Homeಮುಖಪುಟಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

- Advertisement -
- Advertisement -

ತಮಿಳು ನಟ ಸೂರ್ಯ ಅವರಿಗೆ ಕರ್ನಾಟಕದಲ್ಲೂ ಅಭಿಮಾನಿ ಬಳಗವೆ ಇದೆ. ಕಳೆದ ವರ್ಷ ಸೂರರೈ ಪೊಟ್ರು ಮೂಲಕ ಕನ್ನಡಿಗರ ಮನ ಗೆದ್ದಿದ್ದ ನಟ ಈ ಬಾರಿ ’ಜೈ ಭೀಮ್’ ಎನ್ನುತ್ತಾ ಕನ್ನಡಿಗರ ಮನಗಳಿಗೆ ಲಗ್ಗೆ ಇಡಲು ಪ್ರವೇಶಿಸುತ್ತಿದ್ದಾರೆ. ಹೌದು ಸೂರ್ಯ ಅವರ ಮುಂದಿನ ಚಿತ್ರವೇ ’ಜೈ ಭೀಮ್’.

ಜುಲೈ 23 ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ’ಜೈ ಭೀಮ್’ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿದ್ದು, ಹೊಸ ಚಿತ್ರದ ಫಸ್ಟ್ ಲುಕ್ ಅಭಿಮಾನಿಗಳಲ್ಲಿ ಪುಳಕ ಮೂಡಿಸಿದೆ. ‌ಐದು ಭಾಷೆಗಳಲ್ಲಿ ತೆರೆ ಕಾಣಲಿರುವ ಚಿತ್ರದಲ್ಲಿ ನಟ ಸೂರ್ಯ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

’ಜೈ ಭೀಮ್’ ಎಂಬ ಹೆಸರೇ ಕನ್ನಡಿಗರಲ್ಲಿ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚುಗೊಳಿಸಿದೆ. ನಿರ್ದೇಶಕ ಜ್ಞಾನವೇಲ್ ನಿರ್ದೇಶನದಲ್ಲಿ ಸೂರ್ಯ ನಟಿಸುತ್ತಿದ್ದು, ನಟಿ ರಜೀಶಾ ವಿಜಯನ್ ಸೂರ್ಯ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಂಚಿಕೊಂಡಿರುವ ನಟ ಸೂರ್ಯ ’ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳಲು ಉತ್ಸುಕನಾಗಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

 

ಶೀರ್ಷಿಕೆ ಮತ್ತು ಫಸ್ಟ್ ಲುಕ್ ನೋಡಿದರೆ ಜಾತಿ ವ್ಯವಸ್ಥೆಯಂತಹ ಸಾಮಾಜಿಕ ಸಮಸ್ಯೆಗಳನ್ನು ಚರ್ಚಿಸುವ ಸಾಧ್ಯತೆಯಿದೆ. ಚಿತ್ರದ ಪೋಸ್ಟರ್‌ನಲ್ಲಿ ನ್ಯಾಯಾಲಯದ ಕಟ್ಟದ, ಬುಡಕಟ್ಟು ಸಮುದಾಯದ ಜನ ಮತ್ತು ಕಪ್ಪು ಕೋಟ್ ಧರಿಸಿ, ಗಂಭೀರವಾಗಿ ಚಿಂತಿಸುತ್ತಿರುವ ಸೂರ್ಯ ಅವರ ಚಿತ್ರಣವಿದೆ.

ಜೈಭೀಮ್ ಚಿತ್ರ ಕನ್ನಡ, ತಮಿಳು, ತೆಲಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರ ನಟ ಸೂರ್ಯ ಅವರ 2 ಡಿ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿದೆ. ಇದು ಅವರ ನಟನೆಯ 39ನೇ ಸಿನಿಮಾವಾಗಿದ್ದು, ಸೂರ್ಯ ಜೊತೆಗೆ ಪ್ರಕಾಶ್ ರಾಜ್,‌ ರಜಿಶಾ ವಿಜಯನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸೀನ್‌ ರೋಲ್ಡನ್‌ ಸಂಗೀತ ನಿರ್ದೇಶನ, ಜನಪ್ರಿಯ ಆಕ್ಷನ್-ಕೊರಿಯೋಗ್ರಾಫರ್ ಅನ್ಬರೀವ್ ಸಾಹಸ ಚಿತ್ರಕ್ಕಿದೆ.

ಜೈ ಭೀಮ್ ಚಿತ್ರಕ್ಕೆ ಕನ್ನಡ ಅಭಿಮಾನಿಗಳು ಕೂಡ ಶುಭ ಹಾರೈಸಿದ್ದಾರೆ. ಕನ್ನಡದಲ್ಲೂ ನಾಡಿನ ವಾಸ್ತವವನ್ನು ತಿಳಿಸುವ ಇಂತಹ ಚಿತ್ರಗಳು ಬರಬೇಕು ಎಂದು ಸಿನಿ ಪ್ರೇಕ್ಷಕರು ಒತ್ತಾಯಿಸಿದ್ದಾರೆ.

“ತಮಿಳಿನಲ್ಲಿ ವೆಟ್ರಿ ಮಾರನ್, ಪ.ರಂಜಿತ್, ಮಾರಿ ಸೆಲ್ವರಾಜ್, ಲೆನಿನ್ ಭಾರತಿ ಅಂತವರು ಪ್ರೇಕ್ಷಕ ಮತ್ತು ಅವರ ಅಭಿರುಚಿ ಮೇಲೆ ನಂಬಿಕೆ ಇಟ್ಟು, ವಾಸ್ತವದಲ್ಲಿ ಯಾವುದನ್ನ ಪ್ರೇಕ್ಷಕರ ಮುಂದೆ ಪ್ರಸ್ತುಪಡಿಸಬೇಕು ಎಂಬುದರ ಬಗ್ಗೆ ನಿರ್ದಿಷ್ಟ ಆಯ್ಕೆಗಳನ್ನಿಟ್ಟುಕೊಂಡು ಬಹಳ ಧೈರ್ಯದಿಂದ, ಇದುವರೆಗೂ ಭಾರತೀಯ ಸಿನಿಮಾಗಳಲ್ಲಿ ಕಾಣಿಸಿಕೊಳ್ಳದ ವಾಸ್ತವಗಳನ್ನ ತಮ್ಮ ಸಿನಿಮಾಗಳಲ್ಲಿ ಹೇಳುತ್ತಿದ್ದಾರೆ. ಈ ಮೂಲಕ ಇವರು ಪ್ರೇಕ್ಷಕರನ್ನು ಬಹಳ ಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆ” ಎಂದು ಬರಹಗಾರ ಯದುನಂದನ್ ಕೀಲಾರ ಬರೆದಿದ್ದಾರೆ.


ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...