Homeದಲಿತ್ ಫೈಲ್ಸ್ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

- Advertisement -
- Advertisement -

ದಲಿತ ಕುಟುಂಬವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಿದ ಆರೋಪದ ಮೇಲೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಗೌಥೋಜಿಗುಡ ಗ್ರಾಮದ ಪಂಚಾಯತ್ ಸದಸ್ಯರು ಸೇರಿದಂತೆ 19 ಜನರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. 35 ವರ್ಷಗಳಿಂದ ಗ್ರಾಮದಲ್ಲಿ ವಾಸಿಸುತ್ತಿರುವ ಕುಟುಂಬವು ತಮಟೆ ಬಡಿಯುವ ಆಚರಣೆಯನ್ನು ನಿಲ್ಲಿಸಲು ನಿರ್ಧರಿಸಿತ್ತು. ಇದಕ್ಕೆ ಗ್ರಾಮದ ಹಿರಿಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 10 ರಂದು ದಲಿತ ಕುಟುಂಬದ ಮೇಲೆ ಬಹಿಷ್ಕಾರ ಜಾರಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಂಪ್ರದಾಯಿಕವಾಗಿ, ತೆಲಂಗಾಣದ ಮಾದಿಗ ಸಮುದಾಯದ ಜನರು ಅಂತ್ಯಕ್ರಿಯೆಗಳು ಮತ್ತು ಇತರ ಹಳ್ಳಿ ಹಬ್ಬಗಳಲ್ಲಿ ತಮಟೆ ಬಡಿಯುವುದನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಾಮಾನ್ಯವಾಗಿ ಮೇಲ್ಜಾತಿ ಸಮುದಾಯಗಳು ಮುಟ್ಟದ ಸಾಂಪ್ರದಾಯಿಕ ತಮಟೆ ಬಡಿಯುವುದನ್ನು ಈ ಸಮಾರಂಭಗಳ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗುತ್ತದೆ. ಗ್ರಾಮೀಣ ತೆಲಂಗಾಣದ ಕೆಲವು ಭಾಗಗಳಲ್ಲಿ ಈ ಪದ್ಧತಿ ಇನ್ನೂ ಮುಂದುವರಿದಿದ್ದರೂ, ಮಾದಿಗ ಸಮುದಾಯದ ಅನೇಕರು ಈಗ ಹಳೆಯ ಆಚರಣೆಯಿಂದ ಹೊರಬರುತ್ತಿದೆ.

ಇದನ್ನೂಓದಿ: ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ

“ಅವರು ನಮ್ಮನ್ನು ಬಹಿಷ್ಕರಿಸಿದ್ದಲ್ಲದೆ, ನಮ್ಮ ಸಹವಾಸ ಮಾಡದಂತೆ ಗ್ರಾಮದ ಇತರರಿಗೆ ಎಚ್ಚರಿಕೆ ನೀಡಿದರು. ಒಂದು ವೇಳೆ ಸಹವಾಸ ಮಾಡಿದರೆ ಅವರಿಗೆ ರೂ 5,000 ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂಕಾಂ ಪದವಿಯನ್ನು ಹೊಂದಿರುವ, ಮೇಡ್ಚಲ್‌ನ ಪ್ರಮುಖ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಪಂಚಮಿ ಚಂದ್ರಮ್ ಆರೋಪಿಸಿದ್ದಾರೆ.

2015 ರಲ್ಲಿ ನಿಧನರಾದ ಪಂಚಮಿ ಶಂಕರಯ್ಯ ಅವರ ಪುತ್ರರಾದ ಪಂಚಮಿ ಚಂದ್ರಮ್ ಮತ್ತು ಪಂಚಮಿ ಅರ್ಜುನ್ ಅವರು ತಮಟೆ ಸಂಸ್ಕೃತಿಯಿಂದ ದೂರವಾಗಲು ಪ್ರಾರಂಭಿಸಿದ್ದರು. ಅವರ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಮದುವೆಯಾಗಿ ದೂರರ ಊರಿನಲ್ಲಿ ವಾಸವಾಗಿದ್ದಾರೆ. ಪಂಚಮಿ ಅರ್ಜುನ್ ಅವರು ಜೆಎನ್‌ಟಿಯು ಹೈದರಾಬಾದ್‌ನಲ್ಲಿ ಸಾವಯವ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಮಾಡಿದ್ದಾರೆ.

ತಮ್ಮ ಮೇಲೆ ಊರಿನ ಜನರು ಹೇರಿದ ಬಹಿಷ್ಕಾರವನ್ನು ನೆನಪಿಸಿಕೊಂಡ ಅರ್ಜುನ್, ಕುಟುಂಬವು 15 ದಿನಗಳವರೆಗೆ ನೀರಿಲ್ಲದೆ ಪರದಾಡಬೇಕಾಯಿತು. ಸ್ಥಳೀಯ ದಿನಸಿ ಅಂಗಡಿಯವರು ಪಡಿತರ ಖರೀದಿಸಲು ಕೂಡಾ ಅವಕಾಶ ನಿರಾಕರಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರ ಚುನಾವಣೆ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು | ಒಮರ್ ಅಬ್ದುಲ್ಲಾ ಆಕ್ರೋಶ

ಅರ್ಜುನ್ ಅವರ ತಾಯಿ ಪಿ ನರಸಮ್ಮ ಮಾತನಾಡಿ, “ನಾವು ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಲು ಹತ್ತಿರದ ಪಟ್ಟಣಗಳಿಗೆ ಹೋಗಬೇಕಾಗಿತ್ತು. ಇದು ಕೆಟ್ಟ ವಿಚಾರ, ಕಳೆದ ಮೂರು ದಶಕಗಳಿಂದ ನಮಗೆ ತಿಳಿದಿರುವ ಪ್ರತಿಯೊಬ್ಬರೂ ನಮ್ಮೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡರು” ಎಂದು ಹೇಳಿದ್ದಾರೆ.

ಆದರೆ ಗ್ರಾಮದಲ್ಲಿ ಉದ್ವಿಗ್ನತೆಯ ನಡುವೆಯೂ ಸಹೋದರರು ತಮ್ಮ ಊರಿನಲ್ಲೆ ಉಳಿದಿದ್ದರು. “ಸಮಯದ ಜೊತೆಗೆ ನಾವು ಈ ಆಚರಣೆಯಿಂದ ದೂರ ಸರಿದಿದ್ದೇವೆ. ಯಾಕೆಂದರೆ, ತಮಟೆ ಹೊಡೆಯುವುದು ಕೀಳು ಎಂದು ನಾವು ಭಾವಿಸುತ್ತೇವೆ. ಇಂದಿನ ದಿನ ನಮಗೆ ಕಾರ್ಪೊರೇಟ್ ಜಗತ್ತಿನಲ್ಲಿ ಉದ್ಯೋಗಗಳು ಇದ್ದಾಗ, ಇದು ಅತ್ಯಂತ ಅನ್ಯಾಯದ ಕೆಲಸವಾಗಿದೆ” ಎಂದು ಅರ್ಜುನ್ ಹೇಳಿದ್ದಾರೆ. ಅರ್ಜುನ್ ಅವರು ಮೇಡ್ಚಲ್‌ನ ಕಂಪನಿಯೊಂದರಲ್ಲಿ ರಸಾಯನಶಾಸ್ತ್ರಜ್ಞನಾಗಿ ಉದ್ಯೋಗಿಯಾಗಿದ್ದಾರೆ.

ಮುದಿರಾಜ್ ಸಮುದಾಯದ ಇಬ್ಬರ ಅಂತ್ಯಕ್ರಿಯೆಗೆ ತಮಟೆ ಬಾರಿಸಲು ನಿರಾಕರಿಸಿದಾಗ ಅವರ ಮತ್ತು ಗ್ರಾಮದ ಹಿರಿಯರ ನಡುವಿನ ಸಂಬಂಧ ಹಳಸಿದ್ದು, ಅದರ ನಂತರ ಸಮುದಾಯದ ಸದಸ್ಯರು ಸೆಪ್ಟೆಂಬರ್ 10ರಂದು ಪಂಚಾಯತಿ ಕರೆದು ಬಹಿಷ್ಕಾರದ ಬಗ್ಗೆ ಚರ್ಚಿಸಿದ್ದರು’ ಎಂದು ಇಬ್ಬರು ಸಹೋದರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ, ಹಿರಿಯರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಹೋದರರಿಬ್ಬರು ಆರೋಪಿಸಿದ್ದಾರೆ. “ನಾವು ಎಷ್ಟೇ ವಿದ್ಯಾವಂತರಾಗಿದ್ದರೂ ಅಥವಾ ಉತ್ತಮ ಉದ್ಯೋಗವನ್ನು ಹೊಂದಿದ್ದರೂ, ನಾವು ಯಾವಾಗಲೂ ಮಾದಿಗರಾಗಿ ಉಳಿಯುತ್ತೇವೆ ಮತ್ತು ಅವರ ಪಾದಗಳ ಕೆಳಗೆ ಇರಬೇಕು ಎಂದು ಅವರು ನಮಗೆ ಹೇಳಿದರು” ಎಂದು ಅರ್ಜುನ್ ಹೇಳಿದ್ದಾರೆ. ಅದೇ ದಿನ ಕುಟುಂಬವನ್ನು ಬಹಿಷ್ಕರಿಸುವ ನಿರ್ಣಯವನ್ನು ಪಂಚಾಯತ್ ಅಂಗೀಕರಿಸಿತು.

ಅಂತಿಮವಾಗಿ, ಅನ್ಯಾಯವನ್ನು ಸಹಿಸಲಾಗದ ಸಹೋದರರು ಕಳೆದ ವಾರ ಪೊಲೀಸರನ್ನು ಸಂಪರ್ಕಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

“ದೂರಿನ ನಂತರ 19  ವ್ಯಕ್ತಿಗಳನ್ನು ಬಂಧಿಸಿದ್ದೇವೆ ಮತ್ತು ಬಹಿಷ್ಕಾರವನ್ನು ಜಾರಿಗೊಳಿಸುವಲ್ಲಿ ತೊಡಗಿರುವ 14 ಜನರನ್ನು ಇನ್ನೂ ಹುಡುಕುತ್ತಿದ್ದೇವೆ. ಈ ಘಟನೆಯು ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಕಾನೂನುಬಾಹಿರವಾದ ಜಾತಿ ಆಧಾರಿತ ತಾರತಮ್ಯ ಇನ್ನೂ ಇರುವುದನ್ನು ಎತ್ತಿ ತೋರಿಸುತ್ತದೆ. ಪ್ರಕರಣದಲ್ಲಿ ನಮ್ಮ ತನಿಖೆಯು ನಡೆಯುತ್ತಿದೆ” ಎಂದು ಮನೋಹರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

https://www.youtube.com/watch?v=C_rvimhI-9Q

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...