Homeಕರ್ನಾಟಕಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

ಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ’ ಎಂದು ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.

- Advertisement -
- Advertisement -

“ಹಾಸ್ಯಪ್ರಜ್ಞೆಯಿಂದ ಆಡಿದ ಮಾತು. ಯಾರೂ ಅನ್ಯಥಾ ಭಾವಿಸಬೇಡಿ” ಎಂದು ಹರಟೆ ಖ್ಯಾತಿಯ ಹಿರೇಮಗಳೂರು ಕಣ್ಣನ್‌ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನ ರಂಗಾಯಣದದ ಬಹುರೂಪಿ ನಾಟಕೋತ್ಸವದಲ್ಲಿ ಹಿಜಾಬ್‌ ಕುರಿತು ಕಣ್ಣನ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಅವರೀಗ ಸ್ಪಷ್ಟನೆ ನೀಡಿದ್ದಾರೆ.

‘ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮದಲ್ಲಿ ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ ಆಗಿದ್ದು, ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ಭಾವಿಸದಿರಲು ಕೋರುತ್ತೇನೆ’ ಎಂದು ಹಿರೇಮಗಳೂರು ಕಣ್ಣನ್‌ ಹೇಳಿದ್ದಾರೆ.

ಕಣ್ಣನ್‌ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದು, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ” ಎಂದು ತಿಳಿಸಿದ್ದಾರೆ.

‘ಕನ್ನಡ ಕಾವ್ಯಗಳಲ್ಲಿ ತಾಯಿ’ ವಿಷಯವನ್ನು ಕುರಿತ ನನ್ನ ಭಾಷಣದಲ್ಲಿನ ಅಂಶಗಳನ್ನು ಗಮನಿಸದೇ, ಕೊನೆಯಲ್ಲಿ ಹಾಸ್ಯದ ದೃಷ್ಟಿಯಿಂದ ಗ್ರಾಮ್ಯ ಭಾಷೆಯಲ್ಲಿ ಹೇಳಿದ ಮಾತುಗಳ ಆಧಾರದಲ್ಲಿ ನನ್ನ ವ್ಯಕ್ತಿತ್ವವನ್ನು ನಿರ್ಣಯಿಸಿ, ತಪ್ಪಾಗಿ ಬಿಂಬಿಸುತ್ತಿರುವುದು ಬೇಸರ ತಂದಿದೆ. ಈ ಪದ ಬಳಕೆಯ ಹಿಂದೆ ದುರುದ್ದೇಶವಾಗಲೀ ಬೇರೆಯವರ ಮನಸ್ಸನ್ನೂ ನೋಯಿಸುವ ಇಂಗಿತವಾಗಲೀ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ವಿವಾದ?

ಹಿರೇಮಗಳೂರು ಕಣ್ಣನ್ ಅವರು ಬಹುರೂಪಿ ನಾಟಕೋತ್ಸವದಲ್ಲಿ ಮಾತನಾಡುತ್ತಾ ಹಿಜಾಬ್‌ ನಿಷೇಧದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

“ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಶಾಲಾ, ಕಾಲೇಜುಗಳಿಂದ ಹಿಜಾಬ್ ಹೊರಟು ಹೋಗಿದೆ. ವಿದ್ಯಾರ್ಥಿಗಳು ಇನ್ನು ಮುಂದೆ ಶಾಲೆಗೆ ಬರುವಾಗ ‘ಮುಖ’ ಮುಚ್ಕೊಂಡು ಬಾರದೆ ……… ಮುಚ್ಕೊಂಡು ಬರಲಿ. ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಇಂದು ಮಳೆಯ ಸುಳಿವು ಇಲ್ಲ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಂದಿದ್ದಾನೆ ಅಂತ ಮಳೆಗೂ ಭಯ. ರಾಜ್ಯದಲ್ಲಿ ಹಿಜಾಬೇ ಹೊರಟು ಹೋಗಿದೆ, ಇನ್ನು ಮಳೆ ಯಾವ ಲೆಕ್ಕ. ಹೀಗಾಗಿ ಇನ್ನು ಮುಂದೆ ಶಾಲೆಗೆ ‘……’ ಮುಚ್ಕೊಂಡು ಬರಬೇಕು. ನನಗೆ ಈ ಮಾತು ಹೇಳಲು ಯಾವುದೇ ಭಯವಿಲ್ಲ. ವೈದ್ಯರ ಬಳಿ ಹೋದಾಗ ಎಲ್ಲ ಬಿಚ್ಚಿ ತೋರಿಸುತ್ತೇವೆ. ಹಾಗಿರುವಾಗ ಈ ವಿಚಾರ ಮಾತನಾಡಲು ಏತಕ್ಕೆ ಭಯ?” ಎಂದು ಕೇಳಿದ್ದರು.


ಇದನ್ನೂ ಓದಿರಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಮ್ಮ ಈ ಒಂದು ನಡೆಯಿಂದಾಗಿ ನಿಮ್ಮ ಙ್ಞಾನದ ಮೇಲಿದ್ದ ಗೌರವ ಸಂಪೂರ್ಣ ನಾಶವಾಗಿಹೋಯಿತು,ನಿಮ್ಮ ನಿಜ ಸ್ವರೂಪ ಬೆತ್ತಲಾಯಿತು,ತಿಪ್ಪೆಸಾರಿಸಿದರು ನಾತ ಕಡಿಮೆಯಾಗದು

  2. ಸಂಬಂಧವಿಲ್ಲದ ತುಚ್ಛ ಪದಗಳನ್ನ ಉಚ್ಚರಿಸಿ , ಹಿಜಾಬ್ ಮಹಿಳೆ ಯರಿಗೆ ಅಪಮಾನ ಮಾಡಿ,
    ನೂವು ಮಾಡಿ …
    ಈಗ ಸಮರ್ಥನೆ ಮಾಡಿಕೊಳ್ಳೂದು ಅಸಭ್ಯ,
    ತಪ್ಪು,..
    ನೃತಿಕವಾಗಿ ಕ್ಷಮೆಯಾಚಿಸ ಬೇಕು.

  3. ಕ್ಷಮೆ ಯಾಚಿಸುವಾಗಲೂ ನಾನು ಹೇಳಿದ್ದು ತಪ್ಪು ಎಂದಿಲ್ಲ. ತಮ್ಮ ಮಾತುಗಳನ್ನು ಕಣ್ಣನ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ವಿಷಯವನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ. ವೈದ್ಯರ ಹತ್ತಿರ ಬಿಚ್ಚುತ್ತೇವೆ ಎಂದರೆ ಸಾರ್ವಜನಿಕವಾಗಿ ಬಿಚ್ಚಲು ಸಾಧ್ಯವೇ? ಇದೊಂದು ಉಡಾಫೆಯ ನಡೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಓಲೈಕೆಯಾಗಿದೆ. ತಿದ್ದಿಕೊಳ್ಳಲು ಮುಂದಾಗದೇ ನಾನು ಹೇಳಿದ್ದು ಹಾಗಲ್ಲ ಹೀಗೆ ಎನ್ನುವವನು ನಿಜ ಮನುಷ್ಯನಾಗಲು ಸಾಧ್ಯವಿಲ್ಲ.
    ಈ. ಬಸವರಾಜು

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...