Homeಮುಖಪುಟಜಾತಿ ತಾರತಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ: ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅಫಿಡವಿಟ್

ಜಾತಿ ತಾರತಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ: ಹೈಕೋರ್ಟ್‌ಗೆ ಉದಯನಿಧಿ ಸ್ಟಾಲಿನ್ ಅಫಿಡವಿಟ್

- Advertisement -
- Advertisement -

ನನಗೆ ಎಲ್ಲಾ ಧರ್ಮಗಳ ಬಗ್ಗೆ ಅಪಾರ ಗೌರವ ಇದೆ. ಯಾವುದೇ ಧರ್ಮವನ್ನು ಅಗೌರವಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಜಾತಿ ತಾರಮ್ಯದ ವಿರುದ್ಧ ಮಾತನಾಡುವುದು ಸಂವಿಧಾನ ಬಾಹಿರವಲ್ಲ. ಜನರಿಗೆ ತಾರತಮ್ಯ ಮಾಡುವ ಧಾರ್ಮಿಕ ಆಚರಣೆಗಳಿಗೆ ಮಾತ್ರ ತಾವು ವಿರೋಧಿಸಿರುವುದಾಗಿ ತಮಿಳುನಾಡಿನ ಸಚಿವ ಉದಯ್‌ನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಹಿಂದೂ ಮುನ್ನಾನಿ ಪದಾಧಿಕಾರಿಗಳು ತಮ್ಮ ವಿರುದ್ಧ ಸಲ್ಲಿಸಿರುವ ರಿಟ್ ಅರ್ಜಿಯ ವಿರುದ್ಧ ಉದಯನಿಧಿ ಸ್ಟಾಲಿನ್ ಮದ್ರಾಸ್ ಹೈಕೋರ್ಟ್‌ಗೆ ಪ್ರತಿ ಅಫಿಡವಿಟ್ ಸಲ್ಲಿಸಿದ್ದಾರೆ.

ಈ ಸಂಬಂಧ ಉದಯನಿಧಿ ಸ್ಟಾಲಿನ್ ಪರವಾಗಿ ಹಿರಿಯ ವಕೀಲ ಪಿ ವಿಲ್ಸನ್ ನ್ಯಾಯಮೂರ್ತಿ ಅನಿತಾ ಸುಮಂತ್ ಅವರ ಪೀಠದ ಮುಂದೆ ಅಫಿಡವಿಟ್ ಸಲ್ಲಿಸಿದ್ದಾರೆ.

ತಮ್ಮ ಅಫಿಡವಿಟ್‌ನಲ್ಲಿ ಎಲ್ಲಾ ಜಾತಿಗಳ ಸಮಾನತೆ ಬಗ್ಗೆ ಉಪದೇಶಿಸುವುದು ಮತ್ತು ತಾರತಮ್ಯ ನಿರ್ಮೂಲನೆ ಬಗ್ಗೆ ಹೇಳುವುದು ನಿಯಮದ ಉಲ್ಲಂಘನೆಯಲ್ಲ. ನನಗೆ ಎಲ್ಲಾ ಧರ್ಮಗಳ ಬಗ್ಗೆ ಅಪಾರ ಗೌರವವಿದೆ ಮತ್ತು ಯಾವುದೇ ಧರ್ಮವನ್ನು ಅಗೌರವಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಅದೇ ಸಮಯದಲ್ಲಿ ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಚಾಲ್ತಿಯಲ್ಲಿರುವ ಅಪನಂಬಿಕೆಗಳು ಮತ್ತು ತಾರತಮ್ಯದ ಬಗ್ಗೆ ಮಾತನಾಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದ್ದಾರೆ.

ತನ್ನ ವಿರುದ್ಧದ ಅರ್ಜಿಯು ಕ್ಷುಲ್ಲಕ ಮತ್ತು ರಾಜಕೀಯ ಪ್ರೇರಿತವಾಗಿದೆ, ಪ್ರಚಾರದ ಸಲುವಾಗಿ ಅರ್ಜಿ ಸಲ್ಲಿಸಲಾಗಿದೆ. ದ್ರಾವಿಡ ಸಿದ್ಧಾಂತಕ್ಕೆ ವಿರುದ್ಧವಾದ ಒಂದು ನಿರ್ದಿಷ್ಟ ಸಿದ್ಧಾಂತವು ರಾಜಕೀಯ ಮತ್ತು ಸಾಮಾಜಿಕ ಪ್ರಶ್ನೆಗಳನ್ನು ಇತ್ಯರ್ಥಗೊಳಿಸಲು ನ್ಯಾಯಾಲಯದ ಪ್ರಕ್ರಿಯೆಯನ್ನು ಬಳಸಲು ಪ್ರಯತ್ನಿಸುತ್ತಿದೆ. ದ್ರಾವಿಡ ಸಿದ್ಧಾಂತವು ಸ್ವಾಭಿಮಾನ, ಸಮಾನತೆ, ತರ್ಕಬದ್ಧ ಚಿಂತನೆ ಮತ್ತು ಸಹೋದರತ್ವದ ಬಗ್ಗೆ ಮಾತನಾಡುತ್ತದೆ. ವಿರೋಧಿಸುವ ಪಂಗಡವು ಜಾತಿಯ ಆಧಾರದ ಮೇಲೆ ವಿಭಜನೆಯ ಬಗ್ಗೆ ಮಾತನಾಡುತ್ತಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಯಾವುದೇ ವ್ಯಕ್ತಿಯು ನಿರ್ದಿಷ್ಟ ವಿಷಯದ ಬಗ್ಗೆ ದೃಷ್ಟಿಕೋನವನ್ನು ಹೊಂದಿದ್ದಾನೆ ಎಂಬ ಕಾರಣಕ್ಕಾಗಿ ಯಾವುದೇ ವ್ಯಕ್ತಿಯನ್ನು ಸಚಿವ ಸ್ಥಾನದಿಂದ ಅನರ್ಹಗೊಳಿಸಲಾಗುವುದಿಲ್ಲ. ಅದು ನಾಗರಿಕನ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತದೆ ಎಂದು ಉದಯನಿಧಿ ಒತ್ತಿ ಹೇಳಿದರು.

ಜಾತಿ ಶ್ರೇಣೀಕರಣ ಸೇರಿದಂತೆ ಅತಾರ್ಕಿಕ ನಂಬಿಕೆಗಳ ದುಷ್ಪರಿಣಾಮಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ನಾಯಕರು, ರಾಜಕಾರಣಿಗಳು ಮತ್ತು ಸಮಾಜ ಸುಧಾರಕರಷ್ಟೇ ಅಲ್ಲದೆ ಎಲ್ಲರ ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಸನಾತನ ಧರ್ಮ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಅದನ್ನು ಡೆಂಗ್ಯೂ, ಮಲೇರಿಯಾದಂತೆ ನಿರ್ಮೂಲನೆ ಮಾಡಬೇಕು ಎಂದು ಕಳೆದ ತಿಂಗಳು ಸ್ಟಾಲಿನ್ ಹೇಳಿದ್ದರು. ನಂತರ ತಮಿಳುನಾಡು ಸರ್ಕಾರದ ಸಚಿವರಾದ ಉದಯನಿಧಿ ಸ್ಟಾಲಿನ್, ಎ ರಾಜಾ ಮತ್ತು ಇತರ 12 ಮಂದಿಗೆ ಈ ಕುರಿತು ನೋಟಿಸ್ ಜಾರಿ ಮಾಡಲಾಗಿತ್ತು.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...