Homeಕರ್ನಾಟಕಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

ಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

- Advertisement -
- Advertisement -

ನಟ ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನವು ಅವರ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಪುನೀತ್‌ ಅವರ ಚಾರಿಟಿ ಕಾರ್ಯಗಳ ಮುಂದುವರಿಕೆಯ ಬಗ್ಗೆ ಅನಿಶ್ಚಿತತೆಯೂ ಉಂಟಾಗಿತ್ತು.

ಪುನೀತ್ ರಾಜ್‌ಕುಮಾರ್ ಅವರು ಬಡವರಿಗೆ ಸಹಾಯ ನೀಡುತ್ತಾ ಬಂದಿದ್ದರು. ಅವುಗಳಲ್ಲಿ ಒಂದು ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನಸಹಾಯ. ಪುನೀತ್ ಅವರು ಕಂಡು ಇನ್ನು ಮುಂದೆ ಕನಸು ನನಸಾಗುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದನ್ನು ಮುಂದಕ್ಕೆ ಕೊಂಡೊಯ್ಯಲು ಒಬ್ಬ ನಟ ಮುಂದೆ ಬಂದಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1,800 ವಿದ್ಯಾರ್ಥಿಗಳ ಪೋಷಣೆಯನ್ನು ಮುಂದುವರಿಸುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ.

ಮೂಲತಃ ಬೆಂಗಳೂರಿನವರಾದ ವಿಶಾಲ್‌, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ, “ಸಹೋದರನ ಕಾರ್ಯವನ್ನು ನಾನು ಮುಂದುವರಿಸುತ್ತೇನೆ” ಎಂದಿದ್ದಾರೆ.

ವಿಶಾಲ್ ಅವರ ಈ ನಿಲುವಿಗೆ ಕನ್ನಡಿಗರು ಮನಸೋತಿದ್ದಾರೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, “ಭಾಷೆ ಅರ್ಥವಾಗದಿದ್ದರೂ ಸರಿ, ಕೆಟ್ಟ ಚಿತ್ರವಾದರೂ ಸರಿ, ಕರ್ನಾಟಕದಲ್ಲಿ ಬಿಡುಗಡೆಯಾಗುವ ನಟ ವಿಶಾಲ್ ಅವರ ಎಲ್ಲ ಸಿನಿಮಾಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

“ವಿಶಾಲ್ ಅವರ ತಂದೆ ಅಪ್ಪಟ ಕನ್ನಡಿಗ, ಮಾನವೀಯತೆಗೆ ಮರುಗುವ ಜೀವ ವಿಶಾಲ್. ತಮಿಳುನಾಡಿನಲ್ಲಿ ಕೆ.ಜಿ.ಎಫ್. ಚಿತ್ರ ಹವಾ ಸೃಷ್ಟಿಸಿದ್ದರ ಹಿಂದೆ ವಿಶಾಲ್ ಶ್ರಮ ಸಾಕಷ್ಟಿದೆ. ಅದ್ಭುತ ನಟನೆ ವಿಶಾಲ್ ಅವರದ್ದು. ಮೌಲ್ಯಾಧಾರಿತ ವ್ಯಕ್ತಿ ವಿಶಾಲ್” ಎಂದು ಸಂತೋಷ್‌ ಪಾಪಣ್ಣ ಕಮೆಂಟ್ ಮಾಡಿದ್ದಾರೆ.

“ಹೆಸರು ಮಾತ್ರ ವಿಶಾಲವಾಗಿಲ್ಲ, ಇವರ ಮನಸ್ಸೂ ವಿಶಾಲವಾಗಿದೆ. ನಾನು ಸಹ ಇನ್ನು ಮುಂದೆ ವಿಶಾಲ್ ನಟಿಸುವ ಎಲ್ಲಾ ಚಿತ್ರಗಳನ್ನೂ ನೋಡುತ್ತೇನೆ. ಮೊಬೈಲ್‌ನಲ್ಲಿ ಅಲ್ಲ, ಸಿನಿಮಾ ಥಿಯೇಟರ್‌ನಲ್ಲಿ ಟಿಕೆಟ್ ಪಡೆದು ನೋಡುವೆ” ಎಂದು ನಗು ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

“ಇತ್ತೀಚೆಗೆ ಕೆಲವು ಮಾನಸಿಕವಾಗಿ ಅಸ್ಥಿರತೆ ಉಳ್ಳವರು ವ್ಯಕ್ತಪಡಿಸುವ ಹೊಲಸು ಮಾತುಗಳಿಗಿಂತ ನಟ ವಿಶಾಲ್ ಅವರ ಮಾತು ಅತ್ಯಂತ ಮೌಲ್ಯಧಾರಿತವಾಗಿದೆ” ಎಂದು ರಫೀಕ್‌ ದಾಲ್ಕಜೆ ಕೊಲ್ಪೆ ತಿಳಿಸಿದ್ದಾರೆ.

“ಕರ್ನಾಟಕ ರಣಧೀರ ಪಡೆಯ ಸಮಸ್ತ ಕುಟುಂಬದ ವತಿಯಿಂದ ಕೋಟಿ ಕೋಟಿ ನಮಸ್ಕಾರಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಕರ್ನಾಟಕದ ಮಹಾ ಜನತೆ ನಿಮ್ಮನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಭಗವಂತ ನಿಮ್ಮನ್ನು ಉತ್ತಮವಾದ ಆರೋಗ್ಯ ಸಿರಿ ಸಂಪತ್ತು ಸಕಲವು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ” ಎಂದು ಮಲ್ಲಿಕಾರ್ಜುನ್‌ ಬಿ.ಕುಲ್ಗೇರಿ ಮಡಿವಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

– ಹೀಗೆ ಸಾವಿರಾರು ಕನ್ನಡಿಗರು ವಿಶಾಲ್‌ ಅವರ ನಿರ್ಧಾರಕ್ಕೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಮಾನ ಶಿಕ್ಷಣದ ಕುರಿತು ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದೂ ಮುನ್ನಲೆಗೆ ಬಂದಿದೆ.

ಈಗ ಇದೆಲ್ಲ ಭಾವಾವೇಶದಿಂದ ಹೊರಬಂದು ಯೋಚಿಸಿದರೆ… ಪುನೀತ್ ಸಾವಿರದೆಂಟುನೂರು ಮಕ್ಕಳ ಓದು ನೋಡ್ಕೊತಿದ್ರು, ಅದರ ಕತೆ ಮುಂದೆ ಹೇಗೋ ಅಂತ ಯೋಚಿಸ್ತಿದ್ದೇವೆಯೇ ಹೊರತು, ಸರಕಾರಕ್ಕೆ ಮಕ್ಕಳಿಗೆ ಕನಿಷ್ಟ ಹನ್ನೆರಡನೆಯ ತರಗತಿಯ ತನಕವಾದರೂ ಸಮಾನ ಮತ್ತು ಉಚಿತ ಶಿಕ್ಷಣ ನೀಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ನಮ್ಮಲ್ಲಿ ಪ್ರಶ್ನೆಯೇ ಹುಟ್ಟಲ್ಲ. ನಲವತ್ತು ರೂಪಾಯಿಯ ಪೆಟ್ರೋಲ್‌ಗೆ ಎಪ್ಪತ್ತು ರೂಪಾಯಿ ಟ್ಯಾಕ್ಸ್ ಕಟ್ಟುತ್ತಾ ಮಕ್ಕಳ ಶಿಕ್ಷಣದ ಜವಾಬ್ದಾರಿ ಇನ್ನೊಬ್ಬ ನಟ ತೆಗೆದುಕೊಳ್ಳಲಿ ಎಂದು ಬಯಸುತ್ತೇವೆ. ನಮ್ಮ ಯೋಚನೆಯ ದಾಟಿಯಲ್ಲೇ ಸಮಸ್ಯೆ ಇರುವಾಗ ಯಾರನ್ನ ಅಂದು ಏನು ಪ್ರಯೋಜನ?” ಎಂದು ಲೇಖಕ ಎನ್‌.ಎಸ್‌.ಕೆಂಚನೂರು ಕೇಳಿದ್ದಾರೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಶಾಲ್ ಸರ್ ನಿಮ್ಮ ಮನಸು ನಿಮ್ಮ ಗೆಳೆತನ ನಿಮ್ಮ ಶ್ರೀಮಂತಿಕೆ ಭಾವನೆ ತುಂಬಾ ದೊಡ್ಡದು … ನಿಮಗೆ ಕೋಟಿ ಕೋಟಿ ಗೌರವಪೂರ್ವಕ ನಮನಗಳು…
    ಈ ಮಾತನ್ನು ಇಲ್ಲಿ ಯಾರೂ ಕೂಡ ಹೇಳಲಿಲ್ಲ… ಧೈರ್ಯ ಕೊಡಲಿಲ್ಲ…. ದೇವರು ನಿಮಗೆ ಆಯಸ್ಸು ಆರೋಗ್ಯ ಭಾಗ್ಯ ಕೊಡಲಿ ವಿಶಾಲ್ ಸರ್ ನಿಮ್ಮಂತವರು ಯಾವಾಗಲೂ ಚೆನ್ನಾಗಿರಬೇಕು ಮಾದರಿಯಾಗಿರಬೇಕು

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...