Homeಮುಖಪುಟಮೋದಿಯೊಂದಿಗೆ ಮಾತನಾಡಿ: ಬ್ರಿಟನ್‌ ಪ್ರಧಾನಿಗೆ ಪತ್ರಬರೆದ ಅಲ್ಲಿನ 100 ಸಂಸದರು

ಮೋದಿಯೊಂದಿಗೆ ಮಾತನಾಡಿ: ಬ್ರಿಟನ್‌ ಪ್ರಧಾನಿಗೆ ಪತ್ರಬರೆದ ಅಲ್ಲಿನ 100 ಸಂಸದರು

"ಭಾರತದಲ್ಲಿ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ವಿವೇಚನಾರಹಿತವಾಗಿ ಬಳಸುತ್ತಿರುವುದನ್ನು ಕಂಡು ಇಲ್ಲಿನ ವಿವಿಧ ಕ್ಷೇತ್ರಗಳ ಸಂಸದರು ಆಘಾತಗೊಂಡಿದ್ದಾರೆ"

- Advertisement -
- Advertisement -

ಬ್ರಿಟನ್‌ನ 100 ಕ್ಕೂ ಹೆಚ್ಚು ಬ್ರಿಟಿಷ್ ಸಂಸತ್ ಸದಸ್ಯರು ಅಲ್ಲಿನ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಪತ್ರ ಬರೆದಿದ್ದು, ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಿಕ್ಕಟ್ಟನ್ನು ಪರಿಹರಿಸಲು ಭಾರತದ ಪ್ರಧಾನಿ ಮೋದಿಯೊಂದಿಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.

ಈ ಪತ್ರವನ್ನು ಜನವರಿ 5 ರಂದು ಸ್ಲಫ್‌ನ ಸಂಸತ್‌ ಸದಸ್ಯರಾದ ಟಾನ್ ದೇಶಿ ಪ್ರಧಾನಿ ಬೋರಿಸ್‌ ಜಾನ್ಸನ್‌ಗೆ  ಬರೆದಿದ್ದು, “ಭಾರತದಲ್ಲಿ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ಮೇಲೆ ಅಶ್ರುವಾಯು, ಜಲಫಿರಂಗಿಗಳನ್ನು ವಿವೇಚನಾರಹಿತವಾಗಿ ಬಳಸುತ್ತಿರುವುದನ್ನು ಕಂಡು ಇಲ್ಲಿನ ವಿವಿಧ ಕ್ಷೇತ್ರಗಳ ಸಂಸದರು (ವಿಶೇಷವಾಗಿ ಪಂಜಾಬ್‌ ಮತ್ತು ಸಿಖ್‌ ಹಿನ್ನೆಲೆಯುಳ್ಳ) ಆಘಾತಗೊಂಡಿದ್ದಾರೆ. ಭಾರತದಲ್ಲಿ ಕೃಷಿ ಭೂಮಿಯನ್ನು ಹೊಂದಿರುವವರೊಂದಿಗೆ ಸಂಬಂಧ ಹೊಂದಿರುವ ಪಂಜಾಬ್‌ ಮತ್ತು ಸಿಖ್‌ ಹಿನ್ನೆಲೆಯುಳ್ಳವರು ಬ್ರಿಟನ್‌ನಾದ್ಯಂತ ಜಾಗತಿಕ ಪ್ರತಿಭಟನೆಯಲ್ಲಿ ತೊಡಗುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಭಾರತದ ರೈತರ ಬೆಂಬಲಕ್ಕೆ ನಿಂತ ಸಿಖ್-ಅಮೆರಿಕನ್ನರಿಂದ ಪ್ರತಿಭಟನಾ ರ್‍ಯಾಲಿ

“ಜನವರಿಯಲ್ಲಿ ನೀವು ಭಾರತಕ್ಕೆ ನೀಡಬೇಕಿದ್ದ ಭೇಟಿ ರದ್ದಾಗಿದೆ. ಆದರೆ ಶೀಘ್ರದಲ್ಲೇ ನೀವು ಭಾರತದ ಪ್ರತಿನಿಧಿಯನ್ನು ಭೇಟಿಯಾಗಲಿದ್ದೀರಿ. ಈ ಪ್ರತಿಭಟನೆಯ ವಿಷಯವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಆತಂಕಗಳನ್ನು ಭಾರತದ ಪ್ರಧಾನಿಗೆ ತಲುಪಿಸುತ್ತೀರಿ ಎನ್ನುವ ಭರವಸೆಯನ್ನು ನೀಡುತ್ತೀರಾ? ಪ್ರಸ್ತುತ ಬಿಕ್ಕಟ್ಟಿನ ಪರಿಹಾರಕ್ಕಾಗಿ ಮತ್ತು ಪ್ರಜಾಪ್ರಭುತ್ವದ ಮಾನವ ಹಕ್ಕುಗಳಿಗಾಗಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಾಗಿ ನೀವು ತ್ವರಿತವಾಗಿ ಕ್ರಮಕೈಗೊಳ್ಳುತ್ತೀರಾ? ನಿಮ್ಮ ಸಮಯೋಚಿತ ಪ್ರತಿಕ್ರಿಯೆಗಾಗಿ ನಾವು ಕಾಯುತ್ತಿದ್ದೇವೆ” ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಅಮೆರಿಕದ ಸಂಸದರು ಅಲ್ಲಿನ ರಾಯಾಭಾರಿ ಮೈಕ್‌ ಪೊಂಪಿಯೋ ಅವರಿಗೆ ಪತ್ರ ಬರೆದು ಭಾರತದೊಟ್ಟಿಗೆ ಈ ರೈತರ ಹೋರಾಟದ ಕುರಿತು ಮಾತನಾಡುವಂತೆ ಒತ್ತಾಯಿಸಿದ್ದರು.

ಇನ್ನು ಭಾರತದಲ್ಲಿನ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಜಗತ್ತಿನಾದ್ಯಂತ ಇರುವ ಅನಿವಾಸಿ ಭಾರತೀಯರು ಪ್ರತಿಭಟನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ

ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 8 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ.

ಶುಕ್ರವಾರ 8ನೇ ಸುತ್ತಿನ ಮಾತುಕತೆ ನಡೆದಿದ್ದು ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪಿಯೂಶ್ ಗೋಯಲ್ ಮತ್ತು ಸೋಮ್‌ಪ್ರಕಾಶ್‌ ಭಾಗವಹಿಸಿದ್ದರು. 40 ರೈತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದು, ಇಂದು ಸಹ ಸಭೆ ಯಾವುದೇ ತಾರ್ಕಿಕ ತೀರ್ಮಾನಗಳಿಗೆ ಬಂದಿಲ್ಲ. ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಿಲ್ಲವೆಂದು ಹಠ ಹಿಡಿದರೆ, ಹೋರಾಟ ನಿಲ್ಲಿಸುವುದಿಲ್ಲವೆಂದು ರೈತರು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಜನವರಿ 15ಕ್ಕೆ ಮುಂದಿನ ಸಭೆ ನಿಗಧಿಗೊಳಿಸಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...