Homeದಲಿತ್ ಫೈಲ್ಸ್ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

- Advertisement -
- Advertisement -

“ತಮಿಳು ಚಿತ್ರಗಳು ಸಮಕಾಲೀನ ಜಗತ್ತಿನಲ್ಲಿ ಐತಿಹಾಸಿಕ ಪ್ರತಿರೋಧ ತೋರಿವೆ” ಎಂದು ಚಿಂತಕ, ದಸಂಸ ಸಂಸ್ಥಾಪಕ ಸದಸ್ಯರಾದ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಪ.ರಂಜಿತ್‌ ಸಕ್ರಿಯರಾಗಿರುವ ನೀಲಂ ಸಂಘಟನೆ ವತಿಯಿಂದ ದಲಿತ್‌ ಇತಿಹಾಸ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವನಂ ಆರ್ಟ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿರ್ದೇಶಕರಾದ ಪ.ರಂಜಿತ್‌, ಮಾರಿ ಸೆಲ್ವರಾಜ್‌, ವೆಟ್ರಿಮಾರನ್‌ ಸೇರಿದಂತೆ ಹಲವು ನಿರ್ದೇಶಕರು ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಯಶಸ್ಸು ಪಡೆದಿದ್ದಾರೆ. ನೀಲಂ ಸಂಸ್ಥೆ ಸಾಹಸ ಮೆರೆದಿದೆ. ಬದ್ಧತೆ ಇರುವ ಸಾಕಷ್ಟು ಯುವ ತಾರೆಗಳು ಮಿಂಚಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯವಾಹಿನಿ ಚಿತ್ರಕಥೆ ಬರೆಹಗಾರ ಹಲವು ವಿಚಿತ್ರ ಎಡರು ತೊಡರುಗಳನ್ನು ಕಾಣುತ್ತಾನೆ. ಐದು ಸಾವಿರ ಸಂಚಿಕೆಯನ್ನು ಕಂಡ, ಉದಯ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ‘ಸಂಕ್ರಾಂತಿ’ ಮೆಗಾ ಧಾರಾವಾಹಿಗೆ ನಾನು ಬರೆಯುತ್ತಿದ್ದೆ. ಅದೊಂದು ಗ್ರಾಮೀಣ ಮಹಾಕಾವ್ಯ. ಹೆಚ್ಚಿನ ಟಿ.ಆರ್‌.ಪಿ.ಯೂ ಇತ್ತು. ದಲಿತ ಜೀವನ ಮತ್ತು ಬದುಕಿನ ದೃಷ್ಟಿಕೋನವನ್ನು ಅದು ಒಳಗೊಂಡಿತ್ತು. ಬೇರೊಂದು ಟಿವಿಯಿಂದ ನನಗೆ ಮತ್ತೊಂದು ಅವಕಾಶ ಬಂತು. ಅದಕ್ಕೂ ಬರೆದೆ. ಆದರೆ ಚಾನೆಲ್‌ನ ಕ್ರಿಯೆಟಿವ್ ಹೆಡ್‌ ನಿರ್ದೇಶಕನಲ್ಲಿ ಮಾತನಾಡುತ್ತಾ- ಯಾಕೆ ಅತಿಹೆಚ್ಚು ದಲಿತ ಪಾತ್ರಗಳು ಈ ಧಾರವಾಹಿಯಲ್ಲಿವೆ ಎಂದು ಕೇಳಿದ್ದರು. ಅವರ ಮುಖವನ್ನು ಯಾರು ನೋಡುತ್ತಾರೆ? ಆದರೆ ಈ ಐತಿಹಾಸಿಕ ಸಂಗತಿಯನ್ನು ಪ.ರಂಜಿತ್ ಸಹೋದರ ಬದಲಿಸಿದ್ದಾರೆ. ಎಲ್ಲರೂ ಈಗ ನೋಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು ಹೆಚ್ಚು ಯಾಕಿದ್ದಾರೆಂಬುದನ್ನು ಡೈರೆಕ್ಷರ್‌ ಸಮರ್ಥಿಸಿದ್ದರು. ಜಾಮೀನ್ದಾರರ ಕಥೆಯಲ್ಲಿ ದಲಿತ ಪಾತ್ರಗಳು ಅನಿವಾರ್ಯ ಎಂದು ತಿಳಿಸಿದ್ದರು. ಕ್ಯಾಮೆರಾವನ್ನು ಮನೆಯಿಂದ ಹೊರಗೆ ಬಳಸದಂತೆ ಕ್ರಿಯೆಟಿವ್‌ ಹೆಡ್‌ ಸೂಚಿಸಿದ್ದರು. ನಾನು ಅದನ್ನು ಪ್ರತಿಭಟಿಸಿ, ಆ ಪ್ರೊಜೆಕ್ಟ್‌ನಿಂದ ಹೊರಬಂದೆ. ಮಾಧ್ಯಮಗಳು, ತಂತ್ರಜ್ಞಾನ ತನ್ನಷ್ಟಕ್ಕೆ ತಾನೇ ಹೊರಗುಳಿದಿವೆ. ಸಮಕಾಲೀನ ಜಗತ್ತಿನಲ್ಲಿ ಪ್ರತಿರೋಧವನ್ನು ಒಡ್ಡಿದ ಕಾರಣಕ್ಕೆ ತಮಿಳು ಚಿತ್ರಗಳು ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ.

ಬಾಲಿವುಡ್‌ನತ್ತ ನೋಡಿದರೆ ಅಲ್ಲಿ ಕಪ್ಪು ಪ್ರಾತಿನಿಧ್ಯ ತುಂಬಾ ಕಡಿಮೆ. ಐದು ದಶಕಗಳ ಪ್ರಯತ್ನದ ಬಳಿಕ ಡೊಮಿನೇಟ್‌ ಮಾಡುತ್ತಿದ್ದೇವೆ. ಸಿನಿಮಾ ಅಷ್ಟೇ ಅಲ್ಲ ಸಂಗೀತ, ಸಾಹಿತ್ಯ, ರಂಗಭೂಮಿ, ಕ್ರೀಡೆ ಯಾವುದರಿಂದಲೂ ದೂರ ಇಡಲು ಸಾಧ್ಯವಿಲ್ಲ. ಗುರುತಿಸಿಕೊಳ್ಳುವಿಕೆಯ ರಾಜಕಾರಣ ಬ್ರಹ್ಮಾಂಡ ಪ್ರವೇಶಕ್ಕೆ ತೆರೆದ ಬಾಗಿಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ನಟಿ ಮಂಜು ವಾರಿಯರ್‌ ಜೀವಕ್ಕೆ ಅಪಾಯವಿದೆ: ನಿರ್ದೇಶಕ ಸನಲ್‌ಕುಮಾರ್‌ ಆರೋಪ

ಫ್ಯಾಸಿಸಂ ಕೇವಲ ಗಾಳಿಯಲ್ಲಿ ಇಲ್ಲ. ಅದು ಬೇರುಗಳಲ್ಲಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ನಾರ್ಸಿಸ್ಟ್‌‌ ಐಡಿಯಾಲಜಿಯಂತೆಯೇ ಹಿಂದುತ್ವ ರಾಜಕೀಯ ಸಿದ್ಧಾಂತ ಎಂದು 1940ರಲ್ಲೇ ಬಾಬಾ ಸಾಹೇಬರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಂದು ಎಚ್ಚರಿಸಿದರು.

ನೀಲಂ ಸಂಸ್ಥೆಯ ಕುರಿತು ಮೆಚ್ಚುಗೆ ಮಾತನಾಡಿದ ಅವರು, “ನೀಲಂ ಎಂಬುದು ಕೇವಲ ಬಣ್ಣವಲ್ಲ- ಅದು ಹೆಮ್ಮ ಮತ್ತು ಮರುಹುಟ್ಟು” ಎಂದು ಬಣ್ಣಿಸಿದರು. ‘ನನ್ನಜ್ಜ’ ಮತ್ತು ‘ಪ್ರಿಯ ಅಂಬೇಡ್ಕರ್’ ಕವನವನ್ನು ವಾಚಿಸುವ ಮೂಲಕ ದಲಿತ ಅಸ್ಮಿತೆಯನ್ನು ಧ್ವನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...