Homeಮುಖಪುಟಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

- Advertisement -
- Advertisement -

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ.

ಶುಕ್ರವಾರ (ಫೆ.13) ದೇಶದ ಪ್ರಮುಖ ರೈತ ಸಂಘಟನೆಗಳ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯನ್ನು ‘ಹಂತ-ಹಂತವಾಗಿ ಸಂಘಟಿಸಿದ ಕೃತಕ ಮತ್ತು ನಕಲಿ’ ಸಭೆ ಎಂದು ಟೀಕಿಸಿದ ಪಿಯೂಷ್ ಗೋಯಲ್, ರಾಹುಲ್ ಗಾಂಧಿ ಮುಗ್ದರು, ಶ್ರಮಿಕರೂ ಆದ ಅನ್ನದಾತರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯವರು ಮತ್ತೊಮ್ಮೆ ಹಂತ-ಹಂತವಾಗಿ ರೂಪಿಸಲಾದ, ಅತ್ಯಂತ ಕೃತಕ ಮತ್ತು ನಕಲಿ ನಿರೂಪಣೆಯನ್ನು ಹೊರತಂದಿದ್ದಾರೆ. ಈ ಬಾರಿ, ಅವರು ರೈತ ನಾಯಕರೆಂದು ನಟಿಸುತ್ತಿರುವ ಕೆಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೆಗಲ ಮೇಲೆ ಇಟ್ಟು ಗುಂಡು ಹಾರಿಸುತ್ತಿದ್ದಾರೆ. ಇದು ಸಂಪೂರ್ಣ ಕೃತಕ ಮತ್ತು ಆಧಾರರಹಿತ ಸಂಭಾಷಣೆಯಾಗಿದೆ” ಎಂದಿರುವ ಗೋಯಲ್, ‘ಫರ್ಜಿ (ನಕಲಿ) ರಾಹುಲ್ ಗಾಂಧಿ’ ಎಂಬ ಶೀರ್ಷಿಕೆಯೊಂದಿಗೆ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

“ವ್ಯಾಪಾರ ಒಪ್ಪಂದದ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಗಳು ‘ನಕಲಿ ಮತ್ತು ಕಟ್ಟುಕಥೆ’ ಎಂದಿರುವ ಗೋಯಲ್, ರೈತರ ಹಿತಾಸಕ್ತಿಗಳನ್ನು ‘ಮೋದಿ ಸರ್ಕಾರ ಸಂಪೂರ್ಣವಾಗಿ ರಕ್ಷಿಸಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

“ರೈತರ ಹಿತಾಸಕ್ತಿಯನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ’ ಎಂಬುವುದನ್ನು ನಾನು ದಾಖಲೆಯೊಂದಿಗೆ ಮತ್ತು ಸಂಪೂರ್ಣ ಜವಾಬ್ದಾರಿಯೊಂದಿಗೆ ಹೇಳುತ್ತಿದ್ದೇನೆ. ಇದು ನಮ್ಮ ರೈತರು, ಮೀನುಗಾರರು, ಯುವಕರು, ಎಂಎಸ್‌ಎಂಇಗಳು, ಕುಶಲಕರ್ಮಿಗಳು ಮತ್ತು ನವೋದ್ಯಮಗಳಿಗೆ ಸಹಾಯ ಮಾಡುವ ವ್ಯಾಪಾರ ಒಪ್ಪಂದವಾಗಿದೆ” ಎಂದಿದ್ದಾರೆ.

“ರಾಹುಲ್ ಗಾಂಧಿ, ಇಂದು ನೀವು ನಾಟಕ ಕಲಾವಿದರಾಗಿ ಮತ್ತು ನಕಲಿ, ಆಧಾರರಹಿತ ಆರೋಪಗಳು ಮತ್ತು ಕಟ್ಟುಕಥೆಗಳ ನಿರಂತರ ವ್ಯಾಪಾರಿಯಾಗಿ ಸಂಪೂರ್ಣವಾಗಿ ಬಹಿರಂಗಗೊಂಡಿದ್ದೀರಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ವ್ಯಾಪಾರ ಒಪ್ಪಂದದ ಅಡಿಯಲ್ಲಿ ಸೋಯಾಬೀನ್ ಹಿಂಡಿ ಮತ್ತು ಮೆಕ್ಕೆಜೋಳದಂತಹ ಉತ್ಪನ್ನಗಳಿಗೆ ಯಾವುದೇ ರಿಯಾಯಿತಿಗಳನ್ನು ನೀಡಿಲ್ಲ, ಆದ್ದರಿಂದ ಇವುಗಳಿಂದ ದೇಶದ ರೈತರಿಗೆ ಯಾವುದೇ ಅಪಾಯವಿಲ್ಲ ಎಂದು ಪಿಯೂಷ್ ಗೋಯಲ್ ಪ್ರತಿಪಾದಿಸಿದ್ದಾರೆ. ಇನ್ನು ಸೇಬುಗಳ ಆಮದಿಗೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವರು, ಸರ್ಕಾರ ಅನಿಯಮಿತ ಆಮದಿಗೆ ಅವಕಾಶ ನೀಡಿಲ್ಲ; ಬದಲಾಗಿ, ನಿಗದಿತ ಪ್ರಮಾಣವನ್ನು ಮಾತ್ರ ಪರಿಚಯಿಸಲಾಗಿದೆ ಎಂದು ಹೇಳಿದ್ದಾರೆ.

ಸೇಬುಗಳ ಆಮದನ್ನು ಪ್ರತಿ ಕೆಜಿಗೆ 80 ರೂಪಾಯಿಗಳ ಕನಿಷ್ಠ ಆಮದು ಬೆಲೆ ಮತ್ತು ಅದರ ಜೊತೆಗೆ 25 ರೂಪಾಯಿಗಳ ಆಮದು ಸುಂಕವನ್ನು ಪಾವತಿಸಿದರೆ ಮಾತ್ರ ಅನುಮತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಚಿವರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ರಾಹುಲ್ ಗಾಂಧಿ, ಶನಿವಾರ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅವರು ಜವಳಿ ಉದ್ಯಮದ ಕುರಿತಾದ ತಮ್ಮ ಆತಂಕಗಳನ್ನು ಪುನರುಚ್ಚರಿಸಿದ್ದು, ಈ ವ್ಯಾಪಾರ ಒಪ್ಪಂದವು ಹತ್ತಿ ಬೆಳೆಗಾರರು ಮತ್ತು ಜವಳಿ ರಫ್ತುದಾರರ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪ್ರತಿಪಾದಿಸಿದ್ದಾರೆ.

“ಪಿಯೂಷ್ ಗೋಯಲ್ ಅವರೇ ಸುಳ್ಳು ಹೇಳಬೇಡಿ…” ಎಂದು ರಾಹುಲ್ ಗಾಂಧಿ ವಿಡಿಯೋದಲ್ಲಿ ಹೇಳಿದ್ದಾರೆ. ಈ ವ್ಯಾಪಾರ ಒಪ್ಪಂದವು ಒಂದು ರೀತಿಯ ‘ಶರಣಾಗತಿ’ ಎಂದು ಪುನರುಚ್ಚರಿಸಿದ ಅವರು, ಇದರಿಂದ ದೇಶದ ಹತ್ತಿ ಬೆಳೆಗಾರರು ಮತ್ತು ಜವಳಿ ಉದ್ಯಮ ಎರಡಕ್ಕೂ ‘ಬಹಳ ದೊಡ್ಡ ಮಟ್ಟದ ಹಾನಿಯಾಗುವ ಸಾಧ್ಯತೆಯಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಶುಕ್ರವಾರ 17 ಪ್ರಮುಖ ರೈತ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿದ್ದಾರೆ. ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಲು ರಾಷ್ಟ್ರವ್ಯಾಪಿ ಚಳುವಳಿಯ ಅಗತ್ಯತೆಯ ಬಗ್ಗೆ ಚರ್ಚಿಸಿದ್ದಾರೆ.

ಸಭೆಯ ದೃಶ್ಯಗಳನ್ನು ಹಂಚಿಕೊಡಿರುವ ರಾಹುಲ್ ಗಾಂಧಿ, “ನರೇಂದ್ರ ‘ಸರೆಂಡರ್’ ಮೋದಿ ಅವರು ಭಾರತದ ರೈತರಿಗೆ ದ್ರೋಹ ಬಗೆದಿದ್ದಾರೆ. ರೈತರು ಇದನ್ನು ಅರಿತುಕೊಂಡಿದ್ದಾರೆ. ಇದು ಕೇವಲ ವ್ಯಾಪಾರ ಒಪ್ಪಂದವಲ್ಲ; ಇದು ನಮ್ಮ ಅನ್ನದಾತರ ಜೀವನೋಪಾಯದ ಮೇಲೆ ನಡೆಸಿದ ನೇರ ದಾಳಿಯಾಗಿದೆ” ಎಂದಿದ್ದಾರೆ.

“ಇಂದು ಸಂಸತ್ತಿನಲ್ಲಿ ರೈತ ಸಂಘಟನೆಗಳ ನಿಯೋಗದೊಂದಿಗೆ ನಡೆದ ಸಭೆಯಲ್ಲಿ ರೈತರ ಆತಂಕಗಳು ಸ್ಪಷ್ಟವಾಗಿ ಗೊತ್ತಾಗಿವೆ. ಹಣದುಬ್ಬರ, ಹೆಚ್ಚುತ್ತಿರುವ ವೆಚ್ಚಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಸಂಬಂಧ ಹೋರಾಡುತ್ತಿರುವ ರೈತರನ್ನು, ಈಗ ಬೃಹತ್ ಸಬ್ಸಿಡಿಗಳು ಮತ್ತು ಯಾಂತ್ರಿಕ ಶಕ್ತಿಯ ಬೆಂಬಲ ಹೊಂದಿರುವ ವಿದೇಶಿ ಬೆಳೆಗಳನ್ನು ಎದುರಿಸಲು ಯಾವುದೇ ಸಿದ್ಧತೆಯಿಲ್ಲದೆ ಕೈಬಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಕಾಂಗ್ರೆಸ್ ಪಕ್ಷವು ರೈತರ ‘ಹಕ್ಕುಗಳು, ಭದ್ರತೆ ಮತ್ತು ಘನತೆ’ಗಾಗಿ ಅವರ ಪರವಾಗಿ ನಿಲ್ಲುತ್ತದೆ” ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ, “ಇದು ಸಮಾನವಾದ ಹೋರಾಟವಲ್ಲ; ಇದು ಏಕಪಕ್ಷೀಯ ಒತ್ತಡವಾಗಿದೆ. ಸರ್ಕಾರದ ಟೊಳ್ಳು ಭರವಸೆಗಳು ಇನ್ನು ಮುಂದೆ ನಡೆಯುವುದಿಲ್ಲ. ರೈತರ ಅನುಮತಿಯಿಲ್ಲದೆ ಅವರ ಭವಿಷ್ಯವನ್ನು ಅಡವಿಡಲು ಸಾಧ್ಯವಿಲ್ಲ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...