Homeಕರ್ನಾಟಕಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

ಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

- Advertisement -
- Advertisement -

ನಟ ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನವು ಅವರ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಪುನೀತ್‌ ಅವರ ಚಾರಿಟಿ ಕಾರ್ಯಗಳ ಮುಂದುವರಿಕೆಯ ಬಗ್ಗೆ ಅನಿಶ್ಚಿತತೆಯೂ ಉಂಟಾಗಿತ್ತು.

ಪುನೀತ್ ರಾಜ್‌ಕುಮಾರ್ ಅವರು ಬಡವರಿಗೆ ಸಹಾಯ ನೀಡುತ್ತಾ ಬಂದಿದ್ದರು. ಅವುಗಳಲ್ಲಿ ಒಂದು ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನಸಹಾಯ. ಪುನೀತ್ ಅವರು ಕಂಡು ಇನ್ನು ಮುಂದೆ ಕನಸು ನನಸಾಗುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದನ್ನು ಮುಂದಕ್ಕೆ ಕೊಂಡೊಯ್ಯಲು ಒಬ್ಬ ನಟ ಮುಂದೆ ಬಂದಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1,800 ವಿದ್ಯಾರ್ಥಿಗಳ ಪೋಷಣೆಯನ್ನು ಮುಂದುವರಿಸುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ.

ಮೂಲತಃ ಬೆಂಗಳೂರಿನವರಾದ ವಿಶಾಲ್‌, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ, “ಸಹೋದರನ ಕಾರ್ಯವನ್ನು ನಾನು ಮುಂದುವರಿಸುತ್ತೇನೆ” ಎಂದಿದ್ದಾರೆ.

ವಿಶಾಲ್ ಅವರ ಈ ನಿಲುವಿಗೆ ಕನ್ನಡಿಗರು ಮನಸೋತಿದ್ದಾರೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, “ಭಾಷೆ ಅರ್ಥವಾಗದಿದ್ದರೂ ಸರಿ, ಕೆಟ್ಟ ಚಿತ್ರವಾದರೂ ಸರಿ, ಕರ್ನಾಟಕದಲ್ಲಿ ಬಿಡುಗಡೆಯಾಗುವ ನಟ ವಿಶಾಲ್ ಅವರ ಎಲ್ಲ ಸಿನಿಮಾಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

“ವಿಶಾಲ್ ಅವರ ತಂದೆ ಅಪ್ಪಟ ಕನ್ನಡಿಗ, ಮಾನವೀಯತೆಗೆ ಮರುಗುವ ಜೀವ ವಿಶಾಲ್. ತಮಿಳುನಾಡಿನಲ್ಲಿ ಕೆ.ಜಿ.ಎಫ್. ಚಿತ್ರ ಹವಾ ಸೃಷ್ಟಿಸಿದ್ದರ ಹಿಂದೆ ವಿಶಾಲ್ ಶ್ರಮ ಸಾಕಷ್ಟಿದೆ. ಅದ್ಭುತ ನಟನೆ ವಿಶಾಲ್ ಅವರದ್ದು. ಮೌಲ್ಯಾಧಾರಿತ ವ್ಯಕ್ತಿ ವಿಶಾಲ್” ಎಂದು ಸಂತೋಷ್‌ ಪಾಪಣ್ಣ ಕಮೆಂಟ್ ಮಾಡಿದ್ದಾರೆ.

“ಹೆಸರು ಮಾತ್ರ ವಿಶಾಲವಾಗಿಲ್ಲ, ಇವರ ಮನಸ್ಸೂ ವಿಶಾಲವಾಗಿದೆ. ನಾನು ಸಹ ಇನ್ನು ಮುಂದೆ ವಿಶಾಲ್ ನಟಿಸುವ ಎಲ್ಲಾ ಚಿತ್ರಗಳನ್ನೂ ನೋಡುತ್ತೇನೆ. ಮೊಬೈಲ್‌ನಲ್ಲಿ ಅಲ್ಲ, ಸಿನಿಮಾ ಥಿಯೇಟರ್‌ನಲ್ಲಿ ಟಿಕೆಟ್ ಪಡೆದು ನೋಡುವೆ” ಎಂದು ನಗು ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

“ಇತ್ತೀಚೆಗೆ ಕೆಲವು ಮಾನಸಿಕವಾಗಿ ಅಸ್ಥಿರತೆ ಉಳ್ಳವರು ವ್ಯಕ್ತಪಡಿಸುವ ಹೊಲಸು ಮಾತುಗಳಿಗಿಂತ ನಟ ವಿಶಾಲ್ ಅವರ ಮಾತು ಅತ್ಯಂತ ಮೌಲ್ಯಧಾರಿತವಾಗಿದೆ” ಎಂದು ರಫೀಕ್‌ ದಾಲ್ಕಜೆ ಕೊಲ್ಪೆ ತಿಳಿಸಿದ್ದಾರೆ.

“ಕರ್ನಾಟಕ ರಣಧೀರ ಪಡೆಯ ಸಮಸ್ತ ಕುಟುಂಬದ ವತಿಯಿಂದ ಕೋಟಿ ಕೋಟಿ ನಮಸ್ಕಾರಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಕರ್ನಾಟಕದ ಮಹಾ ಜನತೆ ನಿಮ್ಮನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಭಗವಂತ ನಿಮ್ಮನ್ನು ಉತ್ತಮವಾದ ಆರೋಗ್ಯ ಸಿರಿ ಸಂಪತ್ತು ಸಕಲವು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ” ಎಂದು ಮಲ್ಲಿಕಾರ್ಜುನ್‌ ಬಿ.ಕುಲ್ಗೇರಿ ಮಡಿವಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

– ಹೀಗೆ ಸಾವಿರಾರು ಕನ್ನಡಿಗರು ವಿಶಾಲ್‌ ಅವರ ನಿರ್ಧಾರಕ್ಕೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಮಾನ ಶಿಕ್ಷಣದ ಕುರಿತು ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದೂ ಮುನ್ನಲೆಗೆ ಬಂದಿದೆ.

ಈಗ ಇದೆಲ್ಲ ಭಾವಾವೇಶದಿಂದ ಹೊರಬಂದು ಯೋಚಿಸಿದರೆ… ಪುನೀತ್ ಸಾವಿರದೆಂಟುನೂರು ಮಕ್ಕಳ ಓದು ನೋಡ್ಕೊತಿದ್ರು, ಅದರ ಕತೆ ಮುಂದೆ ಹೇಗೋ ಅಂತ ಯೋಚಿಸ್ತಿದ್ದೇವೆಯೇ ಹೊರತು, ಸರಕಾರಕ್ಕೆ ಮಕ್ಕಳಿಗೆ ಕನಿಷ್ಟ ಹನ್ನೆರಡನೆಯ ತರಗತಿಯ ತನಕವಾದರೂ ಸಮಾನ ಮತ್ತು ಉಚಿತ ಶಿಕ್ಷಣ ನೀಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ನಮ್ಮಲ್ಲಿ ಪ್ರಶ್ನೆಯೇ ಹುಟ್ಟಲ್ಲ. ನಲವತ್ತು ರೂಪಾಯಿಯ ಪೆಟ್ರೋಲ್‌ಗೆ ಎಪ್ಪತ್ತು ರೂಪಾಯಿ ಟ್ಯಾಕ್ಸ್ ಕಟ್ಟುತ್ತಾ ಮಕ್ಕಳ ಶಿಕ್ಷಣದ ಜವಾಬ್ದಾರಿ ಇನ್ನೊಬ್ಬ ನಟ ತೆಗೆದುಕೊಳ್ಳಲಿ ಎಂದು ಬಯಸುತ್ತೇವೆ. ನಮ್ಮ ಯೋಚನೆಯ ದಾಟಿಯಲ್ಲೇ ಸಮಸ್ಯೆ ಇರುವಾಗ ಯಾರನ್ನ ಅಂದು ಏನು ಪ್ರಯೋಜನ?” ಎಂದು ಲೇಖಕ ಎನ್‌.ಎಸ್‌.ಕೆಂಚನೂರು ಕೇಳಿದ್ದಾರೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಶಾಲ್ ಸರ್ ನಿಮ್ಮ ಮನಸು ನಿಮ್ಮ ಗೆಳೆತನ ನಿಮ್ಮ ಶ್ರೀಮಂತಿಕೆ ಭಾವನೆ ತುಂಬಾ ದೊಡ್ಡದು … ನಿಮಗೆ ಕೋಟಿ ಕೋಟಿ ಗೌರವಪೂರ್ವಕ ನಮನಗಳು…
    ಈ ಮಾತನ್ನು ಇಲ್ಲಿ ಯಾರೂ ಕೂಡ ಹೇಳಲಿಲ್ಲ… ಧೈರ್ಯ ಕೊಡಲಿಲ್ಲ…. ದೇವರು ನಿಮಗೆ ಆಯಸ್ಸು ಆರೋಗ್ಯ ಭಾಗ್ಯ ಕೊಡಲಿ ವಿಶಾಲ್ ಸರ್ ನಿಮ್ಮಂತವರು ಯಾವಾಗಲೂ ಚೆನ್ನಾಗಿರಬೇಕು ಮಾದರಿಯಾಗಿರಬೇಕು

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...