Homeಮುಖಪುಟಮೋದಿಯೊಂದಿಗೆ ಮಾತನಾಡಿ: ಬ್ರಿಟನ್‌ ಪ್ರಧಾನಿಗೆ ಪತ್ರಬರೆದ ಅಲ್ಲಿನ 100 ಸಂಸದರು

ಮೋದಿಯೊಂದಿಗೆ ಮಾತನಾಡಿ: ಬ್ರಿಟನ್‌ ಪ್ರಧಾನಿಗೆ ಪತ್ರಬರೆದ ಅಲ್ಲಿನ 100 ಸಂಸದರು

"ಭಾರತದಲ್ಲಿ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ವಿವೇಚನಾರಹಿತವಾಗಿ ಬಳಸುತ್ತಿರುವುದನ್ನು ಕಂಡು ಇಲ್ಲಿನ ವಿವಿಧ ಕ್ಷೇತ್ರಗಳ ಸಂಸದರು ಆಘಾತಗೊಂಡಿದ್ದಾರೆ"

- Advertisement -
- Advertisement -

ಬ್ರಿಟನ್‌ನ 100 ಕ್ಕೂ ಹೆಚ್ಚು ಬ್ರಿಟಿಷ್ ಸಂಸತ್ ಸದಸ್ಯರು ಅಲ್ಲಿನ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಪತ್ರ ಬರೆದಿದ್ದು, ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಿಕ್ಕಟ್ಟನ್ನು ಪರಿಹರಿಸಲು ಭಾರತದ ಪ್ರಧಾನಿ ಮೋದಿಯೊಂದಿಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.

ಈ ಪತ್ರವನ್ನು ಜನವರಿ 5 ರಂದು ಸ್ಲಫ್‌ನ ಸಂಸತ್‌ ಸದಸ್ಯರಾದ ಟಾನ್ ದೇಶಿ ಪ್ರಧಾನಿ ಬೋರಿಸ್‌ ಜಾನ್ಸನ್‌ಗೆ  ಬರೆದಿದ್ದು, “ಭಾರತದಲ್ಲಿ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ವಿವೇಚನಾರಹಿತವಾಗಿ ಬಳಸುತ್ತಿರುವುದನ್ನು ಕಂಡು ಇಲ್ಲಿನ ವಿವಿಧ ಕ್ಷೇತ್ರಗಳ ಸಂಸದರು (ವಿಶೇಷವಾಗಿ ಪಂಜಾಬ್‌ ಮತ್ತು ಸಿಖ್‌ ಹಿನ್ನೆಲೆಯುಳ್ಳ) ಆಘಾತಗೊಂಡಿದ್ದಾರೆ. ಭಾರತದಲ್ಲಿ ಕೃಷಿ ಭೂಮಿಯನ್ನು ಹೊಂದಿರುವವರೊಂದಿಗೆ ಸಂಬಂಧ ಹೊಂದಿರುವ ಪಂಜಾಬ್‌ ಮತ್ತು ಸಿಖ್‌ ಹಿನ್ನೆಲೆಯುಳ್ಳವರು ಬ್ರಿಟನ್‌ನಾದ್ಯಂತ ಜಾಗತಿಕ ಪ್ರತಿಭಟನೆಯಲ್ಲಿ ತೊಡಗುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಭಾರತದ ರೈತರ ಬೆಂಬಲಕ್ಕೆ ನಿಂತ ಸಿಖ್-ಅಮೆರಿಕನ್ನರಿಂದ ಪ್ರತಿಭಟನಾ ರ್‍ಯಾಲಿ

“ಜನವರಿಯಲ್ಲಿ ನೀವು ಭಾರತಕ್ಕೆ ನೀಡಬೇಕಿದ್ದ ಭೇಟಿ ರದ್ದಾಗಿದೆ. ಆದರೆ ಶೀಘ್ರದಲ್ಲೇ ನೀವು ಭಾರತದ ಪ್ರತಿನಿಧಿಯನ್ನು ಭೇಟಿಯಾಗಲಿದ್ದೀರಿ. ಈ ಪ್ರತಿಭಟನೆಯ ವಿಷಯವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಆತಂಕಗಳನ್ನು ಭಾರತದ ಪ್ರಧಾನಿಗೆ ತಲುಪಿಸುತ್ತೀರಿ ಎನ್ನುವ ಭರವಸೆಯನ್ನು ನೀಡುತ್ತೀರಾ? ಪ್ರಸ್ತುತ ಬಿಕ್ಕಟ್ಟಿನ ಪರಿಹಾರಕ್ಕಾಗಿ ಮತ್ತು ಪ್ರಜಾಪ್ರಭುತ್ವದ ಮಾನವ ಹಕ್ಕುಗಳಿಗಾಗಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಾಗಿ ನೀವು ತ್ವರಿತವಾಗಿ ಕ್ರಮಕೈಗೊಳ್ಳುತ್ತೀರಾ? ನಿಮ್ಮ ಸಮಯೋಚಿತ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಅಮೆರಿಕದ ಸಂಸದರು ಅಲ್ಲಿನ ರಾಯಾಭಾರಿ ಮೈಕ್‌ ಪೊಂಪಿಯೋ ಅವರಿಗೆ ಪತ್ರ ಬರೆದು ಭಾರತದೊಟ್ಟಿಗೆ ಈ ರೈತರ ಹೋರಾಟದ ಕುರಿತು ಮಾತನಾಡುವಂತೆ ಒತ್ತಾಯಿಸಿದ್ದರು.

ಇನ್ನು ಭಾರತದಲ್ಲಿನ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಜಗತ್ತಿನಾದ್ಯಂತ ಇರುವ ಅನಿವಾಸಿ ಭಾರತೀಯರು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 8 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ.

ಶುಕ್ರವಾರ 8ನೇ ಸುತ್ತಿನ ಮಾತುಕತೆ ನಡೆದಿದ್ದು ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯಲ್ ಮತ್ತು ಸೋಮ್‌ಪ್ರಕಾಶ್‌ ಭಾಗವಹಿಸಿದ್ದರು. 40 ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಇಂದು ಸಹ ಸಭೆ ಯಾವುದೇ ತಾರ್ಕಿಕ ತೀರ್ಮಾನಗಳಿಗೆ ಬಂದಿಲ್ಲ. ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಿಲ್ಲವೆಂದು ಹಠ ಹಿಡಿದರೆ, ಹೋರಾಟ ನಿಲ್ಲಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಜನವರಿ 15ಕ್ಕೆ ಮುಂದಿನ ಸಭೆ ನಿಗಧಿಗೊಳಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...