Homeಮುಖಪುಟಜಾತಿ ತಾರತಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ: ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅಫಿಡವಿಟ್

ಜಾತಿ ತಾರತಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ: ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅಫಿಡವಿಟ್

- Advertisement -
- Advertisement -

ನನಗೆ ಎಲ್ಲಾ ಧರ್ಮಗಳ ಬಗ್ಗೆ ಅಪಾರ ಗೌರವ ಇದೆ. ಯಾವುದೇ ಧರ್ಮವನ್ನು ಅಗೌರವಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಜಾತಿ ತಾರಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ. ಜನರಿಗೆ ತಾರತಮ್ಯ ಮಾಡುವ ಧಾರ್ಮಿಕ ಆಚರಣೆಗಳಿಗೆ ಮಾತ್ರ ತಾವು ವಿರೋಧಿಸಿರುವುದಾಗಿ ತಮಿಳುನಾಡಿನ ಸಚಿವ ಉದಯ್‌ನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಮುನ್ನಾನಿ ಪದಾಧಿಕಾರಿಗಳು ತಮ್ಮ ವಿರುದ್ಧ ಸಲ್ಲಿಸಿರುವ ರಿಟ್ ಅರ್ಜಿಯ ವಿರುದ್ಧ ಉದಯನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ಗೆ ಪ್ರತಿ ಅಫಿಡವಿಟ್ ಸಲ್ಲಿಸಿದ್ದಾರೆ.

ಈ ಸಂಬಂಧ ಉದಯನಿಧಿ ಸ್ಟಾಲಿನ್ ಪರವಾಗಿ ಹಿರಿಯ ವಕೀಲ ಪಿ ವಿಲ್ಸನ್ ನ್ಯಾಯಮೂರ್ತಿ ಅನಿತಾ ಸುಮಂತ್ ಅವರ ಪೀಠದ ಮುಂದೆ ಅಫಿಡವಿಟ್ ಸಲ್ಲಿಸಿದ್ದಾರೆ.

ತಮ್ಮ ಅಫಿಡವಿಟ್‌ನಲ್ಲಿ ಎಲ್ಲಾ ಜಾತಿಗಳ ಸಮಾನತೆ ಬಗ್ಗೆ ಉಪದೇಶಿಸುವುದು ಮತ್ತು ತಾರತಮ್ಯ ನಿರ್ಮೂಲನೆ ಬಗ್ಗೆ ಹೇಳುವುದು ನಿಯಮದ ಉಲ್ಲಂಘನೆಯಲ್ಲ. ನನಗೆ ಎಲ್ಲಾ ಧರ್ಮಗಳ ಬಗ್ಗೆ ಅಪಾರ ಗೌರವವಿದೆ ಮತ್ತು ಯಾವುದೇ ಧರ್ಮವನ್ನು ಅಗೌರವಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಅದೇ ಸಮಯದಲ್ಲಿ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಪನಂಬಿಕೆಗಳು ಮತ್ತು ತಾರತಮ್ಯದ ಬಗ್ಗೆ ಮಾತನಾಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ಧದ ಅರ್ಜಿಯು ಕ್ಷುಲ್ಲಕ ಮತ್ತು ರಾಜಕೀಯ ಪ್ರೇರಿತವಾಗಿದೆ, ಪ್ರಚಾರದ ಸಲುವಾಗಿ ಅರ್ಜಿ ಸಲ್ಲಿಸಲಾಗಿದೆ. ದ್ರಾವಿಡ ಸಿದ್ಧಾಂತಕ್ಕೆ ವಿರುದ್ಧವಾದ ಒಂದು ನಿರ್ದಿಷ್ಟ ಸಿದ್ಧಾಂತವು ರಾಜಕೀಯ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಇತ್ಯರ್ಥಗೊಳಿಸಲು ನ್ಯಾಯಾಲಯದ ಪ್ರಕ್ರಿಯೆಯನ್ನು ಬಳಸಲು ಪ್ರಯತ್ನಿಸುತ್ತಿದೆ. ದ್ರಾವಿಡ ಸಿದ್ಧಾಂತವು ಸ್ವಾಭಿಮಾನ, ಸಮಾನತೆ, ತರ್ಕಬದ್ಧ ಚಿಂತನೆ ಮತ್ತು ಸಹೋದರತ್ವದ ಬಗ್ಗೆ ಮಾತನಾಡುತ್ತದೆ. ವಿರೋಧಿಸುವ ಪಂಗಡವು ಜಾತಿಯ ಆಧಾರದ ಮೇಲೆ ವಿಭಜನೆಯ ಬಗ್ಗೆ ಮಾತನಾಡುತ್ತಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಯಾವುದೇ ವ್ಯಕ್ತಿಯು ನಿರ್ದಿಷ್ಟ ವಿಷಯದ ಬಗ್ಗೆ ದೃಷ್ಟಿಕೋನವನ್ನು ಹೊಂದಿದ್ದಾನೆ ಎಂಬ ಕಾರಣಕ್ಕಾಗಿ ಯಾವುದೇ ವ್ಯಕ್ತಿಯನ್ನು ಸಚಿವ ಸ್ಥಾನದಿಂದ ಅನರ್ಹಗೊಳಿಸಲಾಗುವುದಿಲ್ಲ. ಅದು ನಾಗರಿಕನ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತದೆ ಎಂದು ಉದಯನಿಧಿ ಒತ್ತಿ ಹೇಳಿದರು.

ಜಾತಿ ಶ್ರೇಣೀಕರಣ ಸೇರಿದಂತೆ ಅತಾರ್ಕಿಕ ನಂಬಿಕೆಗಳ ದುಷ್ಪರಿಣಾಮಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ನಾಯಕರು, ರಾಜಕಾರಣಿಗಳು ಮತ್ತು ಸಮಾಜ ಸುಧಾರಕರಷ್ಟೇ ಅಲ್ಲದೆ ಎಲ್ಲರ ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಸನಾತನ ಧರ್ಮ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಅದನ್ನು ಡೆಂಗ್ಯೂ, ಮಲೇರಿಯಾದಂತೆ ನಿರ್ಮೂಲನೆ ಮಾಡಬೇಕು ಎಂದು ಕಳೆದ ತಿಂಗಳು ಸ್ಟಾಲಿನ್ ಹೇಳಿದ್ದರು. ನಂತರ ತಮಿಳುನಾಡು ಸರ್ಕಾರದ ಸಚಿವರಾದ ಉದಯನಿಧಿ ಸ್ಟಾಲಿನ್, ಎ ರಾಜಾ ಮತ್ತು ಇತರ 12 ಮಂದಿಗೆ ಈ ಕುರಿತು ನೋಟಿಸ್ ಜಾರಿ ಮಾಡಲಾಗಿತ್ತು.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...