಾದಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ) ಮಸ್ಕುಲಾರ್ ನ್ಯಾಷನಲಿಸಂ ಮೂಲಕ ಚೇತರಿಕೆ ಪಡೆದುಕೊಳ್ಳಲು ನೋಡಿದರು. ಮಸ್ಕುಲಾರ್ ನ್ಯಾಷನಲಿಸಂ ಎಂದರೆ, ದೇಶದ ಅಸಲೀ ಸಮಸ್ಯೆಗಳನ್ನು ಬಗೆಹರಿಸಿ, ಜನರನ್ನು ಸಬಲಗೊಳಿಸಿ ದೇಶ ಕಟ್ಟುವ ಬದಲಿಗೆ ಹೊರಗಿನ ಶತ್ರುವಿನ ವಿರುದ್ಧ ತೋಳೇರಿಸುತ್ತಾ ತನ್ನ ಬಲ ಹೆಚ್ಚಿಸಿಕೊಳ್ಳುವುದು. ಒಂದು ವೇಳೆ ಶತ್ರು ಇಲ್ಲದಿದ್ದರೆ ಅಂತಹ ಶತ್ರುವನ್ನು ಸೃಷ್ಟಿಸುವುದು ಇದಕ್ಕೆ ಅಗತ್ಯವಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗೆ ನೆರವು ನೀಡುತ್ತಿರುವ ನೆರೆಯ ಪಾಕಿಸ್ತಾನ ಇರುವುದು ಬಿಜೆಪಿಗೆ ಬಹಳ ಅನುಕೂಲ. ಬಿಜೆಪಿ ಆಡಳಿತಾವಧಿಯಲ್ಲಿ ಹಿಂದಿಗಿಂತ ಹೆಚ್ಚು ಭಯೋತ್ಪಾದಕ ಚಟುವಟಿಕೆ ನಡೆದಿದ್ದರೂ, ಹೆಚ್ಚು ಸೈನಿಕರು ಸತ್ತಿದ್ದರೂ ಲೋಪ ಎಲ್ಲಾಯಿತು ಎಂದು ನೋಡಿಕೊಳ್ಳುವ ಬದಲು, ಸೈನಿಕರ ಶವವಿಟ್ಟುಕೊಂಡು ಅದರ ದುರ್ಬಳಕೆಗೆ ಮುಂದಾಯಿತು.

ನಿಧಾನಕ್ಕೆ ಈ ಏರ್‍ಸ್ಟ್ರೈಕ್‍ಗಳು ಜನರ ತಲೆಯಿಂದ ಮರೆಯಾಗುತ್ತಾ, ಅಸಲೀ ವಿಚಾರಗಳು ಮುಂದಕ್ಕೆ ಬಂದವು. ಜನರು ಮತ್ತೆ ನಿರುದ್ಯೋಗ, ರೈತರಿಗೆ ಬೆಲೆ ಇತ್ಯಾದಿಗಳನ್ನು ಮಾತಾಡುತ್ತಾ ಬಂದರು. ಜೊತೆಗೆ ರಾಹುಲ್‍ಗಾಂಧಿ ಬಡವರ ಖಾತೆಗೆ ಸರಾಸರಿ 72,000 ರೂ ಹಾಕುವ ನ್ಯಾಯ್ ಯೋಜನೆ ಪ್ರಕಟಿಸಿದರು. ಚರ್ಚೆ ಬಡವರ ಸುತ್ತಲೂ ಶುರುವಾಯಿತು.

ಇದೀಗ ಮತ್ತೆ ಮೋದಿಯವರು ರಂಗಕ್ಕಿಳಿದರು. ಇಸ್ರೋ ಮುಖ್ಯಸ್ಥರು ಮಾಡಬೇಕಾದ ಪ್ರಕಟಣೆಯನ್ನು ತಾವೇ ಮಾಡಲು ನಿಂತರು. ಸಿನೀಮಿಯಗೊಳಿಸಲು ಬೆಳಿಗ್ಗೆ 11ಕ್ಕೆ ಒಂದು ಟ್ವೀಟ್ ಮಾಡಿ, ತಾನು 11.45ಕ್ಕೆ ರಾಷ್ಟ್ರವನ್ನುದ್ದೇಶಿಸಿ ಮಾತಾಡಲಿದ್ದೇನೆಂದು ಘೋಷಿಸಿದರು. ಆ ನಂತರ 20 ನಿಮಿಷಕ್ಕೂ ಹೆಚ್ಚು ಕಾಯಿಸಿ ಭಾಷಣ ಮಾಡಿದರು. ನಿಸ್ಸಂದೇಹವಾಗಿ ದೇಶವು ಹೆಮ್ಮೆ ಪಟ್ಟುಕೊಳ್ಳಬೇಕಾದ ಒಂದು ಸಾಧನೆಯನ್ನು, ಈ ದೇಶದ ವಿಜ್ಞಾನಿಗಳ ಸಾಧನೆಯನ್ನು ಮುಂದಿಟ್ಟರು. ಆದರೆ, ಅವರ ಉದ್ದೇಶ ಅದಾಗಿರಲಿಲ್ಲ. ಮತ್ತೆ ಗೋದಿ ಮೀಡಿಯಾ ಒಂದು ವಾರ ಕಾಲ ಚರ್ಚೆಯನ್ನು ದೇಶದೊಳಗಿನ ಸಮಸ್ಯೆಗಳ ಕುರಿತು ಯಾರೂ ಮಾತಾಡದಂತೆ ನೋಡಿಕೊಳ್ಳುತ್ತದೆ ಎಂಬುದು ಅವರಿಗೆ ಗೊತ್ತು.

ಬಿಜೆಪಿಗೆ ಏಕೆ ಇಷ್ಟೊಂದು ಹೆದರಿಕೆ? ಈಗ ದೇಶದಲ್ಲಿ ಶೇ.25ರಷ್ಟು ಕಡುಬಡವರಿದ್ದು, ಅವರ ಅಕೌಂಟಿಗೆ ಹಣ ಹಾಕುತ್ತೇವೆಂದು ರಾಹುಲ್‍ಗಾಂಧಿ ಪ್ರಕಟಿಸಿದಾಗ ಅವರನ್ನು ಕೌಂಟರ್ ಮಾಡುವುದು ಕಷ್ಟವೇ? ಅಲ್ಲಾ ಕಣಪ್ಪಾ, ಈ ದೇಶದಲ್ಲಿ 40 ವರ್ಷ ನಿಮ್ಮ ಕುಟುಂಬದವರೇ ಆಳಿದ್ದೀರಿ, ಈಗಲೂ ಇಷ್ಟು ಕಡುಬಡವರು ಏಕಿದ್ದಾರೆ ಎಂದು ಕೇಳಬಹುದಲ್ಲವೇ? ನಿರುದ್ಯೋಗ, ರೈತರಿಗೆ ಒಳ್ಳೆಯ ಬೆಲೆ ಇತ್ಯಾದಿಗಳ ವಿಚಾರದಲ್ಲಿ ಕಾಂಗ್ರೆಸ್ ಈ ದೇಶಕ್ಕೆ ಅದ್ಭುತವಾದದ್ದೇನೂ ಮಾಡಿಲ್ಲ. ಆದರೆ ಅದನ್ನು ಪ್ರಶ್ನೆ ಮಾಡಲು ಹೊರಟರೆ, ಹೌದು ಕಾಂಗ್ರೆಸ್ ಅದ್ಭುತವಾದದ್ದನ್ನು ಮಾಡಿರಲಿಲ್ಲ, ಬಿಜೆಪಿ ಪರಿಸ್ಥಿತಿಯನ್ನು ಮತ್ತಷ್ಟು ಅಧ್ವಾನಗೊಳಿಸಿತು ಎಂಬುದು ಬಯಲಾಗುತ್ತದೆ. ಇದೇ ನಿಮ್ಮ ಸಮಸ್ಯೆಯೇ?

ಗಡಿಯಿಂದ ಒಳಕ್ಕೆ ಬನ್ನಿ ಬಾಹ್ಯಾಕಾಶದಿಂದ ಕೆಳಗಿಳಿದು ಬನ್ನಿ. ದೇಶದ ಅಸಲೀ ಸಮಸ್ಯೆಗಳ ಕುರಿತು ಚರ್ಚಿಸಿ. ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...