Homeಮುಖಪುಟಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ: ಪ್ರಧಾನಿ ಮೋದಿ

ಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ: ಪ್ರಧಾನಿ ಮೋದಿ

- Advertisement -
- Advertisement -

ಭಾರತವು ಭಯೋತ್ಪಾದನೆ ವಿಷಯದಲ್ಲಿ ಶೂನ್ಯ ಸಹಿಷ್ಣುತೆ ಹೊಂದಿದೆ. ಪರಮಾಣು ಬೆದರಿಕೆಗೆ ಬಗ್ಗುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ಮತ್ತು ಅದರ ನಂತರದ ಬೆಳವಣಿಗೆಗಳ ನಡುವೆ ಮೊದಲ ಬಾರಿಗೆ ಸೋಮವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತವು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ವಿಷಯಗಳ ಕುರಿತು ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುತ್ತದೆ” ಎಂದಿದ್ದಾರೆ.

‘ಆಪರೇಷನ್ ಸಿಂಧೂರ’ವನ್ನು ಭಯೋತ್ಪಾದನೆಯ ವಿರುದ್ಧದ ಭಾರತದ ಹೊಸ ಅಧಿಕೃತ ನೀತಿ ಎಂದು ಹೇಳಿದ ಮೋದಿ, ಆ ಕಾರ್ಯಾಚರಣೆಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆಯೇ ಹೊರತು, ಕೊನೆಗೊಳಿಸಿಲ್ಲ ಎಂದು ತಿಳಿಸಿದ್ದಾರೆ.

ಭವಿಷ್ಯದಲ್ಲಿ ಭಯೋತ್ಪಾದಕ ದಾಳಿಗಳು ಮತ್ತು ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ಭರವಸೆಯನ್ನು ಪಾಕಿಸ್ತಾನ ಉಳಿಸಿಕೊಳ್ಳುತ್ತದೆಯೇ ಎಂಬುವುದನ್ನು ಭಾರತ ಗಮನಿಸಲಿದೆ ಎಂದು ಪ್ರಧಾನಿ ಒತ್ತಿ ಹೇಳಿದ್ದಾರೆ.

ಭಾರತವು ಇನ್ನು ಮುಂದೆ ಭಯೋತ್ಪಾದಕ ನಾಯಕರು ಮತ್ತು ಅವರಿಗೆ ಆಶ್ರಯ ನೀಡುವ ಸರ್ಕಾರಗಳನ್ನು ಪ್ರತ್ಯೇಕ ಘಟಕಗಳಾಗಿ ನೋಡುವುದಿಲ್ಲ. ಇದು ಯುದ್ಧದ ಯುಗವಲ್ಲ, ಹಾಗಂತ ಭಯೋತ್ಪಾದನೆಯ ಯುಗವೂ ಅಲ್ಲ ಎಂದಿದ್ದಾರೆ.

ಭಾರತದ ನಿಲುವು ಬಹಳ ಸ್ಪಷ್ಟವಾಗಿದೆ. ಭಯೋತ್ಪಾದನೆ ಮತ್ತು ದ್ವಿಪಕ್ಷೀಯ ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ; ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ನಡೆಸಲು ಸಾಧ್ಯವಿಲ್ಲ, ಹಾಗೆಯೇ ನೀರು ಮತ್ತು ರಕ್ತ ಕೂಡ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ, ಪ್ರಧಾನಿ ತಮ್ಮ ಭಾಷಣದಲ್ಲಿ ಸಿಂಧೂ ಜಲ ಒಪ್ಪಂದದ ರದ್ದತಿಯನ್ನು ಉಲ್ಲೇಖಿಸಿದ್ದಾರೆ.

ಕದನ ವಿರಾಮಕ್ಕೆ ಮುಂದಾದದ್ದು ಪಾಕಿಸ್ತಾನ. ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳನ್ನು ನಾಶಮಾಡುವಲ್ಲಿ ಯಶಸ್ವಿಯಾದ ನಂತರವೇ ಭಾರತ ಕದನ ವಿರಾಮಕ್ಕೆ ಒಪ್ಪಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಭಯೋತ್ಪಾದಕರು ನಮ್ಮ ಸಹೋದರಿಯರ ಹಣೆಯ ಸಿಂಧೂರ ಅಳಿಸುವ ಧೈರ್ಯ ಮಾಡಿದರು. ಅದಕ್ಕಾಗಿಯೇ ಭಾರತ ಪಾಕಿಸ್ತಾನದಲ್ಲಿರುವ ಭಯೋತ್ಪಾದನೆ ಕೇಂದ್ರಗಳನ್ನು ನಾಶಪಡಿಸಿತು ಎಂದಿದ್ದಾರೆ.

‘ಆಪರೇಷನ್ ಸಿಂಧೂರ’ ಪಾಕಿಸ್ತಾನದಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿ, ಅಲ್ಲಿನ ನಾಯಕರನ್ನು ನಿರಾಶೆಗೊಳಿಸಿದೆ. ಭಯೋತ್ಪಾದನೆಯ ವಿರುದ್ಧದ ಭಾರತದ ಹೋರಾಟವನ್ನು ಬೆಂಬಲಿಸುವ ಬದಲು, ಪಾಕಿಸ್ತಾನವು ನಮ್ಮ ಧಾರ್ಮಿಕ ಸ್ಥಳಗಳು, ಶಾಲೆಗಳು, ನಾಗರಿಕರು ಮತ್ತು ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ ಎಂದು ಮೋದಿ ಹೇಳಿದ್ದಾರೆ.

ಭಾರತದ ಮುಂದುವರಿದ, ಬಲಿಷ್ಠ ರಕ್ಷಣಾ ವ್ಯವಸ್ಥೆಗಳು ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಸುಲಭವಾಗಿ ತಟಸ್ಥಗೊಳಿಸುವುದನ್ನು ಜಗತ್ತು ನೋಡುತ್ತಿದೆ. ಪಾಕಿಸ್ತಾನ ಭಾರತದ ಗಡಿಗಳನ್ನು ಗುರಿಯಾಗಿಸಿಕೊಂಡಿದ್ದರೂ, ಭಾರತವು ಕಾರ್ಯತಂತ್ರದಿಂದ ಪ್ರತಿಕ್ರಿಯಿಸಿದೆ. ಅವರ ಪ್ರಮುಖ ಮೂಲಸೌಕರ್ಯಕ್ಕೆ ನಿಖರವಾದ ಹೊಡೆತ ನೀಡಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಪ್ರಧಾನಿ, ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವ ರೀತಿ ಒಂದು ದಿನ ಆ ರಾಷ್ಟ್ರವನ್ನೇ ನಾಶಪಡಿಸುತ್ತದೆ. ಪಾಕಿಸ್ತಾನ ಬದುಕುಳಿಯಲು ಬಯಸಿದರೆ, ಅದು ತನ್ನಲ್ಲಿರುವ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದ್ದಾರೆ.

ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಭಾರತ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಬಹಾವಲ್ಪುರ್ ಮತ್ತು ಮುರಿಡ್ಕೆ ಮೂಲದ ಭಯೋತ್ಪಾದಕರ ನೆಲೆಗಳು ಭಯೋತ್ಪಾದನೆಯ ವಿಶ್ವವಿದ್ಯಾಲಯಗಳಾಗಿ ಅಭಿವೃದ್ಧಿ ಹೊಂದುತ್ತಿದ್ದರಿಂದ ಅವುಗಳನ್ನು ನಾಶಪಡಿಸಲಾಗಿದೆ. ಈ ಸ್ಥಳಗಳು ಅಮೆರಿಕದ 9/11ರ ದಾಳಿಗಳು, ಲಂಡನ್ ಟ್ಯೂಬ್ ಬಾಂಬ್ ದಾಳಿಗಳು ಮತ್ತು ಭಾರತದಲ್ಲಿ ದಶಕಗಳಿಂದ ನಡೆದ ಭಯೋತ್ಪಾದಕ ಘಟನೆಗಳು ಸೇರಿದಂತೆ ವಿಶ್ವದ ಪ್ರಮುಖ ಭಯೋತ್ಪಾದಕ ದಾಳಿಗಳೊಂದಿಗೆ ಸಂಬಂಧ ಹೊಂದಿವೆ ಎಂದು ಪ್ರಧಾನಿ ವಿವರಿಸಿದ್ದಾರೆ.

‘ಶಾಂತಿ’ ಗಾಗಿ ‘ಶಕ್ತಿ’ಯ ಬಳಕೆಯನ್ನು ಒತ್ತಿ ಹೇಳಿದ ಪ್ರಧಾನಿ, ಭಾರತ ಅದನ್ನು ಅನುಸರಿಸುತ್ತದೆ; ಆದಾಗ್ಯೂ, ಕೆಲವೊಮ್ಮೆ ಶಾಂತಿಗಾಗಿಯೂ ಶಕ್ತಿಯನ್ನು ಬಳಸಬೇಕಾಗುತ್ತದೆ ಎಂದಿದ್ದಾರೆ.

ಆಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನಕ್ಕೆ ಉಂಟಾದ ಭಾರಿ ಹಾನಿಯನ್ನು ದೃಢಪಡಿಸಿದ ಪ್ರಧಾನಿ, ಭಾರತವು ಭಯೋತ್ಪಾದಕರ ಭದ್ರಕೋಟೆಗಳನ್ನು ನಾಶಮಾಡಿದೆ. ಇದರಿಂದಾಗಿ ಪಾಕಿಸ್ತಾನವು ತನ್ನ ಕಡೆಯಿಂದ ಯಾವುದೇ ಭಯೋತ್ಪಾದಕ ಚಟುವಟಿಕೆಗಳು ಅಥವಾ ಮಿಲಿಟರಿ ಕಾರ್ಯಾಚರಣೆಗಳು ನಡೆಯುವುದಿಲ್ಲ ಎಂದು ಭರವಸೆ ನೀಡಬೇಕಾಯಿತು ಎಂದು ತಿಳಿಸಿದ್ದಾರೆ.

ಎಚ್ಚರಿಕೆಯಿಂದ ಪಾಕಿಸ್ತಾನದ ಭಯೋತ್ಪಾದಕರ ಕೇಂದ್ರಗಳು ಮತ್ತು ಮಿಲಿಟರಿ ನೆಲೆಗಳ ವಿರುದ್ಧದ ನಮ್ಮ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಾವು ನಿರ್ಧರಿಸಿದ್ದೇವೆ. ಆದಾಗ್ಯೂ, ನಾವು ಜಾಗರೂಕರಾಗಿರುತ್ತೇವೆ. ಭವಿಷ್ಯದಲ್ಲಿಯೂ ಸಹ ಅವರ ಕ್ರಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದೇಶ ಒಗ್ಗಟ್ಟಿನಿಂದ ಇರಬೇಕೆಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ಸಶಸ್ತ್ರ ಪಡೆಗಳು, ಅರೆಸೈನಿಕ ಪಡೆಗಳು, ಬಿಎಸ್‌ಎಫ್, ಗುಪ್ತಚರ ಸಂಸ್ಥೆಗಳು ಮತ್ತು ನಾಗರಿಕರು ಒಟ್ಟಾಗಿ ನಿಂತಿದ್ದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

ಭಯೋತ್ಪಾದಕ ಸಂಘಟನೆಗಳಿಗೆ ಎಚ್ಚರಿಕೆ ನೀಡಿದ ಪ್ರಧಾನಿ, ದೇಶದ ಮಹಿಳೆಯರ ಘನತೆಗೆ ಹಾನಿ ಮಾಡಲು ಪ್ರಯತ್ನಿಸಿದ್ದರ ಪರಿಣಾಮಗಳನ್ನು ಎಲ್ಲಾ ಭಯೋತ್ಪಾದಕ ಸಂಘಟನೆಗಳು ಈಗ ಸಂಪೂರ್ಣವಾಗಿ ಅರ್ಥಮಾಡಿಕೊಂಡಿವೆ ಎಂದು ಹೇಳಿದ್ದಾರೆ.

‘ಆಪರೇಷನ್ ಸಿಂಧೂರ’ ಕೇವಲ ಹೆಸರಲ್ಲ, ಬದಲಾಗಿ ಲಕ್ಷಾಂತರ ಭಾರತೀಯರ ಭಾವನೆಗಳ ಪ್ರತಿಬಿಂಬವಾಗಿದೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ನಂತರ ಭಾರತ ಇಷ್ಟೊಂದು ದಿಟ್ಟ ಕ್ರಮ ಕೈಗೊಳ್ಳುತ್ತದೆ ಎಂದು ಭಯೋತ್ಪಾದಕರು ಎಂದಿಗೂ ಊಹಿಸಿರಲಿಲ್ಲ ಎಂದಿದ್ದಾರೆ.

ಒಂದು ರಾಷ್ಟ್ರವು ‘ರಾಷ್ಟ್ರ ಮೊದಲು’ ಎಂಬ ತತ್ವವನ್ನು ಮಾರ್ಗದರ್ಶಿ ಸೂತ್ರವಾಗಿಟ್ಟುಕೊಂಡು ಒಗ್ಗಟ್ಟಿನಿಂದ ನಿಂತಾಗ, ಅದು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಪ್ರಭಾವಶಾಲಿ ಫಲಿತಾಂಶಗಳನ್ನು ಪಡೆಯುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.

ಭಾರತವನ್ನು ಗುರಿಯಾಗಿಸುವ ಪ್ರಯತ್ನ ನಡೆದಾಗಲೆಲ್ಲಾ, ಭಾರತ ತನ್ನದೇ ಆದ ಕ್ರಮಗಳ ಮೂಲಕ ಭಯೋತ್ಪಾದಕ ನೆಲೆಗಳನ್ನು ಬೇರು ಸಹಿತ ಕಿತ್ತು ಹಾಕಿ ಪ್ರತೀಕಾರ ತೀರಿಸಿಕೊಂಡಿವೆ ಎಂದಿದ್ದಾರೆ.

ಅವಿವೇಕಿಗಳು ಯುದ್ಧಕ್ಕಾಗಿ ಪ್ರೇರೇಪಿಸಿದರೂ ನಾವು ಅದನ್ನು ಬೆಂಬಲಿಸಬಾರದು: ಜನರಲ್ ಮನೋಜ್ ನರವಾಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...