Homeಕರ್ನಾಟಕಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

ಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ’ ಎಂದು ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.

- Advertisement -
- Advertisement -

“ಹಾಸ್ಯಪ್ರಜ್ಞೆಯಿಂದ ಆಡಿದ ಮಾತು. ಯಾರೂ ಅನ್ಯಥಾ ಭಾವಿಸಬೇಡಿ” ಎಂದು ಹರಟೆ ಖ್ಯಾತಿಯ ಹಿರೇಮಗಳೂರು ಕಣ್ಣನ್‌ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನ ರಂಗಾಯಣದದ ಬಹುರೂಪಿ ನಾಟಕೋತ್ಸವದಲ್ಲಿ ಹಿಜಾಬ್‌ ಕುರಿತು ಕಣ್ಣನ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಅವರೀಗ ಸ್ಪಷ್ಟನೆ ನೀಡಿದ್ದಾರೆ.

‘ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮದಲ್ಲಿ ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ ಆಗಿದ್ದು, ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ಭಾವಿಸದಿರಲು ಕೋರುತ್ತೇನೆ’ ಎಂದು ಹಿರೇಮಗಳೂರು ಕಣ್ಣನ್‌ ಹೇಳಿದ್ದಾರೆ.

ಕಣ್ಣನ್‌ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದು, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ” ಎಂದು ತಿಳಿಸಿದ್ದಾರೆ.

‘ಕನ್ನಡ ಕಾವ್ಯಗಳಲ್ಲಿ ತಾಯಿ’ ವಿಷಯವನ್ನು ಕುರಿತ ನನ್ನ ಭಾಷಣದಲ್ಲಿನ ಅಂಶಗಳನ್ನು ಗಮನಿಸದೇ, ಕೊನೆಯಲ್ಲಿ ಹಾಸ್ಯದ ದೃಷ್ಟಿಯಿಂದ ಗ್ರಾಮ್ಯ ಭಾಷೆಯಲ್ಲಿ ಹೇಳಿದ ಮಾತುಗಳ ಆಧಾರದಲ್ಲಿ ನನ್ನ ವ್ಯಕ್ತಿತ್ವವನ್ನು ನಿರ್ಣಯಿಸಿ, ತಪ್ಪಾಗಿ ಬಿಂಬಿಸುತ್ತಿರುವುದು ಬೇಸರ ತಂದಿದೆ. ಈ ಪದ ಬಳಕೆಯ ಹಿಂದೆ ದುರುದ್ದೇಶವಾಗಲೀ ಬೇರೆಯವರ ಮನಸ್ಸನ್ನೂ ನೋಯಿಸುವ ಇಂಗಿತವಾಗಲೀ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ವಿವಾದ?

ಹಿರೇಮಗಳೂರು ಕಣ್ಣನ್ ಅವರು ಬಹುರೂಪಿ ನಾಟಕೋತ್ಸವದಲ್ಲಿ ಮಾತನಾಡುತ್ತಾ ಹಿಜಾಬ್‌ ನಿಷೇಧದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

“ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಶಾಲಾ, ಕಾಲೇಜುಗಳಿಂದ ಹಿಜಾಬ್ ಹೊರಟು ಹೋಗಿದೆ. ವಿದ್ಯಾರ್ಥಿಗಳು ಇನ್ನು ಮುಂದೆ ಶಾಲೆಗೆ ಬರುವಾಗ ‘ಮುಖ’ ಮುಚ್ಕೊಂಡು ಬಾರದೆ ……… ಮುಚ್ಕೊಂಡು ಬರಲಿ. ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಇಂದು ಮಳೆಯ ಸುಳಿವು ಇಲ್ಲ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಂದಿದ್ದಾನೆ ಅಂತ ಮಳೆಗೂ ಭಯ. ರಾಜ್ಯದಲ್ಲಿ ಹಿಜಾಬೇ ಹೊರಟು ಹೋಗಿದೆ, ಇನ್ನು ಮಳೆ ಯಾವ ಲೆಕ್ಕ. ಹೀಗಾಗಿ ಇನ್ನು ಮುಂದೆ ಶಾಲೆಗೆ ‘……’ ಮುಚ್ಕೊಂಡು ಬರಬೇಕು. ನನಗೆ ಈ ಮಾತು ಹೇಳಲು ಯಾವುದೇ ಭಯವಿಲ್ಲ. ವೈದ್ಯರ ಬಳಿ ಹೋದಾಗ ಎಲ್ಲ ಬಿಚ್ಚಿ ತೋರಿಸುತ್ತೇವೆ. ಹಾಗಿರುವಾಗ ಈ ವಿಚಾರ ಮಾತನಾಡಲು ಏತಕ್ಕೆ ಭಯ?” ಎಂದು ಕೇಳಿದ್ದರು.


ಇದನ್ನೂ ಓದಿರಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಮ್ಮ ಈ ಒಂದು ನಡೆಯಿಂದಾಗಿ ನಿಮ್ಮ ಙ್ಞಾನದ ಮೇಲಿದ್ದ ಗೌರವ ಸಂಪೂರ್ಣ ನಾಶವಾಗಿಹೋಯಿತು,ನಿಮ್ಮ ನಿಜ ಸ್ವರೂಪ ಬೆತ್ತಲಾಯಿತು,ತಿಪ್ಪೆಸಾರಿಸಿದರು ನಾತ ಕಡಿಮೆಯಾಗದು

  2. ಸಂಬಂಧವಿಲ್ಲದ ತುಚ್ಛ ಪದಗಳನ್ನ ಉಚ್ಚರಿಸಿ , ಹಿಜಾಬ್ ಮಹಿಳೆ ಯರಿಗೆ ಅಪಮಾನ ಮಾಡಿ,
    ನೂವು ಮಾಡಿ …
    ಈಗ ಸಮರ್ಥನೆ ಮಾಡಿಕೊಳ್ಳೂದು ಅಸಭ್ಯ,
    ತಪ್ಪು,..
    ನೃತಿಕವಾಗಿ ಕ್ಷಮೆಯಾಚಿಸ ಬೇಕು.

  3. ಕ್ಷಮೆ ಯಾಚಿಸುವಾಗಲೂ ನಾನು ಹೇಳಿದ್ದು ತಪ್ಪು ಎಂದಿಲ್ಲ. ತಮ್ಮ ಮಾತುಗಳನ್ನು ಕಣ್ಣನ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ವಿಷಯವನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ. ವೈದ್ಯರ ಹತ್ತಿರ ಬಿಚ್ಚುತ್ತೇವೆ ಎಂದರೆ ಸಾರ್ವಜನಿಕವಾಗಿ ಬಿಚ್ಚಲು ಸಾಧ್ಯವೇ? ಇದೊಂದು ಉಡಾಫೆಯ ನಡೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಓಲೈಕೆಯಾಗಿದೆ. ತಿದ್ದಿಕೊಳ್ಳಲು ಮುಂದಾಗದೇ ನಾನು ಹೇಳಿದ್ದು ಹಾಗಲ್ಲ ಹೀಗೆ ಎನ್ನುವವನು ನಿಜ ಮನುಷ್ಯನಾಗಲು ಸಾಧ್ಯವಿಲ್ಲ.
    ಈ. ಬಸವರಾಜು

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...