Homeಕರ್ನಾಟಕಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

ಅಪ್ಪು ಪೋಷಿಸಿದ 1,800 ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ತಮಿಳು ನಟ ವಿಶಾಲ್: ಕನ್ನಡಿಗರು ಫಿದಾ

- Advertisement -
- Advertisement -

ನಟ ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನವು ಅವರ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಪುನೀತ್‌ ಅವರ ಚಾರಿಟಿ ಕಾರ್ಯಗಳ ಮುಂದುವರಿಕೆಯ ಬಗ್ಗೆ ಅನಿಶ್ಚಿತತೆಯೂ ಉಂಟಾಗಿತ್ತು.

ಪುನೀತ್ ರಾಜ್‌ಕುಮಾರ್ ಅವರು ಬಡವರಿಗೆ ಸಹಾಯ ನೀಡುತ್ತಾ ಬಂದಿದ್ದರು. ಅವುಗಳಲ್ಲಿ ಒಂದು ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧನಸಹಾಯ. ಪುನೀತ್ ಅವರು ಕಂಡು ಇನ್ನು ಮುಂದೆ ಕನಸು ನನಸಾಗುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು. ಈಗ ಅದನ್ನು ಮುಂದಕ್ಕೆ ಕೊಂಡೊಯ್ಯಲು ಒಬ್ಬ ನಟ ಮುಂದೆ ಬಂದಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಂದ ಉಚಿತ ಶೈಕ್ಷಣಿಕ ನೆರವು ಪಡೆಯುತ್ತಿರುವ 1,800 ವಿದ್ಯಾರ್ಥಿಗಳ ಪೋಷಣೆಯನ್ನು ಮುಂದುವರಿಸುವುದಾಗಿ ತಮಿಳು ನಟ ವಿಶಾಲ್ ಭರವಸೆ ನೀಡಿದ್ದಾರೆ.

ಮೂಲತಃ ಬೆಂಗಳೂರಿನವರಾದ ವಿಶಾಲ್‌, ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುತ್ತಾ, “ಸಹೋದರನ ಕಾರ್ಯವನ್ನು ನಾನು ಮುಂದುವರಿಸುತ್ತೇನೆ” ಎಂದಿದ್ದಾರೆ.

ವಿಶಾಲ್ ಅವರ ಈ ನಿಲುವಿಗೆ ಕನ್ನಡಿಗರು ಮನಸೋತಿದ್ದಾರೆ. ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ, “ಭಾಷೆ ಅರ್ಥವಾಗದಿದ್ದರೂ ಸರಿ, ಕೆಟ್ಟ ಚಿತ್ರವಾದರೂ ಸರಿ, ಕರ್ನಾಟಕದಲ್ಲಿ ಬಿಡುಗಡೆಯಾಗುವ ನಟ ವಿಶಾಲ್ ಅವರ ಎಲ್ಲ ಸಿನಿಮಾಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿರಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

“ವಿಶಾಲ್ ಅವರ ತಂದೆ ಅಪ್ಪಟ ಕನ್ನಡಿಗ, ಮಾನವೀಯತೆಗೆ ಮರುಗುವ ಜೀವ ವಿಶಾಲ್. ತಮಿಳುನಾಡಿನಲ್ಲಿ ಕೆ.ಜಿ.ಎಫ್. ಚಿತ್ರ ಹವಾ ಸೃಷ್ಟಿಸಿದ್ದರ ಹಿಂದೆ ವಿಶಾಲ್ ಶ್ರಮ ಸಾಕಷ್ಟಿದೆ. ಅದ್ಭುತ ನಟನೆ ವಿಶಾಲ್ ಅವರದ್ದು. ಮೌಲ್ಯಾಧಾರಿತ ವ್ಯಕ್ತಿ ವಿಶಾಲ್” ಎಂದು ಸಂತೋಷ್‌ ಪಾಪಣ್ಣ ಕಮೆಂಟ್ ಮಾಡಿದ್ದಾರೆ.

“ಹೆಸರು ಮಾತ್ರ ವಿಶಾಲವಾಗಿಲ್ಲ, ಇವರ ಮನಸ್ಸೂ ವಿಶಾಲವಾಗಿದೆ. ನಾನು ಸಹ ಇನ್ನು ಮುಂದೆ ವಿಶಾಲ್ ನಟಿಸುವ ಎಲ್ಲಾ ಚಿತ್ರಗಳನ್ನೂ ನೋಡುತ್ತೇನೆ. ಮೊಬೈಲ್‌ನಲ್ಲಿ ಅಲ್ಲ, ಸಿನಿಮಾ ಥಿಯೇಟರ್‌ನಲ್ಲಿ ಟಿಕೆಟ್ ಪಡೆದು ನೋಡುವೆ” ಎಂದು ನಗು ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದಾರೆ.

“ಇತ್ತೀಚೆಗೆ ಕೆಲವು ಮಾನಸಿಕವಾಗಿ ಅಸ್ಥಿರತೆ ಉಳ್ಳವರು ವ್ಯಕ್ತಪಡಿಸುವ ಹೊಲಸು ಮಾತುಗಳಿಗಿಂತ ನಟ ವಿಶಾಲ್ ಅವರ ಮಾತು ಅತ್ಯಂತ ಮೌಲ್ಯಧಾರಿತವಾಗಿದೆ” ಎಂದು ರಫೀಕ್‌ ದಾಲ್ಕಜೆ ಕೊಲ್ಪೆ ತಿಳಿಸಿದ್ದಾರೆ.

“ಕರ್ನಾಟಕ ರಣಧೀರ ಪಡೆಯ ಸಮಸ್ತ ಕುಟುಂಬದ ವತಿಯಿಂದ ಕೋಟಿ ಕೋಟಿ ನಮಸ್ಕಾರಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಕರ್ನಾಟಕದ ಮಹಾ ಜನತೆ ನಿಮ್ಮನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಅನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಭಗವಂತ ನಿಮ್ಮನ್ನು ಉತ್ತಮವಾದ ಆರೋಗ್ಯ ಸಿರಿ ಸಂಪತ್ತು ಸಕಲವು ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುವೆ” ಎಂದು ಮಲ್ಲಿಕಾರ್ಜುನ್‌ ಬಿ.ಕುಲ್ಗೇರಿ ಮಡಿವಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

– ಹೀಗೆ ಸಾವಿರಾರು ಕನ್ನಡಿಗರು ವಿಶಾಲ್‌ ಅವರ ನಿರ್ಧಾರಕ್ಕೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಮಾನ ಶಿಕ್ಷಣದ ಕುರಿತು ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದೂ ಮುನ್ನಲೆಗೆ ಬಂದಿದೆ.

ಈಗ ಇದೆಲ್ಲ ಭಾವಾವೇಶದಿಂದ ಹೊರಬಂದು ಯೋಚಿಸಿದರೆ… ಪುನೀತ್ ಸಾವಿರದೆಂಟುನೂರು ಮಕ್ಕಳ ಓದು ನೋಡ್ಕೊತಿದ್ರು, ಅದರ ಕತೆ ಮುಂದೆ ಹೇಗೋ ಅಂತ ಯೋಚಿಸ್ತಿದ್ದೇವೆಯೇ ಹೊರತು, ಸರಕಾರಕ್ಕೆ ಮಕ್ಕಳಿಗೆ ಕನಿಷ್ಟ ಹನ್ನೆರಡನೆಯ ತರಗತಿಯ ತನಕವಾದರೂ ಸಮಾನ ಮತ್ತು ಉಚಿತ ಶಿಕ್ಷಣ ನೀಡಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ನಮ್ಮಲ್ಲಿ ಪ್ರಶ್ನೆಯೇ ಹುಟ್ಟಲ್ಲ. ನಲವತ್ತು ರೂಪಾಯಿಯ ಪೆಟ್ರೋಲ್‌ಗೆ ಎಪ್ಪತ್ತು ರೂಪಾಯಿ ಟ್ಯಾಕ್ಸ್ ಕಟ್ಟುತ್ತಾ ಮಕ್ಕಳ ಶಿಕ್ಷಣದ ಜವಾಬ್ದಾರಿ ಇನ್ನೊಬ್ಬ ನಟ ತೆಗೆದುಕೊಳ್ಳಲಿ ಎಂದು ಬಯಸುತ್ತೇವೆ. ನಮ್ಮ ಯೋಚನೆಯ ದಾಟಿಯಲ್ಲೇ ಸಮಸ್ಯೆ ಇರುವಾಗ ಯಾರನ್ನ ಅಂದು ಏನು ಪ್ರಯೋಜನ?” ಎಂದು ಲೇಖಕ ಎನ್‌.ಎಸ್‌.ಕೆಂಚನೂರು ಕೇಳಿದ್ದಾರೆ.


ಇದನ್ನೂ ಓದಿರಿ: ಪುನೀತ್‌ ಎಂದ ಕೂಡಲೇ ಕಣ್ಣೆದುರಿಗೆ ಬರುವುದು ಡಾ.ರಾಜ್‌ ವ್ಯಕ್ತಿತ್ವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿಶಾಲ್ ಸರ್ ನಿಮ್ಮ ಮನಸು ನಿಮ್ಮ ಗೆಳೆತನ ನಿಮ್ಮ ಶ್ರೀಮಂತಿಕೆ ಭಾವನೆ ತುಂಬಾ ದೊಡ್ಡದು … ನಿಮಗೆ ಕೋಟಿ ಕೋಟಿ ಗೌರವಪೂರ್ವಕ ನಮನಗಳು…
    ಈ ಮಾತನ್ನು ಇಲ್ಲಿ ಯಾರೂ ಕೂಡ ಹೇಳಲಿಲ್ಲ… ಧೈರ್ಯ ಕೊಡಲಿಲ್ಲ…. ದೇವರು ನಿಮಗೆ ಆಯಸ್ಸು ಆರೋಗ್ಯ ಭಾಗ್ಯ ಕೊಡಲಿ ವಿಶಾಲ್ ಸರ್ ನಿಮ್ಮಂತವರು ಯಾವಾಗಲೂ ಚೆನ್ನಾಗಿರಬೇಕು ಮಾದರಿಯಾಗಿರಬೇಕು

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...