Homeಕರ್ನಾಟಕಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

ಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

- Advertisement -
- Advertisement -

ನಟ ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನವು ಅವರ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಪುನೀತ್‌ ಅವರ ಚಾರಿಟಿ ಕಾರ್ಯಗಳ ಮುಂದುವರಿಕೆಯ ಬಗ್ಗೆ ಅನಿಶ್ಚಿತತೆಯೂ ಉಂಟಾಗಿತ್ತು.

ಪುನೀತ್ ರಾಜ್‌ಕುಮಾರ್ ಅವರು ಬಡವರಿಗೆ ಸಹಾಯ ನೀಡುತ್ತಾ ಬಂದಿದ್ದರು. ಅವುಗಳಲ್ಲಿ ಒಂದು ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನಸಹಾಯ. ಪುನೀತ್ ಅವರು ಕಂಡು ಇನ್ನು ಮುಂದೆ ಕನಸು ನನಸಾಗುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದನ್ನು ಮುಂದಕ್ಕೆ ಕೊಂಡೊಯ್ಯಲು ಒಬ್ಬ ನಟ ಮುಂದೆ ಬಂದಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1,800 ವಿದ್ಯಾರ್ಥಿಗಳ ಪೋಷಣೆಯನ್ನು ಮುಂದುವರಿಸುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ.

ಮೂಲತಃ ಬೆಂಗಳೂರಿನವರಾದ ವಿಶಾಲ್‌, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ, “ಸಹೋದರನ ಕಾರ್ಯವನ್ನು ನಾನು ಮುಂದುವರಿಸುತ್ತೇನೆ” ಎಂದಿದ್ದಾರೆ.

ವಿಶಾಲ್ ಅವರ ಈ ನಿಲುವಿಗೆ ಕನ್ನಡಿಗರು ಮನಸೋತಿದ್ದಾರೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, “ಭಾಷೆ ಅರ್ಥವಾಗದಿದ್ದರೂ ಸರಿ, ಕೆಟ್ಟ ಚಿತ್ರವಾದರೂ ಸರಿ, ಕರ್ನಾಟಕದಲ್ಲಿ ಬಿಡುಗಡೆಯಾಗುವ ನಟ ವಿಶಾಲ್ ಅವರ ಎಲ್ಲ ಸಿನಿಮಾಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

“ವಿಶಾಲ್ ಅವರ ತಂದೆ ಅಪ್ಪಟ ಕನ್ನಡಿಗ, ಮಾನವೀಯತೆಗೆ ಮರುಗುವ ಜೀವ ವಿಶಾಲ್. ತಮಿಳುನಾಡಿನಲ್ಲಿ ಕೆ.ಜಿ.ಎಫ್. ಚಿತ್ರ ಹವಾ ಸೃಷ್ಟಿಸಿದ್ದರ ಹಿಂದೆ ವಿಶಾಲ್ ಶ್ರಮ ಸಾಕಷ್ಟಿದೆ. ಅದ್ಭುತ ನಟನೆ ವಿಶಾಲ್ ಅವರದ್ದು. ಮೌಲ್ಯಾಧಾರಿತ ವ್ಯಕ್ತಿ ವಿಶಾಲ್” ಎಂದು ಸಂತೋಷ್‌ ಪಾಪಣ್ಣ ಕಮೆಂಟ್ ಮಾಡಿದ್ದಾರೆ.

“ಹೆಸರು ಮಾತ್ರ ವಿಶಾಲವಾಗಿಲ್ಲ, ಇವರ ಮನಸ್ಸೂ ವಿಶಾಲವಾಗಿದೆ. ನಾನು ಸಹ ಇನ್ನು ಮುಂದೆ ವಿಶಾಲ್ ನಟಿಸುವ ಎಲ್ಲಾ ಚಿತ್ರಗಳನ್ನೂ ನೋಡುತ್ತೇನೆ. ಮೊಬೈಲ್‌ನಲ್ಲಿ ಅಲ್ಲ, ಸಿನಿಮಾ ಥಿಯೇಟರ್‌ನಲ್ಲಿ ಟಿಕೆಟ್ ಪಡೆದು ನೋಡುವೆ” ಎಂದು ನಗು ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

“ಇತ್ತೀಚೆಗೆ ಕೆಲವು ಮಾನಸಿಕವಾಗಿ ಅಸ್ಥಿರತೆ ಉಳ್ಳವರು ವ್ಯಕ್ತಪಡಿಸುವ ಹೊಲಸು ಮಾತುಗಳಿಗಿಂತ ನಟ ವಿಶಾಲ್ ಅವರ ಮಾತು ಅತ್ಯಂತ ಮೌಲ್ಯಧಾರಿತವಾಗಿದೆ” ಎಂದು ರಫೀಕ್‌ ದಾಲ್ಕಜೆ ಕೊಲ್ಪೆ ತಿಳಿಸಿದ್ದಾರೆ.

“ಕರ್ನಾಟಕ ರಣಧೀರ ಪಡೆಯ ಸಮಸ್ತ ಕುಟುಂಬದ ವತಿಯಿಂದ ಕೋಟಿ ಕೋಟಿ ನಮಸ್ಕಾರಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಕರ್ನಾಟಕದ ಮಹಾ ಜನತೆ ನಿಮ್ಮನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಭಗವಂತ ನಿಮ್ಮನ್ನು ಉತ್ತಮವಾದ ಆರೋಗ್ಯ ಸಿರಿ ಸಂಪತ್ತು ಸಕಲವು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ” ಎಂದು ಮಲ್ಲಿಕಾರ್ಜುನ್‌ ಬಿ.ಕುಲ್ಗೇರಿ ಮಡಿವಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

– ಹೀಗೆ ಸಾವಿರಾರು ಕನ್ನಡಿಗರು ವಿಶಾಲ್‌ ಅವರ ನಿರ್ಧಾರಕ್ಕೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಮಾನ ಶಿಕ್ಷಣದ ಕುರಿತು ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದೂ ಮುನ್ನಲೆಗೆ ಬಂದಿದೆ.

ಈಗ ಇದೆಲ್ಲ ಭಾವಾವೇಶದಿಂದ ಹೊರಬಂದು ಯೋಚಿಸಿದರೆ… ಪುನೀತ್ ಸಾವಿರದೆಂಟುನೂರು ಮಕ್ಕಳ ಓದು ನೋಡ್ಕೊತಿದ್ರು, ಅದರ ಕತೆ ಮುಂದೆ ಹೇಗೋ ಅಂತ ಯೋಚಿಸ್ತಿದ್ದೇವೆಯೇ ಹೊರತು, ಸರಕಾರಕ್ಕೆ ಮಕ್ಕಳಿಗೆ ಕನಿಷ್ಟ ಹನ್ನೆರಡನೆಯ ತರಗತಿಯ ತನಕವಾದರೂ ಸಮಾನ ಮತ್ತು ಉಚಿತ ಶಿಕ್ಷಣ ನೀಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ನಮ್ಮಲ್ಲಿ ಪ್ರಶ್ನೆಯೇ ಹುಟ್ಟಲ್ಲ. ನಲವತ್ತು ರೂಪಾಯಿಯ ಪೆಟ್ರೋಲ್‌ಗೆ ಎಪ್ಪತ್ತು ರೂಪಾಯಿ ಟ್ಯಾಕ್ಸ್ ಕಟ್ಟುತ್ತಾ ಮಕ್ಕಳ ಶಿಕ್ಷಣದ ಜವಾಬ್ದಾರಿ ಇನ್ನೊಬ್ಬ ನಟ ತೆಗೆದುಕೊಳ್ಳಲಿ ಎಂದು ಬಯಸುತ್ತೇವೆ. ನಮ್ಮ ಯೋಚನೆಯ ದಾಟಿಯಲ್ಲೇ ಸಮಸ್ಯೆ ಇರುವಾಗ ಯಾರನ್ನ ಅಂದು ಏನು ಪ್ರಯೋಜನ?” ಎಂದು ಲೇಖಕ ಎನ್‌.ಎಸ್‌.ಕೆಂಚನೂರು ಕೇಳಿದ್ದಾರೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಶಾಲ್ ಸರ್ ನಿಮ್ಮ ಮನಸು ನಿಮ್ಮ ಗೆಳೆತನ ನಿಮ್ಮ ಶ್ರೀಮಂತಿಕೆ ಭಾವನೆ ತುಂಬಾ ದೊಡ್ಡದು … ನಿಮಗೆ ಕೋಟಿ ಕೋಟಿ ಗೌರವಪೂರ್ವಕ ನಮನಗಳು…
    ಈ ಮಾತನ್ನು ಇಲ್ಲಿ ಯಾರೂ ಕೂಡ ಹೇಳಲಿಲ್ಲ… ಧೈರ್ಯ ಕೊಡಲಿಲ್ಲ…. ದೇವರು ನಿಮಗೆ ಆಯಸ್ಸು ಆರೋಗ್ಯ ಭಾಗ್ಯ ಕೊಡಲಿ ವಿಶಾಲ್ ಸರ್ ನಿಮ್ಮಂತವರು ಯಾವಾಗಲೂ ಚೆನ್ನಾಗಿರಬೇಕು ಮಾದರಿಯಾಗಿರಬೇಕು

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...