Homeಕರ್ನಾಟಕಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

ಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ’ ಎಂದು ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.

- Advertisement -
- Advertisement -

“ಹಾಸ್ಯಪ್ರಜ್ಞೆಯಿಂದ ಆಡಿದ ಮಾತು. ಯಾರೂ ಅನ್ಯಥಾ ಭಾವಿಸಬೇಡಿ” ಎಂದು ಹರಟೆ ಖ್ಯಾತಿಯ ಹಿರೇಮಗಳೂರು ಕಣ್ಣನ್‌ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನ ರಂಗಾಯಣದದ ಬಹುರೂಪಿ ನಾಟಕೋತ್ಸವದಲ್ಲಿ ಹಿಜಾಬ್‌ ಕುರಿತು ಕಣ್ಣನ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಅವರೀಗ ಸ್ಪಷ್ಟನೆ ನೀಡಿದ್ದಾರೆ.

‘ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮದಲ್ಲಿ ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ ಆಗಿದ್ದು, ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ಭಾವಿಸದಿರಲು ಕೋರುತ್ತೇನೆ’ ಎಂದು ಹಿರೇಮಗಳೂರು ಕಣ್ಣನ್‌ ಹೇಳಿದ್ದಾರೆ.

ಕಣ್ಣನ್‌ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದು, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ” ಎಂದು ತಿಳಿಸಿದ್ದಾರೆ.

‘ಕನ್ನಡ ಕಾವ್ಯಗಳಲ್ಲಿ ತಾಯಿ’ ವಿಷಯವನ್ನು ಕುರಿತ ನನ್ನ ಭಾಷಣದಲ್ಲಿನ ಅಂಶಗಳನ್ನು ಗಮನಿಸದೇ, ಕೊನೆಯಲ್ಲಿ ಹಾಸ್ಯದ ದೃಷ್ಟಿಯಿಂದ ಗ್ರಾಮ್ಯ ಭಾಷೆಯಲ್ಲಿ ಹೇಳಿದ ಮಾತುಗಳ ಆಧಾರದಲ್ಲಿ ನನ್ನ ವ್ಯಕ್ತಿತ್ವವನ್ನು ನಿರ್ಣಯಿಸಿ, ತಪ್ಪಾಗಿ ಬಿಂಬಿಸುತ್ತಿರುವುದು ಬೇಸರ ತಂದಿದೆ. ಈ ಪದ ಬಳಕೆಯ ಹಿಂದೆ ದುರುದ್ದೇಶವಾಗಲೀ ಬೇರೆಯವರ ಮನಸ್ಸನ್ನೂ ನೋಯಿಸುವ ಇಂಗಿತವಾಗಲೀ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ವಿವಾದ?

ಹಿರೇಮಗಳೂರು ಕಣ್ಣನ್ ಅವರು ಬಹುರೂಪಿ ನಾಟಕೋತ್ಸವದಲ್ಲಿ ಮಾತನಾಡುತ್ತಾ ಹಿಜಾಬ್‌ ನಿಷೇಧದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

“ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಶಾಲಾ, ಕಾಲೇಜುಗಳಿಂದ ಹಿಜಾಬ್ ಹೊರಟು ಹೋಗಿದೆ. ವಿದ್ಯಾರ್ಥಿಗಳು ಇನ್ನು ಮುಂದೆ ಶಾಲೆಗೆ ಬರುವಾಗ ‘ಮುಖ’ ಮುಚ್ಕೊಂಡು ಬಾರದೆ ……… ಮುಚ್ಕೊಂಡು ಬರಲಿ. ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಇಂದು ಮಳೆಯ ಸುಳಿವು ಇಲ್ಲ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಂದಿದ್ದಾನೆ ಅಂತ ಮಳೆಗೂ ಭಯ. ರಾಜ್ಯದಲ್ಲಿ ಹಿಜಾಬೇ ಹೊರಟು ಹೋಗಿದೆ, ಇನ್ನು ಮಳೆ ಯಾವ ಲೆಕ್ಕ. ಹೀಗಾಗಿ ಇನ್ನು ಮುಂದೆ ಶಾಲೆಗೆ ‘……’ ಮುಚ್ಕೊಂಡು ಬರಬೇಕು. ನನಗೆ ಈ ಮಾತು ಹೇಳಲು ಯಾವುದೇ ಭಯವಿಲ್ಲ. ವೈದ್ಯರ ಬಳಿ ಹೋದಾಗ ಎಲ್ಲ ಬಿಚ್ಚಿ ತೋರಿಸುತ್ತೇವೆ. ಹಾಗಿರುವಾಗ ಈ ವಿಚಾರ ಮಾತನಾಡಲು ಏತಕ್ಕೆ ಭಯ?” ಎಂದು ಕೇಳಿದ್ದರು.


ಇದನ್ನೂ ಓದಿರಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಮ್ಮ ಈ ಒಂದು ನಡೆಯಿಂದಾಗಿ ನಿಮ್ಮ ಙ್ಞಾನದ ಮೇಲಿದ್ದ ಗೌರವ ಸಂಪೂರ್ಣ ನಾಶವಾಗಿಹೋಯಿತು,ನಿಮ್ಮ ನಿಜ ಸ್ವರೂಪ ಬೆತ್ತಲಾಯಿತು,ತಿಪ್ಪೆಸಾರಿಸಿದರು ನಾತ ಕಡಿಮೆಯಾಗದು

  2. ಸಂಬಂಧವಿಲ್ಲದ ತುಚ್ಛ ಪದಗಳನ್ನ ಉಚ್ಚರಿಸಿ , ಹಿಜಾಬ್ ಮಹಿಳೆ ಯರಿಗೆ ಅಪಮಾನ ಮಾಡಿ,
    ನೂವು ಮಾಡಿ …
    ಈಗ ಸಮರ್ಥನೆ ಮಾಡಿಕೊಳ್ಳೂದು ಅಸಭ್ಯ,
    ತಪ್ಪು,..
    ನೃತಿಕವಾಗಿ ಕ್ಷಮೆಯಾಚಿಸ ಬೇಕು.

  3. ಕ್ಷಮೆ ಯಾಚಿಸುವಾಗಲೂ ನಾನು ಹೇಳಿದ್ದು ತಪ್ಪು ಎಂದಿಲ್ಲ. ತಮ್ಮ ಮಾತುಗಳನ್ನು ಕಣ್ಣನ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ವಿಷಯವನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ. ವೈದ್ಯರ ಹತ್ತಿರ ಬಿಚ್ಚುತ್ತೇವೆ ಎಂದರೆ ಸಾರ್ವಜನಿಕವಾಗಿ ಬಿಚ್ಚಲು ಸಾಧ್ಯವೇ? ಇದೊಂದು ಉಡಾಫೆಯ ನಡೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಓಲೈಕೆಯಾಗಿದೆ. ತಿದ್ದಿಕೊಳ್ಳಲು ಮುಂದಾಗದೇ ನಾನು ಹೇಳಿದ್ದು ಹಾಗಲ್ಲ ಹೀಗೆ ಎನ್ನುವವನು ನಿಜ ಮನುಷ್ಯನಾಗಲು ಸಾಧ್ಯವಿಲ್ಲ.
    ಈ. ಬಸವರಾಜು

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...