Homeಮುಖಪುಟಮೋದಿಯೊಂದಿಗೆ ಮಾತನಾಡಿ: ಬ್ರಿಟನ್‌ ಪ್ರಧಾನಿಗೆ ಪತ್ರಬರೆದ ಅಲ್ಲಿನ 100 ಸಂಸದರು

ಮೋದಿಯೊಂದಿಗೆ ಮಾತನಾಡಿ: ಬ್ರಿಟನ್‌ ಪ್ರಧಾನಿಗೆ ಪತ್ರಬರೆದ ಅಲ್ಲಿನ 100 ಸಂಸದರು

"ಭಾರತದಲ್ಲಿ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ವಿವೇಚನಾರಹಿತವಾಗಿ ಬಳಸುತ್ತಿರುವುದನ್ನು ಕಂಡು ಇಲ್ಲಿನ ವಿವಿಧ ಕ್ಷೇತ್ರಗಳ ಸಂಸದರು ಆಘಾತಗೊಂಡಿದ್ದಾರೆ"

- Advertisement -
- Advertisement -

ಬ್ರಿಟನ್‌ನ 100 ಕ್ಕೂ ಹೆಚ್ಚು ಬ್ರಿಟಿಷ್ ಸಂಸತ್ ಸದಸ್ಯರು ಅಲ್ಲಿನ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಪತ್ರ ಬರೆದಿದ್ದು, ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಿಕ್ಕಟ್ಟನ್ನು ಪರಿಹರಿಸಲು ಭಾರತದ ಪ್ರಧಾನಿ ಮೋದಿಯೊಂದಿಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.

ಈ ಪತ್ರವನ್ನು ಜನವರಿ 5 ರಂದು ಸ್ಲಫ್‌ನ ಸಂಸತ್‌ ಸದಸ್ಯರಾದ ಟಾನ್ ದೇಶಿ ಪ್ರಧಾನಿ ಬೋರಿಸ್‌ ಜಾನ್ಸನ್‌ಗೆ  ಬರೆದಿದ್ದು, “ಭಾರತದಲ್ಲಿ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ವಿವೇಚನಾರಹಿತವಾಗಿ ಬಳಸುತ್ತಿರುವುದನ್ನು ಕಂಡು ಇಲ್ಲಿನ ವಿವಿಧ ಕ್ಷೇತ್ರಗಳ ಸಂಸದರು (ವಿಶೇಷವಾಗಿ ಪಂಜಾಬ್‌ ಮತ್ತು ಸಿಖ್‌ ಹಿನ್ನೆಲೆಯುಳ್ಳ) ಆಘಾತಗೊಂಡಿದ್ದಾರೆ. ಭಾರತದಲ್ಲಿ ಕೃಷಿ ಭೂಮಿಯನ್ನು ಹೊಂದಿರುವವರೊಂದಿಗೆ ಸಂಬಂಧ ಹೊಂದಿರುವ ಪಂಜಾಬ್‌ ಮತ್ತು ಸಿಖ್‌ ಹಿನ್ನೆಲೆಯುಳ್ಳವರು ಬ್ರಿಟನ್‌ನಾದ್ಯಂತ ಜಾಗತಿಕ ಪ್ರತಿಭಟನೆಯಲ್ಲಿ ತೊಡಗುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಭಾರತದ ರೈತರ ಬೆಂಬಲಕ್ಕೆ ನಿಂತ ಸಿಖ್-ಅಮೆರಿಕನ್ನರಿಂದ ಪ್ರತಿಭಟನಾ ರ್‍ಯಾಲಿ

“ಜನವರಿಯಲ್ಲಿ ನೀವು ಭಾರತಕ್ಕೆ ನೀಡಬೇಕಿದ್ದ ಭೇಟಿ ರದ್ದಾಗಿದೆ. ಆದರೆ ಶೀಘ್ರದಲ್ಲೇ ನೀವು ಭಾರತದ ಪ್ರತಿನಿಧಿಯನ್ನು ಭೇಟಿಯಾಗಲಿದ್ದೀರಿ. ಈ ಪ್ರತಿಭಟನೆಯ ವಿಷಯವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಆತಂಕಗಳನ್ನು ಭಾರತದ ಪ್ರಧಾನಿಗೆ ತಲುಪಿಸುತ್ತೀರಿ ಎನ್ನುವ ಭರವಸೆಯನ್ನು ನೀಡುತ್ತೀರಾ? ಪ್ರಸ್ತುತ ಬಿಕ್ಕಟ್ಟಿನ ಪರಿಹಾರಕ್ಕಾಗಿ ಮತ್ತು ಪ್ರಜಾಪ್ರಭುತ್ವದ ಮಾನವ ಹಕ್ಕುಗಳಿಗಾಗಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಾಗಿ ನೀವು ತ್ವರಿತವಾಗಿ ಕ್ರಮಕೈಗೊಳ್ಳುತ್ತೀರಾ? ನಿಮ್ಮ ಸಮಯೋಚಿತ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಅಮೆರಿಕದ ಸಂಸದರು ಅಲ್ಲಿನ ರಾಯಾಭಾರಿ ಮೈಕ್‌ ಪೊಂಪಿಯೋ ಅವರಿಗೆ ಪತ್ರ ಬರೆದು ಭಾರತದೊಟ್ಟಿಗೆ ಈ ರೈತರ ಹೋರಾಟದ ಕುರಿತು ಮಾತನಾಡುವಂತೆ ಒತ್ತಾಯಿಸಿದ್ದರು.

ಇನ್ನು ಭಾರತದಲ್ಲಿನ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಜಗತ್ತಿನಾದ್ಯಂತ ಇರುವ ಅನಿವಾಸಿ ಭಾರತೀಯರು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 8 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ.

ಶುಕ್ರವಾರ 8ನೇ ಸುತ್ತಿನ ಮಾತುಕತೆ ನಡೆದಿದ್ದು ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯಲ್ ಮತ್ತು ಸೋಮ್‌ಪ್ರಕಾಶ್‌ ಭಾಗವಹಿಸಿದ್ದರು. 40 ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಇಂದು ಸಹ ಸಭೆ ಯಾವುದೇ ತಾರ್ಕಿಕ ತೀರ್ಮಾನಗಳಿಗೆ ಬಂದಿಲ್ಲ. ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಿಲ್ಲವೆಂದು ಹಠ ಹಿಡಿದರೆ, ಹೋರಾಟ ನಿಲ್ಲಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಜನವರಿ 15ಕ್ಕೆ ಮುಂದಿನ ಸಭೆ ನಿಗಧಿಗೊಳಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...