Homeಕರ್ನಾಟಕಯುಪಿ ಮಾದರಿ ಬಗ್ಗೆ ಕರ್ನಾಟಕದಲ್ಲಿ ಪ್ರಸ್ತಾಪಿಸುವುದೇ ಹಾಸ್ಯಾಸ್ಪದ: ಆದಿತ್ಯನಾಥ್ ಹೇಳಿಕೆಗೆ ಸಿದ್ದರಾಮಯ್ಯ ಲೇವಡಿ

ಯುಪಿ ಮಾದರಿ ಬಗ್ಗೆ ಕರ್ನಾಟಕದಲ್ಲಿ ಪ್ರಸ್ತಾಪಿಸುವುದೇ ಹಾಸ್ಯಾಸ್ಪದ: ಆದಿತ್ಯನಾಥ್ ಹೇಳಿಕೆಗೆ ಸಿದ್ದರಾಮಯ್ಯ ಲೇವಡಿ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಬಂದಿರುವ ಯೋಗಿ ಆದಿತ್ಯನಾಥ್‌ರವರು ಉತ್ತರ ಪ್ರದೇಶದ ಮಾದರಿ ಬಗ್ಗೆ ಕರ್ನಾಟಕದಲ್ಲಿ ಪ್ರಸ್ತಾಪಿಸಿರುವುದು ಹಾಸ್ಯಾಸ್ಪದ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

”ಕೇಂದ್ರ ಸರ್ಕಾರದ ದಾಖಲೆಗಳ ಪ್ರಕಾರ ಉತ್ತರಪ್ರದೇಶದಲ್ಲಿ ಆರು ವರ್ಷದ ಒಳಗಿನ ಮಕ್ಕಳ ಅನಿಮಿಯಾ ಪ್ರಮಾಣ 2016ರಲ್ಲಿ ಶೇ. 63.2 ರಷ್ಟಿತ್ತು. ಈಗ ಶೇ. 66.4 ಕ್ಕೆ ಹೆಚ್ಚಿಸಿ ಮಕ್ಕಳನ್ನು ರೋಗಗ್ರಸ್ತ ಮಾಡಿದ್ದು ಯೋಗಿ ಸಾಧನೆ. ಎಲ್ಲ ರಾಜ್ಯಗಳಲ್ಲಿ ಜನರ ಜೀವಿತಾವಧಿ ಹೆಚ್ಚುತ್ತಿದ್ದರೆ ಉತ್ತರಪ್ರದೇಶದಲ್ಲಿ ಕುಸಿಯುತ್ತಿರುವುದು ಮಾದರಿಯೇ?” ಎಂದು ಟೀಕಿಸಿದ್ದಾರೆ.

“ಅದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾದ ಬಳಿಕ  ಅಂತಹ ಗಮನಾರ್ಹವಾದ ಬದಲಾವಣೆಗಳೇನು ಆಗಿಲ್ಲ. ಉತ್ತರ ಪ್ರದೇಶದಲ್ಲಿನ ಬಡತನ, ನಿರುದ್ಯೋಗ, ಹಿಂಸಾಚಾರದಲ್ಲಿ ದೇಶದಲ್ಲಿಯೇ ಕುಖ್ಯಾತಿ ಪಡೆದಿರುವುದೇಕೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

2016ರಲ್ಲಿ ಉತ್ತರ ಪ್ರದೇಶದ ಮಹಿಳೆಯರ ಸರಾಸರಿ ಜೀವಿತಾವಧಿ 68.5 ವರ್ಷ ದಷ್ಟಿತ್ತು. 2019ರಲ್ಲಿ ಅದು ಶೇ.66.2 ವರ್ಷದಷ್ಟಕ್ಕೆ ಕುಸಿದಿದೆ. ಎಲ್ಲಾ ರಾಜ್ಯಗಳ ಜನರ ಜೀವಿತಾವಧಿ ಹೆಚ್ಚುತ್ತಿದ್ದರೆ ಉತ್ತರ ಪ್ರದೇಶದಲ್ಲಿ ಕುಸಿಯುತ್ತಿದೆ. ಇದೇ ಅಲ್ಲವೆ ಆದಿತ್ಯನಾಥ್ ಮಾದರಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ತಲಾವಾರು ವಿದ್ಯುತ್‌ ಲಭ್ಯತೆಯು ಕರ್ನಾಟಕದಲ್ಲಿ 1,184 ಕಿಲೋವ್ಯಾಟ್‌ಗಳಷ್ಟಿದ್ದರೆ, ಉತ್ತರ ಪ್ರದೇಶದಲ್ಲಿ ಕೇವಲ 642 ಕಿಲೋವ್ಯಾಟ್‌ಗಳಷ್ಟಿದೆ. ಆದಿತ್ಯನಾಥರು ಮುಖ್ಯಮಂತ್ರಿಯಾದ ಮೇಲೆ ಗಮನಾರ್ಹ ಬದಲಾವಣೆಯೇನೂ ಸಂಭವಿಸಿಲ್ಲ. ಅಭಿವೃದ್ಧಿಗೂ ವಿದ್ಯುತ್‌ ಬಳಕೆಗೂ ಸಂಬಂಧವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

2021ರ ದಾಖಲೆಗಳ ಪ್ರಕಾರ ಉತ್ತರ ಪ್ರದೇಶದಲ್ಲಿ 3,012 ತಜ್ಞ ವೈದ್ಯರ ಹುದ್ದೆಗಳು ಮಂಜೂರಾಗಿದ್ದರೆ, ಕೆಲಸ ಮಾಡುತ್ತಿರುವವರು ಕೇವಲ 872 ಜನ ಮಾತ್ರ. 2,030 ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಬೇಕಾದ ವೈದ್ಯರ 1,355 ಹುದ್ದೆಗಳು ಖಾಲಿ ಇವೆ. ಜನರ ಆರೋಗ್ಯ ಸುಧಾರಿಸದೆ ರಾಜ್ಯವನ್ನು ಅಭಿವೃದ್ಧಿ ಮಾಡುವುದು ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...