Homeಕರ್ನಾಟಕಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

ಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ’ ಎಂದು ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.

- Advertisement -
- Advertisement -

“ಹಾಸ್ಯಪ್ರಜ್ಞೆಯಿಂದ ಆಡಿದ ಮಾತು. ಯಾರೂ ಅನ್ಯಥಾ ಭಾವಿಸಬೇಡಿ” ಎಂದು ಹರಟೆ ಖ್ಯಾತಿಯ ಹಿರೇಮಗಳೂರು ಕಣ್ಣನ್‌ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನ ರಂಗಾಯಣದದ ಬಹುರೂಪಿ ನಾಟಕೋತ್ಸವದಲ್ಲಿ ಹಿಜಾಬ್‌ ಕುರಿತು ಕಣ್ಣನ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಅವರೀಗ ಸ್ಪಷ್ಟನೆ ನೀಡಿದ್ದಾರೆ.

‘ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮದಲ್ಲಿ ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ ಆಗಿದ್ದು, ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ಭಾವಿಸದಿರಲು ಕೋರುತ್ತೇನೆ’ ಎಂದು ಹಿರೇಮಗಳೂರು ಕಣ್ಣನ್‌ ಹೇಳಿದ್ದಾರೆ.

ಕಣ್ಣನ್‌ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದು, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ” ಎಂದು ತಿಳಿಸಿದ್ದಾರೆ.

‘ಕನ್ನಡ ಕಾವ್ಯಗಳಲ್ಲಿ ತಾಯಿ’ ವಿಷಯವನ್ನು ಕುರಿತ ನನ್ನ ಭಾಷಣದಲ್ಲಿನ ಅಂಶಗಳನ್ನು ಗಮನಿಸದೇ, ಕೊನೆಯಲ್ಲಿ ಹಾಸ್ಯದ ದೃಷ್ಟಿಯಿಂದ ಗ್ರಾಮ್ಯ ಭಾಷೆಯಲ್ಲಿ ಹೇಳಿದ ಮಾತುಗಳ ಆಧಾರದಲ್ಲಿ ನನ್ನ ವ್ಯಕ್ತಿತ್ವವನ್ನು ನಿರ್ಣಯಿಸಿ, ತಪ್ಪಾಗಿ ಬಿಂಬಿಸುತ್ತಿರುವುದು ಬೇಸರ ತಂದಿದೆ. ಈ ಪದ ಬಳಕೆಯ ಹಿಂದೆ ದುರುದ್ದೇಶವಾಗಲೀ ಬೇರೆಯವರ ಮನಸ್ಸನ್ನೂ ನೋಯಿಸುವ ಇಂಗಿತವಾಗಲೀ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ವಿವಾದ?

ಹಿರೇಮಗಳೂರು ಕಣ್ಣನ್ ಅವರು ಬಹುರೂಪಿ ನಾಟಕೋತ್ಸವದಲ್ಲಿ ಮಾತನಾಡುತ್ತಾ ಹಿಜಾಬ್‌ ನಿಷೇಧದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

“ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಶಾಲಾ, ಕಾಲೇಜುಗಳಿಂದ ಹಿಜಾಬ್ ಹೊರಟು ಹೋಗಿದೆ. ವಿದ್ಯಾರ್ಥಿಗಳು ಇನ್ನು ಮುಂದೆ ಶಾಲೆಗೆ ಬರುವಾಗ ‘ಮುಖ’ ಮುಚ್ಕೊಂಡು ಬಾರದೆ ……… ಮುಚ್ಕೊಂಡು ಬರಲಿ. ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಇಂದು ಮಳೆಯ ಸುಳಿವು ಇಲ್ಲ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಂದಿದ್ದಾನೆ ಅಂತ ಮಳೆಗೂ ಭಯ. ರಾಜ್ಯದಲ್ಲಿ ಹಿಜಾಬೇ ಹೊರಟು ಹೋಗಿದೆ, ಇನ್ನು ಮಳೆ ಯಾವ ಲೆಕ್ಕ. ಹೀಗಾಗಿ ಇನ್ನು ಮುಂದೆ ಶಾಲೆಗೆ ‘……’ ಮುಚ್ಕೊಂಡು ಬರಬೇಕು. ನನಗೆ ಈ ಮಾತು ಹೇಳಲು ಯಾವುದೇ ಭಯವಿಲ್ಲ. ವೈದ್ಯರ ಬಳಿ ಹೋದಾಗ ಎಲ್ಲ ಬಿಚ್ಚಿ ತೋರಿಸುತ್ತೇವೆ. ಹಾಗಿರುವಾಗ ಈ ವಿಚಾರ ಮಾತನಾಡಲು ಏತಕ್ಕೆ ಭಯ?” ಎಂದು ಕೇಳಿದ್ದರು.


ಇದನ್ನೂ ಓದಿರಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಮ್ಮ ಈ ಒಂದು ನಡೆಯಿಂದಾಗಿ ನಿಮ್ಮ ಙ್ಞಾನದ ಮೇಲಿದ್ದ ಗೌರವ ಸಂಪೂರ್ಣ ನಾಶವಾಗಿಹೋಯಿತು,ನಿಮ್ಮ ನಿಜ ಸ್ವರೂಪ ಬೆತ್ತಲಾಯಿತು,ತಿಪ್ಪೆಸಾರಿಸಿದರು ನಾತ ಕಡಿಮೆಯಾಗದು

  2. ಸಂಬಂಧವಿಲ್ಲದ ತುಚ್ಛ ಪದಗಳನ್ನ ಉಚ್ಚರಿಸಿ , ಹಿಜಾಬ್ ಮಹಿಳೆ ಯರಿಗೆ ಅಪಮಾನ ಮಾಡಿ,
    ನೂವು ಮಾಡಿ …
    ಈಗ ಸಮರ್ಥನೆ ಮಾಡಿಕೊಳ್ಳೂದು ಅಸಭ್ಯ,
    ತಪ್ಪು,..
    ನೃತಿಕವಾಗಿ ಕ್ಷಮೆಯಾಚಿಸ ಬೇಕು.

  3. ಕ್ಷಮೆ ಯಾಚಿಸುವಾಗಲೂ ನಾನು ಹೇಳಿದ್ದು ತಪ್ಪು ಎಂದಿಲ್ಲ. ತಮ್ಮ ಮಾತುಗಳನ್ನು ಕಣ್ಣನ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ವಿಷಯವನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ. ವೈದ್ಯರ ಹತ್ತಿರ ಬಿಚ್ಚುತ್ತೇವೆ ಎಂದರೆ ಸಾರ್ವಜನಿಕವಾಗಿ ಬಿಚ್ಚಲು ಸಾಧ್ಯವೇ? ಇದೊಂದು ಉಡಾಫೆಯ ನಡೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಓಲೈಕೆಯಾಗಿದೆ. ತಿದ್ದಿಕೊಳ್ಳಲು ಮುಂದಾಗದೇ ನಾನು ಹೇಳಿದ್ದು ಹಾಗಲ್ಲ ಹೀಗೆ ಎನ್ನುವವನು ನಿಜ ಮನುಷ್ಯನಾಗಲು ಸಾಧ್ಯವಿಲ್ಲ.
    ಈ. ಬಸವರಾಜು

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...