Homeದಲಿತ್ ಫೈಲ್ಸ್ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

- Advertisement -
- Advertisement -

“ತಮಿಳು ಚಿತ್ರಗಳು ಸಮಕಾಲೀನ ಜಗತ್ತಿನಲ್ಲಿ ಐತಿಹಾಸಿಕ ಪ್ರತಿರೋಧ ತೋರಿವೆ” ಎಂದು ಚಿಂತಕ, ದಸಂಸ ಸಂಸ್ಥಾಪಕ ಸದಸ್ಯರಾದ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಪ.ರಂಜಿತ್‌ ಸಕ್ರಿಯರಾಗಿರುವ ನೀಲಂ ಸಂಘಟನೆ ವತಿಯಿಂದ ದಲಿತ್‌ ಇತಿಹಾಸ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವನಂ ಆರ್ಟ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿರ್ದೇಶಕರಾದ ಪ.ರಂಜಿತ್‌, ಮಾರಿ ಸೆಲ್ವರಾಜ್‌, ವೆಟ್ರಿಮಾರನ್‌ ಸೇರಿದಂತೆ ಹಲವು ನಿರ್ದೇಶಕರು ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಯಶಸ್ಸು ಪಡೆದಿದ್ದಾರೆ. ನೀಲಂ ಸಂಸ್ಥೆ ಸಾಹಸ ಮೆರೆದಿದೆ. ಬದ್ಧತೆ ಇರುವ ಸಾಕಷ್ಟು ಯುವ ತಾರೆಗಳು ಮಿಂಚಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯವಾಹಿನಿ ಚಿತ್ರಕಥೆ ಬರೆಹಗಾರ ಹಲವು ವಿಚಿತ್ರ ಎಡರು ತೊಡರುಗಳನ್ನು ಕಾಣುತ್ತಾನೆ. ಐದು ಸಾವಿರ ಸಂಚಿಕೆಯನ್ನು ಕಂಡ, ಉದಯ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ‘ಸಂಕ್ರಾಂತಿ’ ಮೆಗಾ ಧಾರಾವಾಹಿಗೆ ನಾನು ಬರೆಯುತ್ತಿದ್ದೆ. ಅದೊಂದು ಗ್ರಾಮೀಣ ಮಹಾಕಾವ್ಯ. ಹೆಚ್ಚಿನ ಟಿ.ಆರ್‌.ಪಿ.ಯೂ ಇತ್ತು. ದಲಿತ ಜೀವನ ಮತ್ತು ಬದುಕಿನ ದೃಷ್ಟಿಕೋನವನ್ನು ಅದು ಒಳಗೊಂಡಿತ್ತು. ಬೇರೊಂದು ಟಿವಿಯಿಂದ ನನಗೆ ಮತ್ತೊಂದು ಅವಕಾಶ ಬಂತು. ಅದಕ್ಕೂ ಬರೆದೆ. ಆದರೆ ಚಾನೆಲ್‌ನ ಕ್ರಿಯೆಟಿವ್ ಹೆಡ್‌ ನಿರ್ದೇಶಕನಲ್ಲಿ ಮಾತನಾಡುತ್ತಾ- ಯಾಕೆ ಅತಿಹೆಚ್ಚು ದಲಿತ ಪಾತ್ರಗಳು ಈ ಧಾರವಾಹಿಯಲ್ಲಿವೆ ಎಂದು ಕೇಳಿದ್ದರು. ಅವರ ಮುಖವನ್ನು ಯಾರು ನೋಡುತ್ತಾರೆ? ಆದರೆ ಈ ಐತಿಹಾಸಿಕ ಸಂಗತಿಯನ್ನು ಪ.ರಂಜಿತ್ ಸಹೋದರ ಬದಲಿಸಿದ್ದಾರೆ. ಎಲ್ಲರೂ ಈಗ ನೋಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು ಹೆಚ್ಚು ಯಾಕಿದ್ದಾರೆಂಬುದನ್ನು ಡೈರೆಕ್ಷರ್‌ ಸಮರ್ಥಿಸಿದ್ದರು. ಜಾಮೀನ್ದಾರರ ಕಥೆಯಲ್ಲಿ ದಲಿತ ಪಾತ್ರಗಳು ಅನಿವಾರ್ಯ ಎಂದು ತಿಳಿಸಿದ್ದರು. ಕ್ಯಾಮೆರಾವನ್ನು ಮನೆಯಿಂದ ಹೊರಗೆ ಬಳಸದಂತೆ ಕ್ರಿಯೆಟಿವ್‌ ಹೆಡ್‌ ಸೂಚಿಸಿದ್ದರು. ನಾನು ಅದನ್ನು ಪ್ರತಿಭಟಿಸಿ, ಆ ಪ್ರೊಜೆಕ್ಟ್‌ನಿಂದ ಹೊರಬಂದೆ. ಮಾಧ್ಯಮಗಳು, ತಂತ್ರಜ್ಞಾನ ತನ್ನಷ್ಟಕ್ಕೆ ತಾನೇ ಹೊರಗುಳಿದಿವೆ. ಸಮಕಾಲೀನ ಜಗತ್ತಿನಲ್ಲಿ ಪ್ರತಿರೋಧವನ್ನು ಒಡ್ಡಿದ ಕಾರಣಕ್ಕೆ ತಮಿಳು ಚಿತ್ರಗಳು ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ.

ಬಾಲಿವುಡ್‌ನತ್ತ ನೋಡಿದರೆ ಅಲ್ಲಿ ಕಪ್ಪು ಪ್ರಾತಿನಿಧ್ಯ ತುಂಬಾ ಕಡಿಮೆ. ಐದು ದಶಕಗಳ ಪ್ರಯತ್ನದ ಬಳಿಕ ಡೊಮಿನೇಟ್‌ ಮಾಡುತ್ತಿದ್ದೇವೆ. ಸಿನಿಮಾ ಅಷ್ಟೇ ಅಲ್ಲ ಸಂಗೀತ, ಸಾಹಿತ್ಯ, ರಂಗಭೂಮಿ, ಕ್ರೀಡೆ ಯಾವುದರಿಂದಲೂ ದೂರ ಇಡಲು ಸಾಧ್ಯವಿಲ್ಲ. ಗುರುತಿಸಿಕೊಳ್ಳುವಿಕೆಯ ರಾಜಕಾರಣ ಬ್ರಹ್ಮಾಂಡ ಪ್ರವೇಶಕ್ಕೆ ತೆರೆದ ಬಾಗಿಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ನಟಿ ಮಂಜು ವಾರಿಯರ್‌ ಜೀವಕ್ಕೆ ಅಪಾಯವಿದೆ: ನಿರ್ದೇಶಕ ಸನಲ್‌ಕುಮಾರ್‌ ಆರೋಪ

ಫ್ಯಾಸಿಸಂ ಕೇವಲ ಗಾಳಿಯಲ್ಲಿ ಇಲ್ಲ. ಅದು ಬೇರುಗಳಲ್ಲಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ನಾರ್ಸಿಸ್ಟ್‌‌ ಐಡಿಯಾಲಜಿಯಂತೆಯೇ ಹಿಂದುತ್ವ ರಾಜಕೀಯ ಸಿದ್ಧಾಂತ ಎಂದು 1940ರಲ್ಲೇ ಬಾಬಾ ಸಾಹೇಬರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಂದು ಎಚ್ಚರಿಸಿದರು.

ನೀಲಂ ಸಂಸ್ಥೆಯ ಕುರಿತು ಮೆಚ್ಚುಗೆ ಮಾತನಾಡಿದ ಅವರು, “ನೀಲಂ ಎಂಬುದು ಕೇವಲ ಬಣ್ಣವಲ್ಲ- ಅದು ಹೆಮ್ಮ ಮತ್ತು ಮರುಹುಟ್ಟು” ಎಂದು ಬಣ್ಣಿಸಿದರು. ‘ನನ್ನಜ್ಜ’ ಮತ್ತು ‘ಪ್ರಿಯ ಅಂಬೇಡ್ಕರ್’ ಕವನವನ್ನು ವಾಚಿಸುವ ಮೂಲಕ ದಲಿತ ಅಸ್ಮಿತೆಯನ್ನು ಧ್ವನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...