Homeದಲಿತ್ ಫೈಲ್ಸ್ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

- Advertisement -
- Advertisement -

“ತಮಿಳು ಚಿತ್ರಗಳು ಸಮಕಾಲೀನ ಜಗತ್ತಿನಲ್ಲಿ ಐತಿಹಾಸಿಕ ಪ್ರತಿರೋಧ ತೋರಿವೆ” ಎಂದು ಚಿಂತಕ, ದಸಂಸ ಸಂಸ್ಥಾಪಕ ಸದಸ್ಯರಾದ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಪ.ರಂಜಿತ್‌ ಸಕ್ರಿಯರಾಗಿರುವ ನೀಲಂ ಸಂಘಟನೆ ವತಿಯಿಂದ ದಲಿತ್‌ ಇತಿಹಾಸ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವನಂ ಆರ್ಟ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿರ್ದೇಶಕರಾದ ಪ.ರಂಜಿತ್‌, ಮಾರಿ ಸೆಲ್ವರಾಜ್‌, ವೆಟ್ರಿಮಾರನ್‌ ಸೇರಿದಂತೆ ಹಲವು ನಿರ್ದೇಶಕರು ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಯಶಸ್ಸು ಪಡೆದಿದ್ದಾರೆ. ನೀಲಂ ಸಂಸ್ಥೆ ಸಾಹಸ ಮೆರೆದಿದೆ. ಬದ್ಧತೆ ಇರುವ ಸಾಕಷ್ಟು ಯುವ ತಾರೆಗಳು ಮಿಂಚಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯವಾಹಿನಿ ಚಿತ್ರಕಥೆ ಬರೆಹಗಾರ ಹಲವು ವಿಚಿತ್ರ ಎಡರು ತೊಡರುಗಳನ್ನು ಕಾಣುತ್ತಾನೆ. ಐದು ಸಾವಿರ ಸಂಚಿಕೆಯನ್ನು ಕಂಡ, ಉದಯ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ‘ಸಂಕ್ರಾಂತಿ’ ಮೆಗಾ ಧಾರಾವಾಹಿಗೆ ನಾನು ಬರೆಯುತ್ತಿದ್ದೆ. ಅದೊಂದು ಗ್ರಾಮೀಣ ಮಹಾಕಾವ್ಯ. ಹೆಚ್ಚಿನ ಟಿ.ಆರ್‌.ಪಿ.ಯೂ ಇತ್ತು. ದಲಿತ ಜೀವನ ಮತ್ತು ಬದುಕಿನ ದೃಷ್ಟಿಕೋನವನ್ನು ಅದು ಒಳಗೊಂಡಿತ್ತು. ಬೇರೊಂದು ಟಿವಿಯಿಂದ ನನಗೆ ಮತ್ತೊಂದು ಅವಕಾಶ ಬಂತು. ಅದಕ್ಕೂ ಬರೆದೆ. ಆದರೆ ಚಾನೆಲ್‌ನ ಕ್ರಿಯೆಟಿವ್ ಹೆಡ್‌ ನಿರ್ದೇಶಕನಲ್ಲಿ ಮಾತನಾಡುತ್ತಾ- ಯಾಕೆ ಅತಿಹೆಚ್ಚು ದಲಿತ ಪಾತ್ರಗಳು ಈ ಧಾರವಾಹಿಯಲ್ಲಿವೆ ಎಂದು ಕೇಳಿದ್ದರು. ಅವರ ಮುಖವನ್ನು ಯಾರು ನೋಡುತ್ತಾರೆ? ಆದರೆ ಈ ಐತಿಹಾಸಿಕ ಸಂಗತಿಯನ್ನು ಪ.ರಂಜಿತ್ ಸಹೋದರ ಬದಲಿಸಿದ್ದಾರೆ. ಎಲ್ಲರೂ ಈಗ ನೋಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು ಹೆಚ್ಚು ಯಾಕಿದ್ದಾರೆಂಬುದನ್ನು ಡೈರೆಕ್ಷರ್‌ ಸಮರ್ಥಿಸಿದ್ದರು. ಜಾಮೀನ್ದಾರರ ಕಥೆಯಲ್ಲಿ ದಲಿತ ಪಾತ್ರಗಳು ಅನಿವಾರ್ಯ ಎಂದು ತಿಳಿಸಿದ್ದರು. ಕ್ಯಾಮೆರಾವನ್ನು ಮನೆಯಿಂದ ಹೊರಗೆ ಬಳಸದಂತೆ ಕ್ರಿಯೆಟಿವ್‌ ಹೆಡ್‌ ಸೂಚಿಸಿದ್ದರು. ನಾನು ಅದನ್ನು ಪ್ರತಿಭಟಿಸಿ, ಆ ಪ್ರೊಜೆಕ್ಟ್‌ನಿಂದ ಹೊರಬಂದೆ. ಮಾಧ್ಯಮಗಳು, ತಂತ್ರಜ್ಞಾನ ತನ್ನಷ್ಟಕ್ಕೆ ತಾನೇ ಹೊರಗುಳಿದಿವೆ. ಸಮಕಾಲೀನ ಜಗತ್ತಿನಲ್ಲಿ ಪ್ರತಿರೋಧವನ್ನು ಒಡ್ಡಿದ ಕಾರಣಕ್ಕೆ ತಮಿಳು ಚಿತ್ರಗಳು ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ.

ಬಾಲಿವುಡ್‌ನತ್ತ ನೋಡಿದರೆ ಅಲ್ಲಿ ಕಪ್ಪು ಪ್ರಾತಿನಿಧ್ಯ ತುಂಬಾ ಕಡಿಮೆ. ಐದು ದಶಕಗಳ ಪ್ರಯತ್ನದ ಬಳಿಕ ಡೊಮಿನೇಟ್‌ ಮಾಡುತ್ತಿದ್ದೇವೆ. ಸಿನಿಮಾ ಅಷ್ಟೇ ಅಲ್ಲ ಸಂಗೀತ, ಸಾಹಿತ್ಯ, ರಂಗಭೂಮಿ, ಕ್ರೀಡೆ ಯಾವುದರಿಂದಲೂ ದೂರ ಇಡಲು ಸಾಧ್ಯವಿಲ್ಲ. ಗುರುತಿಸಿಕೊಳ್ಳುವಿಕೆಯ ರಾಜಕಾರಣ ಬ್ರಹ್ಮಾಂಡ ಪ್ರವೇಶಕ್ಕೆ ತೆರೆದ ಬಾಗಿಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ನಟಿ ಮಂಜು ವಾರಿಯರ್‌ ಜೀವಕ್ಕೆ ಅಪಾಯವಿದೆ: ನಿರ್ದೇಶಕ ಸನಲ್‌ಕುಮಾರ್‌ ಆರೋಪ

ಫ್ಯಾಸಿಸಂ ಕೇವಲ ಗಾಳಿಯಲ್ಲಿ ಇಲ್ಲ. ಅದು ಬೇರುಗಳಲ್ಲಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ನಾರ್ಸಿಸ್ಟ್‌‌ ಐಡಿಯಾಲಜಿಯಂತೆಯೇ ಹಿಂದುತ್ವ ರಾಜಕೀಯ ಸಿದ್ಧಾಂತ ಎಂದು 1940ರಲ್ಲೇ ಬಾಬಾ ಸಾಹೇಬರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಂದು ಎಚ್ಚರಿಸಿದರು.

ನೀಲಂ ಸಂಸ್ಥೆಯ ಕುರಿತು ಮೆಚ್ಚುಗೆ ಮಾತನಾಡಿದ ಅವರು, “ನೀಲಂ ಎಂಬುದು ಕೇವಲ ಬಣ್ಣವಲ್ಲ- ಅದು ಹೆಮ್ಮ ಮತ್ತು ಮರುಹುಟ್ಟು” ಎಂದು ಬಣ್ಣಿಸಿದರು. ‘ನನ್ನಜ್ಜ’ ಮತ್ತು ‘ಪ್ರಿಯ ಅಂಬೇಡ್ಕರ್’ ಕವನವನ್ನು ವಾಚಿಸುವ ಮೂಲಕ ದಲಿತ ಅಸ್ಮಿತೆಯನ್ನು ಧ್ವನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...