Homeಕರ್ನಾಟಕಮಧ್ಯಾಹ್ನ ಕಾರ್ಮಿಕ ಸಚಿವರ ಜೊತೆ ಸಭೆ : ಫ್ಯಾಕ್ಟರಿಗಳ ಲಾಕ್‌ಡೌನ್ ಬಹುತೇಕ ಖಚಿತ

ಮಧ್ಯಾಹ್ನ ಕಾರ್ಮಿಕ ಸಚಿವರ ಜೊತೆ ಸಭೆ : ಫ್ಯಾಕ್ಟರಿಗಳ ಲಾಕ್‌ಡೌನ್ ಬಹುತೇಕ ಖಚಿತ

- Advertisement -
- Advertisement -

ರಾಜ್ಯದಲ್ಲಿ ಕೊರೊನ ವೈರಸ್ ವ್ಯಾಪಕವಾಗಿ ಹರಡುವ ಲಕ್ಷಣಗಳು ಗೋಚರಿಸತೊಡಗಿವೆ. ಕೊರೊನ ಪೀಡಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ.  ಕೊರೊನ ವ್ಯಾಪಕತೆ ಪಡೆಯುತ್ತಿರುವ ಪರಿಣಾಮ ಕಾರ್ಖಾನೆಗಳು, ಕಂಪನಿಗಳು ಮತ್ತು ಗಾರ್ಮೆಂಟ್ಸ್ ಗಳಿಗೆ ರಜೆ ನೀಡುವ ಸಂಬಂಧ ಸರ್ಕಾರ ಮಧ್ಯಾಹ್ನ 2.15ಕ್ಕೆ ಬೆಂಗಳೂರಿನ ಕೌಶಲ್ಯ ಭವನದಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಲಿದೆ.

ಈ ನಡುವೆ ಮಾರ್ಚ್‌ 19ರಂದು ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರು. ತದನಂತರ ಫ್ಯಾಕ್ಟರಿ ಮ್ಯಾನೇಜರ್‌ಗಳು ಒತ್ತಡ ತಂದು ರಜೆಯನ್ನು ರದ್ದುಗೊಳಿಸಿದ್ದರು.


ಇದನ್ನೂ ಓದಿ: ಕೊರೊನಾ ಮುನ್ನೆಚ್ಚರಿಕೆ: ಮಂಡ್ಯದ ಗಾರ್ಮೆಂಟ್ಸ್‌ಗಳಿಗೆ 10ದಿನ ರಜೆ ಘೋಷಿಸಿ, ಏಕಾಏಕಿ ಹಿಂಪಡೆದ ಜಿಲ್ಲಾಡಳಿತ!


ಪ್ರಮುಖ ಕೇಂದ್ರ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಟಿಯುಸಿ, ಎಐಯುಟಿಯುಸಿ ಸೇರಿದಂತೆ ಎಲ್ಲಾ ಕರ್ಮಿಕ ಸಂಘಟನೆಗಳ ಮುಖಂಡರು ಕಾರ್ಮಿಕ ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ಕೌಶಲ್ಯ ಭವನದಲ್ಲಿ ಮಾತುಕತೆ ನಡೆಯಲಿದ್ದು ಇಡೀ ರಾಜ್ಯದ್ಯಾಂತ ಇರುವ ಎಲ್ಲಾ ಫ್ಯಾಕ್ಟರಿಗಳು, ಗಾರ್ಮೆಂಟ್ಸ್ ಗಳು ಲಾಕ್‌ಡೌನ್ ಆಗಲಿವೆ. ಮಾತುಕತೆಯ ವೇಳೆ ವೇತನ ಸಹಿತ ರಜೆ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಒತ್ತಾಯಿಸಲಿವೆ.

ಈಗಾಗಲೇ ಸರ್ಕಾರಿ ಮತ್ತು ಖಾಸಗಿ ಬಸ್ ಗಳ ಸೇವೆ ಸ್ಥಗಿತಗೊಳಿಸಿದೆ.  ಅಂತರರಾಜ್ಯ ಬಸ್ ಗಳ ಸೇವೆ ರದ್ದುಪಡಿಸಲಾಗಿದೆ.. ಎಲ್ಲಾ ಹೋಟೆಲ್ ಗಳಲ್ಲೂ ಜನರು ಕೂರದಂತೆ ಛೇರ್ ಗಳನ್ನು ತೆಗೆದಿರಿಸಲಾಗಿದೆ. ಹೊಟೆಲ್ ಗಳಲ್ಲಿ ಸ್ವಚ್ಚತೆಗೆ ಆದ್ಯತೆ ವಹಿಸುವಂತೆ ಸೂಚಿಸಲಾಗಿದೆ. ಆರೋಗ್ಯಾಧಿಕಾರಿಗಳು ದಿನಕ್ಕೆ ಮೂರು ಬಾರಿ ಹೋಟೆಲ್ ಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಜನರು ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಹೋಟೆಲ್ ನ ಎಲ್ಲಾ ಸಿಬ್ಬಂದಿಯೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.

ಇದರ ನಡುವೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಐ.ಪಿ.ಸಿ ಸೆಕ್ಷನ್ 144ರಡಿ ನಾಲ್ಕು ಜನರಿಗಿಂತ ಹೆಚ್ಚು ಮಂದಿ ಸೇರದಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಹೀಗಾಗಿ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು ಕೊರೊನ ಹರಡುತ್ತಿರುವ ನಡುವೆಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ಕೂಡ ಭೀತಿಯಿಂದಲೇ ಕೆಲಸ ಮಾಡುತ್ತಿದ್ದು, ಅವರಿಗೂ ರಜೆ ನೀಡುವ ಬಗ್ಗೆ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗುವುದು. ಕಾರ್ಮಿಕ ಸಂಘಟನೆಗಳು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವಂತೆ ಒತ್ತಾಯಿಸಲಿದ್ದು ಇದಕ್ಕೆ ಕಾರ್ಮಿಕ ಸಚಿವರು ಯಾವ ತೀರ್ಮಾನ ಕೈಗೊಳ್ಳುವರು ಎಂಬುದನ್ನು ಕಾದುನೋಡಬೇಕಾಗಿದೆ.

ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕರಿಗೂ ವೇತನಸಹಿತ ರಜೆ ನೀಡಬೇಕು. ಕಾರ್ಮಿಕರಿಗೆ ವೇತನ ನೀಡದೆ ರಜೆ ಕೊಟ್ಟರೆ ಅವರ ಜೀವನ ತುಂಬ ಕಷ್ಟಕರವಾಗುತ್ತದೆ. ಕಾರ್ಮಿಕರಿಗೆ ಬೇರೆ ದುಡಿಮೆ ಇಲ್ಲ. ಕಾರ್ಮಿಕರು ಪ್ರಾಣವನ್ನು ಪಣವಿಟ್ಟು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ವೇತನ ಸಹಿತ ರಜೆ ನೀಡಬೇಕು ಎಂದು ಕಾರ್ಮಿಕ ಮುಖಂಡರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...