Homeದಲಿತ್ ಫೈಲ್ಸ್ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

- Advertisement -
- Advertisement -

“ತಮಿಳು ಚಿತ್ರಗಳು ಸಮಕಾಲೀನ ಜಗತ್ತಿನಲ್ಲಿ ಐತಿಹಾಸಿಕ ಪ್ರತಿರೋಧ ತೋರಿವೆ” ಎಂದು ಚಿಂತಕ, ದಸಂಸ ಸಂಸ್ಥಾಪಕ ಸದಸ್ಯರಾದ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಪ.ರಂಜಿತ್‌ ಸಕ್ರಿಯರಾಗಿರುವ ನೀಲಂ ಸಂಘಟನೆ ವತಿಯಿಂದ ದಲಿತ್‌ ಇತಿಹಾಸ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವನಂ ಆರ್ಟ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿರ್ದೇಶಕರಾದ ಪ.ರಂಜಿತ್‌, ಮಾರಿ ಸೆಲ್ವರಾಜ್‌, ವೆಟ್ರಿಮಾರನ್‌ ಸೇರಿದಂತೆ ಹಲವು ನಿರ್ದೇಶಕರು ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಯಶಸ್ಸು ಪಡೆದಿದ್ದಾರೆ. ನೀಲಂ ಸಂಸ್ಥೆ ಸಾಹಸ ಮೆರೆದಿದೆ. ಬದ್ಧತೆ ಇರುವ ಸಾಕಷ್ಟು ಯುವ ತಾರೆಗಳು ಮಿಂಚಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯವಾಹಿನಿ ಚಿತ್ರಕಥೆ ಬರೆಹಗಾರ ಹಲವು ವಿಚಿತ್ರ ಎಡರು ತೊಡರುಗಳನ್ನು ಕಾಣುತ್ತಾನೆ. ಐದು ಸಾವಿರ ಸಂಚಿಕೆಯನ್ನು ಕಂಡ, ಉದಯ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ‘ಸಂಕ್ರಾಂತಿ’ ಮೆಗಾ ಧಾರಾವಾಹಿಗೆ ನಾನು ಬರೆಯುತ್ತಿದ್ದೆ. ಅದೊಂದು ಗ್ರಾಮೀಣ ಮಹಾಕಾವ್ಯ. ಹೆಚ್ಚಿನ ಟಿ.ಆರ್‌.ಪಿ.ಯೂ ಇತ್ತು. ದಲಿತ ಜೀವನ ಮತ್ತು ಬದುಕಿನ ದೃಷ್ಟಿಕೋನವನ್ನು ಅದು ಒಳಗೊಂಡಿತ್ತು. ಬೇರೊಂದು ಟಿವಿಯಿಂದ ನನಗೆ ಮತ್ತೊಂದು ಅವಕಾಶ ಬಂತು. ಅದಕ್ಕೂ ಬರೆದೆ. ಆದರೆ ಚಾನೆಲ್‌ನ ಕ್ರಿಯೆಟಿವ್ ಹೆಡ್‌ ನಿರ್ದೇಶಕನಲ್ಲಿ ಮಾತನಾಡುತ್ತಾ- ಯಾಕೆ ಅತಿಹೆಚ್ಚು ದಲಿತ ಪಾತ್ರಗಳು ಈ ಧಾರವಾಹಿಯಲ್ಲಿವೆ ಎಂದು ಕೇಳಿದ್ದರು. ಅವರ ಮುಖವನ್ನು ಯಾರು ನೋಡುತ್ತಾರೆ? ಆದರೆ ಈ ಐತಿಹಾಸಿಕ ಸಂಗತಿಯನ್ನು ಪ.ರಂಜಿತ್ ಸಹೋದರ ಬದಲಿಸಿದ್ದಾರೆ. ಎಲ್ಲರೂ ಈಗ ನೋಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು ಹೆಚ್ಚು ಯಾಕಿದ್ದಾರೆಂಬುದನ್ನು ಡೈರೆಕ್ಷರ್‌ ಸಮರ್ಥಿಸಿದ್ದರು. ಜಾಮೀನ್ದಾರರ ಕಥೆಯಲ್ಲಿ ದಲಿತ ಪಾತ್ರಗಳು ಅನಿವಾರ್ಯ ಎಂದು ತಿಳಿಸಿದ್ದರು. ಕ್ಯಾಮೆರಾವನ್ನು ಮನೆಯಿಂದ ಹೊರಗೆ ಬಳಸದಂತೆ ಕ್ರಿಯೆಟಿವ್‌ ಹೆಡ್‌ ಸೂಚಿಸಿದ್ದರು. ನಾನು ಅದನ್ನು ಪ್ರತಿಭಟಿಸಿ, ಆ ಪ್ರೊಜೆಕ್ಟ್‌ನಿಂದ ಹೊರಬಂದೆ. ಮಾಧ್ಯಮಗಳು, ತಂತ್ರಜ್ಞಾನ ತನ್ನಷ್ಟಕ್ಕೆ ತಾನೇ ಹೊರಗುಳಿದಿವೆ. ಸಮಕಾಲೀನ ಜಗತ್ತಿನಲ್ಲಿ ಪ್ರತಿರೋಧವನ್ನು ಒಡ್ಡಿದ ಕಾರಣಕ್ಕೆ ತಮಿಳು ಚಿತ್ರಗಳು ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ.

ಬಾಲಿವುಡ್‌ನತ್ತ ನೋಡಿದರೆ ಅಲ್ಲಿ ಕಪ್ಪು ಪ್ರಾತಿನಿಧ್ಯ ತುಂಬಾ ಕಡಿಮೆ. ಐದು ದಶಕಗಳ ಪ್ರಯತ್ನದ ಬಳಿಕ ಡೊಮಿನೇಟ್‌ ಮಾಡುತ್ತಿದ್ದೇವೆ. ಸಿನಿಮಾ ಅಷ್ಟೇ ಅಲ್ಲ ಸಂಗೀತ, ಸಾಹಿತ್ಯ, ರಂಗಭೂಮಿ, ಕ್ರೀಡೆ ಯಾವುದರಿಂದಲೂ ದೂರ ಇಡಲು ಸಾಧ್ಯವಿಲ್ಲ. ಗುರುತಿಸಿಕೊಳ್ಳುವಿಕೆಯ ರಾಜಕಾರಣ ಬ್ರಹ್ಮಾಂಡ ಪ್ರವೇಶಕ್ಕೆ ತೆರೆದ ಬಾಗಿಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ನಟಿ ಮಂಜು ವಾರಿಯರ್‌ ಜೀವಕ್ಕೆ ಅಪಾಯವಿದೆ: ನಿರ್ದೇಶಕ ಸನಲ್‌ಕುಮಾರ್‌ ಆರೋಪ

ಫ್ಯಾಸಿಸಂ ಕೇವಲ ಗಾಳಿಯಲ್ಲಿ ಇಲ್ಲ. ಅದು ಬೇರುಗಳಲ್ಲಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ನಾರ್ಸಿಸ್ಟ್‌‌ ಐಡಿಯಾಲಜಿಯಂತೆಯೇ ಹಿಂದುತ್ವ ರಾಜಕೀಯ ಸಿದ್ಧಾಂತ ಎಂದು 1940ರಲ್ಲೇ ಬಾಬಾ ಸಾಹೇಬರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಂದು ಎಚ್ಚರಿಸಿದರು.

ನೀಲಂ ಸಂಸ್ಥೆಯ ಕುರಿತು ಮೆಚ್ಚುಗೆ ಮಾತನಾಡಿದ ಅವರು, “ನೀಲಂ ಎಂಬುದು ಕೇವಲ ಬಣ್ಣವಲ್ಲ- ಅದು ಹೆಮ್ಮ ಮತ್ತು ಮರುಹುಟ್ಟು” ಎಂದು ಬಣ್ಣಿಸಿದರು. ‘ನನ್ನಜ್ಜ’ ಮತ್ತು ‘ಪ್ರಿಯ ಅಂಬೇಡ್ಕರ್’ ಕವನವನ್ನು ವಾಚಿಸುವ ಮೂಲಕ ದಲಿತ ಅಸ್ಮಿತೆಯನ್ನು ಧ್ವನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...