Homeದಲಿತ್ ಫೈಲ್ಸ್ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

- Advertisement -
- Advertisement -

ದಲಿತ ಕುಟುಂಬವನ್ನು ಸಾಮಾಜಿಕ ಬಹಿಷ್ಕಾರಕ್ಕೆ ಒಳಪಡಿಸಿದ ಆರೋಪದ ಮೇಲೆ ತೆಲಂಗಾಣದ ಮೇಡ್ಚಲ್ ಜಿಲ್ಲೆಯ ಗೌಥೋಜಿಗುಡ ಗ್ರಾಮದ ಪಂಚಾಯತ್ ಸದಸ್ಯರು ಸೇರಿದಂತೆ 19 ಜನರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. 35 ವರ್ಷಗಳಿಂದ ಗ್ರಾಮದಲ್ಲಿ ವಾಸಿಸುತ್ತಿರುವ ಕುಟುಂಬವು ತಮಟೆ ಬಡಿಯುವ ಆಚರಣೆಯನ್ನು ನಿಲ್ಲಿಸಲು ನಿರ್ಧರಿಸಿತ್ತು. ಇದಕ್ಕೆ ಗ್ರಾಮದ ಹಿರಿಯರು ಅಸಮಾಧಾನ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 10 ರಂದು ದಲಿತ ಕುಟುಂಬದ ಮೇಲೆ ಬಹಿಷ್ಕಾರ ಜಾರಿ ಮಾಡಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಂಪ್ರದಾಯಿಕವಾಗಿ, ತೆಲಂಗಾಣದ ಮಾದಿಗ ಸಮುದಾಯದ ಜನರು ಅಂತ್ಯಕ್ರಿಯೆಗಳು ಮತ್ತು ಇತರ ಹಳ್ಳಿ ಹಬ್ಬಗಳಲ್ಲಿ ತಮಟೆ ಬಡಿಯುವುದನ್ನು ಮಾಡಿಕೊಂಡು ಬರುತ್ತಿದ್ದಾರೆ. ಸಾಮಾನ್ಯವಾಗಿ ಮೇಲ್ಜಾತಿ ಸಮುದಾಯಗಳು ಮುಟ್ಟದ ಸಾಂಪ್ರದಾಯಿಕ ತಮಟೆ ಬಡಿಯುವುದನ್ನು ಈ ಸಮಾರಂಭಗಳ ಅವಿಭಾಜ್ಯ ಅಂಗವೆಂದು ಪರಿಗಣಿಸಲಾಗುತ್ತದೆ. ಗ್ರಾಮೀಣ ತೆಲಂಗಾಣದ ಕೆಲವು ಭಾಗಗಳಲ್ಲಿ ಈ ಪದ್ಧತಿ ಇನ್ನೂ ಮುಂದುವರಿದಿದ್ದರೂ, ಮಾದಿಗ ಸಮುದಾಯದ ಅನೇಕರು ಈಗ ಹಳೆಯ ಆಚರಣೆಯಿಂದ ಹೊರಬರುತ್ತಿದೆ.

ಇದನ್ನೂಓದಿ: ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ

“ಅವರು ನಮ್ಮನ್ನು ಬಹಿಷ್ಕರಿಸಿದ್ದಲ್ಲದೆ, ನಮ್ಮ ಸಹವಾಸ ಮಾಡದಂತೆ ಗ್ರಾಮದ ಇತರರಿಗೆ ಎಚ್ಚರಿಕೆ ನೀಡಿದರು. ಒಂದು ವೇಳೆ ಸಹವಾಸ ಮಾಡಿದರೆ ಅವರಿಗೆ ರೂ 5,000 ದಂಡ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂಕಾಂ ಪದವಿಯನ್ನು ಹೊಂದಿರುವ, ಮೇಡ್ಚಲ್‌ನ ಪ್ರಮುಖ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಪಂಚಮಿ ಚಂದ್ರಮ್ ಆರೋಪಿಸಿದ್ದಾರೆ.

2015 ರಲ್ಲಿ ನಿಧನರಾದ ಪಂಚಮಿ ಶಂಕರಯ್ಯ ಅವರ ಪುತ್ರರಾದ ಪಂಚಮಿ ಚಂದ್ರಮ್ ಮತ್ತು ಪಂಚಮಿ ಅರ್ಜುನ್ ಅವರು ತಮಟೆ ಸಂಸ್ಕೃತಿಯಿಂದ ದೂರವಾಗಲು ಪ್ರಾರಂಭಿಸಿದ್ದರು. ಅವರ ಕುಟುಂಬದ ನಾಲ್ವರು ಹೆಣ್ಣು ಮಕ್ಕಳು ಮದುವೆಯಾಗಿ ದೂರರ ಊರಿನಲ್ಲಿ ವಾಸವಾಗಿದ್ದಾರೆ. ಪಂಚಮಿ ಅರ್ಜುನ್ ಅವರು ಜೆಎನ್‌ಟಿಯು ಹೈದರಾಬಾದ್‌ನಲ್ಲಿ ಸಾವಯವ ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಮಾಡಿದ್ದಾರೆ.

ತಮ್ಮ ಮೇಲೆ ಊರಿನ ಜನರು ಹೇರಿದ ಬಹಿಷ್ಕಾರವನ್ನು ನೆನಪಿಸಿಕೊಂಡ ಅರ್ಜುನ್, ಕುಟುಂಬವು 15 ದಿನಗಳವರೆಗೆ ನೀರಿಲ್ಲದೆ ಪರದಾಡಬೇಕಾಯಿತು. ಸ್ಥಳೀಯ ದಿನಸಿ ಅಂಗಡಿಯವರು ಪಡಿತರ ಖರೀದಿಸಲು ಕೂಡಾ ಅವಕಾಶ ನಿರಾಕರಿಸಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಜಮ್ಮು ಕಾಶ್ಮೀರ ಚುನಾವಣೆ ವೀಕ್ಷಣೆಗೆ ವಿದೇಶಿ ಪ್ರತಿನಿಧಿಗಳು | ಒಮರ್ ಅಬ್ದುಲ್ಲಾ ಆಕ್ರೋಶ

ಅರ್ಜುನ್ ಅವರ ತಾಯಿ ಪಿ ನರಸಮ್ಮ ಮಾತನಾಡಿ, “ನಾವು ದಿನಸಿ ಮತ್ತು ಅಗತ್ಯ ವಸ್ತುಗಳನ್ನು ಖರೀದಿಸಲು ಹತ್ತಿರದ ಪಟ್ಟಣಗಳಿಗೆ ಹೋಗಬೇಕಾಗಿತ್ತು. ಇದು ಕೆಟ್ಟ ವಿಚಾರ, ಕಳೆದ ಮೂರು ದಶಕಗಳಿಂದ ನಮಗೆ ತಿಳಿದಿರುವ ಪ್ರತಿಯೊಬ್ಬರೂ ನಮ್ಮೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡರು” ಎಂದು ಹೇಳಿದ್ದಾರೆ.

ಆದರೆ ಗ್ರಾಮದಲ್ಲಿ ಉದ್ವಿಗ್ನತೆಯ ನಡುವೆಯೂ ಸಹೋದರರು ತಮ್ಮ ಊರಿನಲ್ಲೆ ಉಳಿದಿದ್ದರು. “ಸಮಯದ ಜೊತೆಗೆ ನಾವು ಈ ಆಚರಣೆಯಿಂದ ದೂರ ಸರಿದಿದ್ದೇವೆ. ಯಾಕೆಂದರೆ, ತಮಟೆ ಹೊಡೆಯುವುದು ಕೀಳು ಎಂದು ನಾವು ಭಾವಿಸುತ್ತೇವೆ. ಇಂದಿನ ದಿನ ನಮಗೆ ಕಾರ್ಪೊರೇಟ್ ಜಗತ್ತಿನಲ್ಲಿ ಉದ್ಯೋಗಗಳು ಇದ್ದಾಗ, ಇದು ಅತ್ಯಂತ ಅನ್ಯಾಯದ ಕೆಲಸವಾಗಿದೆ” ಎಂದು ಅರ್ಜುನ್ ಹೇಳಿದ್ದಾರೆ. ಅರ್ಜುನ್ ಅವರು ಮೇಡ್ಚಲ್‌ನ ಕಂಪನಿಯೊಂದರಲ್ಲಿ ರಸಾಯನಶಾಸ್ತ್ರಜ್ಞನಾಗಿ ಉದ್ಯೋಗಿಯಾಗಿದ್ದಾರೆ.

ಮುದಿರಾಜ್ ಸಮುದಾಯದ ಇಬ್ಬರ ಅಂತ್ಯಕ್ರಿಯೆಗೆ ತಮಟೆ ಬಾರಿಸಲು ನಿರಾಕರಿಸಿದಾಗ ಅವರ ಮತ್ತು ಗ್ರಾಮದ ಹಿರಿಯರ ನಡುವಿನ ಸಂಬಂಧ ಹಳಸಿದ್ದು, ಅದರ ನಂತರ ಸಮುದಾಯದ ಸದಸ್ಯರು ಸೆಪ್ಟೆಂಬರ್ 10ರಂದು ಪಂಚಾಯತಿ ಕರೆದು ಬಹಿಷ್ಕಾರದ ಬಗ್ಗೆ ಚರ್ಚಿಸಿದ್ದರು’ ಎಂದು ಇಬ್ಬರು ಸಹೋದರು ಹೇಳಿದ್ದಾರೆ.

ಇದನ್ನೂಓದಿ: ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಭೆಯಲ್ಲಿ, ಹಿರಿಯರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸಹೋದರರಿಬ್ಬರು ಆರೋಪಿಸಿದ್ದಾರೆ. “ನಾವು ಎಷ್ಟೇ ವಿದ್ಯಾವಂತರಾಗಿದ್ದರೂ ಅಥವಾ ಉತ್ತಮ ಉದ್ಯೋಗವನ್ನು ಹೊಂದಿದ್ದರೂ, ನಾವು ಯಾವಾಗಲೂ ಮಾದಿಗರಾಗಿ ಉಳಿಯುತ್ತೇವೆ ಮತ್ತು ಅವರ ಪಾದಗಳ ಕೆಳಗೆ ಇರಬೇಕು ಎಂದು ಅವರು ನಮಗೆ ಹೇಳಿದರು” ಎಂದು ಅರ್ಜುನ್ ಹೇಳಿದ್ದಾರೆ. ಅದೇ ದಿನ ಕುಟುಂಬವನ್ನು ಬಹಿಷ್ಕರಿಸುವ ನಿರ್ಣಯವನ್ನು ಪಂಚಾಯತ್ ಅಂಗೀಕರಿಸಿತು.

ಅಂತಿಮವಾಗಿ, ಅನ್ಯಾಯವನ್ನು ಸಹಿಸಲಾಗದ ಸಹೋದರರು ಕಳೆದ ವಾರ ಪೊಲೀಸರನ್ನು ಸಂಪರ್ಕಿಸಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

“ದೂರಿನ ನಂತರ 19  ವ್ಯಕ್ತಿಗಳನ್ನು ಬಂಧಿಸಿದ್ದೇವೆ ಮತ್ತು ಬಹಿಷ್ಕಾರವನ್ನು ಜಾರಿಗೊಳಿಸುವಲ್ಲಿ ತೊಡಗಿರುವ 14 ಜನರನ್ನು ಇನ್ನೂ ಹುಡುಕುತ್ತಿದ್ದೇವೆ. ಈ ಘಟನೆಯು ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಕಾನೂನುಬಾಹಿರವಾದ ಜಾತಿ ಆಧಾರಿತ ತಾರತಮ್ಯ ಇನ್ನೂ ಇರುವುದನ್ನು ಎತ್ತಿ ತೋರಿಸುತ್ತದೆ. ಪ್ರಕರಣದಲ್ಲಿ ನಮ್ಮ ತನಿಖೆಯು ನಡೆಯುತ್ತಿದೆ” ಎಂದು ಮನೋಹರಾಬಾದ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

https://www.youtube.com/watch?v=C_rvimhI-9Q

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...