Homeದಲಿತ್ ಫೈಲ್ಸ್ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

- Advertisement -
- Advertisement -

ದಲಿತ ಕುಟುಂಬವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಿದ ಆರೋಪದ ಮೇಲೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಗೌಥೋಜಿಗುಡ ಗ್ರಾಮದ ಪಂಚಾಯತ್ ಸದಸ್ಯರು ಸೇರಿದಂತೆ 19 ಜನರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. 35 ವರ್ಷಗಳಿಂದ ಗ್ರಾಮದಲ್ಲಿ ವಾಸಿಸುತ್ತಿರುವ ಕುಟುಂಬವು ತಮಟೆ ಬಡಿಯುವ ಆಚರಣೆಯನ್ನು ನಿಲ್ಲಿಸಲು ನಿರ್ಧರಿಸಿತ್ತು. ಇದಕ್ಕೆ ಗ್ರಾಮದ ಹಿರಿಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 10 ರಂದು ದಲಿತ ಕುಟುಂಬದ ಮೇಲೆ ಬಹಿಷ್ಕಾರ ಜಾರಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಂಪ್ರದಾಯಿಕವಾಗಿ, ತೆಲಂಗಾಣದ ಮಾದಿಗ ಸಮುದಾಯದ ಜನರು ಅಂತ್ಯಕ್ರಿಯೆಗಳು ಮತ್ತು ಇತರ ಹಳ್ಳಿ ಹಬ್ಬಗಳಲ್ಲಿ ತಮಟೆ ಬಡಿಯುವುದನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಾಮಾನ್ಯವಾಗಿ ಮೇಲ್ಜಾತಿ ಸಮುದಾಯಗಳು ಮುಟ್ಟದ ಸಾಂಪ್ರದಾಯಿಕ ತಮಟೆ ಬಡಿಯುವುದನ್ನು ಈ ಸಮಾರಂಭಗಳ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗುತ್ತದೆ. ಗ್ರಾಮೀಣ ತೆಲಂಗಾಣದ ಕೆಲವು ಭಾಗಗಳಲ್ಲಿ ಈ ಪದ್ಧತಿ ಇನ್ನೂ ಮುಂದುವರಿದಿದ್ದರೂ, ಮಾದಿಗ ಸಮುದಾಯದ ಅನೇಕರು ಈಗ ಹಳೆಯ ಆಚರಣೆಯಿಂದ ಹೊರಬರುತ್ತಿದೆ.

ಇದನ್ನೂಓದಿ: ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ

“ಅವರು ನಮ್ಮನ್ನು ಬಹಿಷ್ಕರಿಸಿದ್ದಲ್ಲದೆ, ನಮ್ಮ ಸಹವಾಸ ಮಾಡದಂತೆ ಗ್ರಾಮದ ಇತರರಿಗೆ ಎಚ್ಚರಿಕೆ ನೀಡಿದರು. ಒಂದು ವೇಳೆ ಸಹವಾಸ ಮಾಡಿದರೆ ಅವರಿಗೆ ರೂ 5,000 ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂಕಾಂ ಪದವಿಯನ್ನು ಹೊಂದಿರುವ, ಮೇಡ್ಚಲ್‌ನ ಪ್ರಮುಖ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಪಂಚಮಿ ಚಂದ್ರಮ್ ಆರೋಪಿಸಿದ್ದಾರೆ.

2015 ರಲ್ಲಿ ನಿಧನರಾದ ಪಂಚಮಿ ಶಂಕರಯ್ಯ ಅವರ ಪುತ್ರರಾದ ಪಂಚಮಿ ಚಂದ್ರಮ್ ಮತ್ತು ಪಂಚಮಿ ಅರ್ಜುನ್ ಅವರು ತಮಟೆ ಸಂಸ್ಕೃತಿಯಿಂದ ದೂರವಾಗಲು ಪ್ರಾರಂಭಿಸಿದ್ದರು. ಅವರ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಮದುವೆಯಾಗಿ ದೂರರ ಊರಿನಲ್ಲಿ ವಾಸವಾಗಿದ್ದಾರೆ. ಪಂಚಮಿ ಅರ್ಜುನ್ ಅವರು ಜೆಎನ್‌ಟಿಯು ಹೈದರಾಬಾದ್‌ನಲ್ಲಿ ಸಾವಯವ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಮಾಡಿದ್ದಾರೆ.

ತಮ್ಮ ಮೇಲೆ ಊರಿನ ಜನರು ಹೇರಿದ ಬಹಿಷ್ಕಾರವನ್ನು ನೆನಪಿಸಿಕೊಂಡ ಅರ್ಜುನ್, ಕುಟುಂಬವು 15 ದಿನಗಳವರೆಗೆ ನೀರಿಲ್ಲದೆ ಪರದಾಡಬೇಕಾಯಿತು. ಸ್ಥಳೀಯ ದಿನಸಿ ಅಂಗಡಿಯವರು ಪಡಿತರ ಖರೀದಿಸಲು ಕೂಡಾ ಅವಕಾಶ ನಿರಾಕರಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರ ಚುನಾವಣೆ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು | ಒಮರ್ ಅಬ್ದುಲ್ಲಾ ಆಕ್ರೋಶ

ಅರ್ಜುನ್ ಅವರ ತಾಯಿ ಪಿ ನರಸಮ್ಮ ಮಾತನಾಡಿ, “ನಾವು ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಲು ಹತ್ತಿರದ ಪಟ್ಟಣಗಳಿಗೆ ಹೋಗಬೇಕಾಗಿತ್ತು. ಇದು ಕೆಟ್ಟ ವಿಚಾರ, ಕಳೆದ ಮೂರು ದಶಕಗಳಿಂದ ನಮಗೆ ತಿಳಿದಿರುವ ಪ್ರತಿಯೊಬ್ಬರೂ ನಮ್ಮೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡರು” ಎಂದು ಹೇಳಿದ್ದಾರೆ.

ಆದರೆ ಗ್ರಾಮದಲ್ಲಿ ಉದ್ವಿಗ್ನತೆಯ ನಡುವೆಯೂ ಸಹೋದರರು ತಮ್ಮ ಊರಿನಲ್ಲೆ ಉಳಿದಿದ್ದರು. “ಸಮಯದ ಜೊತೆಗೆ ನಾವು ಈ ಆಚರಣೆಯಿಂದ ದೂರ ಸರಿದಿದ್ದೇವೆ. ಯಾಕೆಂದರೆ, ತಮಟೆ ಹೊಡೆಯುವುದು ಕೀಳು ಎಂದು ನಾವು ಭಾವಿಸುತ್ತೇವೆ. ಇಂದಿನ ದಿನ ನಮಗೆ ಕಾರ್ಪೊರೇಟ್ ಜಗತ್ತಿನಲ್ಲಿ ಉದ್ಯೋಗಗಳು ಇದ್ದಾಗ, ಇದು ಅತ್ಯಂತ ಅನ್ಯಾಯದ ಕೆಲಸವಾಗಿದೆ” ಎಂದು ಅರ್ಜುನ್ ಹೇಳಿದ್ದಾರೆ. ಅರ್ಜುನ್ ಅವರು ಮೇಡ್ಚಲ್‌ನ ಕಂಪನಿಯೊಂದರಲ್ಲಿ ರಸಾಯನಶಾಸ್ತ್ರಜ್ಞನಾಗಿ ಉದ್ಯೋಗಿಯಾಗಿದ್ದಾರೆ.

ಮುದಿರಾಜ್ ಸಮುದಾಯದ ಇಬ್ಬರ ಅಂತ್ಯಕ್ರಿಯೆಗೆ ತಮಟೆ ಬಾರಿಸಲು ನಿರಾಕರಿಸಿದಾಗ ಅವರ ಮತ್ತು ಗ್ರಾಮದ ಹಿರಿಯರ ನಡುವಿನ ಸಂಬಂಧ ಹಳಸಿದ್ದು, ಅದರ ನಂತರ ಸಮುದಾಯದ ಸದಸ್ಯರು ಸೆಪ್ಟೆಂಬರ್ 10ರಂದು ಪಂಚಾಯತಿ ಕರೆದು ಬಹಿಷ್ಕಾರದ ಬಗ್ಗೆ ಚರ್ಚಿಸಿದ್ದರು’ ಎಂದು ಇಬ್ಬರು ಸಹೋದರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ, ಹಿರಿಯರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಹೋದರರಿಬ್ಬರು ಆರೋಪಿಸಿದ್ದಾರೆ. “ನಾವು ಎಷ್ಟೇ ವಿದ್ಯಾವಂತರಾಗಿದ್ದರೂ ಅಥವಾ ಉತ್ತಮ ಉದ್ಯೋಗವನ್ನು ಹೊಂದಿದ್ದರೂ, ನಾವು ಯಾವಾಗಲೂ ಮಾದಿಗರಾಗಿ ಉಳಿಯುತ್ತೇವೆ ಮತ್ತು ಅವರ ಪಾದಗಳ ಕೆಳಗೆ ಇರಬೇಕು ಎಂದು ಅವರು ನಮಗೆ ಹೇಳಿದರು” ಎಂದು ಅರ್ಜುನ್ ಹೇಳಿದ್ದಾರೆ. ಅದೇ ದಿನ ಕುಟುಂಬವನ್ನು ಬಹಿಷ್ಕರಿಸುವ ನಿರ್ಣಯವನ್ನು ಪಂಚಾಯತ್ ಅಂಗೀಕರಿಸಿತು.

ಅಂತಿಮವಾಗಿ, ಅನ್ಯಾಯವನ್ನು ಸಹಿಸಲಾಗದ ಸಹೋದರರು ಕಳೆದ ವಾರ ಪೊಲೀಸರನ್ನು ಸಂಪರ್ಕಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

“ದೂರಿನ ನಂತರ 19  ವ್ಯಕ್ತಿಗಳನ್ನು ಬಂಧಿಸಿದ್ದೇವೆ ಮತ್ತು ಬಹಿಷ್ಕಾರವನ್ನು ಜಾರಿಗೊಳಿಸುವಲ್ಲಿ ತೊಡಗಿರುವ 14 ಜನರನ್ನು ಇನ್ನೂ ಹುಡುಕುತ್ತಿದ್ದೇವೆ. ಈ ಘಟನೆಯು ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಕಾನೂನುಬಾಹಿರವಾದ ಜಾತಿ ಆಧಾರಿತ ತಾರತಮ್ಯ ಇನ್ನೂ ಇರುವುದನ್ನು ಎತ್ತಿ ತೋರಿಸುತ್ತದೆ. ಪ್ರಕರಣದಲ್ಲಿ ನಮ್ಮ ತನಿಖೆಯು ನಡೆಯುತ್ತಿದೆ” ಎಂದು ಮನೋಹರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

https://www.youtube.com/watch?v=C_rvimhI-9Q

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...