Homeಮುಖಪುಟಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

- Advertisement -
- Advertisement -

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ.

ಶುಕ್ರವಾರ (ಫೆ.13) ದೇಶದ ಪ್ರಮುಖ ರೈತ ಸಂಘಟನೆಗಳ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯನ್ನು ‘ಹಂತ-ಹಂತವಾಗಿ ಸಂಘಟಿಸಿದ ಕೃತಕ ಮತ್ತು ನಕಲಿ’ ಸಭೆ ಎಂದು ಟೀಕಿಸಿದ ಪಿಯೂಷ್ ಗೋಯಲ್, ರಾಹುಲ್ ಗಾಂಧಿ ಮುಗ್ದರು, ಶ್ರಮಿಕರೂ ಆದ ಅನ್ನದಾತರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯವರು ಮತ್ತೊಮ್ಮೆ ಹಂತ-ಹಂತವಾಗಿ ರೂಪಿಸಲಾದ, ಅತ್ಯಂತ ಕೃತಕ ಮತ್ತು ನಕಲಿ ನಿರೂಪಣೆಯನ್ನು ಹೊರತಂದಿದ್ದಾರೆ. ಈ ಬಾರಿ, ಅವರು ರೈತ ನಾಯಕರೆಂದು ನಟಿಸುತ್ತಿರುವ ಕೆಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೆಗಲ ಮೇಲೆ ಇಟ್ಟು ಗುಂಡು ಹಾರಿಸುತ್ತಿದ್ದಾರೆ. ಇದು ಸಂಪೂರ್ಣ ಕೃತಕ ಮತ್ತು ಆಧಾರರಹಿತ ಸಂಭಾಷಣೆಯಾಗಿದೆ” ಎಂದಿರುವ ಗೋಯಲ್, ‘ಫರ್ಜಿ (ನಕಲಿ) ರಾಹುಲ್ ಗಾಂಧಿ’ ಎಂಬ ಶೀರ್ಷಿಕೆಯೊಂದಿಗೆ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

“ವ್ಯಾಪಾರ ಒಪ್ಪಂದದ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಗಳು ‘ನಕಲಿ ಮತ್ತು ಕಟ್ಟುಕಥೆ’ ಎಂದಿರುವ ಗೋಯಲ್, ರೈತರ ಹಿತಾಸಕ್ತಿಗಳನ್ನು ‘ಮೋದಿ ಸರ್ಕಾರ ಸಂಪೂರ್ಣವಾಗಿ ರಕ್ಷಿಸಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

“ರೈತರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ’ ಎಂಬುವುದನ್ನು ನಾನು ದಾಖಲೆಯೊಂದಿಗೆ ಮತ್ತು ಸಂಪೂರ್ಣ ಜವಾಬ್ದಾರಿಯೊಂದಿಗೆ ಹೇಳುತ್ತಿದ್ದೇನೆ. ಇದು ನಮ್ಮ ರೈತರು, ಮೀನುಗಾರರು, ಯುವಕರು, ಎಂಎಸ್‌ಎಂಇಗಳು, ಕುಶಲಕರ್ಮಿಗಳು ಮತ್ತು ನವೋದ್ಯಮಗಳಿಗೆ ಸಹಾಯ ಮಾಡುವ ವ್ಯಾಪಾರ ಒಪ್ಪಂದವಾಗಿದೆ” ಎಂದಿದ್ದಾರೆ.

“ರಾಹುಲ್ ಗಾಂಧಿ, ಇಂದು ನೀವು ನಾಟಕ ಕಲಾವಿದರಾಗಿ ಮತ್ತು ನಕಲಿ, ಆಧಾರರಹಿತ ಆರೋಪಗಳು ಮತ್ತು ಕಟ್ಟುಕಥೆಗಳ ನಿರಂತರ ವ್ಯಾಪಾರಿಯಾಗಿ ಸಂಪೂರ್ಣವಾಗಿ ಬಹಿರಂಗಗೊಂಡಿದ್ದೀರಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ವ್ಯಾಪಾರ ಒಪ್ಪಂದದ ಅಡಿಯಲ್ಲಿ ಸೋಯಾಬೀನ್ ಹಿಂಡಿ ಮತ್ತು ಮೆಕ್ಕೆಜೋಳದಂತಹ ಉತ್ಪನ್ನಗಳಿಗೆ ಯಾವುದೇ ರಿಯಾಯಿತಿಗಳನ್ನು ನೀಡಿಲ್ಲ, ಆದ್ದರಿಂದ ಇವುಗಳಿಂದ ದೇಶದ ರೈತರಿಗೆ ಯಾವುದೇ ಅಪಾಯವಿಲ್ಲ ಎಂದು ಪಿಯೂಷ್ ಗೋಯಲ್ ಪ್ರತಿಪಾದಿಸಿದ್ದಾರೆ. ಇನ್ನು ಸೇಬುಗಳ ಆಮದಿಗೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವರು, ಸರ್ಕಾರ ಅನಿಯಮಿತ ಆಮದಿಗೆ ಅವಕಾಶ ನೀಡಿಲ್ಲ; ಬದಲಾಗಿ, ನಿಗದಿತ ಪ್ರಮಾಣವನ್ನು ಮಾತ್ರ ಪರಿಚಯಿಸಲಾಗಿದೆ ಎಂದು ಹೇಳಿದ್ದಾರೆ.

ಸೇಬುಗಳ ಆಮದನ್ನು ಪ್ರತಿ ಕೆಜಿಗೆ 80 ರೂಪಾಯಿಗಳ ಕನಿಷ್ಠ ಆಮದು ಬೆಲೆ ಮತ್ತು ಅದರ ಜೊತೆಗೆ 25 ರೂಪಾಯಿಗಳ ಆಮದು ಸುಂಕವನ್ನು ಪಾವತಿಸಿದರೆ ಮಾತ್ರ ಅನುಮತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಚಿವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ರಾಹುಲ್ ಗಾಂಧಿ, ಶನಿವಾರ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಜವಳಿ ಉದ್ಯಮದ ಕುರಿತಾದ ತಮ್ಮ ಆತಂಕಗಳನ್ನು ಪುನರುಚ್ಚರಿಸಿದ್ದು, ಈ ವ್ಯಾಪಾರ ಒಪ್ಪಂದವು ಹತ್ತಿ ಬೆಳೆಗಾರರು ಮತ್ತು ಜವಳಿ ರಫ್ತುದಾರರ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪ್ರತಿಪಾದಿಸಿದ್ದಾರೆ.

“ಪಿಯೂಷ್ ಗೋಯಲ್ ಅವರೇ ಸುಳ್ಳು ಹೇಳಬೇಡಿ…” ಎಂದು ರಾಹುಲ್ ಗಾಂಧಿ ವಿಡಿಯೋದಲ್ಲಿ ಹೇಳಿದ್ದಾರೆ. ಈ ವ್ಯಾಪಾರ ಒಪ್ಪಂದವು ಒಂದು ರೀತಿಯ ‘ಶರಣಾಗತಿ’ ಎಂದು ಪುನರುಚ್ಚರಿಸಿದ ಅವರು, ಇದರಿಂದ ದೇಶದ ಹತ್ತಿ ಬೆಳೆಗಾರರು ಮತ್ತು ಜವಳಿ ಉದ್ಯಮ ಎರಡಕ್ಕೂ ‘ಬಹಳ ದೊಡ್ಡ ಮಟ್ಟದ ಹಾನಿಯಾಗುವ ಸಾಧ್ಯತೆಯಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಶುಕ್ರವಾರ 17 ಪ್ರಮುಖ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿದ್ದಾರೆ. ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಲು ರಾಷ್ಟ್ರವ್ಯಾಪಿ ಚಳುವಳಿಯ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ.

ಸಭೆಯ ದೃಶ್ಯಗಳನ್ನು ಹಂಚಿಕೊಡಿರುವ ರಾಹುಲ್ ಗಾಂಧಿ, “ನರೇಂದ್ರ ‘ಸರೆಂಡರ್’ ಮೋದಿ ಅವರು ಭಾರತದ ರೈತರಿಗೆ ದ್ರೋಹ ಬಗೆದಿದ್ದಾರೆ. ರೈತರು ಇದನ್ನು ಅರಿತುಕೊಂಡಿದ್ದಾರೆ. ಇದು ಕೇವಲ ವ್ಯಾಪಾರ ಒಪ್ಪಂದವಲ್ಲ; ಇದು ನಮ್ಮ ಅನ್ನದಾತರ ಜೀವನೋಪಾಯದ ಮೇಲೆ ನಡೆಸಿದ ನೇರ ದಾಳಿಯಾಗಿದೆ” ಎಂದಿದ್ದಾರೆ.

“ಇಂದು ಸಂಸತ್ತಿನಲ್ಲಿ ರೈತ ಸಂಘಟನೆಗಳ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ರೈತರ ಆತಂಕಗಳು ಸ್ಪಷ್ಟವಾಗಿ ಗೊತ್ತಾಗಿವೆ. ಹಣದುಬ್ಬರ, ಹೆಚ್ಚುತ್ತಿರುವ ವೆಚ್ಚಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಸಂಬಂಧ ಹೋರಾಡುತ್ತಿರುವ ರೈತರನ್ನು, ಈಗ ಬೃಹತ್ ಸಬ್ಸಿಡಿಗಳು ಮತ್ತು ಯಾಂತ್ರಿಕ ಶಕ್ತಿಯ ಬೆಂಬಲ ಹೊಂದಿರುವ ವಿದೇಶಿ ಬೆಳೆಗಳನ್ನು ಎದುರಿಸಲು ಯಾವುದೇ ಸಿದ್ಧತೆಯಿಲ್ಲದೆ ಕೈಬಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ರೈತರ ‘ಹಕ್ಕುಗಳು, ಭದ್ರತೆ ಮತ್ತು ಘನತೆ’ಗಾಗಿ ಅವರ ಪರವಾಗಿ ನಿಲ್ಲುತ್ತದೆ” ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ, “ಇದು ಸಮಾನವಾದ ಹೋರಾಟವಲ್ಲ; ಇದು ಏಕಪಕ್ಷೀಯ ಒತ್ತಡವಾಗಿದೆ. ಸರ್ಕಾರದ ಟೊಳ್ಳು ಭರವಸೆಗಳು ಇನ್ನು ಮುಂದೆ ನಡೆಯುವುದಿಲ್ಲ. ರೈತರ ಅನುಮತಿಯಿಲ್ಲದೆ ಅವರ ಭವಿಷ್ಯವನ್ನು ಅಡವಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...