Homeದಲಿತ್ ಫೈಲ್ಸ್ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

- Advertisement -
- Advertisement -

“ತಮಿಳು ಚಿತ್ರಗಳು ಸಮಕಾಲೀನ ಜಗತ್ತಿನಲ್ಲಿ ಐತಿಹಾಸಿಕ ಪ್ರತಿರೋಧ ತೋರಿವೆ” ಎಂದು ಚಿಂತಕ, ದಸಂಸ ಸಂಸ್ಥಾಪಕ ಸದಸ್ಯರಾದ ಕೋಟಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಪ.ರಂಜಿತ್‌ ಸಕ್ರಿಯರಾಗಿರುವ ನೀಲಂ ಸಂಘಟನೆ ವತಿಯಿಂದ ದಲಿತ್‌ ಇತಿಹಾಸ ತಿಂಗಳ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವನಂ ಆರ್ಟ್ ಫೆಸ್ಟಿವಲ್‌ನಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ.

ನಿರ್ದೇಶಕರಾದ ಪ.ರಂಜಿತ್‌, ಮಾರಿ ಸೆಲ್ವರಾಜ್‌, ವೆಟ್ರಿಮಾರನ್‌ ಸೇರಿದಂತೆ ಹಲವು ನಿರ್ದೇಶಕರು ಅವಕಾಶಗಳನ್ನು ಸೃಷ್ಟಿಸಿದ್ದಾರೆ. ಯಶಸ್ಸು ಪಡೆದಿದ್ದಾರೆ. ನೀಲಂ ಸಂಸ್ಥೆ ಸಾಹಸ ಮೆರೆದಿದೆ. ಬದ್ಧತೆ ಇರುವ ಸಾಕಷ್ಟು ಯುವ ತಾರೆಗಳು ಮಿಂಚಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯವಾಹಿನಿ ಚಿತ್ರಕಥೆ ಬರೆಹಗಾರ ಹಲವು ವಿಚಿತ್ರ ಎಡರು ತೊಡರುಗಳನ್ನು ಕಾಣುತ್ತಾನೆ. ಐದು ಸಾವಿರ ಸಂಚಿಕೆಯನ್ನು ಕಂಡ, ಉದಯ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದ ‘ಸಂಕ್ರಾಂತಿ’ ಮೆಗಾ ಧಾರಾವಾಹಿಗೆ ನಾನು ಬರೆಯುತ್ತಿದ್ದೆ. ಅದೊಂದು ಗ್ರಾಮೀಣ ಮಹಾಕಾವ್ಯ. ಹೆಚ್ಚಿನ ಟಿ.ಆರ್‌.ಪಿ.ಯೂ ಇತ್ತು. ದಲಿತ ಜೀವನ ಮತ್ತು ಬದುಕಿನ ದೃಷ್ಟಿಕೋನವನ್ನು ಅದು ಒಳಗೊಂಡಿತ್ತು. ಬೇರೊಂದು ಟಿವಿಯಿಂದ ನನಗೆ ಮತ್ತೊಂದು ಅವಕಾಶ ಬಂತು. ಅದಕ್ಕೂ ಬರೆದೆ. ಆದರೆ ಚಾನೆಲ್‌ನ ಕ್ರಿಯೆಟಿವ್ ಹೆಡ್‌ ನಿರ್ದೇಶಕನಲ್ಲಿ ಮಾತನಾಡುತ್ತಾ- ಯಾಕೆ ಅತಿಹೆಚ್ಚು ದಲಿತ ಪಾತ್ರಗಳು ಈ ಧಾರವಾಹಿಯಲ್ಲಿವೆ ಎಂದು ಕೇಳಿದ್ದರು. ಅವರ ಮುಖವನ್ನು ಯಾರು ನೋಡುತ್ತಾರೆ? ಆದರೆ ಈ ಐತಿಹಾಸಿಕ ಸಂಗತಿಯನ್ನು ಪ.ರಂಜಿತ್ ಸಹೋದರ ಬದಲಿಸಿದ್ದಾರೆ. ಎಲ್ಲರೂ ಈಗ ನೋಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದಲಿತರು ಹೆಚ್ಚು ಯಾಕಿದ್ದಾರೆಂಬುದನ್ನು ಡೈರೆಕ್ಷರ್‌ ಸಮರ್ಥಿಸಿದ್ದರು. ಜಾಮೀನ್ದಾರರ ಕಥೆಯಲ್ಲಿ ದಲಿತ ಪಾತ್ರಗಳು ಅನಿವಾರ್ಯ ಎಂದು ತಿಳಿಸಿದ್ದರು. ಕ್ಯಾಮೆರಾವನ್ನು ಮನೆಯಿಂದ ಹೊರಗೆ ಬಳಸದಂತೆ ಕ್ರಿಯೆಟಿವ್‌ ಹೆಡ್‌ ಸೂಚಿಸಿದ್ದರು. ನಾನು ಅದನ್ನು ಪ್ರತಿಭಟಿಸಿ, ಆ ಪ್ರೊಜೆಕ್ಟ್‌ನಿಂದ ಹೊರಬಂದೆ. ಮಾಧ್ಯಮಗಳು, ತಂತ್ರಜ್ಞಾನ ತನ್ನಷ್ಟಕ್ಕೆ ತಾನೇ ಹೊರಗುಳಿದಿವೆ. ಸಮಕಾಲೀನ ಜಗತ್ತಿನಲ್ಲಿ ಪ್ರತಿರೋಧವನ್ನು ಒಡ್ಡಿದ ಕಾರಣಕ್ಕೆ ತಮಿಳು ಚಿತ್ರಗಳು ಮುಖ್ಯವಾಗಿವೆ ಎಂದು ತಿಳಿಸಿದ್ದಾರೆ.

ಬಾಲಿವುಡ್‌ನತ್ತ ನೋಡಿದರೆ ಅಲ್ಲಿ ಕಪ್ಪು ಪ್ರಾತಿನಿಧ್ಯ ತುಂಬಾ ಕಡಿಮೆ. ಐದು ದಶಕಗಳ ಪ್ರಯತ್ನದ ಬಳಿಕ ಡೊಮಿನೇಟ್‌ ಮಾಡುತ್ತಿದ್ದೇವೆ. ಸಿನಿಮಾ ಅಷ್ಟೇ ಅಲ್ಲ ಸಂಗೀತ, ಸಾಹಿತ್ಯ, ರಂಗಭೂಮಿ, ಕ್ರೀಡೆ ಯಾವುದರಿಂದಲೂ ದೂರ ಇಡಲು ಸಾಧ್ಯವಿಲ್ಲ. ಗುರುತಿಸಿಕೊಳ್ಳುವಿಕೆಯ ರಾಜಕಾರಣ ಬ್ರಹ್ಮಾಂಡ ಪ್ರವೇಶಕ್ಕೆ ತೆರೆದ ಬಾಗಿಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ನಟಿ ಮಂಜು ವಾರಿಯರ್‌ ಜೀವಕ್ಕೆ ಅಪಾಯವಿದೆ: ನಿರ್ದೇಶಕ ಸನಲ್‌ಕುಮಾರ್‌ ಆರೋಪ

ಫ್ಯಾಸಿಸಂ ಕೇವಲ ಗಾಳಿಯಲ್ಲಿ ಇಲ್ಲ. ಅದು ಬೇರುಗಳಲ್ಲಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ನಾರ್ಸಿಸ್ಟ್‌‌ ಐಡಿಯಾಲಜಿಯಂತೆಯೇ ಹಿಂದುತ್ವ ರಾಜಕೀಯ ಸಿದ್ಧಾಂತ ಎಂದು 1940ರಲ್ಲೇ ಬಾಬಾ ಸಾಹೇಬರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಂದು ಎಚ್ಚರಿಸಿದರು.

ನೀಲಂ ಸಂಸ್ಥೆಯ ಕುರಿತು ಮೆಚ್ಚುಗೆ ಮಾತನಾಡಿದ ಅವರು, “ನೀಲಂ ಎಂಬುದು ಕೇವಲ ಬಣ್ಣವಲ್ಲ- ಅದು ಹೆಮ್ಮ ಮತ್ತು ಮರುಹುಟ್ಟು” ಎಂದು ಬಣ್ಣಿಸಿದರು. ‘ನನ್ನಜ್ಜ’ ಮತ್ತು ‘ಪ್ರಿಯ ಅಂಬೇಡ್ಕರ್’ ಕವನವನ್ನು ವಾಚಿಸುವ ಮೂಲಕ ದಲಿತ ಅಸ್ಮಿತೆಯನ್ನು ಧ್ವನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...