Homeಕರ್ನಾಟಕಮಧ್ಯಾಹ್ನ ಕಾರ್ಮಿಕ ಸಚಿವರ ಜೊತೆ ಸಭೆ : ಫ್ಯಾಕ್ಟರಿಗಳ ಲಾಕ್‌ಡೌನ್ ಬಹುತೇಕ ಖಚಿತ

ಮಧ್ಯಾಹ್ನ ಕಾರ್ಮಿಕ ಸಚಿವರ ಜೊತೆ ಸಭೆ : ಫ್ಯಾಕ್ಟರಿಗಳ ಲಾಕ್‌ಡೌನ್ ಬಹುತೇಕ ಖಚಿತ

- Advertisement -
- Advertisement -

ರಾಜ್ಯದಲ್ಲಿ ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಲಕ್ಷಣಗಳು ಗೋಚರಿಸತೊಡಗಿವೆ. ಕೊರೊನ ಪೀಡಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ.  ಕೊರೊನ ವ್ಯಾಪಕತೆ ಪಡೆಯುತ್ತಿರುವ ಪರಿಣಾಮ ಕಾರ್ಖಾನೆಗಳು, ಕಂಪನಿಗಳು ಮತ್ತು ಗಾರ್ಮೆಂಟ್ಸ್ ಗಳಿಗೆ ರಜೆ ನೀಡುವ ಸಂಬಂಧ ಸರ್ಕಾರ ಮಧ್ಯಾಹ್ನ 2.15ಕ್ಕೆ ಬೆಂಗಳೂರಿನ ಕೌಶಲ್ಯ ಭವನದಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಲಿದೆ.

ಈ ನಡುವೆ ಮಾರ್ಚ್‌ 19ರಂದು ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರು. ತದನಂತರ ಫ್ಯಾಕ್ಟರಿ ಮ್ಯಾನೇಜರ್‌ಗಳು ಒತ್ತಡ ತಂದು ರಜೆಯನ್ನು ರದ್ದುಗೊಳಿಸಿದ್ದರು.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!


ಪ್ರಮುಖ ಕೇಂದ್ರ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಟಿಯುಸಿ, ಎಐಯುಟಿಯುಸಿ ಸೇರಿದಂತೆ ಎಲ್ಲಾ ಕರ್ಮಿಕ ಸಂಘಟನೆಗಳ ಮುಖಂಡರು ಕಾರ್ಮಿಕ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ಕೌಶಲ್ಯ ಭವನದಲ್ಲಿ ಮಾತುಕತೆ ನಡೆಯಲಿದ್ದು ಇಡೀ ರಾಜ್ಯದ್ಯಾಂತ ಇರುವ ಎಲ್ಲಾ ಫ್ಯಾಕ್ಟರಿಗಳು, ಗಾರ್ಮೆಂಟ್ಸ್ ಗಳು ಲಾಕ್‌ಡೌನ್ ಆಗಲಿವೆ. ಮಾತುಕತೆಯ ವೇಳೆ ವೇತನ ಸಹಿತ ರಜೆ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಒತ್ತಾಯಿಸಲಿವೆ.

ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಬಸ್ ಗಳ ಸೇವೆ ಸ್ಥಗಿತಗೊಳಿಸಿದೆ.  ಅಂತರರಾಜ್ಯ ಬಸ್ ಗಳ ಸೇವೆ ರದ್ದುಪಡಿಸಲಾಗಿದೆ.. ಎಲ್ಲಾ ಹೋಟೆಲ್ ಗಳಲ್ಲೂ ಜನರು ಕೂರದಂತೆ ಛೇರ್ ಗಳನ್ನು ತೆಗೆದಿರಿಸಲಾಗಿದೆ. ಹೊಟೆಲ್ ಗಳಲ್ಲಿ ಸ್ವಚ್ಚತೆಗೆ ಆದ್ಯತೆ ವಹಿಸುವಂತೆ ಸೂಚಿಸಲಾಗಿದೆ. ಆರೋಗ್ಯಾಧಿಕಾರಿಗಳು ದಿನಕ್ಕೆ ಮೂರು ಬಾರಿ ಹೋಟೆಲ್ ಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಜನರು ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಹೋಟೆಲ್ ನ ಎಲ್ಲಾ ಸಿಬ್ಬಂದಿಯೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.

ಇದರ ನಡುವೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಐ.ಪಿ.ಸಿ ಸೆಕ್ಷನ್ 144ರಡಿ ನಾಲ್ಕು ಜನರಿಗಿಂತ ಹೆಚ್ಚು ಮಂದಿ ಸೇರದಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಹೀಗಾಗಿ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು ಕೊರೊನ ಹರಡುತ್ತಿರುವ ನಡುವೆಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ಕೂಡ ಭೀತಿಯಿಂದಲೇ ಕೆಲಸ ಮಾಡುತ್ತಿದ್ದು, ಅವರಿಗೂ ರಜೆ ನೀಡುವ ಬಗ್ಗೆ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು. ಕಾರ್ಮಿಕ ಸಂಘಟನೆಗಳು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವಂತೆ ಒತ್ತಾಯಿಸಲಿದ್ದು ಇದಕ್ಕೆ ಕಾರ್ಮಿಕ ಸಚಿವರು ಯಾವ ತೀರ್ಮಾನ ಕೈಗೊಳ್ಳುವರು ಎಂಬುದನ್ನು ಕಾದುನೋಡಬೇಕಾಗಿದೆ.

ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕರಿಗೂ ವೇತನಸಹಿತ ರಜೆ ನೀಡಬೇಕು. ಕಾರ್ಮಿಕರಿಗೆ ವೇತನ ನೀಡದೆ ರಜೆ ಕೊಟ್ಟರೆ ಅವರ ಜೀವನ ತುಂಬ ಕಷ್ಟಕರವಾಗುತ್ತದೆ. ಕಾರ್ಮಿಕರಿಗೆ ಬೇರೆ ದುಡಿಮೆ ಇಲ್ಲ. ಕಾರ್ಮಿಕರು ಪ್ರಾಣವನ್ನು ಪಣವಿಟ್ಟು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ವೇತನ ಸಹಿತ ರಜೆ ನೀಡಬೇಕು ಎಂದು ಕಾರ್ಮಿಕ ಮುಖಂಡರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...