Homeದಲಿತ್ ಫೈಲ್ಸ್ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

- Advertisement -
- Advertisement -

“ತಮಿಳು ಚಿತ್ರಗಳು ಸಮಕಾಲೀನ ಜಗತ್ತಿನಲ್ಲಿ ಐತಿಹಾಸಿಕ ಪ್ರತಿರೋಧ ತೋರಿವೆ” ಎಂದು ಚಿಂತಕ, ದಸಂಸ ಸಂಸ್ಥಾಪಕ ಸದಸ್ಯರಾದ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಪ.ರಂಜಿತ್‌ ಸಕ್ರಿಯರಾಗಿರುವ ನೀಲಂ ಸಂಘಟನೆ ವತಿಯಿಂದ ದಲಿತ್‌ ಇತಿಹಾಸ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವನಂ ಆರ್ಟ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿರ್ದೇಶಕರಾದ ಪ.ರಂಜಿತ್‌, ಮಾರಿ ಸೆಲ್ವರಾಜ್‌, ವೆಟ್ರಿಮಾರನ್‌ ಸೇರಿದಂತೆ ಹಲವು ನಿರ್ದೇಶಕರು ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಯಶಸ್ಸು ಪಡೆದಿದ್ದಾರೆ. ನೀಲಂ ಸಂಸ್ಥೆ ಸಾಹಸ ಮೆರೆದಿದೆ. ಬದ್ಧತೆ ಇರುವ ಸಾಕಷ್ಟು ಯುವ ತಾರೆಗಳು ಮಿಂಚಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯವಾಹಿನಿ ಚಿತ್ರಕಥೆ ಬರೆಹಗಾರ ಹಲವು ವಿಚಿತ್ರ ಎಡರು ತೊಡರುಗಳನ್ನು ಕಾಣುತ್ತಾನೆ. ಐದು ಸಾವಿರ ಸಂಚಿಕೆಯನ್ನು ಕಂಡ, ಉದಯ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ‘ಸಂಕ್ರಾಂತಿ’ ಮೆಗಾ ಧಾರಾವಾಹಿಗೆ ನಾನು ಬರೆಯುತ್ತಿದ್ದೆ. ಅದೊಂದು ಗ್ರಾಮೀಣ ಮಹಾಕಾವ್ಯ. ಹೆಚ್ಚಿನ ಟಿ.ಆರ್‌.ಪಿ.ಯೂ ಇತ್ತು. ದಲಿತ ಜೀವನ ಮತ್ತು ಬದುಕಿನ ದೃಷ್ಟಿಕೋನವನ್ನು ಅದು ಒಳಗೊಂಡಿತ್ತು. ಬೇರೊಂದು ಟಿವಿಯಿಂದ ನನಗೆ ಮತ್ತೊಂದು ಅವಕಾಶ ಬಂತು. ಅದಕ್ಕೂ ಬರೆದೆ. ಆದರೆ ಚಾನೆಲ್‌ನ ಕ್ರಿಯೆಟಿವ್ ಹೆಡ್‌ ನಿರ್ದೇಶಕನಲ್ಲಿ ಮಾತನಾಡುತ್ತಾ- ಯಾಕೆ ಅತಿಹೆಚ್ಚು ದಲಿತ ಪಾತ್ರಗಳು ಈ ಧಾರವಾಹಿಯಲ್ಲಿವೆ ಎಂದು ಕೇಳಿದ್ದರು. ಅವರ ಮುಖವನ್ನು ಯಾರು ನೋಡುತ್ತಾರೆ? ಆದರೆ ಈ ಐತಿಹಾಸಿಕ ಸಂಗತಿಯನ್ನು ಪ.ರಂಜಿತ್ ಸಹೋದರ ಬದಲಿಸಿದ್ದಾರೆ. ಎಲ್ಲರೂ ಈಗ ನೋಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು ಹೆಚ್ಚು ಯಾಕಿದ್ದಾರೆಂಬುದನ್ನು ಡೈರೆಕ್ಷರ್‌ ಸಮರ್ಥಿಸಿದ್ದರು. ಜಾಮೀನ್ದಾರರ ಕಥೆಯಲ್ಲಿ ದಲಿತ ಪಾತ್ರಗಳು ಅನಿವಾರ್ಯ ಎಂದು ತಿಳಿಸಿದ್ದರು. ಕ್ಯಾಮೆರಾವನ್ನು ಮನೆಯಿಂದ ಹೊರಗೆ ಬಳಸದಂತೆ ಕ್ರಿಯೆಟಿವ್‌ ಹೆಡ್‌ ಸೂಚಿಸಿದ್ದರು. ನಾನು ಅದನ್ನು ಪ್ರತಿಭಟಿಸಿ, ಆ ಪ್ರೊಜೆಕ್ಟ್‌ನಿಂದ ಹೊರಬಂದೆ. ಮಾಧ್ಯಮಗಳು, ತಂತ್ರಜ್ಞಾನ ತನ್ನಷ್ಟಕ್ಕೆ ತಾನೇ ಹೊರಗುಳಿದಿವೆ. ಸಮಕಾಲೀನ ಜಗತ್ತಿನಲ್ಲಿ ಪ್ರತಿರೋಧವನ್ನು ಒಡ್ಡಿದ ಕಾರಣಕ್ಕೆ ತಮಿಳು ಚಿತ್ರಗಳು ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ.

ಬಾಲಿವುಡ್‌ನತ್ತ ನೋಡಿದರೆ ಅಲ್ಲಿ ಕಪ್ಪು ಪ್ರಾತಿನಿಧ್ಯ ತುಂಬಾ ಕಡಿಮೆ. ಐದು ದಶಕಗಳ ಪ್ರಯತ್ನದ ಬಳಿಕ ಡೊಮಿನೇಟ್‌ ಮಾಡುತ್ತಿದ್ದೇವೆ. ಸಿನಿಮಾ ಅಷ್ಟೇ ಅಲ್ಲ ಸಂಗೀತ, ಸಾಹಿತ್ಯ, ರಂಗಭೂಮಿ, ಕ್ರೀಡೆ ಯಾವುದರಿಂದಲೂ ದೂರ ಇಡಲು ಸಾಧ್ಯವಿಲ್ಲ. ಗುರುತಿಸಿಕೊಳ್ಳುವಿಕೆಯ ರಾಜಕಾರಣ ಬ್ರಹ್ಮಾಂಡ ಪ್ರವೇಶಕ್ಕೆ ತೆರೆದ ಬಾಗಿಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ನಟಿ ಮಂಜು ವಾರಿಯರ್‌ ಜೀವಕ್ಕೆ ಅಪಾಯವಿದೆ: ನಿರ್ದೇಶಕ ಸನಲ್‌ಕುಮಾರ್‌ ಆರೋಪ

ಫ್ಯಾಸಿಸಂ ಕೇವಲ ಗಾಳಿಯಲ್ಲಿ ಇಲ್ಲ. ಅದು ಬೇರುಗಳಲ್ಲಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ನಾರ್ಸಿಸ್ಟ್‌‌ ಐಡಿಯಾಲಜಿಯಂತೆಯೇ ಹಿಂದುತ್ವ ರಾಜಕೀಯ ಸಿದ್ಧಾಂತ ಎಂದು 1940ರಲ್ಲೇ ಬಾಬಾ ಸಾಹೇಬರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಂದು ಎಚ್ಚರಿಸಿದರು.

ನೀಲಂ ಸಂಸ್ಥೆಯ ಕುರಿತು ಮೆಚ್ಚುಗೆ ಮಾತನಾಡಿದ ಅವರು, “ನೀಲಂ ಎಂಬುದು ಕೇವಲ ಬಣ್ಣವಲ್ಲ- ಅದು ಹೆಮ್ಮ ಮತ್ತು ಮರುಹುಟ್ಟು” ಎಂದು ಬಣ್ಣಿಸಿದರು. ‘ನನ್ನಜ್ಜ’ ಮತ್ತು ‘ಪ್ರಿಯ ಅಂಬೇಡ್ಕರ್’ ಕವನವನ್ನು ವಾಚಿಸುವ ಮೂಲಕ ದಲಿತ ಅಸ್ಮಿತೆಯನ್ನು ಧ್ವನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...