Homeಕರ್ನಾಟಕಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

ಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ’ ಎಂದು ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.

- Advertisement -
- Advertisement -

“ಹಾಸ್ಯಪ್ರಜ್ಞೆಯಿಂದ ಆಡಿದ ಮಾತು. ಯಾರೂ ಅನ್ಯಥಾ ಭಾವಿಸಬೇಡಿ” ಎಂದು ಹರಟೆ ಖ್ಯಾತಿಯ ಹಿರೇಮಗಳೂರು ಕಣ್ಣನ್‌ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನ ರಂಗಾಯಣದದ ಬಹುರೂಪಿ ನಾಟಕೋತ್ಸವದಲ್ಲಿ ಹಿಜಾಬ್‌ ಕುರಿತು ಕಣ್ಣನ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಅವರೀಗ ಸ್ಪಷ್ಟನೆ ನೀಡಿದ್ದಾರೆ.

‘ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮದಲ್ಲಿ ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ ಆಗಿದ್ದು, ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ಭಾವಿಸದಿರಲು ಕೋರುತ್ತೇನೆ’ ಎಂದು ಹಿರೇಮಗಳೂರು ಕಣ್ಣನ್‌ ಹೇಳಿದ್ದಾರೆ.

ಕಣ್ಣನ್‌ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದು, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ” ಎಂದು ತಿಳಿಸಿದ್ದಾರೆ.

‘ಕನ್ನಡ ಕಾವ್ಯಗಳಲ್ಲಿ ತಾಯಿ’ ವಿಷಯವನ್ನು ಕುರಿತ ನನ್ನ ಭಾಷಣದಲ್ಲಿನ ಅಂಶಗಳನ್ನು ಗಮನಿಸದೇ, ಕೊನೆಯಲ್ಲಿ ಹಾಸ್ಯದ ದೃಷ್ಟಿಯಿಂದ ಗ್ರಾಮ್ಯ ಭಾಷೆಯಲ್ಲಿ ಹೇಳಿದ ಮಾತುಗಳ ಆಧಾರದಲ್ಲಿ ನನ್ನ ವ್ಯಕ್ತಿತ್ವವನ್ನು ನಿರ್ಣಯಿಸಿ, ತಪ್ಪಾಗಿ ಬಿಂಬಿಸುತ್ತಿರುವುದು ಬೇಸರ ತಂದಿದೆ. ಈ ಪದ ಬಳಕೆಯ ಹಿಂದೆ ದುರುದ್ದೇಶವಾಗಲೀ ಬೇರೆಯವರ ಮನಸ್ಸನ್ನೂ ನೋಯಿಸುವ ಇಂಗಿತವಾಗಲೀ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ವಿವಾದ?

ಹಿರೇಮಗಳೂರು ಕಣ್ಣನ್ ಅವರು ಬಹುರೂಪಿ ನಾಟಕೋತ್ಸವದಲ್ಲಿ ಮಾತನಾಡುತ್ತಾ ಹಿಜಾಬ್‌ ನಿಷೇಧದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

“ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಶಾಲಾ, ಕಾಲೇಜುಗಳಿಂದ ಹಿಜಾಬ್ ಹೊರಟು ಹೋಗಿದೆ. ವಿದ್ಯಾರ್ಥಿಗಳು ಇನ್ನು ಮುಂದೆ ಶಾಲೆಗೆ ಬರುವಾಗ ‘ಮುಖ’ ಮುಚ್ಕೊಂಡು ಬಾರದೆ ……… ಮುಚ್ಕೊಂಡು ಬರಲಿ. ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಇಂದು ಮಳೆಯ ಸುಳಿವು ಇಲ್ಲ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಂದಿದ್ದಾನೆ ಅಂತ ಮಳೆಗೂ ಭಯ. ರಾಜ್ಯದಲ್ಲಿ ಹಿಜಾಬೇ ಹೊರಟು ಹೋಗಿದೆ, ಇನ್ನು ಮಳೆ ಯಾವ ಲೆಕ್ಕ. ಹೀಗಾಗಿ ಇನ್ನು ಮುಂದೆ ಶಾಲೆಗೆ ‘……’ ಮುಚ್ಕೊಂಡು ಬರಬೇಕು. ನನಗೆ ಈ ಮಾತು ಹೇಳಲು ಯಾವುದೇ ಭಯವಿಲ್ಲ. ವೈದ್ಯರ ಬಳಿ ಹೋದಾಗ ಎಲ್ಲ ಬಿಚ್ಚಿ ತೋರಿಸುತ್ತೇವೆ. ಹಾಗಿರುವಾಗ ಈ ವಿಚಾರ ಮಾತನಾಡಲು ಏತಕ್ಕೆ ಭಯ?” ಎಂದು ಕೇಳಿದ್ದರು.


ಇದನ್ನೂ ಓದಿರಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಮ್ಮ ಈ ಒಂದು ನಡೆಯಿಂದಾಗಿ ನಿಮ್ಮ ಙ್ಞಾನದ ಮೇಲಿದ್ದ ಗೌರವ ಸಂಪೂರ್ಣ ನಾಶವಾಗಿಹೋಯಿತು,ನಿಮ್ಮ ನಿಜ ಸ್ವರೂಪ ಬೆತ್ತಲಾಯಿತು,ತಿಪ್ಪೆಸಾರಿಸಿದರು ನಾತ ಕಡಿಮೆಯಾಗದು

  2. ಸಂಬಂಧವಿಲ್ಲದ ತುಚ್ಛ ಪದಗಳನ್ನ ಉಚ್ಚರಿಸಿ , ಹಿಜಾಬ್ ಮಹಿಳೆ ಯರಿಗೆ ಅಪಮಾನ ಮಾಡಿ,
    ನೂವು ಮಾಡಿ …
    ಈಗ ಸಮರ್ಥನೆ ಮಾಡಿಕೊಳ್ಳೂದು ಅಸಭ್ಯ,
    ತಪ್ಪು,..
    ನೃತಿಕವಾಗಿ ಕ್ಷಮೆಯಾಚಿಸ ಬೇಕು.

  3. ಕ್ಷಮೆ ಯಾಚಿಸುವಾಗಲೂ ನಾನು ಹೇಳಿದ್ದು ತಪ್ಪು ಎಂದಿಲ್ಲ. ತಮ್ಮ ಮಾತುಗಳನ್ನು ಕಣ್ಣನ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ವಿಷಯವನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ. ವೈದ್ಯರ ಹತ್ತಿರ ಬಿಚ್ಚುತ್ತೇವೆ ಎಂದರೆ ಸಾರ್ವಜನಿಕವಾಗಿ ಬಿಚ್ಚಲು ಸಾಧ್ಯವೇ? ಇದೊಂದು ಉಡಾಫೆಯ ನಡೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಓಲೈಕೆಯಾಗಿದೆ. ತಿದ್ದಿಕೊಳ್ಳಲು ಮುಂದಾಗದೇ ನಾನು ಹೇಳಿದ್ದು ಹಾಗಲ್ಲ ಹೀಗೆ ಎನ್ನುವವನು ನಿಜ ಮನುಷ್ಯನಾಗಲು ಸಾಧ್ಯವಿಲ್ಲ.
    ಈ. ಬಸವರಾಜು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....