Homeಕರ್ನಾಟಕಮುಡಾ ಪ್ರಕರಣ | ಕಿಡಿ ಹಚ್ಚಿಸಿದ ಇಡಿ ಪತ್ರ : ಮತ್ತೆ ಶುರುವಾದ ವಾಕ್ಸಮರ

ಮುಡಾ ಪ್ರಕರಣ | ಕಿಡಿ ಹಚ್ಚಿಸಿದ ಇಡಿ ಪತ್ರ : ಮತ್ತೆ ಶುರುವಾದ ವಾಕ್ಸಮರ

- Advertisement -
- Advertisement -

ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಲೋಕಾಯುಕ್ತಕ್ಕೆ ಪತ್ರ ಬರೆದಿರುವುದು ಮತ್ತೆ ರಾಜಕೀಯ ಸಮರದ ಕಿಡಿ ಹಚ್ಚಿಸಿದೆ. ಪರಸ್ಪರ ವಾಕ್ಸಮರ ಶುರುವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಇಡಿಯು  ದುರುದ್ದೇಶದಿಂದ ಲೋಕಾಯುಕ್ತಕ್ಕೆ ಪತ್ರ ಬರೆದಿದೆ ಎಂದು ದೂರಿದರೆ, ಬಿಜೆಪಿ-ಜೆಡಿಎಸ್ ನಾಯಕರು ಇಡಿ ಪರ ನಿಂತಿದ್ದಾರೆ.

ಲೋಕಾಯುಕ್ತಕ್ಕೆ ಪತ್ರ ಬರೆದಿರುವ ಇಡಿ, “ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾ ಹಂಚಿಕೆ ಮಾಡಿರುವ ನಿವೇಶನಗಳೇ ಅಕ್ರಮವಾಗಿದ್ದು, ಈ ಸಂಬಂಧ ತಮ್ಮ ತನಿಖೆಯಲ್ಲಿ ಪ್ರಮುಖ ಸಾಕ್ಷ್ಯಗಳು ಲಭ್ಯವಾಗಿವೆ ಎಂದಿದೆ. 50:50 ನಿಯಮದಡಿ ಮುಡಾ ನೀಡಿರುವ ಪರಿಹಾರ ನಿವೇಶನಗಳ ಹಂಚಿಕೆಯಲ್ಲಿ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಒಟ್ಟು 490 ಕೋಟಿ ರೂ. ಗೈಡ್‌ಲೈನ್‌ ದರ ಮತ್ತು ರೂ. 700 ಕೋಟಿಯಷ್ಟು ಮಾರುಕಟ್ಟೆ ದರವುಳ್ಳ 1,095 ನಿವೇಶನಗಳನ್ನು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಹಾಗೂ ಪ್ರಭಾವಿಗಳಿಗೆ ಅಕ್ರಮವಾಗಿ ಹಂಚಲಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದ್ದು ಈ ಬಗ್ಗೆ ಕ್ರಮವಹಿಸಿ” ಎಂದು ಹೇಳಿದೆ.

ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಇಡಿ ಪತ್ರ -ಸಿಎಂ 

ಲೋಕಾಯುಕ್ತಕ್ಕೆ ಇಡಿ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, “ಹೈಕೋರ್ಟ್‌ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನವೇ ಜಾರಿ ನಿರ್ದೇಶನಾಲಯದವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದಾರೆ. ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶ ಇದು” ಎಂದು ಆರೋಪಿಸಿದ್ದಾರೆ.

ಬುಧವಾರ (ಡಿ.4) ಮಂಡ್ಯದ ಕೆ.ಆರ್‌ ಪೇಟೆಯ ಕೋಡಿಮಾರನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಇಡಿ ಯವರಿಗೆ ತನಿಖೆ ಮಾಡಲು ಅಧಿಕಾರವೇ ಇಲ್ಲ. ತನಿಖೆ ಬಳಿಕ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶವಿದೆ” ಎಂದು ದೂರಿದ್ದಾರೆ.

ಇಡಿ ಹತಾಶೆಗೊಂಡಿದೆ-ಡಿ.ಕೆ ಶಿವಕುಮಾರ್

ಇಡಿ ಪತ್ರ ಬರೆದಿರುವ ಕುರಿತು ಕಿಡಿಕಾರಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, “ಯಾವುದೇ ತನಿಖೆ ನಡೆದರೂ, ಅದು ಗೌಪ್ಯವಾಗಿರಬೇಕು. ಏನಾದರು ಸಂತ್ಯಾಂಶವಿದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅದರ ಬದಲು ಮಾಧ್ಯಮಗಳಿಗೆ ನೀಡುತ್ತಾರೆಂದರೆ ಇಡಿಯವರು ಎಷ್ಟು ಹತಾಶರಾಗಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ” ಎಂದಿದ್ದಾರೆ.

“ಮುಡಾ ಪ್ರಕರಣದಲ್ಲಿ ಹಣ ತೆಗೆದುಕೊಳ್ಳುವುದು, ಕೊಡುವುದು ಆಗಿಲ್ಲ. ಹೀಗಿರುವಾಗ ಅದು ಮನಿ ಲಾಂಡರಿಂಗ್ ಹೇಗಾಯಿತು? ತನಿಖಾ ಸಂಸ್ಥೆ ವರದಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದರೆ ಹೇಗೆ? ಒಂದು ತನಿಖಾ ಸಂಸ್ಥೆ ಮತ್ತೊಂದಕ್ಕೆ ಹೀಗೆ ಮಾಡಿ ಎನ್ನುವುದು ನಾನು ಹೊಸದಾಗಿ ನೋಡುತ್ತಿರುವುದು. ಇದಕ್ಕೆಲ್ಲ ಜನರು ಉತ್ತರ ಕೊಡಲಿದ್ದಾರೆ, ನಾವು ಕೊಡುತ್ತೇವೆ” ಎಂದು ಹೇಳಿದ್ದಾರೆ.

ಇಡಿ ವಿರುದ್ದ ಕಾನೂನು, ರಾಜಕೀಯ ಹೋರಾಟ-ಡಾ.ಜಿ ಪರಮೇಶ್ವರ್

ಲೋಕಾಯುಕ್ತ ತನಿಖೆಗೆ ಅಡ್ಡಿ ಮಾಡಲು ಮತ್ತು ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಇಡಿ ಪ್ರಯತ್ನಿಸುತ್ತಿದೆ. ಇಡಿ ವಿರುದ್ದ ನಾವು ಕಾನೂನಾತ್ಮಕ ಮತ್ತು ರಾಜಕೀಯ ಹೋರಾಟ ನಡೆಸುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರೇಮೇಶ್ವರ್, ” ಒಂದು ವಿಷಯಕ್ಕೆ ಸಂಬಂಧಿಸಿದಂತೆ ಎರಡು ತನಿಖಾ ಸಂಸ್ಥೆಗಳು ತನಿಖೆ ಮಾಡಲು ಅವಕಾಶವಿಲ್ಲ. ಆದರೆ, ಕಾನೂನು ಗಾಳಿಗೆ ತೂರಿ ಬಿಜೆಪಿಗೆ ಅನುಕೂಲ ಮಾಡಿಕೊಡಲು ಇಡಿ ಮುಡಾ ಪ್ರಕರಣದಲ್ಲಿ ಮೂಗು ತೂರಿಸಿದೆ ಎಂದು ಕಿಡಿಕಾರಿದ್ದಾರೆ.

ಇಡಿಗೆ ಯಾವ ಅಧಿಕಾರವಿದೆ-ಡಾ. ಸುಧಾಕರ್

ಮುಡಾ ಪ್ರಕರಣದ ತನಿಖೆ ಮಾಡಲು ಇಡಿಗೆ ನ್ಯಾಯಾಲಯ ಅನುಮತಿ ಕೊಟ್ಟಿದೆಯಾ? ರಾಜ್ಯದ ತನಿಖಾ ಸಂಸ್ಥೆಯ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಲು ಇಡಿಗೆ ಯಾವ ಅಧಿಕಾರವಿದೆ? ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಪ್ರಶ್ನಿಸಿದ್ದಾರೆ.

ಇಡಿ ಸೀಳು ನಾಯಿ -ಕೃಷ್ಣ ಬೈರೇಗೌಡ

ಮುಡಾ ಪ್ರಕರಣದಲ್ಲಿ ಇಡಿ ಎನ್ನುವ ಸೀಳು ನಾಯಿಯನ್ನು ನಮ್ಮ‌ ಮೇಲೆ ಬಿಟ್ಟಿದ್ದಾರೆ. ಇದು ರಾಜಕೀಯ ದಾಳಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡಿ ಅಂದ್ರೆ ಜಾರಿ ನಿರ್ದೇಶನಾಲಯ ಅಲ್ಲ, ಅದು ರಾಜಕೀಯ ಏಜೆನ್ಸಿ. ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಲು, ನಾಯಕರ ವಿರುದ್ಧ ದಾಳಿ ಮಾಡೋಕ್ಷೆ ಇರುವ ಜಾಬ್‌ ಎಂದು ದೂರಿದ್ದಾರೆ.

ಇಡಿ ಕೇಂದ್ರ ಸರ್ಕಾರದ ಕೈಗೊಂಬೆ- ಪ್ರಿಯಾಂಕ್ ಖರ್ಗೆ

ಇಡಿ, ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆಗಳು ಕೇಂದ್ರ ಸರ್ಕಾರ ಕೈಗೊಂಬೆಗಳಾಗಿವೆ. ಎಲ್ಲೆಲ್ಲಿ ಬಿಜೆಪಿಯ ರಾಜ್ಯ ಘಟಕಗಳು ದುರ್ಬಲವಾಗಿವೆಯೋ, ಅಂತಹ ಕಡೆ ಸಿಬಿಐ, ಇಡಿ, ಐಟಿಗಳನ್ನು ಪ್ರತಿಪಕ್ಷಗಳ ವಿರುದ್ಧ ಬಳಕೆ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಲಿಬಾಬಾ ಮತ್ತು 40 ಕಳ್ಳರು-ಹೆಚ್‌.ಡಿ ಕುಮಾರಸ್ವಾಮಿ

ಮುಡಾದಲ್ಲಿ ಏನೆಲ್ಲಾ ನಡೆದಿದೆ ಎಂಬುವುದು ಹಾದಿಬೀದಿಯಲ್ಲಿ ಚರ್ಚೆಯ ನಡೆಯುತ್ತಿದೆ. ಆದರೆ, ಸರ್ಕಾರ ಮತ್ತು ಸಚಿವರು ‘ಆಲಿಬಾಬಾ ಮತ್ತು 40 ಕಳ್ಳರ ರೀತಿ’ ಇದ್ದಾರೆ. ಪ್ರಕರಣದಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಯದಿಂದ ನಿವೇಶನ ವಾಪಸ್ -ಬಿ.ವೈ ವಿಜಯೇಂದ್ರ

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಕುತ್ತು ಬರುತ್ತದೆ ಎಂಬ ಭಯದಿಂದ 14 ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ಮುಡಾದಲ್ಲಿ ತಮ್ಮ ಪತ್ನಿಯ 14 ನಿವೇಶನಗಳನ್ನು ವಾಪಸ್ ಮಾಡಲು 65 ಕೋಟಿ ರೂಪಾಯಿ ಕೊಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ಬಳಿಕ ಒಂದು ರೂಪಾಯಿ ಪಡೆಯದೆ ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆ. ಅವರ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಅಕ್ರಮದಲ್ಲಿ ಮರೀಗೌಡ, ದಿನೇಶ್ ಕುಮಾರ್ ಭಾಗಿ-ಆರೋಪ

ಭೂಮಾಲೀಕರಿಗೆ 50:50 ಅನುಪಾತದಲ್ಲಿ ಪರಿಹಾರ ನಿವೇಶನ ನೀಡುವ ನಿಯಮವನ್ನು ರದ್ದುಪಡಿಸಿದ ಹಲವು ತಿಂಗಳ ನಂತರವೂ ಮುಡಾ 252 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದೆ ಎಂದು ಇಡಿ ಆರೋಪಿಸಿದೆ. ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಮತ್ತು ಆಯುಕ್ತರಾಗಿದ್ದ ಜಿ.ಟಿ ದಿನೇಶ್ ಕುಮಾರ್ ಅಕ್ರಮದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಇಡಿ ಹೇಳಿದೆ.

ಇಡಿ ಮುಂದೆ ಹಾಜರಾದ ಭೂ ಅಧಿಕಾರಿ ಮಂಜುನಾಥ್

ಇಡಿ ಪತ್ರದ ಕುರಿತು ವಾಕ್ಸಮರಗಳ ನಡುವೆ ಮುಡಾ ವಿಶೇಷ ಭೂ ಅಧಿಕಾರಿ ಮಂಜುನಾಥ್, ಬುಧವಾರ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಶಾಂತಿ ನಗರದಲ್ಲಿರುವ ಇಡಿ ಕಚೇರಿಗೆ ದಾಖಲೆಗಳ ಸಹಿತ ವಿಚಾರಣೆಗೆ ಹಾಜರಾದ ಮಂಜುನಾಥ್ ಅವರನ್ನು ಅಧಿಕಾರಿಗಳು ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಂಡರು.

ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಇಂದು

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಇಂದು (ಡಿ.5) ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಜಮೀನು ಮಾಲೀಕ ದೇವರಾಜು ಮೇಲ್ಮನವಿಗಳ ವಿಚಾರಣೆಯನ್ನು ಮುಂದೂಡಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇಂದಿಗೆ ವಿಚಾರಣೆ ನಿಗದಿ ಮಾಡಿದೆ.

ಇದನ್ನೂ ಓದಿ : ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ; ಅನ್ನದಾತರಿಂದ ಸರ್ಕಾರಕ್ಕೆ ಅಂತಿಮ ಗಡುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...