Homeಕರ್ನಾಟಕಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

ಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

- Advertisement -
- Advertisement -

ನಟ ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನವು ಅವರ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಪುನೀತ್‌ ಅವರ ಚಾರಿಟಿ ಕಾರ್ಯಗಳ ಮುಂದುವರಿಕೆಯ ಬಗ್ಗೆ ಅನಿಶ್ಚಿತತೆಯೂ ಉಂಟಾಗಿತ್ತು.

ಪುನೀತ್ ರಾಜ್‌ಕುಮಾರ್ ಅವರು ಬಡವರಿಗೆ ಸಹಾಯ ನೀಡುತ್ತಾ ಬಂದಿದ್ದರು. ಅವುಗಳಲ್ಲಿ ಒಂದು ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನಸಹಾಯ. ಪುನೀತ್ ಅವರು ಕಂಡು ಇನ್ನು ಮುಂದೆ ಕನಸು ನನಸಾಗುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದನ್ನು ಮುಂದಕ್ಕೆ ಕೊಂಡೊಯ್ಯಲು ಒಬ್ಬ ನಟ ಮುಂದೆ ಬಂದಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1,800 ವಿದ್ಯಾರ್ಥಿಗಳ ಪೋಷಣೆಯನ್ನು ಮುಂದುವರಿಸುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ.

ಮೂಲತಃ ಬೆಂಗಳೂರಿನವರಾದ ವಿಶಾಲ್‌, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ, “ಸಹೋದರನ ಕಾರ್ಯವನ್ನು ನಾನು ಮುಂದುವರಿಸುತ್ತೇನೆ” ಎಂದಿದ್ದಾರೆ.

ವಿಶಾಲ್ ಅವರ ಈ ನಿಲುವಿಗೆ ಕನ್ನಡಿಗರು ಮನಸೋತಿದ್ದಾರೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, “ಭಾಷೆ ಅರ್ಥವಾಗದಿದ್ದರೂ ಸರಿ, ಕೆಟ್ಟ ಚಿತ್ರವಾದರೂ ಸರಿ, ಕರ್ನಾಟಕದಲ್ಲಿ ಬಿಡುಗಡೆಯಾಗುವ ನಟ ವಿಶಾಲ್ ಅವರ ಎಲ್ಲ ಸಿನಿಮಾಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

“ವಿಶಾಲ್ ಅವರ ತಂದೆ ಅಪ್ಪಟ ಕನ್ನಡಿಗ, ಮಾನವೀಯತೆಗೆ ಮರುಗುವ ಜೀವ ವಿಶಾಲ್. ತಮಿಳುನಾಡಿನಲ್ಲಿ ಕೆ.ಜಿ.ಎಫ್. ಚಿತ್ರ ಹವಾ ಸೃಷ್ಟಿಸಿದ್ದರ ಹಿಂದೆ ವಿಶಾಲ್ ಶ್ರಮ ಸಾಕಷ್ಟಿದೆ. ಅದ್ಭುತ ನಟನೆ ವಿಶಾಲ್ ಅವರದ್ದು. ಮೌಲ್ಯಾಧಾರಿತ ವ್ಯಕ್ತಿ ವಿಶಾಲ್” ಎಂದು ಸಂತೋಷ್‌ ಪಾಪಣ್ಣ ಕಮೆಂಟ್ ಮಾಡಿದ್ದಾರೆ.

“ಹೆಸರು ಮಾತ್ರ ವಿಶಾಲವಾಗಿಲ್ಲ, ಇವರ ಮನಸ್ಸೂ ವಿಶಾಲವಾಗಿದೆ. ನಾನು ಸಹ ಇನ್ನು ಮುಂದೆ ವಿಶಾಲ್ ನಟಿಸುವ ಎಲ್ಲಾ ಚಿತ್ರಗಳನ್ನೂ ನೋಡುತ್ತೇನೆ. ಮೊಬೈಲ್‌ನಲ್ಲಿ ಅಲ್ಲ, ಸಿನಿಮಾ ಥಿಯೇಟರ್‌ನಲ್ಲಿ ಟಿಕೆಟ್ ಪಡೆದು ನೋಡುವೆ” ಎಂದು ನಗು ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

“ಇತ್ತೀಚೆಗೆ ಕೆಲವು ಮಾನಸಿಕವಾಗಿ ಅಸ್ಥಿರತೆ ಉಳ್ಳವರು ವ್ಯಕ್ತಪಡಿಸುವ ಹೊಲಸು ಮಾತುಗಳಿಗಿಂತ ನಟ ವಿಶಾಲ್ ಅವರ ಮಾತು ಅತ್ಯಂತ ಮೌಲ್ಯಧಾರಿತವಾಗಿದೆ” ಎಂದು ರಫೀಕ್‌ ದಾಲ್ಕಜೆ ಕೊಲ್ಪೆ ತಿಳಿಸಿದ್ದಾರೆ.

“ಕರ್ನಾಟಕ ರಣಧೀರ ಪಡೆಯ ಸಮಸ್ತ ಕುಟುಂಬದ ವತಿಯಿಂದ ಕೋಟಿ ಕೋಟಿ ನಮಸ್ಕಾರಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಕರ್ನಾಟಕದ ಮಹಾ ಜನತೆ ನಿಮ್ಮನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಭಗವಂತ ನಿಮ್ಮನ್ನು ಉತ್ತಮವಾದ ಆರೋಗ್ಯ ಸಿರಿ ಸಂಪತ್ತು ಸಕಲವು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ” ಎಂದು ಮಲ್ಲಿಕಾರ್ಜುನ್‌ ಬಿ.ಕುಲ್ಗೇರಿ ಮಡಿವಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

– ಹೀಗೆ ಸಾವಿರಾರು ಕನ್ನಡಿಗರು ವಿಶಾಲ್‌ ಅವರ ನಿರ್ಧಾರಕ್ಕೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಮಾನ ಶಿಕ್ಷಣದ ಕುರಿತು ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದೂ ಮುನ್ನಲೆಗೆ ಬಂದಿದೆ.

ಈಗ ಇದೆಲ್ಲ ಭಾವಾವೇಶದಿಂದ ಹೊರಬಂದು ಯೋಚಿಸಿದರೆ… ಪುನೀತ್ ಸಾವಿರದೆಂಟುನೂರು ಮಕ್ಕಳ ಓದು ನೋಡ್ಕೊತಿದ್ರು, ಅದರ ಕತೆ ಮುಂದೆ ಹೇಗೋ ಅಂತ ಯೋಚಿಸ್ತಿದ್ದೇವೆಯೇ ಹೊರತು, ಸರಕಾರಕ್ಕೆ ಮಕ್ಕಳಿಗೆ ಕನಿಷ್ಟ ಹನ್ನೆರಡನೆಯ ತರಗತಿಯ ತನಕವಾದರೂ ಸಮಾನ ಮತ್ತು ಉಚಿತ ಶಿಕ್ಷಣ ನೀಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ನಮ್ಮಲ್ಲಿ ಪ್ರಶ್ನೆಯೇ ಹುಟ್ಟಲ್ಲ. ನಲವತ್ತು ರೂಪಾಯಿಯ ಪೆಟ್ರೋಲ್‌ಗೆ ಎಪ್ಪತ್ತು ರೂಪಾಯಿ ಟ್ಯಾಕ್ಸ್ ಕಟ್ಟುತ್ತಾ ಮಕ್ಕಳ ಶಿಕ್ಷಣದ ಜವಾಬ್ದಾರಿ ಇನ್ನೊಬ್ಬ ನಟ ತೆಗೆದುಕೊಳ್ಳಲಿ ಎಂದು ಬಯಸುತ್ತೇವೆ. ನಮ್ಮ ಯೋಚನೆಯ ದಾಟಿಯಲ್ಲೇ ಸಮಸ್ಯೆ ಇರುವಾಗ ಯಾರನ್ನ ಅಂದು ಏನು ಪ್ರಯೋಜನ?” ಎಂದು ಲೇಖಕ ಎನ್‌.ಎಸ್‌.ಕೆಂಚನೂರು ಕೇಳಿದ್ದಾರೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಶಾಲ್ ಸರ್ ನಿಮ್ಮ ಮನಸು ನಿಮ್ಮ ಗೆಳೆತನ ನಿಮ್ಮ ಶ್ರೀಮಂತಿಕೆ ಭಾವನೆ ತುಂಬಾ ದೊಡ್ಡದು … ನಿಮಗೆ ಕೋಟಿ ಕೋಟಿ ಗೌರವಪೂರ್ವಕ ನಮನಗಳು…
    ಈ ಮಾತನ್ನು ಇಲ್ಲಿ ಯಾರೂ ಕೂಡ ಹೇಳಲಿಲ್ಲ… ಧೈರ್ಯ ಕೊಡಲಿಲ್ಲ…. ದೇವರು ನಿಮಗೆ ಆಯಸ್ಸು ಆರೋಗ್ಯ ಭಾಗ್ಯ ಕೊಡಲಿ ವಿಶಾಲ್ ಸರ್ ನಿಮ್ಮಂತವರು ಯಾವಾಗಲೂ ಚೆನ್ನಾಗಿರಬೇಕು ಮಾದರಿಯಾಗಿರಬೇಕು

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...