Homeಮುಖಪುಟಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

- Advertisement -
- Advertisement -

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ.

ಶುಕ್ರವಾರ (ಫೆ.13) ದೇಶದ ಪ್ರಮುಖ ರೈತ ಸಂಘಟನೆಗಳ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯನ್ನು ‘ಹಂತ-ಹಂತವಾಗಿ ಸಂಘಟಿಸಿದ ಕೃತಕ ಮತ್ತು ನಕಲಿ’ ಸಭೆ ಎಂದು ಟೀಕಿಸಿದ ಪಿಯೂಷ್ ಗೋಯಲ್, ರಾಹುಲ್ ಗಾಂಧಿ ಮುಗ್ದರು, ಶ್ರಮಿಕರೂ ಆದ ಅನ್ನದಾತರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯವರು ಮತ್ತೊಮ್ಮೆ ಹಂತ-ಹಂತವಾಗಿ ರೂಪಿಸಲಾದ, ಅತ್ಯಂತ ಕೃತಕ ಮತ್ತು ನಕಲಿ ನಿರೂಪಣೆಯನ್ನು ಹೊರತಂದಿದ್ದಾರೆ. ಈ ಬಾರಿ, ಅವರು ರೈತ ನಾಯಕರೆಂದು ನಟಿಸುತ್ತಿರುವ ಕೆಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೆಗಲ ಮೇಲೆ ಇಟ್ಟು ಗುಂಡು ಹಾರಿಸುತ್ತಿದ್ದಾರೆ. ಇದು ಸಂಪೂರ್ಣ ಕೃತಕ ಮತ್ತು ಆಧಾರರಹಿತ ಸಂಭಾಷಣೆಯಾಗಿದೆ” ಎಂದಿರುವ ಗೋಯಲ್, ‘ಫರ್ಜಿ (ನಕಲಿ) ರಾಹುಲ್ ಗಾಂಧಿ’ ಎಂಬ ಶೀರ್ಷಿಕೆಯೊಂದಿಗೆ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

“ವ್ಯಾಪಾರ ಒಪ್ಪಂದದ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಗಳು ‘ನಕಲಿ ಮತ್ತು ಕಟ್ಟುಕಥೆ’ ಎಂದಿರುವ ಗೋಯಲ್, ರೈತರ ಹಿತಾಸಕ್ತಿಗಳನ್ನು ‘ಮೋದಿ ಸರ್ಕಾರ ಸಂಪೂರ್ಣವಾಗಿ ರಕ್ಷಿಸಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

“ರೈತರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ’ ಎಂಬುವುದನ್ನು ನಾನು ದಾಖಲೆಯೊಂದಿಗೆ ಮತ್ತು ಸಂಪೂರ್ಣ ಜವಾಬ್ದಾರಿಯೊಂದಿಗೆ ಹೇಳುತ್ತಿದ್ದೇನೆ. ಇದು ನಮ್ಮ ರೈತರು, ಮೀನುಗಾರರು, ಯುವಕರು, ಎಂಎಸ್‌ಎಂಇಗಳು, ಕುಶಲಕರ್ಮಿಗಳು ಮತ್ತು ನವೋದ್ಯಮಗಳಿಗೆ ಸಹಾಯ ಮಾಡುವ ವ್ಯಾಪಾರ ಒಪ್ಪಂದವಾಗಿದೆ” ಎಂದಿದ್ದಾರೆ.

“ರಾಹುಲ್ ಗಾಂಧಿ, ಇಂದು ನೀವು ನಾಟಕ ಕಲಾವಿದರಾಗಿ ಮತ್ತು ನಕಲಿ, ಆಧಾರರಹಿತ ಆರೋಪಗಳು ಮತ್ತು ಕಟ್ಟುಕಥೆಗಳ ನಿರಂತರ ವ್ಯಾಪಾರಿಯಾಗಿ ಸಂಪೂರ್ಣವಾಗಿ ಬಹಿರಂಗಗೊಂಡಿದ್ದೀರಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ವ್ಯಾಪಾರ ಒಪ್ಪಂದದ ಅಡಿಯಲ್ಲಿ ಸೋಯಾಬೀನ್ ಹಿಂಡಿ ಮತ್ತು ಮೆಕ್ಕೆಜೋಳದಂತಹ ಉತ್ಪನ್ನಗಳಿಗೆ ಯಾವುದೇ ರಿಯಾಯಿತಿಗಳನ್ನು ನೀಡಿಲ್ಲ, ಆದ್ದರಿಂದ ಇವುಗಳಿಂದ ದೇಶದ ರೈತರಿಗೆ ಯಾವುದೇ ಅಪಾಯವಿಲ್ಲ ಎಂದು ಪಿಯೂಷ್ ಗೋಯಲ್ ಪ್ರತಿಪಾದಿಸಿದ್ದಾರೆ. ಇನ್ನು ಸೇಬುಗಳ ಆಮದಿಗೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವರು, ಸರ್ಕಾರ ಅನಿಯಮಿತ ಆಮದಿಗೆ ಅವಕಾಶ ನೀಡಿಲ್ಲ; ಬದಲಾಗಿ, ನಿಗದಿತ ಪ್ರಮಾಣವನ್ನು ಮಾತ್ರ ಪರಿಚಯಿಸಲಾಗಿದೆ ಎಂದು ಹೇಳಿದ್ದಾರೆ.

ಸೇಬುಗಳ ಆಮದನ್ನು ಪ್ರತಿ ಕೆಜಿಗೆ 80 ರೂಪಾಯಿಗಳ ಕನಿಷ್ಠ ಆಮದು ಬೆಲೆ ಮತ್ತು ಅದರ ಜೊತೆಗೆ 25 ರೂಪಾಯಿಗಳ ಆಮದು ಸುಂಕವನ್ನು ಪಾವತಿಸಿದರೆ ಮಾತ್ರ ಅನುಮತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಚಿವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ರಾಹುಲ್ ಗಾಂಧಿ, ಶನಿವಾರ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಜವಳಿ ಉದ್ಯಮದ ಕುರಿತಾದ ತಮ್ಮ ಆತಂಕಗಳನ್ನು ಪುನರುಚ್ಚರಿಸಿದ್ದು, ಈ ವ್ಯಾಪಾರ ಒಪ್ಪಂದವು ಹತ್ತಿ ಬೆಳೆಗಾರರು ಮತ್ತು ಜವಳಿ ರಫ್ತುದಾರರ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪ್ರತಿಪಾದಿಸಿದ್ದಾರೆ.

“ಪಿಯೂಷ್ ಗೋಯಲ್ ಅವರೇ ಸುಳ್ಳು ಹೇಳಬೇಡಿ…” ಎಂದು ರಾಹುಲ್ ಗಾಂಧಿ ವಿಡಿಯೋದಲ್ಲಿ ಹೇಳಿದ್ದಾರೆ. ಈ ವ್ಯಾಪಾರ ಒಪ್ಪಂದವು ಒಂದು ರೀತಿಯ ‘ಶರಣಾಗತಿ’ ಎಂದು ಪುನರುಚ್ಚರಿಸಿದ ಅವರು, ಇದರಿಂದ ದೇಶದ ಹತ್ತಿ ಬೆಳೆಗಾರರು ಮತ್ತು ಜವಳಿ ಉದ್ಯಮ ಎರಡಕ್ಕೂ ‘ಬಹಳ ದೊಡ್ಡ ಮಟ್ಟದ ಹಾನಿಯಾಗುವ ಸಾಧ್ಯತೆಯಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಶುಕ್ರವಾರ 17 ಪ್ರಮುಖ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿದ್ದಾರೆ. ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಲು ರಾಷ್ಟ್ರವ್ಯಾಪಿ ಚಳುವಳಿಯ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ.

ಸಭೆಯ ದೃಶ್ಯಗಳನ್ನು ಹಂಚಿಕೊಡಿರುವ ರಾಹುಲ್ ಗಾಂಧಿ, “ನರೇಂದ್ರ ‘ಸರೆಂಡರ್’ ಮೋದಿ ಅವರು ಭಾರತದ ರೈತರಿಗೆ ದ್ರೋಹ ಬಗೆದಿದ್ದಾರೆ. ರೈತರು ಇದನ್ನು ಅರಿತುಕೊಂಡಿದ್ದಾರೆ. ಇದು ಕೇವಲ ವ್ಯಾಪಾರ ಒಪ್ಪಂದವಲ್ಲ; ಇದು ನಮ್ಮ ಅನ್ನದಾತರ ಜೀವನೋಪಾಯದ ಮೇಲೆ ನಡೆಸಿದ ನೇರ ದಾಳಿಯಾಗಿದೆ” ಎಂದಿದ್ದಾರೆ.

“ಇಂದು ಸಂಸತ್ತಿನಲ್ಲಿ ರೈತ ಸಂಘಟನೆಗಳ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ರೈತರ ಆತಂಕಗಳು ಸ್ಪಷ್ಟವಾಗಿ ಗೊತ್ತಾಗಿವೆ. ಹಣದುಬ್ಬರ, ಹೆಚ್ಚುತ್ತಿರುವ ವೆಚ್ಚಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಸಂಬಂಧ ಹೋರಾಡುತ್ತಿರುವ ರೈತರನ್ನು, ಈಗ ಬೃಹತ್ ಸಬ್ಸಿಡಿಗಳು ಮತ್ತು ಯಾಂತ್ರಿಕ ಶಕ್ತಿಯ ಬೆಂಬಲ ಹೊಂದಿರುವ ವಿದೇಶಿ ಬೆಳೆಗಳನ್ನು ಎದುರಿಸಲು ಯಾವುದೇ ಸಿದ್ಧತೆಯಿಲ್ಲದೆ ಕೈಬಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ರೈತರ ‘ಹಕ್ಕುಗಳು, ಭದ್ರತೆ ಮತ್ತು ಘನತೆ’ಗಾಗಿ ಅವರ ಪರವಾಗಿ ನಿಲ್ಲುತ್ತದೆ” ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ, “ಇದು ಸಮಾನವಾದ ಹೋರಾಟವಲ್ಲ; ಇದು ಏಕಪಕ್ಷೀಯ ಒತ್ತಡವಾಗಿದೆ. ಸರ್ಕಾರದ ಟೊಳ್ಳು ಭರವಸೆಗಳು ಇನ್ನು ಮುಂದೆ ನಡೆಯುವುದಿಲ್ಲ. ರೈತರ ಅನುಮತಿಯಿಲ್ಲದೆ ಅವರ ಭವಿಷ್ಯವನ್ನು ಅಡವಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...

ಗಾಜಾ ಕುರಿತು ತೀರ್ಪುಗಾರರ ಹೇಳಿಕೆಗೆ ವಿರೋಧ; ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿದ ಅರುಂಧತಿ ರಾಯ್

ಬರ್ಲಿನ್ ಚಲನಚಿತ್ರೋತ್ಸವದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಬರಹಗಾರ್ತಿ ಅರುಂಧತಿ ರಾಯ್ ಹೇಳಿದ್ದಾರೆ. ತೀರ್ಪುಗಾರರ ಅಧ್ಯಕ್ಷೆ ವಿಮ್ ವೆಂಡರ್ಸ್ ಅವರು, ಗಾಜಾ ಕುರಿತು ಪ್ರಶ್ನಿಸಿದಾಗ 'ರಾಜಕೀಯ ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ' ಎಂದು ಹೇಳಿದ್ದರು. ಈ...

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...