Homeಕರ್ನಾಟಕಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

ಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

- Advertisement -
- Advertisement -

ನಟ ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನವು ಅವರ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಪುನೀತ್‌ ಅವರ ಚಾರಿಟಿ ಕಾರ್ಯಗಳ ಮುಂದುವರಿಕೆಯ ಬಗ್ಗೆ ಅನಿಶ್ಚಿತತೆಯೂ ಉಂಟಾಗಿತ್ತು.

ಪುನೀತ್ ರಾಜ್‌ಕುಮಾರ್ ಅವರು ಬಡವರಿಗೆ ಸಹಾಯ ನೀಡುತ್ತಾ ಬಂದಿದ್ದರು. ಅವುಗಳಲ್ಲಿ ಒಂದು ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನಸಹಾಯ. ಪುನೀತ್ ಅವರು ಕಂಡು ಇನ್ನು ಮುಂದೆ ಕನಸು ನನಸಾಗುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದನ್ನು ಮುಂದಕ್ಕೆ ಕೊಂಡೊಯ್ಯಲು ಒಬ್ಬ ನಟ ಮುಂದೆ ಬಂದಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1,800 ವಿದ್ಯಾರ್ಥಿಗಳ ಪೋಷಣೆಯನ್ನು ಮುಂದುವರಿಸುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ.

ಮೂಲತಃ ಬೆಂಗಳೂರಿನವರಾದ ವಿಶಾಲ್‌, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ, “ಸಹೋದರನ ಕಾರ್ಯವನ್ನು ನಾನು ಮುಂದುವರಿಸುತ್ತೇನೆ” ಎಂದಿದ್ದಾರೆ.

ವಿಶಾಲ್ ಅವರ ಈ ನಿಲುವಿಗೆ ಕನ್ನಡಿಗರು ಮನಸೋತಿದ್ದಾರೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, “ಭಾಷೆ ಅರ್ಥವಾಗದಿದ್ದರೂ ಸರಿ, ಕೆಟ್ಟ ಚಿತ್ರವಾದರೂ ಸರಿ, ಕರ್ನಾಟಕದಲ್ಲಿ ಬಿಡುಗಡೆಯಾಗುವ ನಟ ವಿಶಾಲ್ ಅವರ ಎಲ್ಲ ಸಿನಿಮಾಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

“ವಿಶಾಲ್ ಅವರ ತಂದೆ ಅಪ್ಪಟ ಕನ್ನಡಿಗ, ಮಾನವೀಯತೆಗೆ ಮರುಗುವ ಜೀವ ವಿಶಾಲ್. ತಮಿಳುನಾಡಿನಲ್ಲಿ ಕೆ.ಜಿ.ಎಫ್. ಚಿತ್ರ ಹವಾ ಸೃಷ್ಟಿಸಿದ್ದರ ಹಿಂದೆ ವಿಶಾಲ್ ಶ್ರಮ ಸಾಕಷ್ಟಿದೆ. ಅದ್ಭುತ ನಟನೆ ವಿಶಾಲ್ ಅವರದ್ದು. ಮೌಲ್ಯಾಧಾರಿತ ವ್ಯಕ್ತಿ ವಿಶಾಲ್” ಎಂದು ಸಂತೋಷ್‌ ಪಾಪಣ್ಣ ಕಮೆಂಟ್ ಮಾಡಿದ್ದಾರೆ.

“ಹೆಸರು ಮಾತ್ರ ವಿಶಾಲವಾಗಿಲ್ಲ, ಇವರ ಮನಸ್ಸೂ ವಿಶಾಲವಾಗಿದೆ. ನಾನು ಸಹ ಇನ್ನು ಮುಂದೆ ವಿಶಾಲ್ ನಟಿಸುವ ಎಲ್ಲಾ ಚಿತ್ರಗಳನ್ನೂ ನೋಡುತ್ತೇನೆ. ಮೊಬೈಲ್‌ನಲ್ಲಿ ಅಲ್ಲ, ಸಿನಿಮಾ ಥಿಯೇಟರ್‌ನಲ್ಲಿ ಟಿಕೆಟ್ ಪಡೆದು ನೋಡುವೆ” ಎಂದು ನಗು ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

“ಇತ್ತೀಚೆಗೆ ಕೆಲವು ಮಾನಸಿಕವಾಗಿ ಅಸ್ಥಿರತೆ ಉಳ್ಳವರು ವ್ಯಕ್ತಪಡಿಸುವ ಹೊಲಸು ಮಾತುಗಳಿಗಿಂತ ನಟ ವಿಶಾಲ್ ಅವರ ಮಾತು ಅತ್ಯಂತ ಮೌಲ್ಯಧಾರಿತವಾಗಿದೆ” ಎಂದು ರಫೀಕ್‌ ದಾಲ್ಕಜೆ ಕೊಲ್ಪೆ ತಿಳಿಸಿದ್ದಾರೆ.

“ಕರ್ನಾಟಕ ರಣಧೀರ ಪಡೆಯ ಸಮಸ್ತ ಕುಟುಂಬದ ವತಿಯಿಂದ ಕೋಟಿ ಕೋಟಿ ನಮಸ್ಕಾರಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಕರ್ನಾಟಕದ ಮಹಾ ಜನತೆ ನಿಮ್ಮನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಭಗವಂತ ನಿಮ್ಮನ್ನು ಉತ್ತಮವಾದ ಆರೋಗ್ಯ ಸಿರಿ ಸಂಪತ್ತು ಸಕಲವು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ” ಎಂದು ಮಲ್ಲಿಕಾರ್ಜುನ್‌ ಬಿ.ಕುಲ್ಗೇರಿ ಮಡಿವಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

– ಹೀಗೆ ಸಾವಿರಾರು ಕನ್ನಡಿಗರು ವಿಶಾಲ್‌ ಅವರ ನಿರ್ಧಾರಕ್ಕೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಮಾನ ಶಿಕ್ಷಣದ ಕುರಿತು ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದೂ ಮುನ್ನಲೆಗೆ ಬಂದಿದೆ.

ಈಗ ಇದೆಲ್ಲ ಭಾವಾವೇಶದಿಂದ ಹೊರಬಂದು ಯೋಚಿಸಿದರೆ… ಪುನೀತ್ ಸಾವಿರದೆಂಟುನೂರು ಮಕ್ಕಳ ಓದು ನೋಡ್ಕೊತಿದ್ರು, ಅದರ ಕತೆ ಮುಂದೆ ಹೇಗೋ ಅಂತ ಯೋಚಿಸ್ತಿದ್ದೇವೆಯೇ ಹೊರತು, ಸರಕಾರಕ್ಕೆ ಮಕ್ಕಳಿಗೆ ಕನಿಷ್ಟ ಹನ್ನೆರಡನೆಯ ತರಗತಿಯ ತನಕವಾದರೂ ಸಮಾನ ಮತ್ತು ಉಚಿತ ಶಿಕ್ಷಣ ನೀಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ನಮ್ಮಲ್ಲಿ ಪ್ರಶ್ನೆಯೇ ಹುಟ್ಟಲ್ಲ. ನಲವತ್ತು ರೂಪಾಯಿಯ ಪೆಟ್ರೋಲ್‌ಗೆ ಎಪ್ಪತ್ತು ರೂಪಾಯಿ ಟ್ಯಾಕ್ಸ್ ಕಟ್ಟುತ್ತಾ ಮಕ್ಕಳ ಶಿಕ್ಷಣದ ಜವಾಬ್ದಾರಿ ಇನ್ನೊಬ್ಬ ನಟ ತೆಗೆದುಕೊಳ್ಳಲಿ ಎಂದು ಬಯಸುತ್ತೇವೆ. ನಮ್ಮ ಯೋಚನೆಯ ದಾಟಿಯಲ್ಲೇ ಸಮಸ್ಯೆ ಇರುವಾಗ ಯಾರನ್ನ ಅಂದು ಏನು ಪ್ರಯೋಜನ?” ಎಂದು ಲೇಖಕ ಎನ್‌.ಎಸ್‌.ಕೆಂಚನೂರು ಕೇಳಿದ್ದಾರೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಶಾಲ್ ಸರ್ ನಿಮ್ಮ ಮನಸು ನಿಮ್ಮ ಗೆಳೆತನ ನಿಮ್ಮ ಶ್ರೀಮಂತಿಕೆ ಭಾವನೆ ತುಂಬಾ ದೊಡ್ಡದು … ನಿಮಗೆ ಕೋಟಿ ಕೋಟಿ ಗೌರವಪೂರ್ವಕ ನಮನಗಳು…
    ಈ ಮಾತನ್ನು ಇಲ್ಲಿ ಯಾರೂ ಕೂಡ ಹೇಳಲಿಲ್ಲ… ಧೈರ್ಯ ಕೊಡಲಿಲ್ಲ…. ದೇವರು ನಿಮಗೆ ಆಯಸ್ಸು ಆರೋಗ್ಯ ಭಾಗ್ಯ ಕೊಡಲಿ ವಿಶಾಲ್ ಸರ್ ನಿಮ್ಮಂತವರು ಯಾವಾಗಲೂ ಚೆನ್ನಾಗಿರಬೇಕು ಮಾದರಿಯಾಗಿರಬೇಕು

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...