Homeಮುಖಪುಟಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗದಳ ಸದಸ್ಯರ ವಿರುದ್ಧ ದೂರು

- Advertisement -
- Advertisement -

ಬೆಳಗಾವಿಯಲ್ಲಿ ಬಜರಂಗದಳದ ಸದಸ್ಯರು ತಲವಾರ್‌ ಪ್ರದರ್ಶನ ಮಾಡುತ್ತಾ ನವರಾತ್ರಿ ಮೆರವಣಿಗೆ ನಡೆಸಿದ್ದು ಕಾನೂನು ಬಾಹಿರ ಕೃತ್ಯವಾಗಿದೆ ಎಂದು ಆರೋಪಿಸಿಸಿರುವ ಆಲ್‌ ಇಂಡಿಯಾ ಲಾಯರ್ಸ್ ‌ಅಸೋಸಿಯೇಷನ್‌ ಫಾರ್‌ ಜಸ್ಟೀಸ್ಸ್ ಸಂಘಟನೆಯು ಬಜರಂಗದಳದ ವಿರುದ್ಧ ಡಿಜಿಪಿಯವರಿಗೆ ದೂರು ಸಲ್ಲಿಸಿದೆ.

ಇಂತಹ ಘಟನೆಗಳಿಂದ ರಾಜ್ಯದಲ್ಲಿ ಮತೀಯ ಗೂಂಡಾಗಿರಿ ಘಟನೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಮೆರವಣಿಗೆಯಲ್ಲಿ ತಲವಾರ್‌ ಪ್ರದರ್ಶಿಸಿದ ಬಜರಂಗದಳದ ಸದಸ್ಯರ ಮೇಲೆ ಕ್ರಿಮಿನಲ್‌ ಕೇಸು ದಾಖಲಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇಂತಹ ಮತೀಯ ಗೂಂಡಾಗಿರಿ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೆ ಬೆಳಗಾವಿಯಲ್ಲಿ ತನ್ನ ಸ್ನೇಹಿತೆಯೊಟ್ಟಿಗೆ ಪಾರ್ಕಿಗೆ ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬೆಂಗಳೂರಿನಲ್ಲಿ ಮುಸ್ಲಿಂ ಮಹಿಳಾ ಸಹೋದ್ಯೋಗಿಯನ್ನು ಮನೆಗೆ ಡ್ರಾಪ್ ಮಾಡುತ್ತಿದ್ದ ವೇಳೆ ಅವರಿಬ್ಬರ ಮೇಲೆ ಮತೀಯಾ ಗೂಂಡಾಗಳು ದಾಳಿ ಮಾಡಿದ್ದರು. ಮಂಡ್ಯದಲ್ಲಿಯೂ ಕೂಡ ಇಂತಹದೇ ಘಟನೆ ನಡೆದಿತ್ತು. ನಿನ್ನೆ ಮಂಗಳೂರಿನಲ್ಲಿ ಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ನಡೆದಿದೆ.

ಇನ್ನು ಇಂತಹ ಘಟನೆಗಳಾಗದಂತೆ ಜಾಗೃತವಹಿಸಬೇಕಿದ್ದ ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಸಹ ಇಂತಹ ಘಟನೆಗಳನ್ನು, ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿಕೊಳ್ಳುತ್ತಲೇ ಬರುತ್ತಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಕಳೆದ ವಾರವಷ್ಟೇ ‘ಕರ್ನಾಟಕದಲ್ಲಿ ಮಾರೆಲ್ ಪೊಲೀಸಿಂಗ್ ಘಟನೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಮತೀಯ ಗೂಂಡಾಗಿರಿ ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಲ್ ಇಂಡಿಯಾ ಲಾಯರ್ಸ್ ಅಸೋಷಿಯೇಶನ್ ಫಾಸ್ ಜಸ್ಟೀಸ್ ಸಂಘಟನೆ ನೋಟೀಸ್ ನೀಡಿದೆ.


ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...