Homeಕರ್ನಾಟಕಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

ಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

- Advertisement -
- Advertisement -

ನಟ ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನವು ಅವರ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಪುನೀತ್‌ ಅವರ ಚಾರಿಟಿ ಕಾರ್ಯಗಳ ಮುಂದುವರಿಕೆಯ ಬಗ್ಗೆ ಅನಿಶ್ಚಿತತೆಯೂ ಉಂಟಾಗಿತ್ತು.

ಪುನೀತ್ ರಾಜ್‌ಕುಮಾರ್ ಅವರು ಬಡವರಿಗೆ ಸಹಾಯ ನೀಡುತ್ತಾ ಬಂದಿದ್ದರು. ಅವುಗಳಲ್ಲಿ ಒಂದು ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನಸಹಾಯ. ಪುನೀತ್ ಅವರು ಕಂಡು ಇನ್ನು ಮುಂದೆ ಕನಸು ನನಸಾಗುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದನ್ನು ಮುಂದಕ್ಕೆ ಕೊಂಡೊಯ್ಯಲು ಒಬ್ಬ ನಟ ಮುಂದೆ ಬಂದಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1,800 ವಿದ್ಯಾರ್ಥಿಗಳ ಪೋಷಣೆಯನ್ನು ಮುಂದುವರಿಸುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ.

ಮೂಲತಃ ಬೆಂಗಳೂರಿನವರಾದ ವಿಶಾಲ್‌, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ, “ಸಹೋದರನ ಕಾರ್ಯವನ್ನು ನಾನು ಮುಂದುವರಿಸುತ್ತೇನೆ” ಎಂದಿದ್ದಾರೆ.

ವಿಶಾಲ್ ಅವರ ಈ ನಿಲುವಿಗೆ ಕನ್ನಡಿಗರು ಮನಸೋತಿದ್ದಾರೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, “ಭಾಷೆ ಅರ್ಥವಾಗದಿದ್ದರೂ ಸರಿ, ಕೆಟ್ಟ ಚಿತ್ರವಾದರೂ ಸರಿ, ಕರ್ನಾಟಕದಲ್ಲಿ ಬಿಡುಗಡೆಯಾಗುವ ನಟ ವಿಶಾಲ್ ಅವರ ಎಲ್ಲ ಸಿನಿಮಾಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

“ವಿಶಾಲ್ ಅವರ ತಂದೆ ಅಪ್ಪಟ ಕನ್ನಡಿಗ, ಮಾನವೀಯತೆಗೆ ಮರುಗುವ ಜೀವ ವಿಶಾಲ್. ತಮಿಳುನಾಡಿನಲ್ಲಿ ಕೆ.ಜಿ.ಎಫ್. ಚಿತ್ರ ಹವಾ ಸೃಷ್ಟಿಸಿದ್ದರ ಹಿಂದೆ ವಿಶಾಲ್ ಶ್ರಮ ಸಾಕಷ್ಟಿದೆ. ಅದ್ಭುತ ನಟನೆ ವಿಶಾಲ್ ಅವರದ್ದು. ಮೌಲ್ಯಾಧಾರಿತ ವ್ಯಕ್ತಿ ವಿಶಾಲ್” ಎಂದು ಸಂತೋಷ್‌ ಪಾಪಣ್ಣ ಕಮೆಂಟ್ ಮಾಡಿದ್ದಾರೆ.

“ಹೆಸರು ಮಾತ್ರ ವಿಶಾಲವಾಗಿಲ್ಲ, ಇವರ ಮನಸ್ಸೂ ವಿಶಾಲವಾಗಿದೆ. ನಾನು ಸಹ ಇನ್ನು ಮುಂದೆ ವಿಶಾಲ್ ನಟಿಸುವ ಎಲ್ಲಾ ಚಿತ್ರಗಳನ್ನೂ ನೋಡುತ್ತೇನೆ. ಮೊಬೈಲ್‌ನಲ್ಲಿ ಅಲ್ಲ, ಸಿನಿಮಾ ಥಿಯೇಟರ್‌ನಲ್ಲಿ ಟಿಕೆಟ್ ಪಡೆದು ನೋಡುವೆ” ಎಂದು ನಗು ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

“ಇತ್ತೀಚೆಗೆ ಕೆಲವು ಮಾನಸಿಕವಾಗಿ ಅಸ್ಥಿರತೆ ಉಳ್ಳವರು ವ್ಯಕ್ತಪಡಿಸುವ ಹೊಲಸು ಮಾತುಗಳಿಗಿಂತ ನಟ ವಿಶಾಲ್ ಅವರ ಮಾತು ಅತ್ಯಂತ ಮೌಲ್ಯಧಾರಿತವಾಗಿದೆ” ಎಂದು ರಫೀಕ್‌ ದಾಲ್ಕಜೆ ಕೊಲ್ಪೆ ತಿಳಿಸಿದ್ದಾರೆ.

“ಕರ್ನಾಟಕ ರಣಧೀರ ಪಡೆಯ ಸಮಸ್ತ ಕುಟುಂಬದ ವತಿಯಿಂದ ಕೋಟಿ ಕೋಟಿ ನಮಸ್ಕಾರಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಕರ್ನಾಟಕದ ಮಹಾ ಜನತೆ ನಿಮ್ಮನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಭಗವಂತ ನಿಮ್ಮನ್ನು ಉತ್ತಮವಾದ ಆರೋಗ್ಯ ಸಿರಿ ಸಂಪತ್ತು ಸಕಲವು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ” ಎಂದು ಮಲ್ಲಿಕಾರ್ಜುನ್‌ ಬಿ.ಕುಲ್ಗೇರಿ ಮಡಿವಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

– ಹೀಗೆ ಸಾವಿರಾರು ಕನ್ನಡಿಗರು ವಿಶಾಲ್‌ ಅವರ ನಿರ್ಧಾರಕ್ಕೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಮಾನ ಶಿಕ್ಷಣದ ಕುರಿತು ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದೂ ಮುನ್ನಲೆಗೆ ಬಂದಿದೆ.

ಈಗ ಇದೆಲ್ಲ ಭಾವಾವೇಶದಿಂದ ಹೊರಬಂದು ಯೋಚಿಸಿದರೆ… ಪುನೀತ್ ಸಾವಿರದೆಂಟುನೂರು ಮಕ್ಕಳ ಓದು ನೋಡ್ಕೊತಿದ್ರು, ಅದರ ಕತೆ ಮುಂದೆ ಹೇಗೋ ಅಂತ ಯೋಚಿಸ್ತಿದ್ದೇವೆಯೇ ಹೊರತು, ಸರಕಾರಕ್ಕೆ ಮಕ್ಕಳಿಗೆ ಕನಿಷ್ಟ ಹನ್ನೆರಡನೆಯ ತರಗತಿಯ ತನಕವಾದರೂ ಸಮಾನ ಮತ್ತು ಉಚಿತ ಶಿಕ್ಷಣ ನೀಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ನಮ್ಮಲ್ಲಿ ಪ್ರಶ್ನೆಯೇ ಹುಟ್ಟಲ್ಲ. ನಲವತ್ತು ರೂಪಾಯಿಯ ಪೆಟ್ರೋಲ್‌ಗೆ ಎಪ್ಪತ್ತು ರೂಪಾಯಿ ಟ್ಯಾಕ್ಸ್ ಕಟ್ಟುತ್ತಾ ಮಕ್ಕಳ ಶಿಕ್ಷಣದ ಜವಾಬ್ದಾರಿ ಇನ್ನೊಬ್ಬ ನಟ ತೆಗೆದುಕೊಳ್ಳಲಿ ಎಂದು ಬಯಸುತ್ತೇವೆ. ನಮ್ಮ ಯೋಚನೆಯ ದಾಟಿಯಲ್ಲೇ ಸಮಸ್ಯೆ ಇರುವಾಗ ಯಾರನ್ನ ಅಂದು ಏನು ಪ್ರಯೋಜನ?” ಎಂದು ಲೇಖಕ ಎನ್‌.ಎಸ್‌.ಕೆಂಚನೂರು ಕೇಳಿದ್ದಾರೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಶಾಲ್ ಸರ್ ನಿಮ್ಮ ಮನಸು ನಿಮ್ಮ ಗೆಳೆತನ ನಿಮ್ಮ ಶ್ರೀಮಂತಿಕೆ ಭಾವನೆ ತುಂಬಾ ದೊಡ್ಡದು … ನಿಮಗೆ ಕೋಟಿ ಕೋಟಿ ಗೌರವಪೂರ್ವಕ ನಮನಗಳು…
    ಈ ಮಾತನ್ನು ಇಲ್ಲಿ ಯಾರೂ ಕೂಡ ಹೇಳಲಿಲ್ಲ… ಧೈರ್ಯ ಕೊಡಲಿಲ್ಲ…. ದೇವರು ನಿಮಗೆ ಆಯಸ್ಸು ಆರೋಗ್ಯ ಭಾಗ್ಯ ಕೊಡಲಿ ವಿಶಾಲ್ ಸರ್ ನಿಮ್ಮಂತವರು ಯಾವಾಗಲೂ ಚೆನ್ನಾಗಿರಬೇಕು ಮಾದರಿಯಾಗಿರಬೇಕು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...