Homeದಲಿತ್ ಫೈಲ್ಸ್ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

- Advertisement -
- Advertisement -

“ತಮಿಳು ಚಿತ್ರಗಳು ಸಮಕಾಲೀನ ಜಗತ್ತಿನಲ್ಲಿ ಐತಿಹಾಸಿಕ ಪ್ರತಿರೋಧ ತೋರಿವೆ” ಎಂದು ಚಿಂತಕ, ದಸಂಸ ಸಂಸ್ಥಾಪಕ ಸದಸ್ಯರಾದ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಪ.ರಂಜಿತ್‌ ಸಕ್ರಿಯರಾಗಿರುವ ನೀಲಂ ಸಂಘಟನೆ ವತಿಯಿಂದ ದಲಿತ್‌ ಇತಿಹಾಸ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವನಂ ಆರ್ಟ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿರ್ದೇಶಕರಾದ ಪ.ರಂಜಿತ್‌, ಮಾರಿ ಸೆಲ್ವರಾಜ್‌, ವೆಟ್ರಿಮಾರನ್‌ ಸೇರಿದಂತೆ ಹಲವು ನಿರ್ದೇಶಕರು ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಯಶಸ್ಸು ಪಡೆದಿದ್ದಾರೆ. ನೀಲಂ ಸಂಸ್ಥೆ ಸಾಹಸ ಮೆರೆದಿದೆ. ಬದ್ಧತೆ ಇರುವ ಸಾಕಷ್ಟು ಯುವ ತಾರೆಗಳು ಮಿಂಚಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯವಾಹಿನಿ ಚಿತ್ರಕಥೆ ಬರೆಹಗಾರ ಹಲವು ವಿಚಿತ್ರ ಎಡರು ತೊಡರುಗಳನ್ನು ಕಾಣುತ್ತಾನೆ. ಐದು ಸಾವಿರ ಸಂಚಿಕೆಯನ್ನು ಕಂಡ, ಉದಯ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ‘ಸಂಕ್ರಾಂತಿ’ ಮೆಗಾ ಧಾರಾವಾಹಿಗೆ ನಾನು ಬರೆಯುತ್ತಿದ್ದೆ. ಅದೊಂದು ಗ್ರಾಮೀಣ ಮಹಾಕಾವ್ಯ. ಹೆಚ್ಚಿನ ಟಿ.ಆರ್‌.ಪಿ.ಯೂ ಇತ್ತು. ದಲಿತ ಜೀವನ ಮತ್ತು ಬದುಕಿನ ದೃಷ್ಟಿಕೋನವನ್ನು ಅದು ಒಳಗೊಂಡಿತ್ತು. ಬೇರೊಂದು ಟಿವಿಯಿಂದ ನನಗೆ ಮತ್ತೊಂದು ಅವಕಾಶ ಬಂತು. ಅದಕ್ಕೂ ಬರೆದೆ. ಆದರೆ ಚಾನೆಲ್‌ನ ಕ್ರಿಯೆಟಿವ್ ಹೆಡ್‌ ನಿರ್ದೇಶಕನಲ್ಲಿ ಮಾತನಾಡುತ್ತಾ- ಯಾಕೆ ಅತಿಹೆಚ್ಚು ದಲಿತ ಪಾತ್ರಗಳು ಈ ಧಾರವಾಹಿಯಲ್ಲಿವೆ ಎಂದು ಕೇಳಿದ್ದರು. ಅವರ ಮುಖವನ್ನು ಯಾರು ನೋಡುತ್ತಾರೆ? ಆದರೆ ಈ ಐತಿಹಾಸಿಕ ಸಂಗತಿಯನ್ನು ಪ.ರಂಜಿತ್ ಸಹೋದರ ಬದಲಿಸಿದ್ದಾರೆ. ಎಲ್ಲರೂ ಈಗ ನೋಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು ಹೆಚ್ಚು ಯಾಕಿದ್ದಾರೆಂಬುದನ್ನು ಡೈರೆಕ್ಷರ್‌ ಸಮರ್ಥಿಸಿದ್ದರು. ಜಾಮೀನ್ದಾರರ ಕಥೆಯಲ್ಲಿ ದಲಿತ ಪಾತ್ರಗಳು ಅನಿವಾರ್ಯ ಎಂದು ತಿಳಿಸಿದ್ದರು. ಕ್ಯಾಮೆರಾವನ್ನು ಮನೆಯಿಂದ ಹೊರಗೆ ಬಳಸದಂತೆ ಕ್ರಿಯೆಟಿವ್‌ ಹೆಡ್‌ ಸೂಚಿಸಿದ್ದರು. ನಾನು ಅದನ್ನು ಪ್ರತಿಭಟಿಸಿ, ಆ ಪ್ರೊಜೆಕ್ಟ್‌ನಿಂದ ಹೊರಬಂದೆ. ಮಾಧ್ಯಮಗಳು, ತಂತ್ರಜ್ಞಾನ ತನ್ನಷ್ಟಕ್ಕೆ ತಾನೇ ಹೊರಗುಳಿದಿವೆ. ಸಮಕಾಲೀನ ಜಗತ್ತಿನಲ್ಲಿ ಪ್ರತಿರೋಧವನ್ನು ಒಡ್ಡಿದ ಕಾರಣಕ್ಕೆ ತಮಿಳು ಚಿತ್ರಗಳು ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ.

ಬಾಲಿವುಡ್‌ನತ್ತ ನೋಡಿದರೆ ಅಲ್ಲಿ ಕಪ್ಪು ಪ್ರಾತಿನಿಧ್ಯ ತುಂಬಾ ಕಡಿಮೆ. ಐದು ದಶಕಗಳ ಪ್ರಯತ್ನದ ಬಳಿಕ ಡೊಮಿನೇಟ್‌ ಮಾಡುತ್ತಿದ್ದೇವೆ. ಸಿನಿಮಾ ಅಷ್ಟೇ ಅಲ್ಲ ಸಂಗೀತ, ಸಾಹಿತ್ಯ, ರಂಗಭೂಮಿ, ಕ್ರೀಡೆ ಯಾವುದರಿಂದಲೂ ದೂರ ಇಡಲು ಸಾಧ್ಯವಿಲ್ಲ. ಗುರುತಿಸಿಕೊಳ್ಳುವಿಕೆಯ ರಾಜಕಾರಣ ಬ್ರಹ್ಮಾಂಡ ಪ್ರವೇಶಕ್ಕೆ ತೆರೆದ ಬಾಗಿಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ನಟಿ ಮಂಜು ವಾರಿಯರ್‌ ಜೀವಕ್ಕೆ ಅಪಾಯವಿದೆ: ನಿರ್ದೇಶಕ ಸನಲ್‌ಕುಮಾರ್‌ ಆರೋಪ

ಫ್ಯಾಸಿಸಂ ಕೇವಲ ಗಾಳಿಯಲ್ಲಿ ಇಲ್ಲ. ಅದು ಬೇರುಗಳಲ್ಲಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ನಾರ್ಸಿಸ್ಟ್‌‌ ಐಡಿಯಾಲಜಿಯಂತೆಯೇ ಹಿಂದುತ್ವ ರಾಜಕೀಯ ಸಿದ್ಧಾಂತ ಎಂದು 1940ರಲ್ಲೇ ಬಾಬಾ ಸಾಹೇಬರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಂದು ಎಚ್ಚರಿಸಿದರು.

ನೀಲಂ ಸಂಸ್ಥೆಯ ಕುರಿತು ಮೆಚ್ಚುಗೆ ಮಾತನಾಡಿದ ಅವರು, “ನೀಲಂ ಎಂಬುದು ಕೇವಲ ಬಣ್ಣವಲ್ಲ- ಅದು ಹೆಮ್ಮ ಮತ್ತು ಮರುಹುಟ್ಟು” ಎಂದು ಬಣ್ಣಿಸಿದರು. ‘ನನ್ನಜ್ಜ’ ಮತ್ತು ‘ಪ್ರಿಯ ಅಂಬೇಡ್ಕರ್’ ಕವನವನ್ನು ವಾಚಿಸುವ ಮೂಲಕ ದಲಿತ ಅಸ್ಮಿತೆಯನ್ನು ಧ್ವನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...