Homeಮುಖಪುಟಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

- Advertisement -
- Advertisement -

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ.

ಶುಕ್ರವಾರ (ಫೆ.13) ದೇಶದ ಪ್ರಮುಖ ರೈತ ಸಂಘಟನೆಗಳ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯನ್ನು ‘ಹಂತ-ಹಂತವಾಗಿ ಸಂಘಟಿಸಿದ ಕೃತಕ ಮತ್ತು ನಕಲಿ’ ಸಭೆ ಎಂದು ಟೀಕಿಸಿದ ಪಿಯೂಷ್ ಗೋಯಲ್, ರಾಹುಲ್ ಗಾಂಧಿ ಮುಗ್ದರು, ಶ್ರಮಿಕರೂ ಆದ ಅನ್ನದಾತರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯವರು ಮತ್ತೊಮ್ಮೆ ಹಂತ-ಹಂತವಾಗಿ ರೂಪಿಸಲಾದ, ಅತ್ಯಂತ ಕೃತಕ ಮತ್ತು ನಕಲಿ ನಿರೂಪಣೆಯನ್ನು ಹೊರತಂದಿದ್ದಾರೆ. ಈ ಬಾರಿ, ಅವರು ರೈತ ನಾಯಕರೆಂದು ನಟಿಸುತ್ತಿರುವ ಕೆಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೆಗಲ ಮೇಲೆ ಇಟ್ಟು ಗುಂಡು ಹಾರಿಸುತ್ತಿದ್ದಾರೆ. ಇದು ಸಂಪೂರ್ಣ ಕೃತಕ ಮತ್ತು ಆಧಾರರಹಿತ ಸಂಭಾಷಣೆಯಾಗಿದೆ” ಎಂದಿರುವ ಗೋಯಲ್, ‘ಫರ್ಜಿ (ನಕಲಿ) ರಾಹುಲ್ ಗಾಂಧಿ’ ಎಂಬ ಶೀರ್ಷಿಕೆಯೊಂದಿಗೆ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

“ವ್ಯಾಪಾರ ಒಪ್ಪಂದದ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಗಳು ‘ನಕಲಿ ಮತ್ತು ಕಟ್ಟುಕಥೆ’ ಎಂದಿರುವ ಗೋಯಲ್, ರೈತರ ಹಿತಾಸಕ್ತಿಗಳನ್ನು ‘ಮೋದಿ ಸರ್ಕಾರ ಸಂಪೂರ್ಣವಾಗಿ ರಕ್ಷಿಸಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

“ರೈತರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ’ ಎಂಬುವುದನ್ನು ನಾನು ದಾಖಲೆಯೊಂದಿಗೆ ಮತ್ತು ಸಂಪೂರ್ಣ ಜವಾಬ್ದಾರಿಯೊಂದಿಗೆ ಹೇಳುತ್ತಿದ್ದೇನೆ. ಇದು ನಮ್ಮ ರೈತರು, ಮೀನುಗಾರರು, ಯುವಕರು, ಎಂಎಸ್‌ಎಂಇಗಳು, ಕುಶಲಕರ್ಮಿಗಳು ಮತ್ತು ನವೋದ್ಯಮಗಳಿಗೆ ಸಹಾಯ ಮಾಡುವ ವ್ಯಾಪಾರ ಒಪ್ಪಂದವಾಗಿದೆ” ಎಂದಿದ್ದಾರೆ.

“ರಾಹುಲ್ ಗಾಂಧಿ, ಇಂದು ನೀವು ನಾಟಕ ಕಲಾವಿದರಾಗಿ ಮತ್ತು ನಕಲಿ, ಆಧಾರರಹಿತ ಆರೋಪಗಳು ಮತ್ತು ಕಟ್ಟುಕಥೆಗಳ ನಿರಂತರ ವ್ಯಾಪಾರಿಯಾಗಿ ಸಂಪೂರ್ಣವಾಗಿ ಬಹಿರಂಗಗೊಂಡಿದ್ದೀರಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ವ್ಯಾಪಾರ ಒಪ್ಪಂದದ ಅಡಿಯಲ್ಲಿ ಸೋಯಾಬೀನ್ ಹಿಂಡಿ ಮತ್ತು ಮೆಕ್ಕೆಜೋಳದಂತಹ ಉತ್ಪನ್ನಗಳಿಗೆ ಯಾವುದೇ ರಿಯಾಯಿತಿಗಳನ್ನು ನೀಡಿಲ್ಲ, ಆದ್ದರಿಂದ ಇವುಗಳಿಂದ ದೇಶದ ರೈತರಿಗೆ ಯಾವುದೇ ಅಪಾಯವಿಲ್ಲ ಎಂದು ಪಿಯೂಷ್ ಗೋಯಲ್ ಪ್ರತಿಪಾದಿಸಿದ್ದಾರೆ. ಇನ್ನು ಸೇಬುಗಳ ಆಮದಿಗೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವರು, ಸರ್ಕಾರ ಅನಿಯಮಿತ ಆಮದಿಗೆ ಅವಕಾಶ ನೀಡಿಲ್ಲ; ಬದಲಾಗಿ, ನಿಗದಿತ ಪ್ರಮಾಣವನ್ನು ಮಾತ್ರ ಪರಿಚಯಿಸಲಾಗಿದೆ ಎಂದು ಹೇಳಿದ್ದಾರೆ.

ಸೇಬುಗಳ ಆಮದನ್ನು ಪ್ರತಿ ಕೆಜಿಗೆ 80 ರೂಪಾಯಿಗಳ ಕನಿಷ್ಠ ಆಮದು ಬೆಲೆ ಮತ್ತು ಅದರ ಜೊತೆಗೆ 25 ರೂಪಾಯಿಗಳ ಆಮದು ಸುಂಕವನ್ನು ಪಾವತಿಸಿದರೆ ಮಾತ್ರ ಅನುಮತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಚಿವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ರಾಹುಲ್ ಗಾಂಧಿ, ಶನಿವಾರ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಜವಳಿ ಉದ್ಯಮದ ಕುರಿತಾದ ತಮ್ಮ ಆತಂಕಗಳನ್ನು ಪುನರುಚ್ಚರಿಸಿದ್ದು, ಈ ವ್ಯಾಪಾರ ಒಪ್ಪಂದವು ಹತ್ತಿ ಬೆಳೆಗಾರರು ಮತ್ತು ಜವಳಿ ರಫ್ತುದಾರರ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪ್ರತಿಪಾದಿಸಿದ್ದಾರೆ.

“ಪಿಯೂಷ್ ಗೋಯಲ್ ಅವರೇ ಸುಳ್ಳು ಹೇಳಬೇಡಿ…” ಎಂದು ರಾಹುಲ್ ಗಾಂಧಿ ವಿಡಿಯೋದಲ್ಲಿ ಹೇಳಿದ್ದಾರೆ. ಈ ವ್ಯಾಪಾರ ಒಪ್ಪಂದವು ಒಂದು ರೀತಿಯ ‘ಶರಣಾಗತಿ’ ಎಂದು ಪುನರುಚ್ಚರಿಸಿದ ಅವರು, ಇದರಿಂದ ದೇಶದ ಹತ್ತಿ ಬೆಳೆಗಾರರು ಮತ್ತು ಜವಳಿ ಉದ್ಯಮ ಎರಡಕ್ಕೂ ‘ಬಹಳ ದೊಡ್ಡ ಮಟ್ಟದ ಹಾನಿಯಾಗುವ ಸಾಧ್ಯತೆಯಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಶುಕ್ರವಾರ 17 ಪ್ರಮುಖ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿದ್ದಾರೆ. ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಲು ರಾಷ್ಟ್ರವ್ಯಾಪಿ ಚಳುವಳಿಯ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ.

ಸಭೆಯ ದೃಶ್ಯಗಳನ್ನು ಹಂಚಿಕೊಡಿರುವ ರಾಹುಲ್ ಗಾಂಧಿ, “ನರೇಂದ್ರ ‘ಸರೆಂಡರ್’ ಮೋದಿ ಅವರು ಭಾರತದ ರೈತರಿಗೆ ದ್ರೋಹ ಬಗೆದಿದ್ದಾರೆ. ರೈತರು ಇದನ್ನು ಅರಿತುಕೊಂಡಿದ್ದಾರೆ. ಇದು ಕೇವಲ ವ್ಯಾಪಾರ ಒಪ್ಪಂದವಲ್ಲ; ಇದು ನಮ್ಮ ಅನ್ನದಾತರ ಜೀವನೋಪಾಯದ ಮೇಲೆ ನಡೆಸಿದ ನೇರ ದಾಳಿಯಾಗಿದೆ” ಎಂದಿದ್ದಾರೆ.

“ಇಂದು ಸಂಸತ್ತಿನಲ್ಲಿ ರೈತ ಸಂಘಟನೆಗಳ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ರೈತರ ಆತಂಕಗಳು ಸ್ಪಷ್ಟವಾಗಿ ಗೊತ್ತಾಗಿವೆ. ಹಣದುಬ್ಬರ, ಹೆಚ್ಚುತ್ತಿರುವ ವೆಚ್ಚಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಸಂಬಂಧ ಹೋರಾಡುತ್ತಿರುವ ರೈತರನ್ನು, ಈಗ ಬೃಹತ್ ಸಬ್ಸಿಡಿಗಳು ಮತ್ತು ಯಾಂತ್ರಿಕ ಶಕ್ತಿಯ ಬೆಂಬಲ ಹೊಂದಿರುವ ವಿದೇಶಿ ಬೆಳೆಗಳನ್ನು ಎದುರಿಸಲು ಯಾವುದೇ ಸಿದ್ಧತೆಯಿಲ್ಲದೆ ಕೈಬಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ರೈತರ ‘ಹಕ್ಕುಗಳು, ಭದ್ರತೆ ಮತ್ತು ಘನತೆ’ಗಾಗಿ ಅವರ ಪರವಾಗಿ ನಿಲ್ಲುತ್ತದೆ” ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ, “ಇದು ಸಮಾನವಾದ ಹೋರಾಟವಲ್ಲ; ಇದು ಏಕಪಕ್ಷೀಯ ಒತ್ತಡವಾಗಿದೆ. ಸರ್ಕಾರದ ಟೊಳ್ಳು ಭರವಸೆಗಳು ಇನ್ನು ಮುಂದೆ ನಡೆಯುವುದಿಲ್ಲ. ರೈತರ ಅನುಮತಿಯಿಲ್ಲದೆ ಅವರ ಭವಿಷ್ಯವನ್ನು ಅಡವಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...