Homeದಲಿತ್ ಫೈಲ್ಸ್ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

- Advertisement -
- Advertisement -

ದಲಿತ ಕುಟುಂಬವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಿದ ಆರೋಪದ ಮೇಲೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಗೌಥೋಜಿಗುಡ ಗ್ರಾಮದ ಪಂಚಾಯತ್ ಸದಸ್ಯರು ಸೇರಿದಂತೆ 19 ಜನರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. 35 ವರ್ಷಗಳಿಂದ ಗ್ರಾಮದಲ್ಲಿ ವಾಸಿಸುತ್ತಿರುವ ಕುಟುಂಬವು ತಮಟೆ ಬಡಿಯುವ ಆಚರಣೆಯನ್ನು ನಿಲ್ಲಿಸಲು ನಿರ್ಧರಿಸಿತ್ತು. ಇದಕ್ಕೆ ಗ್ರಾಮದ ಹಿರಿಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 10 ರಂದು ದಲಿತ ಕುಟುಂಬದ ಮೇಲೆ ಬಹಿಷ್ಕಾರ ಜಾರಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಂಪ್ರದಾಯಿಕವಾಗಿ, ತೆಲಂಗಾಣದ ಮಾದಿಗ ಸಮುದಾಯದ ಜನರು ಅಂತ್ಯಕ್ರಿಯೆಗಳು ಮತ್ತು ಇತರ ಹಳ್ಳಿ ಹಬ್ಬಗಳಲ್ಲಿ ತಮಟೆ ಬಡಿಯುವುದನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಾಮಾನ್ಯವಾಗಿ ಮೇಲ್ಜಾತಿ ಸಮುದಾಯಗಳು ಮುಟ್ಟದ ಸಾಂಪ್ರದಾಯಿಕ ತಮಟೆ ಬಡಿಯುವುದನ್ನು ಈ ಸಮಾರಂಭಗಳ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗುತ್ತದೆ. ಗ್ರಾಮೀಣ ತೆಲಂಗಾಣದ ಕೆಲವು ಭಾಗಗಳಲ್ಲಿ ಈ ಪದ್ಧತಿ ಇನ್ನೂ ಮುಂದುವರಿದಿದ್ದರೂ, ಮಾದಿಗ ಸಮುದಾಯದ ಅನೇಕರು ಈಗ ಹಳೆಯ ಆಚರಣೆಯಿಂದ ಹೊರಬರುತ್ತಿದೆ.

ಇದನ್ನೂಓದಿ: ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ

“ಅವರು ನಮ್ಮನ್ನು ಬಹಿಷ್ಕರಿಸಿದ್ದಲ್ಲದೆ, ನಮ್ಮ ಸಹವಾಸ ಮಾಡದಂತೆ ಗ್ರಾಮದ ಇತರರಿಗೆ ಎಚ್ಚರಿಕೆ ನೀಡಿದರು. ಒಂದು ವೇಳೆ ಸಹವಾಸ ಮಾಡಿದರೆ ಅವರಿಗೆ ರೂ 5,000 ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂಕಾಂ ಪದವಿಯನ್ನು ಹೊಂದಿರುವ, ಮೇಡ್ಚಲ್‌ನ ಪ್ರಮುಖ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಪಂಚಮಿ ಚಂದ್ರಮ್ ಆರೋಪಿಸಿದ್ದಾರೆ.

2015 ರಲ್ಲಿ ನಿಧನರಾದ ಪಂಚಮಿ ಶಂಕರಯ್ಯ ಅವರ ಪುತ್ರರಾದ ಪಂಚಮಿ ಚಂದ್ರಮ್ ಮತ್ತು ಪಂಚಮಿ ಅರ್ಜುನ್ ಅವರು ತಮಟೆ ಸಂಸ್ಕೃತಿಯಿಂದ ದೂರವಾಗಲು ಪ್ರಾರಂಭಿಸಿದ್ದರು. ಅವರ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಮದುವೆಯಾಗಿ ದೂರರ ಊರಿನಲ್ಲಿ ವಾಸವಾಗಿದ್ದಾರೆ. ಪಂಚಮಿ ಅರ್ಜುನ್ ಅವರು ಜೆಎನ್‌ಟಿಯು ಹೈದರಾಬಾದ್‌ನಲ್ಲಿ ಸಾವಯವ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಮಾಡಿದ್ದಾರೆ.

ತಮ್ಮ ಮೇಲೆ ಊರಿನ ಜನರು ಹೇರಿದ ಬಹಿಷ್ಕಾರವನ್ನು ನೆನಪಿಸಿಕೊಂಡ ಅರ್ಜುನ್, ಕುಟುಂಬವು 15 ದಿನಗಳವರೆಗೆ ನೀರಿಲ್ಲದೆ ಪರದಾಡಬೇಕಾಯಿತು. ಸ್ಥಳೀಯ ದಿನಸಿ ಅಂಗಡಿಯವರು ಪಡಿತರ ಖರೀದಿಸಲು ಕೂಡಾ ಅವಕಾಶ ನಿರಾಕರಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರ ಚುನಾವಣೆ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು | ಒಮರ್ ಅಬ್ದುಲ್ಲಾ ಆಕ್ರೋಶ

ಅರ್ಜುನ್ ಅವರ ತಾಯಿ ಪಿ ನರಸಮ್ಮ ಮಾತನಾಡಿ, “ನಾವು ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಲು ಹತ್ತಿರದ ಪಟ್ಟಣಗಳಿಗೆ ಹೋಗಬೇಕಾಗಿತ್ತು. ಇದು ಕೆಟ್ಟ ವಿಚಾರ, ಕಳೆದ ಮೂರು ದಶಕಗಳಿಂದ ನಮಗೆ ತಿಳಿದಿರುವ ಪ್ರತಿಯೊಬ್ಬರೂ ನಮ್ಮೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡರು” ಎಂದು ಹೇಳಿದ್ದಾರೆ.

ಆದರೆ ಗ್ರಾಮದಲ್ಲಿ ಉದ್ವಿಗ್ನತೆಯ ನಡುವೆಯೂ ಸಹೋದರರು ತಮ್ಮ ಊರಿನಲ್ಲೆ ಉಳಿದಿದ್ದರು. “ಸಮಯದ ಜೊತೆಗೆ ನಾವು ಈ ಆಚರಣೆಯಿಂದ ದೂರ ಸರಿದಿದ್ದೇವೆ. ಯಾಕೆಂದರೆ, ತಮಟೆ ಹೊಡೆಯುವುದು ಕೀಳು ಎಂದು ನಾವು ಭಾವಿಸುತ್ತೇವೆ. ಇಂದಿನ ದಿನ ನಮಗೆ ಕಾರ್ಪೊರೇಟ್ ಜಗತ್ತಿನಲ್ಲಿ ಉದ್ಯೋಗಗಳು ಇದ್ದಾಗ, ಇದು ಅತ್ಯಂತ ಅನ್ಯಾಯದ ಕೆಲಸವಾಗಿದೆ” ಎಂದು ಅರ್ಜುನ್ ಹೇಳಿದ್ದಾರೆ. ಅರ್ಜುನ್ ಅವರು ಮೇಡ್ಚಲ್‌ನ ಕಂಪನಿಯೊಂದರಲ್ಲಿ ರಸಾಯನಶಾಸ್ತ್ರಜ್ಞನಾಗಿ ಉದ್ಯೋಗಿಯಾಗಿದ್ದಾರೆ.

ಮುದಿರಾಜ್ ಸಮುದಾಯದ ಇಬ್ಬರ ಅಂತ್ಯಕ್ರಿಯೆಗೆ ತಮಟೆ ಬಾರಿಸಲು ನಿರಾಕರಿಸಿದಾಗ ಅವರ ಮತ್ತು ಗ್ರಾಮದ ಹಿರಿಯರ ನಡುವಿನ ಸಂಬಂಧ ಹಳಸಿದ್ದು, ಅದರ ನಂತರ ಸಮುದಾಯದ ಸದಸ್ಯರು ಸೆಪ್ಟೆಂಬರ್ 10ರಂದು ಪಂಚಾಯತಿ ಕರೆದು ಬಹಿಷ್ಕಾರದ ಬಗ್ಗೆ ಚರ್ಚಿಸಿದ್ದರು’ ಎಂದು ಇಬ್ಬರು ಸಹೋದರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ, ಹಿರಿಯರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಹೋದರರಿಬ್ಬರು ಆರೋಪಿಸಿದ್ದಾರೆ. “ನಾವು ಎಷ್ಟೇ ವಿದ್ಯಾವಂತರಾಗಿದ್ದರೂ ಅಥವಾ ಉತ್ತಮ ಉದ್ಯೋಗವನ್ನು ಹೊಂದಿದ್ದರೂ, ನಾವು ಯಾವಾಗಲೂ ಮಾದಿಗರಾಗಿ ಉಳಿಯುತ್ತೇವೆ ಮತ್ತು ಅವರ ಪಾದಗಳ ಕೆಳಗೆ ಇರಬೇಕು ಎಂದು ಅವರು ನಮಗೆ ಹೇಳಿದರು” ಎಂದು ಅರ್ಜುನ್ ಹೇಳಿದ್ದಾರೆ. ಅದೇ ದಿನ ಕುಟುಂಬವನ್ನು ಬಹಿಷ್ಕರಿಸುವ ನಿರ್ಣಯವನ್ನು ಪಂಚಾಯತ್ ಅಂಗೀಕರಿಸಿತು.

ಅಂತಿಮವಾಗಿ, ಅನ್ಯಾಯವನ್ನು ಸಹಿಸಲಾಗದ ಸಹೋದರರು ಕಳೆದ ವಾರ ಪೊಲೀಸರನ್ನು ಸಂಪರ್ಕಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

“ದೂರಿನ ನಂತರ 19  ವ್ಯಕ್ತಿಗಳನ್ನು ಬಂಧಿಸಿದ್ದೇವೆ ಮತ್ತು ಬಹಿಷ್ಕಾರವನ್ನು ಜಾರಿಗೊಳಿಸುವಲ್ಲಿ ತೊಡಗಿರುವ 14 ಜನರನ್ನು ಇನ್ನೂ ಹುಡುಕುತ್ತಿದ್ದೇವೆ. ಈ ಘಟನೆಯು ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಕಾನೂನುಬಾಹಿರವಾದ ಜಾತಿ ಆಧಾರಿತ ತಾರತಮ್ಯ ಇನ್ನೂ ಇರುವುದನ್ನು ಎತ್ತಿ ತೋರಿಸುತ್ತದೆ. ಪ್ರಕರಣದಲ್ಲಿ ನಮ್ಮ ತನಿಖೆಯು ನಡೆಯುತ್ತಿದೆ” ಎಂದು ಮನೋಹರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

https://www.youtube.com/watch?v=C_rvimhI-9Q

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...