Homeಕರ್ನಾಟಕಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

ಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ’ ಎಂದು ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.

- Advertisement -
- Advertisement -

“ಹಾಸ್ಯಪ್ರಜ್ಞೆಯಿಂದ ಆಡಿದ ಮಾತು. ಯಾರೂ ಅನ್ಯಥಾ ಭಾವಿಸಬೇಡಿ” ಎಂದು ಹರಟೆ ಖ್ಯಾತಿಯ ಹಿರೇಮಗಳೂರು ಕಣ್ಣನ್‌ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನ ರಂಗಾಯಣದದ ಬಹುರೂಪಿ ನಾಟಕೋತ್ಸವದಲ್ಲಿ ಹಿಜಾಬ್‌ ಕುರಿತು ಕಣ್ಣನ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಅವರೀಗ ಸ್ಪಷ್ಟನೆ ನೀಡಿದ್ದಾರೆ.

‘ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮದಲ್ಲಿ ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ ಆಗಿದ್ದು, ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ಭಾವಿಸದಿರಲು ಕೋರುತ್ತೇನೆ’ ಎಂದು ಹಿರೇಮಗಳೂರು ಕಣ್ಣನ್‌ ಹೇಳಿದ್ದಾರೆ.

ಕಣ್ಣನ್‌ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದು, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ” ಎಂದು ತಿಳಿಸಿದ್ದಾರೆ.

‘ಕನ್ನಡ ಕಾವ್ಯಗಳಲ್ಲಿ ತಾಯಿ’ ವಿಷಯವನ್ನು ಕುರಿತ ನನ್ನ ಭಾಷಣದಲ್ಲಿನ ಅಂಶಗಳನ್ನು ಗಮನಿಸದೇ, ಕೊನೆಯಲ್ಲಿ ಹಾಸ್ಯದ ದೃಷ್ಟಿಯಿಂದ ಗ್ರಾಮ್ಯ ಭಾಷೆಯಲ್ಲಿ ಹೇಳಿದ ಮಾತುಗಳ ಆಧಾರದಲ್ಲಿ ನನ್ನ ವ್ಯಕ್ತಿತ್ವವನ್ನು ನಿರ್ಣಯಿಸಿ, ತಪ್ಪಾಗಿ ಬಿಂಬಿಸುತ್ತಿರುವುದು ಬೇಸರ ತಂದಿದೆ. ಈ ಪದ ಬಳಕೆಯ ಹಿಂದೆ ದುರುದ್ದೇಶವಾಗಲೀ ಬೇರೆಯವರ ಮನಸ್ಸನ್ನೂ ನೋಯಿಸುವ ಇಂಗಿತವಾಗಲೀ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ವಿವಾದ?

ಹಿರೇಮಗಳೂರು ಕಣ್ಣನ್ ಅವರು ಬಹುರೂಪಿ ನಾಟಕೋತ್ಸವದಲ್ಲಿ ಮಾತನಾಡುತ್ತಾ ಹಿಜಾಬ್‌ ನಿಷೇಧದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

“ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಶಾಲಾ, ಕಾಲೇಜುಗಳಿಂದ ಹಿಜಾಬ್ ಹೊರಟು ಹೋಗಿದೆ. ವಿದ್ಯಾರ್ಥಿಗಳು ಇನ್ನು ಮುಂದೆ ಶಾಲೆಗೆ ಬರುವಾಗ ‘ಮುಖ’ ಮುಚ್ಕೊಂಡು ಬಾರದೆ ……… ಮುಚ್ಕೊಂಡು ಬರಲಿ. ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಇಂದು ಮಳೆಯ ಸುಳಿವು ಇಲ್ಲ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಂದಿದ್ದಾನೆ ಅಂತ ಮಳೆಗೂ ಭಯ. ರಾಜ್ಯದಲ್ಲಿ ಹಿಜಾಬೇ ಹೊರಟು ಹೋಗಿದೆ, ಇನ್ನು ಮಳೆ ಯಾವ ಲೆಕ್ಕ. ಹೀಗಾಗಿ ಇನ್ನು ಮುಂದೆ ಶಾಲೆಗೆ ‘……’ ಮುಚ್ಕೊಂಡು ಬರಬೇಕು. ನನಗೆ ಈ ಮಾತು ಹೇಳಲು ಯಾವುದೇ ಭಯವಿಲ್ಲ. ವೈದ್ಯರ ಬಳಿ ಹೋದಾಗ ಎಲ್ಲ ಬಿಚ್ಚಿ ತೋರಿಸುತ್ತೇವೆ. ಹಾಗಿರುವಾಗ ಈ ವಿಚಾರ ಮಾತನಾಡಲು ಏತಕ್ಕೆ ಭಯ?” ಎಂದು ಕೇಳಿದ್ದರು.


ಇದನ್ನೂ ಓದಿರಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಮ್ಮ ಈ ಒಂದು ನಡೆಯಿಂದಾಗಿ ನಿಮ್ಮ ಙ್ಞಾನದ ಮೇಲಿದ್ದ ಗೌರವ ಸಂಪೂರ್ಣ ನಾಶವಾಗಿಹೋಯಿತು,ನಿಮ್ಮ ನಿಜ ಸ್ವರೂಪ ಬೆತ್ತಲಾಯಿತು,ತಿಪ್ಪೆಸಾರಿಸಿದರು ನಾತ ಕಡಿಮೆಯಾಗದು

  2. ಸಂಬಂಧವಿಲ್ಲದ ತುಚ್ಛ ಪದಗಳನ್ನ ಉಚ್ಚರಿಸಿ , ಹಿಜಾಬ್ ಮಹಿಳೆ ಯರಿಗೆ ಅಪಮಾನ ಮಾಡಿ,
    ನೂವು ಮಾಡಿ …
    ಈಗ ಸಮರ್ಥನೆ ಮಾಡಿಕೊಳ್ಳೂದು ಅಸಭ್ಯ,
    ತಪ್ಪು,..
    ನೃತಿಕವಾಗಿ ಕ್ಷಮೆಯಾಚಿಸ ಬೇಕು.

  3. ಕ್ಷಮೆ ಯಾಚಿಸುವಾಗಲೂ ನಾನು ಹೇಳಿದ್ದು ತಪ್ಪು ಎಂದಿಲ್ಲ. ತಮ್ಮ ಮಾತುಗಳನ್ನು ಕಣ್ಣನ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ವಿಷಯವನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ. ವೈದ್ಯರ ಹತ್ತಿರ ಬಿಚ್ಚುತ್ತೇವೆ ಎಂದರೆ ಸಾರ್ವಜನಿಕವಾಗಿ ಬಿಚ್ಚಲು ಸಾಧ್ಯವೇ? ಇದೊಂದು ಉಡಾಫೆಯ ನಡೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಓಲೈಕೆಯಾಗಿದೆ. ತಿದ್ದಿಕೊಳ್ಳಲು ಮುಂದಾಗದೇ ನಾನು ಹೇಳಿದ್ದು ಹಾಗಲ್ಲ ಹೀಗೆ ಎನ್ನುವವನು ನಿಜ ಮನುಷ್ಯನಾಗಲು ಸಾಧ್ಯವಿಲ್ಲ.
    ಈ. ಬಸವರಾಜು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...