Homeದಲಿತ್ ಫೈಲ್ಸ್ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

- Advertisement -
- Advertisement -

ದಲಿತ ಕುಟುಂಬವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಿದ ಆರೋಪದ ಮೇಲೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಗೌಥೋಜಿಗುಡ ಗ್ರಾಮದ ಪಂಚಾಯತ್ ಸದಸ್ಯರು ಸೇರಿದಂತೆ 19 ಜನರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. 35 ವರ್ಷಗಳಿಂದ ಗ್ರಾಮದಲ್ಲಿ ವಾಸಿಸುತ್ತಿರುವ ಕುಟುಂಬವು ತಮಟೆ ಬಡಿಯುವ ಆಚರಣೆಯನ್ನು ನಿಲ್ಲಿಸಲು ನಿರ್ಧರಿಸಿತ್ತು. ಇದಕ್ಕೆ ಗ್ರಾಮದ ಹಿರಿಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 10 ರಂದು ದಲಿತ ಕುಟುಂಬದ ಮೇಲೆ ಬಹಿಷ್ಕಾರ ಜಾರಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಂಪ್ರದಾಯಿಕವಾಗಿ, ತೆಲಂಗಾಣದ ಮಾದಿಗ ಸಮುದಾಯದ ಜನರು ಅಂತ್ಯಕ್ರಿಯೆಗಳು ಮತ್ತು ಇತರ ಹಳ್ಳಿ ಹಬ್ಬಗಳಲ್ಲಿ ತಮಟೆ ಬಡಿಯುವುದನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಾಮಾನ್ಯವಾಗಿ ಮೇಲ್ಜಾತಿ ಸಮುದಾಯಗಳು ಮುಟ್ಟದ ಸಾಂಪ್ರದಾಯಿಕ ತಮಟೆ ಬಡಿಯುವುದನ್ನು ಈ ಸಮಾರಂಭಗಳ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗುತ್ತದೆ. ಗ್ರಾಮೀಣ ತೆಲಂಗಾಣದ ಕೆಲವು ಭಾಗಗಳಲ್ಲಿ ಈ ಪದ್ಧತಿ ಇನ್ನೂ ಮುಂದುವರಿದಿದ್ದರೂ, ಮಾದಿಗ ಸಮುದಾಯದ ಅನೇಕರು ಈಗ ಹಳೆಯ ಆಚರಣೆಯಿಂದ ಹೊರಬರುತ್ತಿದೆ.

ಇದನ್ನೂಓದಿ: ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ

“ಅವರು ನಮ್ಮನ್ನು ಬಹಿಷ್ಕರಿಸಿದ್ದಲ್ಲದೆ, ನಮ್ಮ ಸಹವಾಸ ಮಾಡದಂತೆ ಗ್ರಾಮದ ಇತರರಿಗೆ ಎಚ್ಚರಿಕೆ ನೀಡಿದರು. ಒಂದು ವೇಳೆ ಸಹವಾಸ ಮಾಡಿದರೆ ಅವರಿಗೆ ರೂ 5,000 ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂಕಾಂ ಪದವಿಯನ್ನು ಹೊಂದಿರುವ, ಮೇಡ್ಚಲ್‌ನ ಪ್ರಮುಖ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಪಂಚಮಿ ಚಂದ್ರಮ್ ಆರೋಪಿಸಿದ್ದಾರೆ.

2015 ರಲ್ಲಿ ನಿಧನರಾದ ಪಂಚಮಿ ಶಂಕರಯ್ಯ ಅವರ ಪುತ್ರರಾದ ಪಂಚಮಿ ಚಂದ್ರಮ್ ಮತ್ತು ಪಂಚಮಿ ಅರ್ಜುನ್ ಅವರು ತಮಟೆ ಸಂಸ್ಕೃತಿಯಿಂದ ದೂರವಾಗಲು ಪ್ರಾರಂಭಿಸಿದ್ದರು. ಅವರ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಮದುವೆಯಾಗಿ ದೂರರ ಊರಿನಲ್ಲಿ ವಾಸವಾಗಿದ್ದಾರೆ. ಪಂಚಮಿ ಅರ್ಜುನ್ ಅವರು ಜೆಎನ್‌ಟಿಯು ಹೈದರಾಬಾದ್‌ನಲ್ಲಿ ಸಾವಯವ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಮಾಡಿದ್ದಾರೆ.

ತಮ್ಮ ಮೇಲೆ ಊರಿನ ಜನರು ಹೇರಿದ ಬಹಿಷ್ಕಾರವನ್ನು ನೆನಪಿಸಿಕೊಂಡ ಅರ್ಜುನ್, ಕುಟುಂಬವು 15 ದಿನಗಳವರೆಗೆ ನೀರಿಲ್ಲದೆ ಪರದಾಡಬೇಕಾಯಿತು. ಸ್ಥಳೀಯ ದಿನಸಿ ಅಂಗಡಿಯವರು ಪಡಿತರ ಖರೀದಿಸಲು ಕೂಡಾ ಅವಕಾಶ ನಿರಾಕರಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರ ಚುನಾವಣೆ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು | ಒಮರ್ ಅಬ್ದುಲ್ಲಾ ಆಕ್ರೋಶ

ಅರ್ಜುನ್ ಅವರ ತಾಯಿ ಪಿ ನರಸಮ್ಮ ಮಾತನಾಡಿ, “ನಾವು ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಲು ಹತ್ತಿರದ ಪಟ್ಟಣಗಳಿಗೆ ಹೋಗಬೇಕಾಗಿತ್ತು. ಇದು ಕೆಟ್ಟ ವಿಚಾರ, ಕಳೆದ ಮೂರು ದಶಕಗಳಿಂದ ನಮಗೆ ತಿಳಿದಿರುವ ಪ್ರತಿಯೊಬ್ಬರೂ ನಮ್ಮೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡರು” ಎಂದು ಹೇಳಿದ್ದಾರೆ.

ಆದರೆ ಗ್ರಾಮದಲ್ಲಿ ಉದ್ವಿಗ್ನತೆಯ ನಡುವೆಯೂ ಸಹೋದರರು ತಮ್ಮ ಊರಿನಲ್ಲೆ ಉಳಿದಿದ್ದರು. “ಸಮಯದ ಜೊತೆಗೆ ನಾವು ಈ ಆಚರಣೆಯಿಂದ ದೂರ ಸರಿದಿದ್ದೇವೆ. ಯಾಕೆಂದರೆ, ತಮಟೆ ಹೊಡೆಯುವುದು ಕೀಳು ಎಂದು ನಾವು ಭಾವಿಸುತ್ತೇವೆ. ಇಂದಿನ ದಿನ ನಮಗೆ ಕಾರ್ಪೊರೇಟ್ ಜಗತ್ತಿನಲ್ಲಿ ಉದ್ಯೋಗಗಳು ಇದ್ದಾಗ, ಇದು ಅತ್ಯಂತ ಅನ್ಯಾಯದ ಕೆಲಸವಾಗಿದೆ” ಎಂದು ಅರ್ಜುನ್ ಹೇಳಿದ್ದಾರೆ. ಅರ್ಜುನ್ ಅವರು ಮೇಡ್ಚಲ್‌ನ ಕಂಪನಿಯೊಂದರಲ್ಲಿ ರಸಾಯನಶಾಸ್ತ್ರಜ್ಞನಾಗಿ ಉದ್ಯೋಗಿಯಾಗಿದ್ದಾರೆ.

ಮುದಿರಾಜ್ ಸಮುದಾಯದ ಇಬ್ಬರ ಅಂತ್ಯಕ್ರಿಯೆಗೆ ತಮಟೆ ಬಾರಿಸಲು ನಿರಾಕರಿಸಿದಾಗ ಅವರ ಮತ್ತು ಗ್ರಾಮದ ಹಿರಿಯರ ನಡುವಿನ ಸಂಬಂಧ ಹಳಸಿದ್ದು, ಅದರ ನಂತರ ಸಮುದಾಯದ ಸದಸ್ಯರು ಸೆಪ್ಟೆಂಬರ್ 10ರಂದು ಪಂಚಾಯತಿ ಕರೆದು ಬಹಿಷ್ಕಾರದ ಬಗ್ಗೆ ಚರ್ಚಿಸಿದ್ದರು’ ಎಂದು ಇಬ್ಬರು ಸಹೋದರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ, ಹಿರಿಯರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಹೋದರರಿಬ್ಬರು ಆರೋಪಿಸಿದ್ದಾರೆ. “ನಾವು ಎಷ್ಟೇ ವಿದ್ಯಾವಂತರಾಗಿದ್ದರೂ ಅಥವಾ ಉತ್ತಮ ಉದ್ಯೋಗವನ್ನು ಹೊಂದಿದ್ದರೂ, ನಾವು ಯಾವಾಗಲೂ ಮಾದಿಗರಾಗಿ ಉಳಿಯುತ್ತೇವೆ ಮತ್ತು ಅವರ ಪಾದಗಳ ಕೆಳಗೆ ಇರಬೇಕು ಎಂದು ಅವರು ನಮಗೆ ಹೇಳಿದರು” ಎಂದು ಅರ್ಜುನ್ ಹೇಳಿದ್ದಾರೆ. ಅದೇ ದಿನ ಕುಟುಂಬವನ್ನು ಬಹಿಷ್ಕರಿಸುವ ನಿರ್ಣಯವನ್ನು ಪಂಚಾಯತ್ ಅಂಗೀಕರಿಸಿತು.

ಅಂತಿಮವಾಗಿ, ಅನ್ಯಾಯವನ್ನು ಸಹಿಸಲಾಗದ ಸಹೋದರರು ಕಳೆದ ವಾರ ಪೊಲೀಸರನ್ನು ಸಂಪರ್ಕಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

“ದೂರಿನ ನಂತರ 19  ವ್ಯಕ್ತಿಗಳನ್ನು ಬಂಧಿಸಿದ್ದೇವೆ ಮತ್ತು ಬಹಿಷ್ಕಾರವನ್ನು ಜಾರಿಗೊಳಿಸುವಲ್ಲಿ ತೊಡಗಿರುವ 14 ಜನರನ್ನು ಇನ್ನೂ ಹುಡುಕುತ್ತಿದ್ದೇವೆ. ಈ ಘಟನೆಯು ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಕಾನೂನುಬಾಹಿರವಾದ ಜಾತಿ ಆಧಾರಿತ ತಾರತಮ್ಯ ಇನ್ನೂ ಇರುವುದನ್ನು ಎತ್ತಿ ತೋರಿಸುತ್ತದೆ. ಪ್ರಕರಣದಲ್ಲಿ ನಮ್ಮ ತನಿಖೆಯು ನಡೆಯುತ್ತಿದೆ” ಎಂದು ಮನೋಹರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

https://www.youtube.com/watch?v=C_rvimhI-9Q

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...