Homeಕರ್ನಾಟಕಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

ಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ’ ಎಂದು ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.

- Advertisement -
- Advertisement -

“ಹಾಸ್ಯಪ್ರಜ್ಞೆಯಿಂದ ಆಡಿದ ಮಾತು. ಯಾರೂ ಅನ್ಯಥಾ ಭಾವಿಸಬೇಡಿ” ಎಂದು ಹರಟೆ ಖ್ಯಾತಿಯ ಹಿರೇಮಗಳೂರು ಕಣ್ಣನ್‌ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನ ರಂಗಾಯಣದದ ಬಹುರೂಪಿ ನಾಟಕೋತ್ಸವದಲ್ಲಿ ಹಿಜಾಬ್‌ ಕುರಿತು ಕಣ್ಣನ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಅವರೀಗ ಸ್ಪಷ್ಟನೆ ನೀಡಿದ್ದಾರೆ.

‘ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮದಲ್ಲಿ ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ ಆಗಿದ್ದು, ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ಭಾವಿಸದಿರಲು ಕೋರುತ್ತೇನೆ’ ಎಂದು ಹಿರೇಮಗಳೂರು ಕಣ್ಣನ್‌ ಹೇಳಿದ್ದಾರೆ.

ಕಣ್ಣನ್‌ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದು, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ” ಎಂದು ತಿಳಿಸಿದ್ದಾರೆ.

‘ಕನ್ನಡ ಕಾವ್ಯಗಳಲ್ಲಿ ತಾಯಿ’ ವಿಷಯವನ್ನು ಕುರಿತ ನನ್ನ ಭಾಷಣದಲ್ಲಿನ ಅಂಶಗಳನ್ನು ಗಮನಿಸದೇ, ಕೊನೆಯಲ್ಲಿ ಹಾಸ್ಯದ ದೃಷ್ಟಿಯಿಂದ ಗ್ರಾಮ್ಯ ಭಾಷೆಯಲ್ಲಿ ಹೇಳಿದ ಮಾತುಗಳ ಆಧಾರದಲ್ಲಿ ನನ್ನ ವ್ಯಕ್ತಿತ್ವವನ್ನು ನಿರ್ಣಯಿಸಿ, ತಪ್ಪಾಗಿ ಬಿಂಬಿಸುತ್ತಿರುವುದು ಬೇಸರ ತಂದಿದೆ. ಈ ಪದ ಬಳಕೆಯ ಹಿಂದೆ ದುರುದ್ದೇಶವಾಗಲೀ ಬೇರೆಯವರ ಮನಸ್ಸನ್ನೂ ನೋಯಿಸುವ ಇಂಗಿತವಾಗಲೀ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ವಿವಾದ?

ಹಿರೇಮಗಳೂರು ಕಣ್ಣನ್ ಅವರು ಬಹುರೂಪಿ ನಾಟಕೋತ್ಸವದಲ್ಲಿ ಮಾತನಾಡುತ್ತಾ ಹಿಜಾಬ್‌ ನಿಷೇಧದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

“ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಶಾಲಾ, ಕಾಲೇಜುಗಳಿಂದ ಹಿಜಾಬ್ ಹೊರಟು ಹೋಗಿದೆ. ವಿದ್ಯಾರ್ಥಿಗಳು ಇನ್ನು ಮುಂದೆ ಶಾಲೆಗೆ ಬರುವಾಗ ‘ಮುಖ’ ಮುಚ್ಕೊಂಡು ಬಾರದೆ ……… ಮುಚ್ಕೊಂಡು ಬರಲಿ. ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಇಂದು ಮಳೆಯ ಸುಳಿವು ಇಲ್ಲ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಂದಿದ್ದಾನೆ ಅಂತ ಮಳೆಗೂ ಭಯ. ರಾಜ್ಯದಲ್ಲಿ ಹಿಜಾಬೇ ಹೊರಟು ಹೋಗಿದೆ, ಇನ್ನು ಮಳೆ ಯಾವ ಲೆಕ್ಕ. ಹೀಗಾಗಿ ಇನ್ನು ಮುಂದೆ ಶಾಲೆಗೆ ‘……’ ಮುಚ್ಕೊಂಡು ಬರಬೇಕು. ನನಗೆ ಈ ಮಾತು ಹೇಳಲು ಯಾವುದೇ ಭಯವಿಲ್ಲ. ವೈದ್ಯರ ಬಳಿ ಹೋದಾಗ ಎಲ್ಲ ಬಿಚ್ಚಿ ತೋರಿಸುತ್ತೇವೆ. ಹಾಗಿರುವಾಗ ಈ ವಿಚಾರ ಮಾತನಾಡಲು ಏತಕ್ಕೆ ಭಯ?” ಎಂದು ಕೇಳಿದ್ದರು.


ಇದನ್ನೂ ಓದಿರಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಮ್ಮ ಈ ಒಂದು ನಡೆಯಿಂದಾಗಿ ನಿಮ್ಮ ಙ್ಞಾನದ ಮೇಲಿದ್ದ ಗೌರವ ಸಂಪೂರ್ಣ ನಾಶವಾಗಿಹೋಯಿತು,ನಿಮ್ಮ ನಿಜ ಸ್ವರೂಪ ಬೆತ್ತಲಾಯಿತು,ತಿಪ್ಪೆಸಾರಿಸಿದರು ನಾತ ಕಡಿಮೆಯಾಗದು

  2. ಸಂಬಂಧವಿಲ್ಲದ ತುಚ್ಛ ಪದಗಳನ್ನ ಉಚ್ಚರಿಸಿ , ಹಿಜಾಬ್ ಮಹಿಳೆ ಯರಿಗೆ ಅಪಮಾನ ಮಾಡಿ,
    ನೂವು ಮಾಡಿ …
    ಈಗ ಸಮರ್ಥನೆ ಮಾಡಿಕೊಳ್ಳೂದು ಅಸಭ್ಯ,
    ತಪ್ಪು,..
    ನೃತಿಕವಾಗಿ ಕ್ಷಮೆಯಾಚಿಸ ಬೇಕು.

  3. ಕ್ಷಮೆ ಯಾಚಿಸುವಾಗಲೂ ನಾನು ಹೇಳಿದ್ದು ತಪ್ಪು ಎಂದಿಲ್ಲ. ತಮ್ಮ ಮಾತುಗಳನ್ನು ಕಣ್ಣನ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ವಿಷಯವನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ. ವೈದ್ಯರ ಹತ್ತಿರ ಬಿಚ್ಚುತ್ತೇವೆ ಎಂದರೆ ಸಾರ್ವಜನಿಕವಾಗಿ ಬಿಚ್ಚಲು ಸಾಧ್ಯವೇ? ಇದೊಂದು ಉಡಾಫೆಯ ನಡೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಓಲೈಕೆಯಾಗಿದೆ. ತಿದ್ದಿಕೊಳ್ಳಲು ಮುಂದಾಗದೇ ನಾನು ಹೇಳಿದ್ದು ಹಾಗಲ್ಲ ಹೀಗೆ ಎನ್ನುವವನು ನಿಜ ಮನುಷ್ಯನಾಗಲು ಸಾಧ್ಯವಿಲ್ಲ.
    ಈ. ಬಸವರಾಜು

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...